AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vastu Tips: ಪ್ಯಾಂಟಿನ ಹಿಂದಿನ ಪಾಕೆಟ್​​​ನಲ್ಲಿ ಪರ್ಸ್ ಇಡುವ ಅಭ್ಯಾಸ ನಿಮಗಿದ್ದರೆ ಇಂದೇ ಬಿಟ್ಟು ಬಿಡಿ

ವಾಸ್ತು ಶಾಸ್ತ್ರದ ಪ್ರಕಾರ ನಿಮ್ಮ ಪರ್ಸ್​​​ನಲ್ಲಿ ಇಟ್ಟುಕೊಳ್ಳಬೇಕಾದ ವಸ್ತುಗಳ ಬಗ್ಗೆ ಯೋಚಿಸಬೇಕು. ಕೆಲವೊಂದು ವಸ್ತುವನ್ನು ಪರ್ಸ್​​ನಲ್ಲಿ ಇಟ್ಟುಕೊಳ್ಳುವುದರಿಂದ ಹಣದ ಕೊರತೆ ಉಂಟಾಗಬಹುದು. ಇದಲ್ಲದೇ ಪ್ಯಾಂಟಿನ ಹಿಂದಿನ ಪಾಕೆಟ್​​​ನ್ಲಲಿ ಪರ್ಸ್ ಇಡುವ ಅಭ್ಯಾಸ ನಿಮಗಿದ್ದರೆ ಇಂದೇ ಬಿಟ್ಟು ಬಿಡಿ

Vastu Tips: ಪ್ಯಾಂಟಿನ ಹಿಂದಿನ ಪಾಕೆಟ್​​​ನಲ್ಲಿ ಪರ್ಸ್ ಇಡುವ ಅಭ್ಯಾಸ ನಿಮಗಿದ್ದರೆ ಇಂದೇ ಬಿಟ್ಟು ಬಿಡಿ
Vastu Tips For WalletImage Credit source: Pinterest
ಅಕ್ಷತಾ ವರ್ಕಾಡಿ
|

Updated on:May 02, 2024 | 3:21 PM

Share

ಅನೇಕ ಜನರು ತಮ್ಮ ಪ್ಯಾಂಟ್ನ ಹಿಂದಿನ ಪಾಕೆಟ್ನಲ್ಲಿ ಪರ್ಸ್ ಇಡುವ ಅಭ್ಯಾಸವನ್ನು ಹೊಂದಿರುತ್ತಾರೆ. ನಿಮ್ಮ ಈ ಅಭ್ಯಾಸ ಆರ್ಥಿಕವಾಗಿ ನಷ್ಟಕ್ಕೆ ಕಾರಣವಾಗುತ್ತದೆ ಎಂದು ವಾಸ್ತು ತಜ್ಞರು ಎಚ್ಚರಿಸುತ್ತಾರೆ. ಪ್ಯಾಂಟಿನ ಹಿಂದಿನ ಪಾಕೆಟ್​​​ನ್ಲಲಿ ಪರ್ಸ್ ಇಟ್ಟು ಅದರಲ್ಲಿ ದುಡ್ಡು ಸೇರಿದಂತೆ ನಿಮ್ಮ ಕುಟುಂಬದ ಫೋಟೋ, ದೇವರ ಫೋಟೋಗಳನ್ನು ಇಡುವುದು ಅಶುಭ ಎಂದು ಪರಿಗಣಿಸಲಾಗಿದೆ. ಈ ರೀತಿಯ ಅಭ್ಯಾಸದಿಂದ ಲಕ್ಷ್ಮಿ ದೇವಿ ಅಸಮಾಧಾನಗೊಳ್ಳುತ್ತಾಳೆ ಹಾಗೂ ನೀವು ಜೀವನದಲ್ಲಿ ಕಷ್ಟಗಳನ್ನು ಎದುರಿಸಬೇಕಾಗುತ್ತದೆ ಎಂದು ವಾಸ್ತು ತಜ್ಞರು ಹೇಳುತ್ತಾರೆ.

ವಾಸ್ತು ಶಾಸ್ತ್ರದ ಪ್ರಕಾರ ಪರ್ಸ್ ಅನ್ನು ಎಲ್ಲಿ ಇಡಬೇಕು. ವಾಸ್ತು ಶಾಸ್ತ್ರದ ಪ್ರಕಾರ, ಪ್ಯಾಂಟಿನ ಹಿಂದಿನ ಪಾಕೆಟ್​​​ನ್ಲಲಿ ಪರ್ಸ್ ಇಡುವ ಬದಲು ಮುಂಭಾಗದ ಜೇಬಿನಲ್ಲಿ ಇಡುವುದು ಮಂಗಳಕರವೆಂದು ಪರಿಗಣಿಸಲಾಗಿದೆ.

