AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vastu Tips: ಶಮಿ ಗಿಡ ಮನೆಯ ಯಾವ ಭಾಗದಲ್ಲಿರಬೇಕು? ಅದರಿಂದ ಆಗುವ ಲಾಭವೇನು?

ವಾಸ್ತು ಶಾಸ್ತ್ರದಲ್ಲಿ ಶಮಿ ಗಿಡಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಮನೆಯಲ್ಲಿ ಶಮಿ ಗಿಡ ನೆಡುವುದರಿಂದ ಅನೇಕ ಪ್ರಯೋಜನಗಳಿವೆ. ಆದ್ದರಿಂದ ಈ ಗಿಡದ ಮಹತ್ವ ತಿಳಿದ ಜನರು ತಮ್ಮ ಮನೆಗಳಲ್ಲಿ ಶಮಿ ಗಿಡವನ್ನು ನೆಡುತ್ತಾರೆ. ಶಮಿ ಗಿಡದ ಧಾರ್ಮಿಕ ಮಹತ್ವ ಮತ್ತು ಅದನ್ನು ಯಾವ ದಿಕ್ಕಿನಲ್ಲಿ ನೆಡಬೇಕು ಎಂಬುದನ್ನು ತಿಳಿದುಕೊಳ್ಳಿ.

Vastu Tips: ಶಮಿ ಗಿಡ ಮನೆಯ ಯಾವ ಭಾಗದಲ್ಲಿರಬೇಕು? ಅದರಿಂದ ಆಗುವ ಲಾಭವೇನು?
ಪ್ರೀತಿ ಭಟ್​, ಗುಣವಂತೆ
| Edited By: |

Updated on: Feb 07, 2024 | 6:26 PM

Share

ವಾಸ್ತು ಶಾಸ್ತ್ರದಲ್ಲಿ ಶಮಿ ಸಸ್ಯವನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ಹಿಂದಿನ ಕಾಲದಿಂದಲೂ ತುಳಸಿ ಗಿಡದಂತೆ, ಶಮಿ ಸಸ್ಯವನ್ನು ಕೂಡ ಪೂಜಿಸುವುದು ರೂಢಿಯಲ್ಲಿದೆ. ಆದ್ದರಿಂದ, ಮನೆಯಲ್ಲಿ ಶಮಿ ಗಿಡವನ್ನು ನೆಡುವುದು ತುಂಬಾ ಶುಭವೆಂದು ಹೇಳಲಾಗುತ್ತದೆ. ಏಕೆಂದರೆ ಈ ಸಸ್ಯವು ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ತರುತ್ತದೆ ಎಂದು ನಂಬಲಾಗಿದೆ, ಹಾಗಾಗಿ ಇದನ್ನು ಮನೆಯಲ್ಲಿ ನೆಡುವುದು ಅದೃಷ್ಟ ಸಂಕೇತವಾಗಿದೆ. ಹಾಗಾದರೆ ಈ ಗಿಡವನ್ನು ನೆಡುವುದರ ಹಿಂದಿರುವ ಮಹತ್ವವೇನು? ಮನೆಯ ಯಾವ ಭಾಗದಲ್ಲಿ ಈ ಗಿಡವನ್ನು ನೆಡಬೇಕು? ಈ ಬಗ್ಗೆ ಮಾಹಿತಿ ಇಲ್ಲಿದೆ.

ಶಮಿ ಗಿಡದ ಧಾರ್ಮಿಕ ಮಹತ್ವ

ತುಳಸಿಯಂತೆ, ಶಮಿಯೂ ಕೂಡ ತನ್ನದೇ ಆದ ಧಾರ್ಮಿಕ ಮತ್ತು ಔಷಧೀಯ ಗುಣಗಳನ್ನು ಹೊಂದಿದೆ. ಅಲ್ಲದೆ ಈ ಗಿಡ ತನ್ನ ಸುತ್ತಲಿನ ನಕಾರಾತ್ಮಕ ಶಕ್ತಿಯನ್ನು ಹೀರಿಕೊಳ್ಳುವುದರ ಮೂಲಕ ಸಕಾರಾತ್ಮಕ ಶಕ್ತಿಯನ್ನು ನೀಡುತ್ತದೆ. ಪುರಾಣಗಳ ಪ್ರಕಾರ, ಭಗವಾನ್ ರಾಮನು ಲಂಕಾ ಮೇಲೆ ದಾಳಿ ಮಾಡುವ ಮೊದಲು ಶಮಿ ಮರವನ್ನು ಪೂಜಿಸಿದ್ದನು ಮತ್ತು ಮಹಾಭಾರತದಲ್ಲಿ, ಪಾಂಡವರು ತಮ್ಮ ವನವಾಸದ ಸಮಯದಲ್ಲಿ ಶಮಿ ಮರದಲ್ಲಿ ತಮ್ಮ ಆಯುಧಗಳನ್ನು ಅಡಗಿಸಿಟ್ಟಿದ್ದರು ಎಂಬ ಉಲ್ಲೇಖಗಳಿವೆ.

