AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವರಾತ್ರಿ ಮೊದಲ ದಿನ ದೇವಿ ಶೈಲಪುತ್ರಿಯನ್ನು ಪೂಜಿಸುವುದರಿಂದ ಸಿಗುವ ಫಲಗಳೇನು? ಈ ದೇವಿಯ ಹಿನ್ನೆಲೆಯೇನು? ತಿಳಿದುಕೊಳ್ಳಿ

ನವರಾತ್ರಿಯ ಮೊದಲ ದಿನ ಶೈಲಪುತ್ರಿಯನ್ನು ಪೂಜಿಸಲಾಗುತ್ತದೆ. ಶ್ವೇತ ವಸ್ತ್ರಧಾರಿಯಾಗಿರುವ ಶೈಲಪುತ್ರಿಯು ಮಲ್ಲಿಗೆ ಪ್ರಿಯಳು. ಪರ್ವತ ರಾಜ ಹಿಮವಂತನ ಮಗಳಾದ ಪಾರ್ವತಿ ದೇವಿ ಅಥವಾ ಆದಿಶಕ್ತಿಯನ್ನು ಸಂಪ್ರದಾಯ ಬದ್ದವಾಗಿ ಈ ದಿನ ಪೂಜಿಸಲಾಗುತ್ತದೆ. ಕೆಲವೆಡೆಗಳಲ್ಲಿ ದೇವಿಯ ಮಣ್ಣಿನ ಮೂರ್ತಿ ಮಾಡಿ, ಪೂಜೆ ಮಾಡುವ ಸಂಪ್ರದಾಯವಿದೆ.

ನವರಾತ್ರಿ ಮೊದಲ ದಿನ ದೇವಿ ಶೈಲಪುತ್ರಿಯನ್ನು ಪೂಜಿಸುವುದರಿಂದ ಸಿಗುವ ಫಲಗಳೇನು? ಈ ದೇವಿಯ ಹಿನ್ನೆಲೆಯೇನು? ತಿಳಿದುಕೊಳ್ಳಿ
ನವರಾತ್ರಿ ಮೊದಲ ದಿನ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on:Oct 23, 2023 | 6:31 PM

Share

ಆಶ್ವಿಜ ಅಥವಾ ಆಶ್ವಯುಜ ಮಾಸದ ಶುಕ್ಲ ಪಾಡ್ಯದಿಂದ ದಶಮಿಯವರೆಗೂ ಒಂಭತ್ತು ದಿನಗಳ ಕಾಲ ಆಚರಿಸುವ ಹಬ್ಬವೇ ನವರಾತ್ರಿ(Navaratri). ಆ ದಿನಗಳಲ್ಲಿ ದೇವಿಯನ್ನು ಬೇರೆ ಬೇರೆ ರೂಪ, ನಾಮಗಳಲ್ಲಿ ಆರಾಧಿಸಲಾಗುತ್ತದೆ. ನವರಾತ್ರಿಯ ಮೊದಲ ದಿನ ಶೈಲಪುತ್ರಿಯನ್ನು ಪೂಜಿಸಲಾಗುತ್ತದೆ. ಶ್ವೇತ ವಸ್ತ್ರಧಾರಿಯಾಗಿರುವ ಶೈಲಪುತ್ರಿಯು ಮಲ್ಲಿಗೆ ಪ್ರಿಯಳು. ಪರ್ವತ ರಾಜ ಹಿಮವಂತನ ಮಗಳಾದ ಪಾರ್ವತಿ ದೇವಿ ಅಥವಾ ಆದಿಶಕ್ತಿಯನ್ನು ಸಂಪ್ರದಾಯ ಬದ್ದವಾಗಿ ಪೂಜಿಸಲಾಗುತ್ತದೆ. ಕೆಲವೆಡೆಗಳಲ್ಲಿ ದೇವಿಯ ಮಣ್ಣಿನ ಮೂರ್ತಿ ಮಾಡಿ, ಪೂಜೆ ಮಾಡುವ ಸಂಪ್ರದಾಯವಿದೆ. ಶೈಲಪುತ್ರಿಯು ಶಾಂತ ಸ್ವಭಾವದಳಾಗಿದ್ದಾಳೆ. ಶೈಲ ಎಂದರೆ ಬೆಟ್ಟ. ಒಂದು ಕೈಯಲ್ಲಿ ಕಮಲ, ಮತ್ತೊಂದು ಕೈಯಲ್ಲಿ ತ್ರಿಶೂಲ ಹಿಡಿದು ನಿಂತಿರುವಂತೆ ಈ ದೇವತೆಯನ್ನು ಚಿತ್ರಿಸಲಾಗಿದೆ. ಹಾಗಾಗಿ ದೇಹ ಮನಸ್ಸು ಮಲಿನವಾಗದಂತೆ, ಪಾರದರ್ಶಕವಾಗಿದ್ದಾಗ ಮಾತ್ರ ದೇವರನ್ನು ಒಲಿಸಿಕೊಳ್ಳಬಹುದು ಎನ್ನುವುದು ಇದು ತಿಳಿಸಿ ಕೊಡುತ್ತದೆ.

