AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Navratri: ನವರಾತ್ರಿಯ ನಾಲ್ಕು ಮತ್ತು ಐದನೇಯ ದಿನದ ದೇವಿಯ ಸ್ವರೂಪ ಮತ್ತು ನೈವೇದ್ಯ ಭಕ್ಷ್ಯ ಯಾವುದು?

ನವರಾತ್ರಿಯ ಪರ್ವಕಾಲದಲ್ಲಿ ತಾಯಿ ದುರ್ಗೆಯನ್ನು ಅನನ್ಯವಾಗಿ ಪೂಜಿಸಿ ಅದ್ಭುತ ಫಲಗಳನ್ನು ಹೊಂದಿದ ಕಥೆಯನ್ನು ನಾವು ಕೇಳಿರುತ್ತೇವೆ. ಅಂತಹ ಶುಭವನ್ನು ನಾವು ಪಡೆಯಲು ಏನು ಮಾಡಬೇಕು ? ಎನ್ನುವುದಕ್ಕುತ್ತರ ಆಯಾಯ ದಿನದ ವಿಶೇಷ ತಿಳಿದು ಆ ಕ್ರಮದಲ್ಲೇ ಪೂಜಿಸಬೇಕು ಎಂದು.

Navratri: ನವರಾತ್ರಿಯ ನಾಲ್ಕು ಮತ್ತು ಐದನೇಯ ದಿನದ ದೇವಿಯ ಸ್ವರೂಪ ಮತ್ತು ನೈವೇದ್ಯ ಭಕ್ಷ್ಯ ಯಾವುದು?
Navratri
TV9 Web
| Edited By: |

Updated on: Sep 28, 2022 | 7:52 AM

Share

ನವರಾತ್ರಿಯ ಪರ್ವಕಾಲದಲ್ಲಿ ತಾಯಿ ದುರ್ಗೆಯನ್ನು ಅನನ್ಯವಾಗಿ ಪೂಜಿಸಿ ಅದ್ಭುತ ಫಲಗಳನ್ನು ಹೊಂದಿದ ಕಥೆಯನ್ನು ನಾವು ಕೇಳಿರುತ್ತೇವೆ. ಅಂತಹ ಶುಭವನ್ನು ನಾವು ಪಡೆಯಲು ಏನು ಮಾಡಬೇಕು ? ಎನ್ನುವುದಕ್ಕುತ್ತರ ಆಯಾಯ ದಿನದ ವಿಶೇಷ ತಿಳಿದು ಆ ಕ್ರಮದಲ್ಲೇ ಪೂಜಿಸಬೇಕು ಎಂದು. ಈಗ ನಾವು ನಾಲ್ಕು ಮತ್ತು ಐದನೇಯ ದಿನದ ಮಹತ್ವವನ್ನು ತಿಳಿಯೋಣ.

ನಾಲ್ಕನೇ ದಿನ – ದುರ್ಗೆಯ “ಶೈಲಜಾ” ಎನ್ನುವ ರೂಪ ಅಥವಾ “ಕೂಷ್ಮಾಂಡಾ” ಎನ್ನುವ ರೂಪದಲ್ಲಿ ಪೂಜಿಸಬೇಕು. ಈ ಸ್ವರೂಪದ ತಾತ್ಪರ್ಯ ಮಹತ್ತರವಾದ ಶಕ್ತಿಯುಳ್ಳ ಭಗವತೀ ಎಂದು. ಈ ರೂಪವನ್ನು

ರಕ್ತವರ್ಣಾಂ ಚತುರ್ಬಾಹುಂ ರಕ್ತವಸ್ತ್ರಾದ್ಯಲಂಕೃತಾಂ |

ಪಾಶಾಮಂಕುಶಾಂ ಮಾತುಲಿಂಗಧರಾಂ ಮೂಷಿಕವಾಹಿನೀಂ ||

ಎಂಬ ಮಂತ್ರದಿಂದ ಧ್ಯಾನಿಸಿ. ಕೆಂಪು ಬಣ್ಣದ ವಸ್ತ್ರವನ್ನು ಇಟ್ಟು ಮತ್ತು ಉಟ್ಟು; ತಾಯಿಗೆ ಇಂದಿನ ದಿನ “ಮಧು ಪ್ರೀತಾ” ಎನ್ನುವರು. ಅಂದರೆ ನವರಾತ್ರಿಯ ನಾಲ್ಕನೇಯ ದಿನದಂದು ಶ್ರೀದೇವಿಗೆ ಮಧು ( ಜೇನುತುಪ್ಪ) ವನ್ನು ನೈವೇದ್ಯ ಮಾಡಬೇಕು. ಈ ದಿನ ಅವಳಿಗೆ ಅದು ಅತ್ಯಂತ ಪ್ರಿಯವಾಗಿರುತ್ತದೆ. ಕೂಷ್ಮಾಂಡದಂತೆ ಇರುವ ನಮ್ಮ ಪಾಪದ ಸಂಗ್ರಹವನ್ನು ನಾಶ ಮಾಡುವ ಶಕ್ತಿಯುಳ್ಳ ಆ ತಾಯಿಯನ್ನು ಇಂದು ಪೂಜಿಸಿವುದರಿಂದ ನಮ್ಮ ಪಾಪವೆಲ್ಲಾ ಕರಗುವುದು.

