AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vasthu Tips: ಮನೆಯ ಮುಂಭಾಗದಲ್ಲಿ ಮೆಣಸಿನ ಗಿಡ ನೆಡಬಾರದು ಏಕೆ ಗೊತ್ತಾ?

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಸುತ್ತಮುತ್ತ ಸಸ್ಯಗಳ ಆಯ್ಕೆ ಮುಖ್ಯ. ಮನೆಯ ಮುಂಭಾಗದಲ್ಲಿ ಮೆಣಸಿನ ಗಿಡ ಬೆಳೆಸುವುದು ಅಶುಭ ಎಂದು ತಜ್ಞರು ಹೇಳುತ್ತಾರೆ. ಇದು ಕುಟುಂಬದಲ್ಲಿ ಕಲಹ, ಮಾನಸಿಕ ಒತ್ತಡ, ಆರ್ಥಿಕ ಸಮಸ್ಯೆಗಳನ್ನು ತರಬಹುದು. ಆರ್ಥಿಕ ಪ್ರಗತಿಗೆ ಅಡ್ಡಿಯಾಗಬಹುದು. ಈ ನಕಾರಾತ್ಮಕ ಪ್ರಭಾವ ತಪ್ಪಿಸಲು, ಗಿಡವನ್ನು ಮನೆಯ ಹಿಂಭಾಗದಲ್ಲಿ ಅಥವಾ ನೇರವಾಗಿ ಕಾಣಿಸದ ಸ್ಥಳದಲ್ಲಿ ನೆಡಿ.

Vasthu Tips: ಮನೆಯ ಮುಂಭಾಗದಲ್ಲಿ ಮೆಣಸಿನ ಗಿಡ ನೆಡಬಾರದು ಏಕೆ ಗೊತ್ತಾ?
ವಾಸ್ತು ಶಾಸ್ತ್ರ
ಅಕ್ಷತಾ ವರ್ಕಾಡಿ
|

Updated on: Jun 30, 2026 | 9:20 AM

Share

ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದಲ್ಲಿ ಮನೆ ಹಾಗೂ ಅದರ ಸುತ್ತಮುತ್ತಲಿನ ಪರಿಸರಕ್ಕೆ ಪ್ರಮುಖ ಸ್ಥಾನ ನೀಡಲಾಗಿದೆ. ಮನೆಯ ಒಳಗೆ ಮತ್ತು ಸುತ್ತಲೂ ಹರಿಯುವ ಶಕ್ತಿಯು ನಮ್ಮ ಜೀವನದ ಮೇಲೆ ನೇರ ಪರಿಣಾಮ ಬೀರುತ್ತದೆ. ಅದಕ್ಕಾಗಿಯೇ ಮನೆ ಕಟ್ಟುವಾಗ ಮಾತ್ರವಲ್ಲ, ಮನೆಯ ಸುತ್ತಮುತ್ತ ಯಾವ ಸಸ್ಯಗಳನ್ನು ನೆಡಬೇಕು ಎಂಬುದಕ್ಕೂ ವಾಸ್ತು ನಿಯಮಗಳನ್ನು ಪಾಲಿಸಲಾಗುತ್ತದೆ. ಆದರೆ, ವಾಸ್ತು ತಜ್ಞರ ಪ್ರಕಾರ ಮನೆಯ ಮುಂಭಾಗದಲ್ಲಿ ಮೆಣಸಿನ ಗಿಡವನ್ನು ಬೆಳೆಸುವುದು ಅಶುಭ ಎಂದು ಹೇಳಲಾಗುತ್ತದೆ. ಹಾಗಾದರೆ, ಇದಕ್ಕೆ ಕಾರಣಗಳೇನು ಎಂಬುದನ್ನು ಈ ಲೇಖನದಲ್ಲಿ ತಿಳಿದುಕೊಳ್ಳಿ.

ಕುಟುಂಬದಲ್ಲಿ ಹೆಚ್ಚಾಗುತ್ತೆ ಕಲಹ ಮತ್ತು ಮಾನಸಿಕ ಒತ್ತಡ:

ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಆವರಣದಲ್ಲಿ ಮೆಣಸಿನ ಗಿಡವಿದ್ದರೆ ಅದು ಕುಟುಂಬ ಸದಸ್ಯರ ನಡುವೆ ಅನಗತ್ಯ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸುತ್ತದೆ. ವಿಶೇಷವಾಗಿ, ಮನೆಯ ಮುಂಭಾಗದಲ್ಲಿ ಈ ಗಿಡವಿದ್ದರೆ ಸಣ್ಣಪುಟ್ಟ ವಿಷಯಗಳಿಗೂ ಜಗಳಗಳು ಆರಂಭವಾಗಿ, ಕೆಲವೊಮ್ಮೆ ಗಂಭೀರ ಮಟ್ಟವನ್ನು ತಲುಪಬಹುದು. ಇದು ಮನೆಯಲ್ಲಿ ವಾಸಿಸುವ ಜನರ ಮಾನಸಿಕ ನೆಮ್ಮದಿಯನ್ನು ಕೆಡಿಸಿ, ಸದಾ ಒತ್ತಡದ ವಾತಾವರಣ ಇರುವಂತೆ ಮಾಡುತ್ತದೆ. ಆದ್ದರಿಂದಲೇ ಮನೆಯ ಮುಖ್ಯ ದ್ವಾರದ ಬಳಿ ಈ ಗಿಡ ಇರಬಾರದು ಎಂದು ತಜ್ಞರು ಎಚ್ಚರಿಸುತ್ತಾರೆ.

ಇದನ್ನೂ ಓದಿ: ಫ್ಯಾಶನ್​​ಗಾಗಿ ವಜ್ರ ಧರಿಸುವ ಮುನ್ನ ಎಚ್ಚರ! ಈ ರಾಶಿಯವರು ವಜ್ರ ಧರಿಸಿದರೆ ಕಷ್ಟ ತಪ್ಪಿದ್ದಲ್ಲ!

ಆರ್ಥಿಕ ಪ್ರಗತಿ ಮತ್ತು ಆರೋಗ್ಯದ ಮೇಲೆ ನಕಾರಾತ್ಮಕ ಪ್ರಭಾವ:

ಮನೆಯ ಮುಂಭಾಗದಲ್ಲಿ ತೀಕ್ಷ್ಣ ಸ್ವಭಾವದ ಗಿಡಗಳಿದ್ದರೆ ಅದು ಆ ಮನೆಯ ಆರ್ಥಿಕ ಬೆಳವಣಿಗೆಗೆ ಅಡ್ಡಿಪಡಿಸುತ್ತದೆ ಎಂದು ನಂಬಲಾಗಿದೆ. ಇದು ಧನಾಗಮನವನ್ನು ಕುಂಠಿತಗೊಳಿಸುವುದಲ್ಲದೆ, ಅನಗತ್ಯ ಖರ್ಚುಗಳನ್ನು ಹೆಚ್ಚಿಸಬಹುದು. ಇದರೊಂದಿಗೆ, ಮನೆಯಲ್ಲಿರುವವರ ಆರೋಗ್ಯದ ಮೇಲೂ ಇದು ನಕಾರಾತ್ಮಕ ಪರಿಣಾಮ ಬೀರಬಹುದು.

ಮೆಣಸಿನ ಗಿಡ ಬೆಳೆಸಲು ಬಯಸುವವರಿಗೆ ವಾಸ್ತು ಪರಿಹಾರ:

ನಿಮಗೆ ಮನೆಯಲ್ಲಿ ಮೆಣಸಿನ ಗಿಡವನ್ನು ಬೆಳೆಸಲೇಬೇಕು ಎಂಬ ಹಂಬಲವಿದ್ದರೆ, ಅದಕ್ಕೂ ವಾಸ್ತು ಶಾಸ್ತ್ರದಲ್ಲಿ ಒಂದು ಪರ್ಯಾಯ ಮಾರ್ಗವಿದೆ. ಈ ಗಿಡವನ್ನು ಎಂದಿಗೂ ಮನೆಯ ಮುಂಭಾಗದಲ್ಲಿ ಅಥವಾ ಮುಖ್ಯ ದ್ವಾರಕ್ಕೆ ಎದುರಾಗಿ ಇಡಬೇಡಿ. ಬದಲಿಗೆ, ಇದನ್ನು ಮನೆಯ ಹಿತ್ತಲಿನಲ್ಲಿ ಅಥವಾ ಮನೆಯಿಂದ ಸ್ವಲ್ಪ ದೂರದಲ್ಲಿ, ಯಾರಿಗೂ ನೇರವಾಗಿ ಕಾಣಿಸದ ಜಾಗದಲ್ಲಿ ಬೆಳೆಸಬಹುದು. ಇದರಿಂದ ಅದರ ನಕಾರಾತ್ಮಕ ಪ್ರಭಾವ ಮನೆಗೆ ತಟ್ಟುವುದಿಲ್ಲ.

ಗಮನಿಸಿ: ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಂಪೂರ್ಣವಾಗಿ ವಾಸ್ತು ಶಾಸ್ತ್ರದ ನಂಬಿಕೆಗಳು ಮತ್ತು ತಜ್ಞರ ಅಭಿಪ್ರಾಯಗಳನ್ನು ಆಧರಿಸಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!