AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vastu Tips: ಪ್ಯಾಂಟಿನ ಹಿಂದಿನ ಪಾಕೆಟ್​​​ನಲ್ಲಿ ಪರ್ಸ್ ಇಡುವ ಅಭ್ಯಾಸ ನಿಮಗಿದ್ದರೆ ಇಂದೇ ಬಿಟ್ಟು ಬಿಡಿ

ವಾಸ್ತು ಶಾಸ್ತ್ರದ ಪ್ರಕಾರ ನಿಮ್ಮ ಪರ್ಸ್​​​ನಲ್ಲಿ ಇಟ್ಟುಕೊಳ್ಳಬೇಕಾದ ವಸ್ತುಗಳ ಬಗ್ಗೆ ಯೋಚಿಸಬೇಕು. ಕೆಲವೊಂದು ವಸ್ತುವನ್ನು ಪರ್ಸ್​​ನಲ್ಲಿ ಇಟ್ಟುಕೊಳ್ಳುವುದರಿಂದ ಹಣದ ಕೊರತೆ ಉಂಟಾಗಬಹುದು. ಇದಲ್ಲದೇ ಪ್ಯಾಂಟಿನ ಹಿಂದಿನ ಪಾಕೆಟ್​​​ನ್ಲಲಿ ಪರ್ಸ್ ಇಡುವ ಅಭ್ಯಾಸ ನಿಮಗಿದ್ದರೆ ಇಂದೇ ಬಿಟ್ಟು ಬಿಡಿ

Vastu Tips: ಪ್ಯಾಂಟಿನ ಹಿಂದಿನ ಪಾಕೆಟ್​​​ನಲ್ಲಿ ಪರ್ಸ್ ಇಡುವ ಅಭ್ಯಾಸ ನಿಮಗಿದ್ದರೆ ಇಂದೇ ಬಿಟ್ಟು ಬಿಡಿ
Vastu Tips For WalletImage Credit source: Pinterest
ಅಕ್ಷತಾ ವರ್ಕಾಡಿ
|

Updated on:May 02, 2024 | 3:21 PM

Share

ಅನೇಕ ಜನರು ತಮ್ಮ ಪ್ಯಾಂಟ್ನ ಹಿಂದಿನ ಪಾಕೆಟ್ನಲ್ಲಿ ಪರ್ಸ್ ಇಡುವ ಅಭ್ಯಾಸವನ್ನು ಹೊಂದಿರುತ್ತಾರೆ. ನಿಮ್ಮ ಈ ಅಭ್ಯಾಸ ಆರ್ಥಿಕವಾಗಿ ನಷ್ಟಕ್ಕೆ ಕಾರಣವಾಗುತ್ತದೆ ಎಂದು ವಾಸ್ತು ತಜ್ಞರು ಎಚ್ಚರಿಸುತ್ತಾರೆ. ಪ್ಯಾಂಟಿನ ಹಿಂದಿನ ಪಾಕೆಟ್​​​ನ್ಲಲಿ ಪರ್ಸ್ ಇಟ್ಟು ಅದರಲ್ಲಿ ದುಡ್ಡು ಸೇರಿದಂತೆ ನಿಮ್ಮ ಕುಟುಂಬದ ಫೋಟೋ, ದೇವರ ಫೋಟೋಗಳನ್ನು ಇಡುವುದು ಅಶುಭ ಎಂದು ಪರಿಗಣಿಸಲಾಗಿದೆ. ಈ ರೀತಿಯ ಅಭ್ಯಾಸದಿಂದ ಲಕ್ಷ್ಮಿ ದೇವಿ ಅಸಮಾಧಾನಗೊಳ್ಳುತ್ತಾಳೆ ಹಾಗೂ ನೀವು ಜೀವನದಲ್ಲಿ ಕಷ್ಟಗಳನ್ನು ಎದುರಿಸಬೇಕಾಗುತ್ತದೆ ಎಂದು ವಾಸ್ತು ತಜ್ಞರು ಹೇಳುತ್ತಾರೆ.

ವಾಸ್ತು ಶಾಸ್ತ್ರದ ಪ್ರಕಾರ ಪರ್ಸ್ ಅನ್ನು ಎಲ್ಲಿ ಇಡಬೇಕು. ವಾಸ್ತು ಶಾಸ್ತ್ರದ ಪ್ರಕಾರ, ಪ್ಯಾಂಟಿನ ಹಿಂದಿನ ಪಾಕೆಟ್​​​ನ್ಲಲಿ ಪರ್ಸ್ ಇಡುವ ಬದಲು ಮುಂಭಾಗದ ಜೇಬಿನಲ್ಲಿ ಇಡುವುದು ಮಂಗಳಕರವೆಂದು ಪರಿಗಣಿಸಲಾಗಿದೆ.

