AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vinayak Chaturthi 2024: ಹಣಕಾಸಿನ ಸಮಸ್ಯೆ ಇದ್ದಲ್ಲಿ ವಿನಾಯಕ ಚತುರ್ಥಿ ದಿನ ಈ ವಸ್ತು ದಾನ ಮಾಡಿ

ಫಾಲ್ಗುಣ ಮಾಸದ ವಿನಾಯಕ ಚತುರ್ಥಿಯನ್ನು ಮಾರ್ಚ್ 13ರಂದು ಆಚರಣೆ ಮಾಡಲಾಗುತ್ತದೆ. ಬುಧವಾರವನ್ನು ಭಗವಾನ್‌ ಗಣೇಶನ ದಿನವೆಂದು ಪರಿಗಣಿಸಲಾಗುತ್ತದೆ. ಹಾಗಾಗಿ ವಿನಾಯಕ ಚತುರ್ಥಿ ಬುಧವಾರ ಬಂದಿರುವುದು ವಿಶೇಷವಾಗಿದೆ. ಈ ದಿನ, ಗಣಪತಿಯನ್ನು ಕೆಲವು ನಿಯಮಗಳನ್ನು ಅನುಸರಿಸುವ ಮೂಲಕ ಪೂಜಿಸುವುದರಿಂದ ಶುಭ ಫಲವು ನೂರು ಪಟ್ಟು ಹೆಚ್ಚಾಗುತ್ತದೆ ಎನ್ನುವ ನಂಬಿಕೆ ಇದೆ.

Vinayak Chaturthi 2024: ಹಣಕಾಸಿನ ಸಮಸ್ಯೆ ಇದ್ದಲ್ಲಿ ವಿನಾಯಕ ಚತುರ್ಥಿ ದಿನ ಈ ವಸ್ತು ದಾನ ಮಾಡಿ
Vinayak Chaturthi 2024Image Credit source: Pinterest
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ

Updated on: Mar 12, 2024 | 7:01 PM

ಹಿಂದೂ ಕ್ಯಾಲೆಂಡರ್ ಪ್ರಕಾರ, ಮಾಸಿಕ ವಿನಾಯಕ ಚತುರ್ಥಿಯ ಹಬ್ಬವನ್ನು ಪ್ರತಿ ತಿಂಗಳು ಶುಕ್ಲ ಪಕ್ಷದ ಚತುರ್ಥಿ ತಿಥಿಯಂದು ಆಚರಿಸಲಾಗುತ್ತದೆ. ಫಾಲ್ಗುಣ ಮಾಸದ ವಿನಾಯಕ ಚತುರ್ಥಿಯನ್ನು ಮಾರ್ಚ್ 13ರಂದು ಆಚರಣೆ ಮಾಡಲಾಗುತ್ತದೆ. ಬುಧವಾರವನ್ನು ಗಣೇಶನ ದಿನವೆಂದು ಪರಿಗಣಿಸಲಾಗುತ್ತದೆ. ಹಾಗಾಗಿ ವಿನಾಯಕ ಚತುರ್ಥಿ ಬುಧವಾರ ಬಂದಿರುವುದು ವಿಶೇಷವಾಗಿದೆ. ಈ ದಿನ, ಗಣಪತಿಯನ್ನು ಕೆಲವು ನಿಯಮಗಳನ್ನು ಅನುಸರಿಸುವ ಮೂಲಕ ಪೂಜಿಸುವುದರಿಂದ ಶುಭ ಫಲವು ನೂರು ಪಟ್ಟು ಹೆಚ್ಚಾಗುತ್ತದೆ ಎನ್ನುವ ನಂಬಿಕೆ ಇದೆ.

