AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vishu 2025: ನಾಳೆ ವಿಷು ಹಬ್ಬ; ಕರಾವಳಿಗರ ಹೊಸವರ್ಷದ ಸಂಭ್ರಮದ ಬಗ್ಗೆ ಇಲ್ಲಿದೆ ಮಾಹಿತಿ

ಕೇರಳ ಹಾಗೂ ಕರ್ನಾಟಕದ ಕರಾವಳಿ ಭಾಗಗಳಲ್ಲಿ ವಿಷು ಹಬ್ಬವನ್ನು ಹೊಸ ವರ್ಷದ ಆಚರಣೆಯಾಗಿ ಆಚರಿಸಲಾಗುತ್ತದೆ. ವಿಷುವತ್ ಸಂಕ್ರಾಂತಿಯನ್ನು ಸೂಚಿಸುವ ಈ ಹಬ್ಬದಲ್ಲಿ ವಿಷುಕಣಿ ಪ್ರಮುಖ ಆಚರಣೆಯಾಗಿದೆ. ಶ್ರೀಕೃಷ್ಣನ ವಿಜಯೋತ್ಸವವನ್ನೂ ಇದು ಸೂಚಿಸುತ್ತದೆ. 2025ರಲ್ಲಿ ಏಪ್ರಿಲ್ 14 ರಂದು ವಿಷು ಹಬ್ಬವನ್ನು ಆಚರಿಸಲಾಗುವುದು. ಈ ಲೇಖನವು ವಿಷು ಹಬ್ಬದ ಮಹತ್ವ, ಆಚರಣೆಗಳು ಮತ್ತು ಪೌರಾಣಿಕ ಕಥೆಗಳ ಬಗ್ಗೆ ತಿಳಿಸುತ್ತದೆ.

Vishu 2025: ನಾಳೆ ವಿಷು ಹಬ್ಬ; ಕರಾವಳಿಗರ ಹೊಸವರ್ಷದ ಸಂಭ್ರಮದ ಬಗ್ಗೆ ಇಲ್ಲಿದೆ ಮಾಹಿತಿ
Vishu Festival 2025
ಅಕ್ಷತಾ ವರ್ಕಾಡಿ
|

Updated on:Apr 13, 2025 | 12:59 PM

Share

ಕೇರಳ ಸೇರಿದಂತೆ ಕರ್ನಾಟಕದ ಕರಾವಳಿ ಭಾಗದಲ್ಲಿ ವಿಷು ಹಬ್ಬವನ್ನು ಪ್ರತೀ ಮನೆಯಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಹೊಸ ವರ್ಷ ಮತ್ತು ಹೊಸ ಆರಂಭವನ್ನು ಸೂಚಿಸುತ್ತದೆ. ಕೆಲವೆಡೆ ಚಾಂದ್ರಮಾನ ಯುಗಾದಿಯನ್ನು ಆಚರಿಸಿದರೆ ಕೆಲವು ಕಡೆ ಸೌರಮಾನ ಯುಗಾದಿಯನ್ನು ಆಚರಿಸುತ್ತಾರೆ. ಈ ಸೌರಮಾನ ಯುಗಾದಿಯನ್ನೇ ಬಿಸು, ವಿಷು ಎಂದು ಕರೆಯಲಾಗುತ್ತದೆ. ವಿಷು ಎಂಬ ಹೆಸರು ವಿಷುವತ್ ಸಂಕ್ರಾಂತಿ ಎಂಬ ಹೆಸರಿನಿಂದ ಬಂದಿದೆ. ಖಗೋಳಶಾಸ್ತ್ರದ ಪ್ರಕಾರ, ವಿಷುವತ್ ಸಂಕ್ರಾಂತಿ ಎಂದರೆ ಸೂರ್ಯನು ಆಕಾಶ ಸಮಭಾಜಕ ವೃತ್ತವನ್ನು ದಾಟುವ ವಿದ್ಯಮಾನ.

ವಿಷು ದಿನಾಂಕ ಮತ್ತು ಸಮಯ:

ಈ ವರ್ಷ ಅಂದರೆ 2025ರಲ್ಲಿ ವಿಷು ಹಬ್ಬವನ್ನು ಏಪ್ರಿಲ್ 14 ರ ಸೋಮವಾರದಂದು ಆಚರಿಸಲಾಗುತ್ತದೆ. ದ್ರಿಕ್ ಪಂಚಾಂಗದ ಪ್ರಕಾರ, ವಿಷು ಕಣಿ ಎಂದು ಕರೆಯಲ್ಪಡುವ ಅತ್ಯಂತ ಪ್ರಮುಖ ಧಾರ್ಮಿಕ ಸಮಯವನ್ನು ಬೆಳಿಗ್ಗೆ 3.30.

ವಿಷು ಎಂದರೇನು?