ಶೈಲ ಪುತ್ರಿಯ ಹಿನ್ನಲೆ

ಪರ್ವತರಾಜ ಹಿಮವಂತನ ಪುತ್ರಿಯೇ ಶೈಲ ಪುತ್ರಿ. ತನ್ನ ಹಿಂದಿನ ಜನ್ಮದಲ್ಲಿ ತಂದೆಯಾದ ದಕ್ಷ ಮಹಾರಾಜ, ತನ್ನ ಪತಿ ಶಿವನನ್ನು ಅವಮಾನಿಸಿದ್ದನ್ನು ಸಹಿಸಲಾಗದೆಯೇ ದಾಕ್ಷಾಯಿಣಿಯು ”ಯಜ್ಞಕುಂಡಕ್ಕೆ ಹಾರಿ ಪ್ರಾಣತ್ಯಾಗ ಮಾಡಿರುತ್ತಾಳೆ. ಹೀಗೆ ತನ್ನ ಶರೀರವನ್ನು ಭಸ್ಮವಾಗಿಸಿ ಮುಂದಿನ ಜನ್ಮದಲ್ಲಿ ಹಿಮವಂತನ ಪುತ್ರಿಯಾಗಿ ಅಂದರೆ ಶೈಲ ಪುತ್ರಿಯಾಗಿ ಹುಟ್ಟಿ ಮತ್ತೆ ಶಿವನ ಮಡದಿ ‘ಸತಿ’ಯಾಗುತ್ತಾಳೆ. ಮದುವೆಯಾದ ಬಳಿಕ ಶಿವ ಪತ್ನಿಗೆ ವರ್ಷದಲ್ಲಿ 10 ದಿನ ಮಾತ್ರ ತವರು ಮನೆಗೆ ತೆರಳಲು ಅನುಮತಿ ನೀಡುತ್ತಾನೆ. ಅದರಂತೆ ಈಗಲೂ ದಸರಾ ಸಮಯದಲ್ಲಿ ಮದುವೆಯಾದ ಹೆಣ್ಣು ಮಕ್ಕಳನ್ನು ತವರಿಗೆ ಆಮಂತ್ರಿಸಿ ಗೌರವಿಸುವ ಸಂಪ್ರದಾಯವಿದೆ.

ಪೂಜಾ ಫಲವೇನು?