ಅಮಾವಾಸ್ಯೆಯ ನಂತರ ಬರುವ ಚತುರ್ಥಿಯನ್ನು ವಿನಾಯಕ ಚತುರ್ಥಿ ಎಂದು ಕರೆಯಲಾಗುತ್ತದೆ. ಈ ದಿನವನ್ನು ಅನೇಕ ಸ್ಥಳಗಳಲ್ಲಿ ವರದ ವಿನಾಯಕ ಚತುರ್ಥಿ ಅಥವಾ ಗಣೇಶ ಜಯಂತಿ ಎಂದೂ ಕರೆಯಲಾಗುತ್ತದೆ. ಫಾಲ್ಗುಣ ಮಾಸದ ವಿನಾಯಕ ಚತುರ್ಥಿಯನ್ನು ಮಾ. 13 ರಂದು ಬೆಳಿಗ್ಗೆ 04:03 ಕ್ಕೆ ಪ್ರಾರಂಭವಾಗುತ್ತದೆ ಮತ್ತು ಮರುದಿನ ಮಾ. 14 ರಂದು ಬೆಳಿಗ್ಗೆ 01:25 ಕ್ಕೆ ಕೊನೆಗೊಳ್ಳುತ್ತದೆ. ಹಾಗಾಗಿ ಈ ದಿನವನ್ನು ಮಾ. 13 ರಂದು ಬುಧವಾರ ಆಚರಿಸಲಾಗುತ್ತದೆ. ಪೂಜಾ ಮುಹೂರ್ತ ಬೆಳಿಗ್ಗೆ 11.19 ರಿಂದ ಆರಂಭವಾಗಿ ಮಧ್ಯಾಹ್ನ 01.52 ರ ವರೆಗೆ ಇರುತ್ತದೆ.

ವಿನಾಯಕ ಚತುರ್ಥಿಯ ದಿನ ಏಕೆ ಉಪವಾಸ ಮಾಡಬೇಕು?

ಯಾವುದೇ ರೀತಿಯ ಜಾತಕ ದೋಷ ಅಥವಾ ದುಷ್ಟ ಶಕ್ತಿಗಳ ತೊಂದರೆ ಇದ್ದಲ್ಲಿ ಈ ದಿನ ಉಪವಾಸ ಮಾಡಬೇಕು. ನೀವು ಕಷ್ಟದಲ್ಲಿದ್ದರೆ ವಿನಾಯಕ ಚತುರ್ಥಿ ದಿನವನ್ನು ಆಚರಣೆ ಮಾಡಿ ಗಣೇಶನನ್ನು ಭಕ್ತಿಯಿಂದ ಪೂಜಿಸಿ, ಆಶೀರ್ವಾದವನ್ನು ಪಡೆಯಬೇಕು. ಹೀಗೆ ಮಾಡುವುದರಿಂದ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಸಂಪತ್ತು ಎಲ್ಲವೂ ಪ್ರಾಪ್ತಿಯಾಗುತ್ತದೆ.

ಫಾಲ್ಗುಣ ವಿನಾಯಕ ಚತುರ್ಥಿಯಂದು ಏನು ಮಾಡಬೇಕು?

ಫಾಲ್ಗುಣ ವಿನಾಯಕ ಚತುರ್ಥಿಯ ದಿನದಂದು, ಪೂಜೆಯ ಸಮಯದಲ್ಲಿ ಗಣೇಶನಿಗೆ 5 ಕೆಂಪು ಗುಲಾಬಿಗಳು, 5 ಹಸಿರು ದುರ್ವೆ ಅಥವಾ ದುರ್ಬೆಯನ್ನು ಅರ್ಪಿಸಿ. ತುಪ್ಪದ ದೀಪವನ್ನು ಬೆಳಗಿಸಿ ಬಳಿಕ ‘ಓಂ ಬುದ್ಧಿ ಪ್ರದಾಯ ನಮಃ’ ಮಂತ್ರವನ್ನು 108 ಬಾರಿ ಪಠಿಸಿ. ಗಣಪನಿಗೆ ಮೋದಕಗಳನ್ನು ನೈವೇದ್ಯವಾಗಿ ಅರ್ಪಿಸಿ ಬಳಿಕ ಮೋದಕಗಳನ್ನು ನಿಮ್ಮ ಮಗುವಿಗೆ ಕುಟುಂಬದವರಿಗೆ ನೀಡಿ. ಈ ವಿಧಾನದಿಂದ ಗಣಪತಿಯನ್ನು ಪೂಜಿಸುವುದರಿಂದ, ನಿಮ್ಮ ಮಗುವಿನ ಜ್ಞಾಪಕ ಶಕ್ತಿ ತೀಕ್ಷ್ಣವಾಗುತ್ತದೆ ಮತ್ತು ಮನೆಯಲ್ಲಿ ಸುಖ, ಶಾಂತಿ ಎಲ್ಲವೂ ನೆಲೆಸಿರುತ್ತದೆ. ಜೊತೆಗೆ ಮನೆಯಲ್ಲಿರುವವರ ವೃತ್ತಿ ಜೀವನದಲ್ಲಿಯೂ ಉತ್ತಮ ಯಶಸ್ಸು ಕಾಣುತ್ತದೆ.