ವಿಷುವನ್ನು ಮಲಯಾಳಿಗರ ಹೊಸ ವರ್ಷ ಎಂದೂ ಕರೆಯುತ್ತಾರೆ . “ವಿಶು” ಎಂಬ ಪದವು ಸಂಸ್ಕೃತದಿಂದ ಬಂದಿದೆ ಮತ್ತು ಇದರ ಅರ್ಥ ಸಮಾನ, ಏಕೆಂದರೆ ಹಗಲು ಮತ್ತು ರಾತ್ರಿ ಬಹುತೇಕ ಸಮಾನವಾಗಿರುವ ಸಮಯ. ಈ ಹಬ್ಬವು ಜ್ಯೋತಿಷ್ಯದಲ್ಲಿ ಮೇಷ ರಾಶಿಗೆ (ಮೇಷ) ಸೂರ್ಯನ ಚಲನೆಯನ್ನು ಗುರುತಿಸುತ್ತದೆ, ಇದನ್ನು ಹೊಸ ಆರಂಭದ ಸಮಯವೆಂದು ಪರಿಗಣಿಸಲಾಗುತ್ತದೆ.

ಇದನ್ನೂ ಓದಿ
Image
ಭಾನುವಾರ ಈ ವಸ್ತು ಖರೀದಿಸುವ ವ್ಯಕ್ತಿ ಶ್ರೀಮಂತನಾಗುತ್ತಾನೆ
Image
ಪತ್ನಿಯನ್ನು ಹಿಂಸಿಸುವ ಪತಿಗೆ ಏನು ಶಿಕ್ಷೆ? ಗರುಡ ಪುರಾಣದ ಹೇಳುವುದೇನು?
Image
ಮದುವೆಗೂ ಮುನ್ನ ಗ್ರಹ ಶಾಂತಿ ಪೂಜೆ ಮಾಡಿಸುವುದೇಕೆ? ಏನಿದರ ಮಹತ್ವ?
Image
ಊಟ ಮಾಡಿದ ನಂತರ ಬಾಳೆ ಎಲೆಯನ್ನು ಒಳಮುಖವಾಗಿ ಮಡಚುವುದೇಕೆ?

ಇದನ್ನೂ ಓದಿ: ಚಿನ್ನದ ಉಂಗುರವನ್ನು ಯಾವ ಬೆರಳಿಗೆ ಧರಿಸಲೇ ಬಾರದು?

ವಿಷು ಹಬ್ಬದ ಹಿಂದಿನ ಪೌರಾಣಿಕ ಕಥೆ:

ಹಿಂದೂ ಪುರಾಣದ ಪ್ರಕಾರ, ಶ್ರೀಕೃಷ್ಣನು ಈ ದಿನದಂದು ನರಕಾಸುರನೆಂಬ ರಾಕ್ಷಸನನ್ನು ಕೊಂದನು. ಈ ಕಥೆಯು ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯವನ್ನು ತೋರಿಸುತ್ತದೆ ಮತ್ತು ಇದು ಹಬ್ಬದ ಸಂದೇಶದ ಪ್ರಮುಖ ಭಾಗವಾಗಿದೆ.

ವಿಷು ಕಣಿ, ಅತ್ಯಂತ ಮಹತ್ವದ ಆಚರಣೆ:

ವಿಷುವಿನ ಪ್ರಮುಖ ಭಾಗಗಳಲ್ಲಿ ಒಂದು ವಿಷು ಕಣಿ. ಅಂದರೆ ಶ್ರೀಕೃಷ್ಣನ ವಿಗ್ರಹವನ್ನು ಇಟ್ಟು ಅದರ ಮುಂದೆ ಕೊನ್ನಾ ಹೂವು (ಹಳದಿ ಬಣ್ಣದ ವಿಶೇಷ ಹೂವುಗಳು), ಹಣ್ಣು, ತರಕಾರಿ, ಒಂದು ಪಾತ್ರೆಯಲ್ಲಿ ಬೆಳ್ತಿಗೆ ಅಕ್ಕಿ, ತೆಂಗಿನಕಾಯಿ,ಸಾಂಪ್ರದಾಯಿಕ ಲೋಹದ ಕನ್ನಡಿ, ಪವಿತ್ರ ಗ್ರಂಥ (ಭಗವದ್ಗೀತೆಯಂತೆ)ಗಳನ್ನಿಟ್ಟು ಪೂಜಿಸುದು.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:57 pm, Sun, 13 April 25

ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ
ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ವರ್ಷಕ್ಕೊಮ್ಮೆ ಮಾತ್ರ ಏಕೆ ಭಕ್ತರಿಗೆ ಹಾಸನಾಂಬೆ ದರ್ಶನ? ಇಲ್ಲಿದೆ ನೋಡಿ ಕಾರಣ
ವರ್ಷಕ್ಕೊಮ್ಮೆ ಮಾತ್ರ ಏಕೆ ಭಕ್ತರಿಗೆ ಹಾಸನಾಂಬೆ ದರ್ಶನ? ಇಲ್ಲಿದೆ ನೋಡಿ ಕಾರಣ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್