AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vinayak Chaturthi 2024: ಚೈತ್ರ ಮಾಸದ ವಿನಾಯಕ ಚತುರ್ಥಿಯನ್ನು ಈ ರೀತಿ ಆಚರಣೆ ಮಾಡಿ!

 ವಿನಾಯಕ ಚತುರ್ಥಿಯ ದಿನದಂದು ಗಣೇಶನನ್ನು ಪೂಜಿಸುವವರಿಗೆ ಜೀವನದಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಬರುವುದಿಲ್ಲ ಜೊತೆಗೆ ಸದಾಕಾಲ ಸಂತೋಷ, ಶಾಂತಿ ಮನೆಯಲ್ಲಿ ಸಮೃದ್ದಿ ಇರುತ್ತದೆ. ಹಾಗಾದರೆ ಎಪ್ರಿಲ್ ತಿಂಗಳಲ್ಲಿ ವಿನಾಯಕ ಚತುರ್ಥಿಯನ್ನು ಯಾವ ದಿನ ಆಚರಣೆ ಮಾಡಲಾಗುತ್ತದೆ? ಪೂಜೆಯ ಶುಭ ಸಮಯವೇನು? ಇಲ್ಲಿದೆ ಮಾಹಿತಿ.

Vinayak Chaturthi 2024: ಚೈತ್ರ ಮಾಸದ ವಿನಾಯಕ ಚತುರ್ಥಿಯನ್ನು ಈ ರೀತಿ ಆಚರಣೆ ಮಾಡಿ!
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 12, 2024 | 9:32 AM

Share

ಹಿಂದೂ ಧರ್ಮದಲ್ಲಿ ವಿನಾಯಕ ಚತುರ್ಥಿಯನ್ನು ಬಹಳ ಮುಖ್ಯ ದಿನವೆಂದು ಪರಿಗಣಿಸಲಾಗಿದೆ. ಈ ದಿನವು ಪ್ರಥಮ ಪೂಜಿತ ಗಣೇಶ ದೇವನಿಗೆ ಸಮರ್ಪಿತವಾಗಿದೆ. ಪ್ರತಿ ತಿಂಗಳ ಕೃಷ್ಣ ಪಕ್ಷ ಮತ್ತು ಶುಕ್ಲ ಪಕ್ಷದ ಚತುರ್ಥಿ ದಿನದಂದು, ಗಣೇಶನನ್ನು ಪೂಜಿಸುವ ಮೂಲಕ ಗಣೇಶನ ವಿಶೇಷ ಆಶೀರ್ವಾದವನ್ನು ಪಡೆಯಲಾಗುತ್ತದೆ. ಕೆಲವು ನಂಬಿಕೆಯ ಪ್ರಕಾರ, ವಿನಾಯಕ ಚತುರ್ಥಿಯ ದಿನದಂದು ಗಣೇಶನನ್ನು ಪೂಜಿಸುವವರಿಗೆ ಜೀವನದಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಬರುವುದಿಲ್ಲ ಜೊತೆಗೆ ಸದಾಕಾಲ ಸಂತೋಷ, ಶಾಂತಿ, ಮನೆಯಲ್ಲಿ ಸಮೃದ್ದಿ ಇರುತ್ತದೆ. ಹಾಗಾದರೆ ಎಪ್ರಿಲ್ ತಿಂಗಳಲ್ಲಿ ವಿನಾಯಕ ಚತುರ್ಥಿಯನ್ನು ಯಾವ ದಿನ ಆಚರಣೆ ಮಾಡಲಾಗುತ್ತದೆ? ಪೂಜೆಯ ಶುಭ ಸಮಯವೇನು? ಇಲ್ಲಿದೆ ಮಾಹಿತಿ.

ವಿನಾಯಕ ಚತುರ್ಥಿ ಯಾವಾಗ?