ಇದನ್ನೂ ಓದಿ: ಹೋಳಿ ಹಬ್ಬದಂದು ಈ 5 ವಸ್ತುಗಳನ್ನು ಮನೆಗೆ ತನ್ನಿ, ಅದೃಷ್ಟವೇ ಬದಲಾಗುತ್ತೆ!

ವಿನಾಯಕ ಚತುರ್ಥಿಯ ದಿನ ಚಂದ್ರನನ್ನು ಏಕೆ ನೋಡಬಾರದು?

ಪೌರಾಣಿಕ ನಂಬಿಕೆಗಳ ಪ್ರಕಾರ, ಗಣೇಶ ಚತುರ್ಥಿಯ ದಿನ ಚಂದ್ರನನ್ನು ನೋಡಬಾರದು ಎಂದು ಹೇಳಲಾಗುತ್ತದೆ. ಈ ದಿನ ಚಂದ್ರನನ್ನು ನೋಡುವುದರಿಂದ ಕಳ್ಳತನದ ಆರೋಪ ಅಥವಾ ಕಳಂಕ ಬರುತ್ತದೆ, ಗೌರವಕ್ಕೆ ಹಾನಿಯಾಗುತ್ತದೆ ಎನ್ನಲಾಗುತ್ತದೆ. ಇನ್ನು ಕೆಲವರು ಭಾದ್ರಪದ ಮಾಸದ ಚತುರ್ಥಿಯಂದು ಮಾತ್ರ ಚಂದ್ರನನ್ನು ನೋಡಬಾರದು. ಬೇರೆ ತಿಂಗಳ ಚತುರ್ಥಿಯಂದು ನೋಡಬಹುದು ಎನ್ನುತ್ತಾರೆ. ಹಾಗಾಗಿ ಅವರ ನಂಬಿಕೆಗೆ ತಕ್ಕಂತೆ ಚಂದ್ರ ದರ್ಶನ ಮಾಡಬಹುದು ಅಥವಾ ಮಾಡದಿರಬಹುದು.

ಬುಧವಾರ ಯಾವ ವಸ್ತುಗಳನ್ನು ದಾನ ಮಾಡಬೇಕು?

ಗಣೇಶನನ್ನು ಬುಧವಾರ ಪೂಜಿಸಲಾಗುತ್ತದೆ. ಹಾಗಾಗಿ ಹಸಿರು ಬಣ್ಣದ ವಸ್ತುಗಳನ್ನು ಬುಧವಾರ ದಾನ ಮಾಡಬೇಕು. ಅಂದರೆ ಹೆಸರು ಬೇಳೆ, ಹಸಿರು ತರಕಾರಿಗಳು, ಹಸಿರು ಬಳೆಗಳು ಅಥವಾ ಹಸಿರು ಬಣ್ಣದ ಬಟ್ಟೆ ಇತ್ಯಾದಿಗಳನ್ನು ಬಡವರು ಮತ್ತು ಅಗತ್ಯವಿರುವವರಿಗೆ ದಾನ ಮಾಡಿ. ಇದರಿಂದ ಹಣಕಾಸಿನ ಸಮಸ್ಯೆ ಇದ್ದಲ್ಲಿ ಅಥವಾ ವೃತ್ತಿ ಜೀವನದಲ್ಲಿ ಸಮಸ್ಯೆ ಇದ್ದಲ್ಲಿ ಪರಿಹಾರವಾಗುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