ಮನೆಯಲ್ಲಿ ಶಮಿ ಗಿಡವನ್ನು ನೆಡುವುದರಿಂದ ನಕಾರಾತ್ಮಕ ಶಕ್ತಿ ದೂರವಾಗುತ್ತದೆ ಮತ್ತು ಮನೆಯಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿ ನೆಲೆಯಾಗುತ್ತದೆ. ವಾಸ್ತು ಪ್ರಕಾರ, ಮನೆಯಲ್ಲಿ ಶಮಿ ಗಿಡವನ್ನು ನೆಡುವುದರಿಂದ ವಾಸ್ತು ದೋಷಗಳು ನಿವಾರಣೆಯಾಗುವುದರ ಜೊತೆಗೆ ಶನಿ ದೇವನ ವಕ್ರ ಪ್ರಭಾವ ಕಡಿಮೆಯಾಗುತ್ತದೆ. ಇನ್ನು ಪುರಾಣಗಳ ಪ್ರಕಾರ ಶಿವನು ಶಮಿ ಮರದಲ್ಲಿ ವಾಸಿಸುತ್ತಾನೆ ಎಂದು ನಂಬಲಾಗಿದೆ, ಆದ್ದರಿಂದ ಶಮಿ ಮರವನ್ನು ಪೂಜಿಸುವ ಮೂಲಕ ಶಿವನ ಆಶೀರ್ವಾದವನ್ನು ಪಡೆಯುತ್ತಾರೆ. ಶಮಿ ಎಲೆಗಳನ್ನು ಗಣೇಶ ಮತ್ತು ದುರ್ಗಾ ಮಾತೆಯ ಪೂಜೆಯಲ್ಲಿ ಬಳಸಲಾಗುತ್ತದೆ.

ಹಾಗಾದರೆ ಮನೆಯಲ್ಲಿ ಶಮಿ ಗಿಡವನ್ನು ಎಲ್ಲಿ ನೆಡಬೇಕು?

ವಾಸ್ತು ಪ್ರಕಾರ, ಶಮಿ ಗಿಡವನ್ನು ಮನೆಯ ದಕ್ಷಿಣ ದಿಕ್ಕಿನಲ್ಲಿ ನೆಡಬೇಕು. ಆದರೆ ಎಂದಿಗೂ ಮನೆಯ ಒಳಗೆ ನೆಡಬಾರದು. ಬದಲಿಗೆ ಶಮಿ ಗಿಡವನ್ನು ಮನೆಯ ಮುಖ್ಯ ದ್ವಾರ, ಉದ್ಯಾನ, ಟೆರೇಸ್ ಅಥವಾ ಬಾಲ್ಕನಿಯಂತಹ ತೆರೆದ ಸ್ಥಳದಲ್ಲಿ ನೆಡಬೇಕು. ಮನೆಯ ಮುಖ್ಯ ದ್ವಾರದ ಬಲ ಭಾಗದಲ್ಲಿ ಶಮಿ ಗಿಡವನ್ನು ನೆಡುವುದು ತುಂಬಾ ಶುಭವೆಂದು ಪರಿಗಣಿಸಲಾಗಿದೆ. ನೀವು ಮನೆಯಿಂದ ಹೊರಗೆ ಹೋದಾಗಲೆಲ್ಲಾ, ಶಮಿ ಸಸ್ಯ ನಿಮ್ಮ ಬಲಭಾಗದಲ್ಲಿರುವ ರೀತಿಯಲ್ಲಿ ಅದನ್ನು ಮುಖ್ಯ ದ್ವಾರದಲ್ಲಿ ನೆಡಬೇಕು.

ಇದನ್ನೂ ಓದಿ: ಈ ದೇವಾಲಯಕ್ಕೆ ಹನುಮಾನ್ ಚಾಲೀಸ್ ಕೇಳಲು ವಿಶೇಷ ಭಕ್ತರು ಬರುತ್ತಾರೆ

ನೀವು ಟೆರೇಸ್ ನಲ್ಲಿ ಶಮಿ ಗಿಡವನ್ನು ನೆಡುತ್ತಿದ್ದರೆ ಅದನ್ನು ದಕ್ಷಿಣ ದಿಕ್ಕಿನಲ್ಲಿಯೇ ನೆಡಬೇಕು, ಇದು ಸಾಧ್ಯವಾಗದಿದ್ದರೆ ನೀವು ಶಮಿ ಸಸ್ಯವನ್ನು ಪೂರ್ವ ದಿಕ್ಕಿನಲ್ಲಿಯೂ ನೆಡಬಹುದು. ಶನಿವಾರ ಶಮಿ ಸಸಿಯನ್ನು ತಂದು ನೆಡುವುದು ಶುಭವೆಂದು ಪರಿಗಣಿಸಲಾಗಿದೆ. ತುಳಸಿಯಂತೆ, ಶಮಿ ಸಸ್ಯವನ್ನು ಪ್ರತಿದಿನ ಪೂಜಿಸುವುದು ಮತ್ತು ಅದರ ಮುಂದೆ ದೀಪ ಹಚ್ಚುವುದು ತುಂಬಾ ಒಳ್ಳೆಯದು ಎನ್ನಲಾಗುತ್ತದೆ. ಪ್ರತಿದಿನ ದೀಪವನ್ನು ಬೆಳಗಿಸಲು ಸಾಧ್ಯವಾಗದಿದ್ದರೆ, ಪ್ರತಿ ಶನಿವಾರ ಶಮಿ ಮರದ ಕೆಳಗೆ ದೀಪ ಬೆಳಗಿಸಿ. ಇದರಿಂದ ಶುಭ ಫಲ ಪ್ರಾಪ್ತಿಯಾಗುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