
ಹಿಂದೂ ಧರ್ಮದಲ್ಲಿ ವಾಸ್ತು ಶಾಸ್ತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಅನೇಕ ಜನರು ವಾಸ್ತು ಶಾಸ್ತ್ರದ ಪ್ರಕಾರ ತಮ್ಮ ಮನೆಗಳನ್ನು ನಿರ್ಮಿಸುತ್ತಾರೆ. ವಾಸ್ತುವು ಅನೇಕ ಸಮಸ್ಯೆಗಳಿಗೆ ಪರಿಹಾರಗಳನ್ನು ಒದಗಿಸುತ್ತದೆ ಎಂದು ನಂಬಲಾಗಿದೆ. ಗಳಿಸಿದ ಹಣವು ಬಾಳಿಕೆ ಬರದಿರಲು ಒಂದು ಕಾರಣವಿದೆ ಎಂದು ವಾಸ್ತು ಶಾಸ್ತ್ರವು ಹೇಳುತ್ತದೆ. ಅನಿರೀಕ್ಷಿತ ಆರ್ಥಿಕ ತೊಂದರೆಗಳು ಮತ್ತು ಹೆಚ್ಚುತ್ತಿರುವ ಸಾಲಗಳು ವಾಸ್ತು ದೋಷಗಳಿಂದ ಉಂಟಾಗುತ್ತವೆ ಎಂದು ಹೇಳಲಾಗುತ್ತದೆ.
ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಕೆಲವು ಸ್ಥಳಗಳಲ್ಲಿ ಹಣವನ್ನು ಇಡಲೇಬಾರದು. ಯಾಕೆಂದರೆ ಅಂತಹ ಸ್ಥಳಗಳಲ್ಲಿ ಹಣವನ್ನು ಇಟ್ಟರೆ ಅದು ಎಂದಿಗೂ ನಿಮ್ಮಲ್ಲಿ ಉಳಿಯುವುದಿಲ್ಲ. ಜೊತೆಗೆ ಮನೆಯಲ್ಲಿ ಸಮೃದ್ಧಿ ಇರುವುದಿಲ್ಲ. ಆದ್ದರಿಂದ ವಾಸ್ತುವು ಹೇಳುವ ಸೂಚನೆಗಳನ್ನು ನಿಖರವಾಗಿ ಪಾಲಿಸಿದರೆ ಸಾಕು.
ಇದನ್ನೂ ಓದಿ: ಪ್ರಪಂಚದ ಏಕೈಕ ಜಲಾಧಿವಾಸ ಗಣಪ; ಗುಡ್ಡಟ್ಟು ವಿನಾಯಕ ದೇವಸ್ಥಾನದ ಇಂಟರೆಸ್ಟಿಂಗ್ ಸಂಗತಿ ಇಲ್ಲಿದೆ
ವಾಸ್ತು ಶಾಸ್ತ್ರದ ಪ್ರಕಾರ ನೀವು ಎಂದಿಗೂ ಶೌಚಾಲಯ ಅಥವಾ ಸ್ನಾನಗೃಹದ ಪಕ್ಕದ ಗೋಡೆಯ ಮೇಲಿನ ತಿಜೋರಿಯಲ್ಲಿ ಹಣವನ್ನು ಇಡಬಾರದು. ಇದಲ್ಲದೇ ಮನೆಯಲ್ಲಿರುವ ತಿಜೋರಿಯು ಮೂಲೆಯಲ್ಲಿ ಅಥವಾ ಕತ್ತಲೆಯ ಸ್ಥಳದಲ್ಲಿ ಇರಬಾರದು. ಇದು ಮನೆಯಲ್ಲಿ ವಾಸ್ತು ದೋಷಗಳನ್ನು ಉಂಟುಮಾಡುತ್ತದೆ. ಎಲ್ಲಿ ಸ್ವಚ್ಛತೆ ಇರುತ್ತದೆಯೋ, ಆ ಮನೆಗೆ ಯಾವಾಗಲೂ ಲಕ್ಷ್ಮಿ ದೇವಿಯ ಆಶೀರ್ವಾದವಿರುತ್ತದೆ ಎಂದು ವಾಸ್ತು ತಜ್ಞರು ಹೇಳುತ್ತಾರೆ. ಆದ್ದರಿಂದ ಯಾವಾಗಲೂ ಮನೆಯನ್ನು ಸ್ವಚ್ಛವಾಗಿಟ್ಟುಕೊಳ್ಳಿ.
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