AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಸ್ತು ಟಿಪ್ಸ್: ನಿಮ್ಮ ಮನೆಯಲ್ಲಿ ಟಿ.ವಿ ಸರಿಯಾದ ದಿಕ್ಕಿನಲ್ಲಿದೆಯೇ? ಇಲ್ಲದಿದ್ದರೆ ತಕ್ಷಣ ಬದಲಿಸಿ

Vastu Tips: ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಎಲ್ಲೆಂದರಲ್ಲಿ ಟಿ.ವಿ. ಹಾಕುವುದರಿಂದ ವಾಸ್ತು ದೋಷ ಉಂಟಾಗುತ್ತದೆ. ಇದರಿಂದ ಮನೆ ಮಾಲೀಕರು ಹಲವು ಸಮಸ್ಯೆಗಳನ್ನು ಎದುರಿಸಬೇಕಾದೀತು. ತೀವ್ರ ಆರ್ಥಿಕ ನಷ್ಟ ಅನುಭವಿಸಬೇಕಾದೀತು ಎನ್ನುತ್ತಾರೆ ವಾಸ್ತು ತಜ್ಞರು.

ವಾಸ್ತು ಟಿಪ್ಸ್: ನಿಮ್ಮ ಮನೆಯಲ್ಲಿ ಟಿ.ವಿ ಸರಿಯಾದ ದಿಕ್ಕಿನಲ್ಲಿದೆಯೇ? ಇಲ್ಲದಿದ್ದರೆ ತಕ್ಷಣ ಬದಲಿಸಿ
ನಿಮ್ಮ ಮನೆಯಲ್ಲಿ ಟಿವಿ ಸರಿಯಾದ ದಿಕ್ಕಿನಲ್ಲಿದೆಯೇ? ಇಲ್ಲದಿದ್ದರೆ ತಕ್ಷಣ ಬದಲಿಸಿ.. Image Credit source: businessstandard.com
TV9 Web
| Edited By: |

Updated on:Nov 23, 2022 | 5:28 PM

Share

ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಎಲ್ಲೆಂದರಲ್ಲಿ ಟಿ.ವಿ. ಹಾಕುವುದರಿಂದ ವಾಸ್ತು ದೋಷ ಉಂಟಾಗುತ್ತದೆ. ಇದರಿಂದ ಮನೆ ಮಾಲೀಕರು ಹಲವು ಸಮಸ್ಯೆಗಳನ್ನು ಎದುರಿಸಬೇಕಾದೀತು. ತೀವ್ರ ಆರ್ಥಿಕ ನಷ್ಟ ಅನುಭವಿಸಬೇಕಾದೀತು ಎನ್ನುತ್ತಾರೆ ವಾಸ್ತು ತಜ್ಞರು Vastu Tips. 

ಆಧುನಿಕ ಜೀವನದ ಅವಿಭಾಜ್ಯ ಅಂಗವಾದ ಟೆಲಿವಿಶನ್​ ಅನ್ನು ಮನೆಯಲ್ಲಿ ಯಾವ ಕೋಣೆಯ, ಯಾವ ದಿಕ್ಕಿನಲ್ಲಿಡಬೇಕು ಎಂಬುದೂ ವಾಸ್ತು ಶಾಸ್ತ್ರದ ಪ್ರಕಾರ ಮುಖ್ಯವಾಗಿದೆ. ವಾಸ್ತು ಪ್ರಕಾರ.. ಬಾಗಿಲು, ಕಿಟಕಿಗಳಿಂದ ಹಿಡಿದು ಅಡುಗೆ ಮನೆ, ಮಲಗುವ ಕೋಣೆ, ಸ್ನಾನ ಗೃಹದವರೆಗೆ ಎಲ್ಲವನ್ನೂ ಸರಿಯಾದ ದಿಕ್ಕಿನಲ್ಲಿ ಇರಿಸಲು ಸಲಹೆ ಮಾಡಲಾಗಿದೆ. ಹಾಗೆಯೇ ಮನೆಯಲ್ಲಿ ಟಿ.ವಿ. ಹಾಕಲು ಸರಿಯಾದ ದಿಕ್ಕು ಯಾವುದು..? ಮನೆಯ ಪ್ರವೇಶದ್ವಾರದ ಮುಂದೆ ಟಿವಿಯನ್ನು ಎಂದಿಗೂ ಇಡಬಾರದು ಎಂಬುದನ್ನು ನೆನಪಿಡಿ. ಈ ರೀತಿ ಮಾಡುವುದರಿಂದ ಮನೆಯಲ್ಲಿ ಸದಾ ಜಗಳ ನಡೆದು, ಕುಟುಂಬ ಸದಸ್ಯರ ನಡುವೆ ಕಲಹದ ವಾತಾವರಣ ನಿರ್ಮಾಣವಾಗುತ್ತದೆ. ಹಾಗಾದರೆ, ಮನೆಯಲ್ಲಿ ಟಿ.ವಿ. ಇರಿಸಲು ಸರಿಯಾದ ದಿಕ್ಕು ಯಾವುದು ಎಂಬುದು ನಿಮಗೆ ತಿಳಿದಿದೆಯೇ?