ನಿಮ್ಮ ಪರ್ಸ್ ಈ ವಸ್ತುಗಳನ್ನು ಇಡಬೇಡಿ:

ವಾಸ್ತು ಶಾಸ್ತ್ರದ ಪ್ರಕಾರ ನಿಮ್ಮ ಪರ್ಸ್​​​ನಲ್ಲಿ ಇಟ್ಟುಕೊಳ್ಳಬೇಕಾದ ವಸ್ತುಗಳ ಬಗ್ಗೆ ಯೋಚಿಸಬೇಕು. ಕೆಲವೊಂದು ವಸ್ತುವನ್ನು ಪರ್ಸ್​​ನಲ್ಲಿ ಇಟ್ಟುಕೊಳ್ಳುವುದರಿಂದ ಹಣದ ಕೊರತೆ ಉಂಟಾಗಬಹುದು.

ಕೀಗಳು:

ನಿಮ್ಮ ಮನೆಯ ಕೀ ಸೇರಿದಂತೆ ವಾಹನ,ಬೀರು ಕೀಗಳನ್ನು ಪರ್ಸ್​​​ನಲ್ಲಿ ಇಟ್ಟುಕೊಳ್ಳಬೇಡಿ. ಕೀಲಿ ಕೈಗಳ ಗೊಂಚುಗಳನ್ನು ಪರ್ಸ್​​​ನಲ್ಲಿ ಇಟ್ಟುಕೊಳ್ಳಯವುದರಿಂದ ಮಾತೆ ಲಕ್ಷ್ಮಿ ಅಸಮಧಾನಗೊಳ್ಳುತ್ತಾಳೆ ಎಂದು ನಂಬಲಾಗಿದೆ. ಜೊತೆಗೆ ನೀವು ಆರ್ಥಿಕ ಬಿಕ್ಕಟ್ಟನ್ನು ಎದುರಿಸಬಹುದು.

ಮಾತ್ರೆಗಳು:

ತಲೆನೋವು, ಜ್ವರ, ನೆಗಡಿಗೆ ಸಂಬಂಧಿಸಿದ ಮಾತ್ರೆಗಳನ್ನು ಪರ್ಸ್​​​ನಲ್ಲಿ ಇಟ್ಟುಕೊಳ್ಳಬೇಡಿ. ಇದು ವ್ಯಕ್ತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಇದು ನೇರವಾಗಿ ವ್ಯಕ್ತಿಯ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ವ್ಯಕ್ತಿ ಪ್ರತೀ ಬಾರಿ ಅನಾರೋಗ್ಯಕ್ಕೆ ಒಳಗಾಗುತ್ತಾನೆ ಎಂದು ವಾಸ್ತು ತಜ್ಞರು ಎಚ್ಚರಿಸುತ್ತಾರೆ.

ಹಳೆ ಹರಿದ ನೋಟುಗಳು:

ಹಳೆ ಹರಿದ ನೋಟುಗಳನ್ನು ಪರ್ಸ್​​​ನಲ್ಲಿ ಇಟ್ಟುಕೊಳ್ಳಬೇಡಿ. ಇದು ಅದೃಷ್ಟದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ವಾಸ್ತು ದೋಷ ಉಂಟಾಗುತ್ತದೆ. ಇದು ನಿಮ್ಮ ಆದಾಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ತಾಯಿ ಲಕ್ಷ್ಮಿಗೆ ಅಸಮಾಧಾನವಾಗಬಹುದು. ಹಣವಿದ್ದರೂ ಖರ್ಚು ಜಾಸ್ತಿ.

ದೇವರ ಫೋಟೋ:

ದೇವರು ಅಥವಾ ಪೂರ್ವಜರ ಫೋಟೋಗಳನ್ನು ಪರ್ಸ್​​​ನಲ್ಲಿ ಇಡಬೇಡಿ. ಇದು ವಾಸ್ತು ದೋಷಕ್ಕೆ ಕಾರಣವಾಗಬಹುದು. ಇದು ನಿಮ್ಮ ಆರ್ಥಿಕ ಸ್ಥಿತಿಯ ಮೇಲೆ ಪರಿಣಾಮ ಬೀರುತ್ತದೆ. ವ್ಯಕ್ತಿಯ ಜೀವನದಲ್ಲಿ ಸಮಸ್ಯೆಗಳು ಹೆಚ್ಚಾಗುತ್ತವೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:55 am, Wed, 28 February 24

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್