AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vastu for kitchen: ಮನೆಯಲ್ಲಿ ಪಾತ್ರೆಗಳನ್ನು ಮಗುಚಿ ಇಡಬಾರದು ಏಕೆ ಗೊತ್ತಾ?

ವಾಸ್ತು ಶಾಸ್ತ್ರದ ಪ್ರಕಾರ, ಅಡುಗೆಮನೆಯ ಪಾತ್ರೆಗಳನ್ನು ಸರಿಯಾಗಿ ಇಡುವುದು ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ. ಪಾತ್ರೆಗಳನ್ನು ಮಗುಚಿ ಇಡಬಾರದು, ಏಕೆಂದರೆ ಇದು ನಕಾರಾತ್ಮಕತೆಯನ್ನು ಆಹ್ವಾನಿಸುತ್ತದೆ. ಚಪಾತಿ ಮಾಡುವ ತವಾ ಮತ್ತು ಕಾವಲಿಯನ್ನು, ಪಾತ್ರೆಗಳನ್ನು ಪಶ್ಚಿಮ ದಿಕ್ಕಿನಲ್ಲಿ ಇಡುವುದು ಉತ್ತಮ. ಜೊತೆಗೆ ಅಡುಗೆಮನೆಯನ್ನು ಸ್ವಚ್ಛವಾಗಿಡುವುದು ಅತ್ಯಗತ್ಯ.

Vastu for kitchen: ಮನೆಯಲ್ಲಿ ಪಾತ್ರೆಗಳನ್ನು ಮಗುಚಿ ಇಡಬಾರದು ಏಕೆ ಗೊತ್ತಾ?
Do Not Keep These Utensils Upside Down
ಅಕ್ಷತಾ ವರ್ಕಾಡಿ
|

Updated on: Apr 29, 2025 | 12:41 PM

Share

ಹಿಂದೂ ಧರ್ಮ ಮತ್ತು ವಾಸ್ತು ಶಾಸ್ತ್ರ ಎರಡರಲ್ಲೂ ಅಡುಗೆಮನೆಗೆ ವಿಶೇಷ ಪ್ರಾಮುಖ್ಯತೆಯನ್ನು ನೀಡಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ, ಅಡುಗೆಮನೆಯಲ್ಲಿ ಇಡುವ ವಸ್ತುಗಳನ್ನು ಸರಿಯಾದ ದಿಕ್ಕಿನಲ್ಲಿ ಮತ್ತು ಸರಿಯಾದ ರೀತಿಯಲ್ಲಿ ಇಟ್ಟರೆ ಮಾತ್ರ ಆ ಮನೆಯಲ್ಲಿ ಸಕರಾತ್ಮಕ ಶಕ್ತಿ ಹರಡಲು ಸಾಧ್ಯ ಎಂದು ಹೇಳಲಾಗುತ್ತದೆ. ಅದರಂತೆ ಅಡುಗೆ ಪಾತ್ರೆಗಳನ್ನು ಯಾವ ಸ್ಥಿತಿಯಲ್ಲಿ ಇಡಬೇಕು ಎಂಬುದರ ಕುರಿತು ವಾಸ್ತುವಿನಲ್ಲ ಕಾಲಕಾಲಕ್ಕೆ ಉಲ್ಲೇಖಿಸಲಾಗಿದೆ. ಅವುಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಅಡುಗೆಮನೆಯಲ್ಲಿ ಬಳಸುವ ಪಾತ್ರೆಗಳನ್ನು ತಲೆಕೆಳಗಾಗಿ ಅಂದರೆ ಮುಗುಚಿ ಇಡಬಾರದು. ಪಾತ್ರೆಗಳನ್ನು ತಲೆಕೆಳಗಾಗಿ ಇಡುವುದರಿಂದ ನಕಾರಾತ್ಮಕತೆ ಬರುತ್ತದೆ. ಹೀಗೆ ಮಾಡುವುದು ಮನೆಯಲ್ಲಿ ಆರ್ಥಿಕ ನಷ್ಟ, ದುರದೃಷ್ಟ ಮತ್ತು ವಿವಾದಗಳನ್ನು ಆಹ್ವಾನಿಸಿದಂತೆ ಎಂದು ವಾಸ್ತು ತಜ್ಞರು ಎಚ್ಚರಿಕೆ ನೀಡುತ್ತಾರೆ.

ಇಷ್ಟು ಮಾತ್ರವಲ್ಲದೆ, ಚಪಾತಿ ಮಾಡುವ ಕಾವಲಿ, ತವಾ ಎಂದಿಗೂ ಮಗುಚಿ ಹಾಕಬಾರದು. ಹೀಗೆ ಮಾಡಿದರೆ ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗಬಹುದು.ಸಾಲ ಹೆಚ್ಚಾಗಬಹುದು ಜೀವನದಲ್ಲಿ ಬಡತನವನ್ನು ಎದುರಿಸಬೇಕಾಗಬಹುದು. ಅದು ಕೆಲಸದಲ್ಲಿ ಅಡೆತಡೆಗಳನ್ನು ಉಂಟುಮಾಡಬಹುದು. ಹೀಗೆ ಮಾಡುವುದರಿಂದ, ವೈವಾಹಿಕ ಜೀವನದಲ್ಲಿ ಬಿರುಕು, ದೇಶೀಯ ಜಗಳಗಳು ಮತ್ತು ಕುಟುಂಬದಲ್ಲಿನ ಭಿನ್ನಾಭಿಪ್ರಾಯಗಳು ಮತ್ತು ಜಗಳಗಳ ಸಾಧ್ಯತೆಯೂ ಹೆಚ್ಚಾಗುತ್ತದೆ.

ಇದನ್ನೂ ಓದಿ: ವಿವಾಹಿತ ಮಹಿಳೆಯರು ಈ ದಿನ ತಪ್ಪಿಯೂ ತಲೆ ಸ್ನಾನ ಮಾಡಬಾರದು!

ವಾಸ್ತು ತಜ್ಞರ ಪ್ರಕಾರ ಅಡುಗೆ ಮನೆಯಲ್ಲಿರುವ ಪಾತ್ರೆಗಳನ್ನು ಯಾವಾಗಲೂ ಪಶ್ಚಿಮ ದಿಕ್ಕಿನಲ್ಲಿಯೇ ಇಡಬೇಕು. ಈ ದಿಕ್ಕಿನಲ್ಲಿ ಪಾತ್ರೆಗಳನ್ನು ಇಡುವುದು ಉತ್ತಮ. ಇದು ಸಂತೋಷ ಮತ್ತು ಸಮೃದ್ಧಿಯನ್ನು ಹೆಚ್ಚಿಸುತ್ತದೆ ಎಂದು ಪರಿಗಣಿಸಲಾಗಿದೆ. ಜೊತೆಗೆ ರಾತ್ರಿ ಅಡುಗೆ ಮಾಡಿದ ಪಾತ್ರೆಗಳನ್ನು ರಾತ್ರಿಯೇ ತೊಳೆದಿದೆ. ಜೊತೆಗೆ ಅಡುಗೆ ಮನೆಯನ್ನು ಸ್ವಚ್ಛವಾಗಿಟ್ಟುಕೊಳ್ಳಿ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