ಶೈಲಪುತ್ರಿ ದೇವಿಯ ಆರಾಧನೆಯಿಂದ “ಧರ್ಮಾರ್ಥ ಕಾಮ ಮೋಕ್ಷ ಚತುರ್ ಭುವಿಧಂ ಪುರುಷಾರ್ಥ ಫಲವ” ಎನ್ನುವಂತೆ ಎಲ್ಲ ಫಲವು ಸಿಗುತ್ತದೆ. ಮನಸ್ಸಿನ ಆಸೆಗಳೆಲ್ಲ ಈಡೇರುತ್ತವೆ. ಸಕಲ ಸಂಕಷ್ಟಗಳು ನಿವಾರಣೆಯಾಗುತ್ತವೆ. ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸಿ, ಇಂದ್ರಿಯ ನಿಗ್ರಹ ಶಕ್ತಿಯು ಒದಗುತ್ತದೆ. ಶೈಲಪುತ್ರಿಯ ರೂಪವು ನಾವು ಪಾಲಿಸಬೇಕಾದ ಶಾಂತಿಯುತವಾದ ನಡವಳಿಕೆಗೆ ಪ್ರೇರಣೆಯಾಗಿದೆ.

ಶೈಲಪುತ್ರಿಯ ಆಶೀರ್ವಾದ ಪಡೆಯಲು ಯಾವ ಮಂತ್ರ ಜಪಿಸಬೇಕು?

– ‘ಓಂ ದೇವಿ ಶೈಲಪುತ್ರಿಯೇ ನಮಃ”

– ಯಾ ದೇವಿ ಸರ್ವಭೂತೇಷು, ಮಾ ಶೈಲಪುತ್ರಿ ರೂಪೇಣ ಸಂಸ್ಥಿತಾ ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ

– ಸರ್ವ ಮಂಗಳ ಮಾಂಗಲ್ಯೇ ಶಿವೇ ಸರ್ವಾರ್ಥ ಸಾಧಿಕೆ ಶರಣ್ಯೇ ತ್ರ್ಯಂಬಕೇ ಗೌರಿ ನಾರಾಯಣಿ ನಮೋಸ್ತುತೇ

– ಜಯಂತಿ ಮಂಗಳ ಕಾಳಿ, ಭದ್ರ ಕಾಳಿ, ಕಪಾಲಿನಿ ದುರ್ಗಾ ಕ್ಷಮಾ ಶಿವಧಾತ್ರಿ ಸ್ವಾಹ ಸ್ವಧಾ ನಮೋಸ್ತುತೇ

– ಸರ್ವ ಬಾಧ ವಿನಿರ್ಮುಕ್ತೋ ಧನ ಧಾನ್ಯೇ ಸುತಾನ್ವಿತಃ ಮನುಷ್ಯೋ ಮತ್‌ ಪ್ರಸಾದೇನ್‌ ಭವಿಷ್ಯತಿ ನ ಸಂಶಯಃ

-ಓಂ ಹ್ರೀಂ ಶ್ರೀ ಶೈಲಪುತ್ರಿ ದುರ್ಗಾಯೇ ನಮಃ

– ಓಂ ದೇವಿ ಶೈಲಪುತ್ರೈ ಸ್ವಾಹಾ

-ವಂದೇ ವಂಚಿತ್ ಲಾಭಾಯ್, ಚಂದ್ರಾಕೃತಿಶೇಖರಂ | ವೃಷರುಧಂ ಶೂಲ್ಧಾರಂ ಶೈಲಪುತ್ರಿಂ ಯಶಸ್ವಿನಿಂ ||

Published On - 6:30 am, Sun, 15 October 23

ಇದ್ರೆ ನೆಮ್ಮದಿಯಾಗ್ ಇರ್ಬೇಕ್: ದರ್ಶನ್ ಪರಿಸ್ಥಿತಿ ಬಗ್ಗೆ ಕೆ. ಮಂಜು ಮಾತು
ಇದ್ರೆ ನೆಮ್ಮದಿಯಾಗ್ ಇರ್ಬೇಕ್: ದರ್ಶನ್ ಪರಿಸ್ಥಿತಿ ಬಗ್ಗೆ ಕೆ. ಮಂಜು ಮಾತು
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