ಹಿಂದೂ ಪಂಚಾಗದ ಪ್ರಕಾರ ವರ್ಷದ ಮೊದನೇಯ, ಅಂದರೆ ಚೈತ್ರ ಮಾಸದ ಶುಕ್ಲ ಪಕ್ಷದ ಚತುರ್ಥಿ ತಿಥಿಯನ್ನು ಉದಯ ತಿಥಿಯ ಪ್ರಕಾರ, ಎ. 12 ರಂದು ಆಚರಣೆ ಮಾಡಲಾಗುತ್ತದೆ. ಪಂಚಾಂಗದ ಪ್ರಕಾರ, ಈ ದಿನ ಗಣೇಶನನ್ನು ಪೂಜಿಸಲು ಶುಭ ಸಮಯವು ಬೆಳಿಗ್ಗೆ 11:05 ರಿಂದ ಮಧ್ಯಾಹ್ನ 1:11 ರವರೆಗೆ ಇರುತ್ತದೆ. ಎ.12ರ ವಿನಾಯಕ ಚತುರ್ಥಿಯಂದು ರಾತ್ರಿ 11:00 ಕ್ಕೆ ಚಂದ್ರಾಸ್ತ. ಆದರೆ ಈ ದಿನ ಚಂದ್ರನನ್ನು ನೋಡಬಾರದು, ಏಕೆಂದರೆ ವಿನಾಯಕ ಚತುರ್ಥಿಯ ಉಪವಾಸದ ಸಮಯದಲ್ಲಿ ಚಂದ್ರನನ್ನು ನೋಡುವುದನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: ಮನೆಯ ದೇವರ ಕೋಣೆಯಲ್ಲಿ ಈ ಮೂರು ವಿಗ್ರಹಗಳು ಇರಲೇಬೇಕು!

ವಿನಾಯಕ ಚತುರ್ಥಿ ಪೂಜಾ ವಿಧಾನ;

ಈ ದಿನ ಬೆಳಿಗ್ಗೆ ಬೇಗ ಎದ್ದು ದೇವರಿಗೆ ನಮಸ್ಕರಿಸುವ ಮೂಲಕ ದಿನವನ್ನು ಪ್ರಾರಂಭಿಸಬೇಕು. ಬಳಿಕ ಸ್ವಚ್ಛವಾದ ಬಟ್ಟೆಗಳನ್ನು ಧರಿಸಿ. ಪೂಜಾ ಸ್ಥಳ ಅಥವಾ ನಿಮ್ಮ ಮನೆಯ ದೇವರ ಕೋಣೆಯನ್ನು ಸ್ವಚ್ಛಗೊಳಿಸಿ, ಬೇಕಾದಲ್ಲಿ ಗಂಗಾ ಜಲವನ್ನು ಸಿಂಪಡಿಸುವ ಮೂಲಕ ದೇವರ ಕೋಣೆಯನ್ನು ಶುದ್ಧೀಕರಿಸಬಹುದು. ಬಳಿಕ ಮನೆಯಲ್ಲಿರುವ ಗಣೇಶನ ವಿಗ್ರಹದ ಮುಂದೆ ತುಪ್ಪದ ದೀಪ ಮತ್ತು ಧೂಪವನ್ನು ಹಚ್ಚಬೇಕು. ದೇವರ ಮುಂದೆ ಹೂವು, ಹಣ್ಣುಗಳನ್ನಿಟ್ಟು ದೇವರ ಪೀಠವನ್ನು ಅಲಂಕರಿಸಬೇಕು. ನೈವೇದ್ಯಕ್ಕಾಗಿ ಸಿಹಿ ತಿಂಡಿಯನ್ನು ಅರ್ಪಿಸಬೇಕು. ಮೋದಕ, ಲಡ್ಡು ಮತ್ತು ದೂರ್ವೆ ಹುಲ್ಲು ಗಣೇಶನಿಗೆ ತುಂಬಾ ಪ್ರಿಯವಾದದ್ದರಿಂದ ಅದನ್ನು ಅರ್ಪಣೆ ಮಾಡಿ ಆಶೀರ್ವಾದ ಪಡೆಯಿರಿ. ಬಳಿಕ ಗಣಪನಿಗೆ ಆರತಿ ಮಾಡಿ. ಸಂತೋಷ, ಸಮೃದ್ಧಿ ಮತ್ತು ಸಂಪತ್ತನ್ನು ಪಡೆಯಲು ಗಣೇಶನನ್ನು ಪ್ರಾರ್ಥಿಸಿ, ಮಾಡಿದ ಪ್ರಸಾದವನ್ನು ಎಲ್ಲರಿಗೂ ವಿತರಿಸಿ. ವಿನಾಯಕ ಚತುರ್ಥಿಯ ಪೂಜೆಯ ಸಮಯದಲ್ಲಿ ಮಂತ್ರಗಳನ್ನು ಪಠಿಸುವುದು ಮತ್ತು ಗಣೇಶನ ಭಜನೆಗಳನ್ನು ಹಾಡುವುದು ಅತ್ಯಂತ ಶುಭವೆಂದು ಪರಿಗಣಿಸಲಾಗಿದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್