ವಾಸ್ತು ಶಾಸ್ತ್ರವು ಮನುಷ್ಯನ ಪ್ರತಿಯೊಂದು ಕೆಲಸಕ್ಕೂ ನಿರ್ದೇಶನ ನೀಡುತ್ತದೆ. ಇನ್ನು ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಎಲ್ಲೆಂದರಲ್ಲಿ ಟಿವಿ ಹಾಕುವುದರಿಂದ ವಾಸ್ತು ದೋಷ ಉಂಟಾಗುತ್ತದೆ. ಇದರಿಂದ ಮನೆ ಮಾಲೀಕರು ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿ, ತೀವ್ರ ಆರ್ಥಿಕ ನಷ್ಟ ಅನುಭವಿಸುತ್ತಾರೆ ಎನ್ನಬಹುದು. ಹಾಗಿದ್ದರೆ ಮನೆಯಲ್ಲಿ ಟಿವಿಯನ್ನು ಯಾವ ದಿಕ್ಕಿನಲ್ಲಿ ಇಡಬೇಕು ಎಂಬುದನ್ನು ಇಲ್ಲಿ ತಿಳಿಯೋಣ.

ವಾಸ್ತು ಪ್ರಕಾರ ಮನೆಯಲ್ಲಿ ಟಿ.ವಿ. ಇಡಲು ಇದು ಸರಿಯಾದ ದಿಕ್ಕು:

ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಟಿ.ವಿ ಇಡಲು ಆಗ್ನೇಯ ಅಥವಾ ಪೂರ್ವ ದಿಕ್ಕು ಸರಿಯಾದ ದಿಕ್ಕು. ಈ ದಿಕ್ಕಿನಲ್ಲಿ ಟಿ.ವಿಯನ್ನು ಇಡುವುದು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಇದರಿಂದ ಧನಾತ್ಮಕ ಶಕ್ತಿಯು ಮನೆಗೆ ಪ್ರವೇಶಿಸುತ್ತದೆ ಎಂದು ನಂಬಲಾಗಿದೆ.

