AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vastu Tips: ವಾಸ್ತು ಶಾಸ್ತ್ರದ ಪ್ರಕಾರ ಅಡುಗೆಮನೆ ಯಾವ ದಿಕ್ಕಿನಲ್ಲಿರಬೇಕು

ವಾಸ್ತು ಶಾಸ್ತ್ರದ ಪ್ರಕಾರ, ಅಡುಗೆಮನೆಯನ್ನು ಬಹಳ ಮುಖ್ಯವಾದ ಸ್ಥಳವೆಂದು ಪರಿಗಣಿಸಲಾಗುತ್ತದೆ. ಇದು ಸರಿಯಾದ ದಿಕ್ಕಿನಲ್ಲಿಲ್ಲದಿದ್ದರೆ, ಕುಟುಂಬದ ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಮೇಲೂ ಪರಿಣಾಮ ಬೀರುತ್ತದೆ, ಆದ್ದರಿಂದ ವಾಸ್ತು ಶಾಸ್ತ್ರದ ಪ್ರಕಾರ ಅಡುಗೆಮನೆಯನ್ನು ಯಾವ ದಿಕ್ಕಿಗೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

Vastu Tips: ವಾಸ್ತು ಶಾಸ್ತ್ರದ ಪ್ರಕಾರ ಅಡುಗೆಮನೆ ಯಾವ ದಿಕ್ಕಿನಲ್ಲಿರಬೇಕು
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 24, 2024 | 10:17 AM

Share

ವಾಸ್ತು ಶಾಸ್ತ್ರದಲ್ಲಿ ಪ್ರತಿಯೊಂದು ಕೋಣೆಗೂ ಅದರದ್ದೇ ಆದ ಪ್ರಾಮುಖ್ಯತೆ ಇದೆ. ಅದೇ ರೀತಿಯಲ್ಲಿ ಅಡುಗೆ ಮನೆ ಕೂಡ ಶಾಸ್ತ್ರ ಬದ್ಧವಾಗಿರಬೇಕು ಎನ್ನುತ್ತಾರೆ. ಏಕೆಂದರೆ ಅದು ಇಡೀ ಕುಟುಂಬಕ್ಕೆ ಆಹಾರ ಬೇಯಿಸುವ ಸ್ಥಳವಾಗಿರುತ್ತದೆ. ಹಾಗಾಗಿ ಸ್ಥಳ ದೋಷವಿದ್ದರೆ ಅದು ಕುಟುಂಬದ ಸದಸ್ಯರ ಮೇಲೆ ಮತ್ತು ಅವರ ಆರೋಗ್ಯ ಹಾಗೂ ಆರ್ಥಿಕ ಸ್ಥಿತಿಯ ಮೇಲೂ ಪರಿಣಾಮ ಬೀರಬಹುದು. ಜೊತೆಗೆ ಅಡುಗೆಮನೆ ಇರಬೇಕಾದ ದಿಕ್ಕಿನಲ್ಲಿ ಇರದೇ ಹೋದಲ್ಲಿ, ಮನೆಯಲ್ಲಿ ಸಾಕಷ್ಟು ಕಿರಿಕಿರಿ ಉಂಟಾಗಬಹುದು. ಆದ್ದರಿಂದ, ಅಡುಗೆ ಮನೆಗೆ ಸಂಬಂಧಿಸಿದಂತೆ ವಾಸ್ತು ಶಾಸ್ತ್ರದಲ್ಲಿ ಪ್ರಮುಖ ವಿಷಯಗಳನ್ನು ಉಲ್ಲೇಖಿಸಲಾಗಿದೆ. ಈ ನಿಯಮಗಳನ್ನು ಅನುಸರಿಸುವ ಮೂಲಕ, ನಾವು ನಮ್ಮ ಮನೆಯ ವಾಸ್ತು ದೋಷಗಳನ್ನು ನಿವಾರಣೆ ಮಾಡಿಕೊಳ್ಳಬಹುದು.

ಈ ದಿಕ್ಕಿನಲ್ಲಿ ಅಡುಗೆಮನೆಯನ್ನು ಮಾಡಬೇಡಿ!

ವಾಸ್ತು ಶಾಸ್ತ್ರದ ಪ್ರಕಾರ, ಅಡುಗೆಮನೆಯನ್ನು ಉತ್ತರ, ನೈಋತ್ಯ ಮತ್ತು ಈಶಾನ್ಯ ದಿಕ್ಕಿಗೆ ಮಾಡಬಾರದು. ವಾಸ್ತು ಶಾಸ್ತ್ರದ ಪ್ರಕಾರ, ಅಡುಗೆಮನೆಗೆ ಉತ್ತಮ ದಿಕ್ಕು ಆಗ್ನೇಯ ಅಥವಾ ವಾಯುವ್ಯ ಎಂದು ಹೇಳಲಾಗುತ್ತದೆ, ಇದರ ಹಿಂದಿನ ಕಾರಣವೆಂದರೆ ದಕ್ಷಿಣದಿಂದ ಪಶ್ಚಿಮಕ್ಕೆ ಮತ್ತು ಉತ್ತರದಿಂದ ಪೂರ್ವಕ್ಕೆ ಬೀಸುವ ಗಾಳಿ ಎಂದಿಗೂ ಬೆಂಕಿಗೆ ಹಾನಿ ಮಾಡುವುದಿಲ್ಲ.

ಮನೆಯ ಅಡುಗೆಮನೆ ಯಾವ ದಿಕ್ಕಿನಲ್ಲಿರಬೇಕು!

ವಾಸ್ತು ಶಾಸ್ತ್ರದ ಪ್ರಕಾರ, ಅಡುಗೆಮನೆಗೆ ಮತ್ತು ಬೆಂಕಿಗೆ ಸಂಬಂಧವಿರುತ್ತದೆ. ಬೆಂಕಿಯು ಪಂಚಭೂತಗಳಲ್ಲಿ ಒಂದಾಗಿದೆ, ಆದ್ದರಿಂದ ಮನೆಯ ಅಡುಗೆಮನೆ ಸರಿಯಾದ ದಿಕ್ಕಿನಲ್ಲಿರಬೇಕು. ಬೆಂಕಿಯ ಮೂಲ ಆಗ್ನೇಯ ದಿಕ್ಕು. ಆದ್ದರಿಂದ, ಅಡುಗೆಮನೆಯನ್ನು ಯಾವಾಗಲೂ ಆಗ್ನೇಯ ದಿಕ್ಕಿನಲ್ಲಿ ಇರಿಸಿ. ವಾಸ್ತುಶಾಸ್ತ್ರದ ಪ್ರಕಾರ, ಅಡುಗೆಮನೆಯ ದಿಕ್ಕು ಸರಿಯಾಗಿದ್ದರೆ ಅದು ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ಕಾಪಾಡುತ್ತದೆ. ಜೊತೆಗೆ ಆಹಾರವನ್ನು ತಯಾರಿಸುವಾಗ, ನಿಮ್ಮ ಮುಖ ಪೂರ್ವ ದಿಕ್ಕಿಗೆ ಇರಬೇಕು ಎಂಬುದನ್ನು ಸಹ ನೀವು ನೆನಪಿನಲ್ಲಿಡಿ.

ಇದನ್ನೂ ಓದಿ: ಈ ವಿಗ್ರಹಗಳು ಮನೆಯಲ್ಲಿದ್ದರೆ ಎಂದಿಗೂ ಹಣದ ಕೊರತೆ ಬರುವುದಿಲ್ಲ

ಒಲೆ, ಸಿಂಕ್ ಮತ್ತು ಡೈನಿಂಗ್ ಟೇಬಲ್ ಯಾವ ದಿಕ್ಕಿನಲ್ಲಿರಬೇಕು?

ವಾಸ್ತು ಪ್ರಕಾರ, ಅಡುಗೆ ಮನೆಯನ್ನು ದಕ್ಷಿಣ ದಿಕ್ಕಿನಲ್ಲಿ ನಿರ್ಮಿಸಿದರೆ, ಯಾವಾಗಲೂ ಒಲೆಯನ್ನು ಪೂರ್ವ ದಿಕ್ಕಿನಲ್ಲಿ ಇರಿಸಿ. ಇದರೊಂದಿಗೆ, ಪಾತ್ರೆಗಳನ್ನು ತೊಳೆಯುವ ಜಾಗ ಯಾವಾಗಲೂ ವಾಯುವ್ಯ ದಿಕ್ಕಿನಲ್ಲಿರಬೇಕು. ವಾಸ್ತವದಲ್ಲಿ ಡೈನಿಂಗ್ ಟೇಬಲ್ ಅನ್ನು ಅಡುಗೆ ಮನೆಯಲ್ಲಿ ಇಡಬಾರದು. ಅಷ್ಟು ಅಗತ್ಯವಿದ್ದರೆ, ನೀವು ಅದನ್ನು ಪಶ್ಚಿಮ ಅಥವಾ ವಾಯುವ್ಯ ದಿಕ್ಕಿನಲ್ಲಿ ಮಾತ್ರ ಇಡಬಹುದು.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​