AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vastu Tips: ತುಳಸಿ ಗಿಡಕ್ಕೆ ಹಸಿ ಹಾಲು ಅರ್ಪಿಸಿದರೆ ಅದೃಷ್ಟ!, ಗಿಡವನ್ನು ಎಂಥಾ ಪಾಟ್​ನಲ್ಲಿ ನೆಡಬೇಕು?

Vastu Tips: ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ ಮತ್ತು ತುಳಸಿಗೆ ಲಕ್ಷ್ಮಿ ದೇವತೆಯ ಸ್ಥಾನಮಾನವನ್ನು ನೀಡಿರುವುದರಿಂದ ತುಳಸಿಯನ್ನು ಸಂಪತ್ತಿನ ದೇವತೆ ಎಂದೇ ಕರೆಯಲಾಗುತ್ತದೆ.

Vastu Tips: ತುಳಸಿ ಗಿಡಕ್ಕೆ ಹಸಿ ಹಾಲು ಅರ್ಪಿಸಿದರೆ ಅದೃಷ್ಟ!, ಗಿಡವನ್ನು ಎಂಥಾ ಪಾಟ್​ನಲ್ಲಿ ನೆಡಬೇಕು?
Tulsi
TV9 Web
| Edited By: |

Updated on: Jul 21, 2022 | 1:16 PM

Share

ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ ಮತ್ತು ತುಳಸಿಗೆ ಲಕ್ಷ್ಮೀ ದೇವತೆಯ ಸ್ಥಾನಮಾನವನ್ನು ನೀಡಿರುವುದರಿಂದ ತುಳಸಿಯನ್ನು ಸಂಪತ್ತಿನ ದೇವತೆ ಎಂದೇ ಕರೆಯಲಾಗುತ್ತದೆ. ನಿಮ್ಮ ಜೀವನದಲ್ಲಿ ಯಾವುದೇ ಹಣಕಾಸಿನ ಸಮಸ್ಯೆಗಳನ್ನು ನೀವು ಎದುರಿಸುತ್ತಿದ್ದರೆ ತುಳಸಿ ಗಿಡವನ್ನು ಲಕ್ಷ್ಮೀ ದೇವಿಯ ರೂಪದಲ್ಲಿ ಪೂಜಿಸುವುದರಿಂದ ನೀವು ತೊಂದರೆಗಳಿಂದ ಹೊರಬರುವಿರಿ.

ಆದರೆ ಅದಕ್ಕೂ ಮುನ್ನ ವಾಸ್ತು ಮತ್ತು ಜ್ಯೋತಿಷ್ಯದಲ್ಲಿ ತಿಳಿಸಿರುವಂತೆ ತುಳಸಿಯ ಬಗ್ಗೆ ಇರುವ ಮುಖ್ಯ ನಿಯಮಗಳೇನು ಎಂಬುದನ್ನು ನೀವು ತಿಳಿದುಕೊಳ್ಳಬೇಕು.

– ನಿಮ್ಮ ಮನೆಯಲ್ಲಿ ತುಳಸಿ ಗಿಡವಿಲ್ಲದಿದ್ದರೆ ಮತ್ತು ನಿಮ್ಮ ಮನೆಯಲ್ಲಿ ತುಳಸಿ ಗಿಡವನ್ನು ನೆಡಲು ಬಯಸಿದರೆ, ಉತ್ತಮ ಸಮಯವೆಂದರೆ ಅದು ಕಾರ್ತಿಕ ಮಾಸ.

-ತುಳಸಿಯನ್ನು ಲಕ್ಷ್ಮಿ ದೇವಿಯ ರೂಪವೆಂದು ಪರಿಗಣಿಸಲಾಗುತ್ತದೆ ಮತ್ತು ಕಾರ್ತಿಕ ಮಾಸದಲ್ಲಿ ತುಳಸಿ ಗಿಡವನ್ನು ಮನೆಗೆ ತಂದು ನೆಟ್ಟರೆ ಲಕ್ಷ್ಮಿ ದೇವಿಯೂ ಮನೆಗೆ ಬರುತ್ತಾಳೆ ಎಂಬುದು ನಂಬಿಕೆ.

ವಾಸ್ತು ಪ್ರಕಾರ ತುಳಸಿಯನ್ನು ನೆಡಿ -ವಾಸ್ತು ಶಾಸ್ತ್ರದ ಪ್ರಕಾರ ತುಳಸಿ ಗಿಡಗಳನ್ನು ಯಾವಾಗಲೂ ಮನೆಯ ಉತ್ತರ ಅಥವಾ ಈಶಾನ್ಯ ದಿಕ್ಕಿನಲ್ಲಿ ನೆಡಬೇಕು. ಈ ದಿಕ್ಕಿನಲ್ಲಿ ದೇವತೆಗಳು ನೆಲೆಸಿದ್ದಾರೆ ಎಂದು ಹೇಳಲಾಗುತ್ತದೆ.

-ತುಳಸಿ ಗಿಡವನ್ನು ಮನೆಯ ಬಾಲ್ಕನಿ ಅಥವಾ ಕಿಟಕಿಯ ಮೇಲೆ ನೆಡಬಹುದು. ಆದರೆ ವಾಸ್ತು ಶಾಸ್ತ್ರದಲ್ಲಿ ನೀಡಿರುವ ನಿರ್ದೇಶನವನ್ನು ಗಮನಿಸಬೇಕು. -ತುಳಸಿ ಗಿಡಗಳನ್ನು ಅಪ್ಪಿತಪ್ಪಿಯೂ ಮನೆಯ ದಕ್ಷಿಣ ದಿಕ್ಕಿನಲ್ಲಿ ನೆಡಬಾರದು. ಈ ದಿಕ್ಕು ಪೂರ್ವಜರಿಗೆ ಸೇರಿದ್ದು ಇಲ್ಲಿ ತುಳಸಿ ಗಿಡವನ್ನು ಇಟ್ಟರೆ ಭಾರೀ ಆರ್ಥಿಕ ನಷ್ಟವನ್ನು ಅನುಭವಿಸಬಹುದು.

-ಈಶಾನ್ಯದಲ್ಲಿ ತುಳಸಿ ಗಿಡವನ್ನೂ ನೆಡಬಹುದು.

-ತುಳಸಿ ಗಿಡವನ್ನು ಮನೆಯ ಪ್ರವೇಶ ದ್ವಾರದಲ್ಲಿ ಅಥವಾ ಕಸವನ್ನು ಇಡುವ ಅಥವಾ ಚಪ್ಪಲಿ ತೆಗೆಯುವ ಯಾವುದೇ ಸ್ಥಳದಲ್ಲಿ ಎಂದಿಗೂ ನೆಡಬಾರದು.

-ತುಳಸಿಗೆ ಸಿಂಧೂರವನ್ನು ಅರ್ಪಿಸುವ ಬಗ್ಗೆ ಸಾಕಷ್ಟು ಗೊಂದಲಗಳಿವೆ, ಆದರೆ ವಾಸ್ತು ಶಾಸ್ತ್ರದ ಪ್ರಕಾರ ತುಳಸಿಗೆ ಸಿಂಧೂರವನ್ನು ಅರ್ಪಿಸಬಹುದು.

-ತುಳಸಿ ಗಿಡವನ್ನು ಯಾವಾಗಲೂ ಮಣ್ಣಿನ ಪಾತ್ರೆಯಲ್ಲಿ ಇಡಿ. ಪ್ಲಾಸ್ಟಿಕ್ ಪಾತ್ರೆಗಳನ್ನು ಎಂದಿಗೂ ಬಳಸಬೇಡಿ. ಸಾಧ್ಯವಾದರೆ, ತುಳಸಿ ಪಾತ್ರೆಯಲ್ಲಿ ಸುಣ್ಣ ಅಥವಾ ಅರಿಶಿನದೊಂದಿಗೆ ‘ಶ್ರೀ ಕೃಷ್ಣ’ ಎಂದು ಬರೆಯಿರಿ.

-ತುಳಸಿ ಸಸ್ಯವು ಬುಧ ಗ್ರಹವನ್ನು ಪ್ರತಿನಿಧಿಸುತ್ತದೆ ಮತ್ತು ಈ ಗ್ರಹವನ್ನು ಕೃಷ್ಣನ ರೂಪವೆಂದು ಪರಿಗಣಿಸಲಾಗಿದೆ.

ತುಳಸಿ ಪೂಜೆಯ ವಾಸ್ತು ನಿಯಮಗಳು: -ನೀವು ತುಳಸಿಯನ್ನು ನಿಯಮಿತವಾಗಿ ಪೂಜಿಸಬಹುದು ಆದರೆ ತುಳಸಿಯನ್ನು ಸಂಜೆ ಮುಟ್ಟಬಾರದು. ಇದಲ್ಲದೆ, ಏಕಾದಶಿ ದಿನ, ಚಂದ್ರ ಮತ್ತು ಸೂರ್ಯಗ್ರಹಣದ ದಿನಗಳಲ್ಲಿ ತುಳಸಿಯನ್ನು ಮುಟ್ಟಬಾರದು. ಭಾನುವಾರವೂ ತುಳಸಿಗೆ ನೀರು ಕೊಡಬಾರದು.

-ತುಳಸಿಗೆ ನೀರನ್ನು ಅರ್ಪಿಸುವುದಲ್ಲದೆ, ಹಸಿ ಹಾಲನ್ನು ಸಹ ನೀಡಬಹುದು. ಹಸಿ ಹಾಲನ್ನು ನೀಡುವುದರಿಂದ ದುರಾದೃಷ್ಟ ದೂರವಾಗುತ್ತದೆ ಎಂದು ನಂಬಲಾಗಿದೆ.

– ತುಳಸಿ ಗಿಡಗಳನ್ನು ಅಡುಗೆ ಮನೆ ಅಥವಾ ಬಾತ್ ರೂಂ ಬಳಿ ಇಡಬಾರದು. ಪೂಜಾ ಕೋಣೆಯ ಕಿಟಕಿಯ ಬಳಿ ತುಳಸಿ ಗಿಡವನ್ನು ಇಡಬಹುದು.

-ನೀವು ಪ್ರತಿದಿನ ತುಳಸಿಗೆ ಪ್ರದಕ್ಷಿಣೆ ಹಾಕಲು ಬಯಸಿದರೆ, ನೀರನ್ನು ಅರ್ಪಿಸುವಾಗ, ತುಳಸಿ ಗಿಡಕ್ಕೆ ಮೂರು ಬಾರಿ ಪ್ರದಕ್ಷಿಣೆ ಹಾಕಿ. ನೀವು ಮೊದಲು ಸೂರ್ಯನಿಗೆ ನೀರನ್ನು ಅರ್ಪಿಸಬೇಕು ಮತ್ತು ನಂತರ ತುಳಸಿಗೆ ನೀರನ್ನು ಅರ್ಪಿಸಬೇಕು.

– ತುಳಸಿಗೆ ನೀರನ್ನು ಅರ್ಪಿಸುವಾಗ, ನೀವು ಈ ಮಂತ್ರವನ್ನು ಪಠಿಸಬೇಕು ‘ಮಹಾಪ್ರಸಾದ ಜನನಿ, ಸರ್ವ ಸೌಭಾಗ್ಯವರ್ಧಿನಿ ಅಧಿಕ ವ್ಯಾಧಿ ಹರ ನಿತ್ಯಂ, ತುಳಸಿ ತ್ವಂ ನಮೋಸ್ತುತೇ.’

-ನೀವು ತುಳಸಿ ಎಲೆಗಳನ್ನು 15 ದಿನಗಳ ಕಾಲ ಕೃಷ್ಣನ ಫೋಟೊ ಅಥವಾ ವಿಗ್ರಹದ ಮೇಲೆ ಇಡಬಹುದು ಮತ್ತು ಎಲೆಗಳು ಒಣಗಿದಾಗ ನೀವು ಅವುಗಳನ್ನು ಪ್ರಸಾದವಾಗಿ ತೆಗೆದುಕೊಳ್ಳಬಹುದು.

-ಸಾಮಾನ್ಯವಾಗಿ ಜನರು ತುಳಸಿಗೆ ಕೆಂಪು ಬಳೆಗಳನ್ನು ನೀಡುತ್ತಾರೆ, ಆದರೆ ಇದು ಮಂಗಳದ ಬಣ್ಣವಾಗಿದೆ ಮತ್ತು ತುಳಸಿ ಬುಧದ ಸಂಕೇತವಾಗಿದೆ. ಬುಧ ಮತ್ತು ಮಂಗಳ ಸ್ನೇಹಿತರಲ್ಲ. ಬುಧದ ಅನುಕೂಲಕರ ಗ್ರಹಗಳು ಶುಕ್ರ ಮತ್ತು ಶನಿ. ಆದ್ದರಿಂದ ತುಳಸಿಗೆ ಬಿಳಿ, ಪ್ರಕಾಶಮಾನವಾದ ನೀಲಿ ಬಳೆಯನ್ನು ಅರ್ಪಿಸಬೇಕು.

-ನಿಮ್ಮ ಮನೆಯಲ್ಲಿ ಯಾವಾಗಲೂ 1, 3, 5 ಅಥವಾ 7 ತುಳಸಿ ಗಿಡಗಳನ್ನು ಹೊಂದಿರಬೇಕು. ತುಳಸಿ ಗಿಡವನ್ನು 2, 4, 6 ಈ ಸಂಖ್ಯೆಗಳಲ್ಲಿ ಇಡಬಾರದು.

-ತುಳಸಿ ಗಿಡವನ್ನು ಅಶುಚಿಯಾದ ಕೈಗಳಿಂದ ಅಥವಾ ಕೊಳಕು ಕೈಗಳಿಂದ ಮುಟ್ಟಬಾರದು. ಹೀಗೆ ಮಾಡುವುದರಿಂದ ಲಕ್ಷ್ಮಿಯು ನಿಮ್ಮ ಮೇಲೆ ತುಂಬಾ ಕೋಪಗೊಳ್ಳುತ್ತಾಳೆ.

Follow Us
Web contact
Web contact

TV9 Kannada

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!