ವಾಸ್ತು ಪ್ರಕಾರ ಟಿ.ವಿ ನೋಡುವಾಗ ಪೂರ್ವಕ್ಕೆ ಮುಖ ಮಾಡಬೇಕು. ಅಲ್ಲದೆ, ಮನೆಯ ಪ್ರವೇಶದ್ವಾರದ ಮುಂದೆ ಟಿವಿಯನ್ನು ಎಂದಿಗೂ ಇಡಬೇಡಿ ಎಂಬುದನ್ನ ನೆನಪಿಡಿ. ಈ ರೀತಿ ಮಾಡುವುದರಿಂದ ಮನೆಯಲ್ಲಿ ಸದಾ ಜಗಳ ನಡೆದು, ಕುಟುಂಬ ಸದಸ್ಯರ ನಡುವೆ ಕಲಹದ ವಾತಾವರಣ ನಿರ್ಮಾಣವಾಗುತ್ತದೆ. ಇನ್ನು ಮನೆಯ ಈಶಾನ್ಯ ಮೂಲೆಯಲ್ಲಿ ಟಿ.ವಿಯನ್ನು ಎಂದಿಗೂ ಇಡಬೇಡಿ. ಈ ದಿಕ್ಕಿನಲ್ಲಿ ಟಿವಿಯನ್ನು ಇರಿಸುವುದರಿಂದ ಧನಾತ್ಮಕ ಶಕ್ತಿಯ ಮಾರ್ಗವನ್ನು ನಿರ್ಬಂಧಿಸುತ್ತದೆ. ಮನೆಯಲ್ಲಿ ನಕಾರಾತ್ಮಕತೆ ತುಂಬಿಕೊಳ್ಳುತ್ತದೆ.

ವಾಸ್ತು ಶಾಸ್ತ್ರದ ಪ್ರಕಾರ.. ಮಲಗುವ ಕೋಣೆಯಲ್ಲಿ ಟಿವಿ ಇಡುವುದು ಒಳ್ಳೆಯದಲ್ಲ. ನಿಮ್ಮ ಮಲಗುವ ಕೋಣೆಯಲ್ಲಿ ಟಿ.ವಿ ಹಾಕಲು ನೀವು ನಿರ್ಧರಿಸಿದ್ದರೆ, ಕೆಲವು ಪ್ರಮುಖ ವಿಷಯಗಳನ್ನು ನೆನಪಿಟ್ಟುಕೊಳ್ಳುವುದು ಮುಖ್ಯ. ಮಲಗುವ ಕೋಣೆಯಲ್ಲಿ ಟಿ.ವಿಯನ್ನು ಆಗ್ನೇಯ ದಿಕ್ಕಿನಲ್ಲಿ ಅಂದರೆ ಆಗ್ನೇಯ ಕೋನದಲ್ಲಿ ಇಡಬೇಕು. ಅಲ್ಲದೆ ಮಲಗುವ ಕೋಣೆಯ ಮಧ್ಯದಲ್ಲಿ ಟಿವಿ ಇರಬಾರದು. ಏಕೆಂದರೆ ಇದು ವೈಯಕ್ತಿಕ ಜೀವನದಲ್ಲಿ ಸಮಸ್ಯೆಗಳನ್ನು ಸೃಷ್ಟಿಸುತ್ತದೆ ಎನ್ನುತ್ತದೆ ವಾಸ್ತು ಶಾಸ್ತ್ರ.

ಟಿವಿ ಅಳವಡಿಸುವುದು, ಅದರ ಬಳಕೆ ಬಗ್ಗೆ ವಾಸ್ತು ಶಾಸ್ತ್ರದಲ್ಲಿ ಕೆಲವು ಮಾಹಿತಿ ನೀಡಲಾಗಿದೆ. ವಾಸ್ತು ಪ್ರಕಾರ ಟಿವಿ ಯಾವಾಗಲೂ ಸ್ವಚ್ಛವಾಗಿರಬೇಕು. ಧೂಳು ಸಂಗ್ರಹವಾಗದಂತೆ ಕಾಲಕಾಲಕ್ಕೆ ಸ್ವಚ್ಛಗೊಳಿಸಬೇಕು. ಹೀಗೆ ಮಾಡದಿದ್ದರೆ ಮನೆಯಲ್ಲಿ ನಕಾರಾತ್ಮಕತೆ ಹೆಚ್ಚಾಗುತ್ತದೆ. ನಕಾರಾತ್ಮಕ ಶಕ್ತಿಯಿಂದ ಅಪಾರ ನಷ್ಟ ಅನುಭವಿಸಬೇಕಾಗುತ್ತದೆ ಎಂಬುದನ್ನ ಮರೆಯಬೇಡಿ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:27 pm, Wed, 23 November 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು