AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikat Sankashthi Chaturthi 2024: ವಿಕಟ ಸಂಕಷ್ಟ ಚತುರ್ಥಿಯಂದು ಈ ಕೆಲಸವನ್ನು ತಪ್ಪದೆ ಮಾಡಿ!

ಈ ವರ್ಷ ವಿಕಟ ಸಂಕಷ್ಟ ಚತುರ್ಥಿಯನ್ನು ಎ. 27 ರಂದು ಆಚರಣೆ ಮಾಡಲಾಗುತ್ತದೆ. ಈ ದಿನ ಗಣಪನನ್ನು ಕಷ್ಟ ಮತ್ತು ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ನೀಡು ಎಂದು ಬೇಡಿಕೊಳ್ಳಲಾಗುತ್ತದೆ. ಭಕ್ತಿಯಿಂದ ಪೂಜೆ ಮಾಡಿದಲ್ಲಿ ಮಹಾಗಣಪತಿ ಸಂತುಷ್ಟನಾಗಿ ಬೇಡಿದ ವರಗಳನ್ನು ನೀಡುತ್ತಾನೆ.

Vikat Sankashthi Chaturthi 2024: ವಿಕಟ ಸಂಕಷ್ಟ ಚತುರ್ಥಿಯಂದು ಈ ಕೆಲಸವನ್ನು ತಪ್ಪದೆ ಮಾಡಿ!
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 26, 2024 | 10:27 AM

Share

ವೈಶಾಖ ಮಾಸದ ಕೃಷ್ಣ ಪಕ್ಷದ ಚತುರ್ಥಿ ದಿನದಂದು ವಿಕಟ ಸಂಕಷ್ಟಿ ಚತುರ್ಥಿಯನ್ನು(Vikat Sankashthi Chaturthi ) ಆಚರಿಸಲಾಗುತ್ತದೆ. ಈ ದಿನ, ಎಲ್ಲಾ ದೇವ, ದೇವತೆಗಳಲ್ಲಿ ಪ್ರಥಮ ಪೂಜಿತ ಗಣೇಶನಿಗೆ ವಿಶೇಷ ರೀತಿಯಲ್ಲಿ ಪೂಜಾ ಸೇವೆಗಳನ್ನು ಮಾಡಲಾಗುತ್ತದೆ ಜೊತೆಗೆ ಭಕ್ತಿಯಿಂದ ಉಪವಾಸವನ್ನು ಆಚರಿಸಲಾಗುತ್ತದೆ. ಈ ವರ್ಷ ವಿಕಟ ಸಂಕಷ್ಟ ಚತುರ್ಥಿಯನ್ನು ಎ. 27 ರಂದು ಆಚರಣೆ ಮಾಡಲಾಗುತ್ತದೆ. ಈ ದಿನ ಗಣಪನನ್ನು ಕಷ್ಟ ಮತ್ತು ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ನೀಡು ಎಂದು ಬೇಡಿಕೊಳ್ಳಲಾಗುತ್ತದೆ. ಭಕ್ತಿಯಿಂದ ಪೂಜೆ ಮಾಡಿದಲ್ಲಿ ಮಹಾಗಣಪತಿ ಸಂತುಷ್ಟನಾಗಿ ಬೇಡಿದ ವರಗಳನ್ನು ನೀಡುತ್ತಾನೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವಿಕಟ ಸಂಕಷ್ಟ ಚತುರ್ಥಿಯ ದಿನ ಕೆಲವು ವಿಶೇಷ ಕ್ರಮಗಳನ್ನು ಅನುಸರಿಸುವ ಮೂಲಕ, ಗಣೇಶನ ಆಶೀರ್ವಾದ ಪಡೆಯಬಹುದು, ಜೊತೆಗೆ ಜೀವನದಲ್ಲಿ ಆರೋಗ್ಯ, ಸಂತೋಷ, ಸಮೃದ್ಧಿ, ಸಂಪತ್ತು, ಯಶಸ್ಸು ಮತ್ತು ಖ್ಯಾತಿಯನ್ನು ಗಳಿಸಿಕೊಳ್ಳಬಹುದು.

ವಿಕಟ ಸಂಕಷ್ಟ ಚತುರ್ಥಿಯ ದಿನ ಈ ವಿಶೇಷ ನಿಯಮಗಳನ್ನು ಪಾಲನೆ ಮಾಡಿ!

ಗಣೇಶನಿಗೆ ದುರ್ವೆಯನ್ನು ಅರ್ಪಿಸಿ

ಸಂಕಷ್ಟ ಚತುರ್ಥಿಯ ದಿನ ಗಣೇಶನನ್ನು ಭಕ್ತಿಯಿಂದ ಪೂಜಿಸಲಾಗುತ್ತದೆ ಮತ್ತು ದುರ್ವೆ ಗಣೇಶನಿಗೆ ತುಂಬಾ ಪ್ರಿಯವಾಗಿರುವುದರಿಂದ ಗಣೇಶನ ಪೂಜೆಯಲ್ಲಿ, ಅವನಿಗೆ 11 ಜೋಡಿ ದುರ್ವೆಯನ್ನು ಅರ್ಪಿಸಿ. ಇದನ್ನು ಅರ್ಪಿಸುವಾಗ, “ಇದಂ ದುರ್ವದಲಂ ಓಂ ಗಂ ಗಣಪತಯೇ ನಮಃ” ಎಂಬ ಮಂತ್ರವನ್ನು ಪಠಿಸಿ.

ಇದನ್ನೂ ಓದಿ:  ಸದಾಕಾಲ ಶನಿ ದೇವನ ಆಶೀರ್ವಾದ ಇರುವುದು ಈ 5 ರಾಶಿಯವರಿಗೆ

ಕುಂಕುಮವನ್ನು ಅರ್ಪಿಸಿ

ಗಣೇಶನಿಗೆ ಕುಂಕುಮವನ್ನು ಅರ್ಪಿಸುವುದು ತುಂಬಾ ಶುಭವೆಂದು ಪರಿಗಣಿಸಲಾಗಿದೆ, ಆದ್ದರಿಂದ ವಿಕಟ ಗಣೇಶ ಚತುರ್ಥಿಯ ದಿನದಂದು, ಗಣೇಶನಿಗೆ ಕುಂಕುಮವನ್ನು ಅರ್ಪಿಸಿ. ಇದರಿಂದ ಆರೋಗ್ಯ ಸಮಸ್ಯೆಗಳಿದ್ದಲ್ಲಿ ಪರಿಹಾರವಾಗುತ್ತದೆ.

ಶಮಿ ಎಲೆ ಅಥವಾ ಶಮಿ ಪತ್ರೆಯನ್ನು ಅರ್ಪಿಸಿ

ಶಮಿ ಎಲೆ ಗಣೇಶನಿಗೆ ತುಂಬಾ ಪ್ರಿಯವೆಂದು ಹೇಳಲಾಗುತ್ತದೆ, ಆದ್ದರಿಂದ ವಿಕಟ ಸಂಕಷ್ಟ ಚತುರ್ಥಿಯ ದಿನ ಶಮಿ ಎಲೆಗಳನ್ನು ಗಣೇಶನಿಗೆ ಅರ್ಪಿಸಿ. ಶಮಿ ಮರವನ್ನು ಪೂಜಿಸುವುದು ಕೂಡ ಶುಭ ಫಲಗಳನ್ನು ನೀಡುತ್ತದೆ, ಆದ್ದರಿಂದ ನೀವು ಈ ದಿನ ಶಮಿ ಮರಕ್ಕೂ ಸಹ ಪೂಜೆ ಮಾಡಬಹುದು.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