ಐದನೇಯ ದಿನ – – ನವರಾತ್ರಿಯ ಈ ದಿನ ಅತ್ಯಂತ ಪುಣ್ಯಕಾಲವಾಗಿದೆ. ಈ ದಿನವನ್ನು ಲಲಿತಾಪಂಚಮೀ ಎಂದು ಕರೆಯುವರು. ಈ ಸಲ 30/9/22 ರಂದು ಲಲಿತಾ ಪಂಚಮೀ ಇದೆ. ಇಂದು “ಧೂಮ್ರಹಾ” ಅಥವಾ “ಸ್ಕಂದಮಾತಾ” ಎಂಬ ಹೆಸರಿನಿಂದ ಪೂಜಿಸುವರು. ಧೂಮ್ರಹಾ ಎಂದರೆ ಧೂಮ್ರಾಕ್ಷ ಎಂಬ ರಾಕ್ಷಸನ್ನು ಹನನ ಮಾಡಿದವಳು ಎಂದು ಅರ್ಥ. ಸ್ಕಂದ ಮಾತಾ ಎಂದರೆ ಸುಬ್ರಹ್ಮಣ್ಯನ ತಾಯಿ ಎಂದು. ಈ ಎರಡೂ ರೂಪವೂ ಒಂದೇ ಆಗಿದೆ.

ಈ ದಿನದಂದು ತಾಯಿಗೆ “ದಧ್ಯನ್ನಾಸಕ್ತ ಹೃದಯಾ” ಎಂದು ಕರೆಯುವರು. ಯಾಕೆಂದರೆ ಲಲಿತಾ ಪಂಚಮಿಯಂದು ದಧ್ಯನ್ನ (ಮೊಸರನ್ನವನ್ನು) ವನ್ನು ಮಾಡಿ ಅದನ್ನು ತಾಯಿ ಲಲಿತೆಗೆ ನೈವೇದ್ಯ ಮಾಡಿ ಯಾರು ಪೂಜಿಸುತ್ತಾರೋ ಅವರಿಗೆ ಅವರ ಅಭೀಷ್ಟಸಿದ್ಧಿಸುವುದು ಮತ್ತು ಆ ದಧ್ಯವನ್ನು ಪ್ರಸಾದವಾಗಿ ಮಕ್ಕಳಿಗೆ ನೀಡಿದರೆ ಒಳ್ಳೆಯ ಬುದ್ಧಿಶಕ್ತಿಯೊಂದಿಗೆ ಸದ್ವಿದ್ಯೆಯು ಪ್ರಾಪ್ತವಾಗುವುದು. ಈ ದಿನ ಸಾಯಂಕಾಲ ಸುಮಾರು ಮುಸ್ಸಂಜೆ ವೇಳೆಯಲ್ಲಿ ತುಪ್ಪ ದೀಪವನ್ನು ಬೆಳಗಿಸಿ ಲಲಿತಾ ಸಹಸ್ರನಾಮ ಪಠಿಸಿ ಸಮಸ್ತ ಅಮಂಗಲ ದೂರವಾಗುವುದು. ಹಾಗೆಯೇ –

ಚತುರ್ಭುಜಾಂ ಸುವರ್ಣಾಭಾಂ ಶಂಖಚಕ್ರಗದಾಂಬುಜಾಂ |

ಪಂಚಮ್ಯಾಂ ಪೂಜಯೇತ್ ದೇವೀಂ ಸದಾ ಮಕರವಾಹಿನೀಂ ||

ಎಂಬ ಶ್ಲೋಕವನ್ನು ಹೇಳುತ್ತಾ ಧ್ಯಾನಿಸಿ ಪುಷ್ಪಾರ್ಚನೆ ಮಾಡಿರಿ. ಮತ್ತು ದಧ್ಯನ್ನವನ್ನು ನೈವೇದ್ಯ ಮಾಡಿ ಪೂಜಿಸಿ. ಸತ್ಫಲವು ಪ್ರಾಪ್ತವಾಗುವುದು.

ಡಾ.ಕೇಶವಕಿರಣ ಬಿ

ಧಾರ್ಮಿಕಚಿಂತಕರು ಮತ್ತು ಸಲಹೆಗಾರರು, kkmanasvi@gamail.com

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​