ನಿಮ್ಮ ಪರ್ಸ್ ಈ ವಸ್ತುಗಳನ್ನು ಇಡಬೇಡಿ:

ವಾಸ್ತು ಶಾಸ್ತ್ರದ ಪ್ರಕಾರ ನಿಮ್ಮ ಪರ್ಸ್​​​ನಲ್ಲಿ ಇಟ್ಟುಕೊಳ್ಳಬೇಕಾದ ವಸ್ತುಗಳ ಬಗ್ಗೆ ಯೋಚಿಸಬೇಕು. ಕೆಲವೊಂದು ವಸ್ತುವನ್ನು ಪರ್ಸ್​​ನಲ್ಲಿ ಇಟ್ಟುಕೊಳ್ಳುವುದರಿಂದ ಹಣದ ಕೊರತೆ ಉಂಟಾಗಬಹುದು.

ಕೀಗಳು:

ನಿಮ್ಮ ಮನೆಯ ಕೀ ಸೇರಿದಂತೆ ವಾಹನ,ಬೀರು ಕೀಗಳನ್ನು ಪರ್ಸ್​​​ನಲ್ಲಿ ಇಟ್ಟುಕೊಳ್ಳಬೇಡಿ. ಕೀಲಿ ಕೈಗಳ ಗೊಂಚುಗಳನ್ನು ಪರ್ಸ್​​​ನಲ್ಲಿ ಇಟ್ಟುಕೊಳ್ಳಯವುದರಿಂದ ಮಾತೆ ಲಕ್ಷ್ಮಿ ಅಸಮಧಾನಗೊಳ್ಳುತ್ತಾಳೆ ಎಂದು ನಂಬಲಾಗಿದೆ. ಜೊತೆಗೆ ನೀವು ಆರ್ಥಿಕ ಬಿಕ್ಕಟ್ಟನ್ನು ಎದುರಿಸಬಹುದು.

ಮಾತ್ರೆಗಳು:

ತಲೆನೋವು, ಜ್ವರ, ನೆಗಡಿಗೆ ಸಂಬಂಧಿಸಿದ ಮಾತ್ರೆಗಳನ್ನು ಪರ್ಸ್​​​ನಲ್ಲಿ ಇಟ್ಟುಕೊಳ್ಳಬೇಡಿ. ಇದು ವ್ಯಕ್ತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಇದು ನೇರವಾಗಿ ವ್ಯಕ್ತಿಯ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ವ್ಯಕ್ತಿ ಪ್ರತೀ ಬಾರಿ ಅನಾರೋಗ್ಯಕ್ಕೆ ಒಳಗಾಗುತ್ತಾನೆ ಎಂದು ವಾಸ್ತು ತಜ್ಞರು ಎಚ್ಚರಿಸುತ್ತಾರೆ.

ಹಳೆ ಹರಿದ ನೋಟುಗಳು:

ಹಳೆ ಹರಿದ ನೋಟುಗಳನ್ನು ಪರ್ಸ್​​​ನಲ್ಲಿ ಇಟ್ಟುಕೊಳ್ಳಬೇಡಿ. ಇದು ಅದೃಷ್ಟದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ವಾಸ್ತು ದೋಷ ಉಂಟಾಗುತ್ತದೆ. ಇದು ನಿಮ್ಮ ಆದಾಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ತಾಯಿ ಲಕ್ಷ್ಮಿಗೆ ಅಸಮಾಧಾನವಾಗಬಹುದು. ಹಣವಿದ್ದರೂ ಖರ್ಚು ಜಾಸ್ತಿ.

ದೇವರ ಫೋಟೋ:

ದೇವರು ಅಥವಾ ಪೂರ್ವಜರ ಫೋಟೋಗಳನ್ನು ಪರ್ಸ್​​​ನಲ್ಲಿ ಇಡಬೇಡಿ. ಇದು ವಾಸ್ತು ದೋಷಕ್ಕೆ ಕಾರಣವಾಗಬಹುದು. ಇದು ನಿಮ್ಮ ಆರ್ಥಿಕ ಸ್ಥಿತಿಯ ಮೇಲೆ ಪರಿಣಾಮ ಬೀರುತ್ತದೆ. ವ್ಯಕ್ತಿಯ ಜೀವನದಲ್ಲಿ ಸಮಸ್ಯೆಗಳು ಹೆಚ್ಚಾಗುತ್ತವೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:55 am, Wed, 28 February 24

‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