AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Navratri: ನವರಾತ್ರಿಯ ನಾಲ್ಕು ಮತ್ತು ಐದನೇಯ ದಿನದ ದೇವಿಯ ಸ್ವರೂಪ ಮತ್ತು ನೈವೇದ್ಯ ಭಕ್ಷ್ಯ ಯಾವುದು?

ನವರಾತ್ರಿಯ ಪರ್ವಕಾಲದಲ್ಲಿ ತಾಯಿ ದುರ್ಗೆಯನ್ನು ಅನನ್ಯವಾಗಿ ಪೂಜಿಸಿ ಅದ್ಭುತ ಫಲಗಳನ್ನು ಹೊಂದಿದ ಕಥೆಯನ್ನು ನಾವು ಕೇಳಿರುತ್ತೇವೆ. ಅಂತಹ ಶುಭವನ್ನು ನಾವು ಪಡೆಯಲು ಏನು ಮಾಡಬೇಕು ? ಎನ್ನುವುದಕ್ಕುತ್ತರ ಆಯಾಯ ದಿನದ ವಿಶೇಷ ತಿಳಿದು ಆ ಕ್ರಮದಲ್ಲೇ ಪೂಜಿಸಬೇಕು ಎಂದು.

Navratri: ನವರಾತ್ರಿಯ ನಾಲ್ಕು ಮತ್ತು ಐದನೇಯ ದಿನದ ದೇವಿಯ ಸ್ವರೂಪ ಮತ್ತು ನೈವೇದ್ಯ ಭಕ್ಷ್ಯ ಯಾವುದು?
Navratri
TV9 Web
| Edited By: |

Updated on: Sep 28, 2022 | 7:52 AM

Share

ನವರಾತ್ರಿಯ ಪರ್ವಕಾಲದಲ್ಲಿ ತಾಯಿ ದುರ್ಗೆಯನ್ನು ಅನನ್ಯವಾಗಿ ಪೂಜಿಸಿ ಅದ್ಭುತ ಫಲಗಳನ್ನು ಹೊಂದಿದ ಕಥೆಯನ್ನು ನಾವು ಕೇಳಿರುತ್ತೇವೆ. ಅಂತಹ ಶುಭವನ್ನು ನಾವು ಪಡೆಯಲು ಏನು ಮಾಡಬೇಕು ? ಎನ್ನುವುದಕ್ಕುತ್ತರ ಆಯಾಯ ದಿನದ ವಿಶೇಷ ತಿಳಿದು ಆ ಕ್ರಮದಲ್ಲೇ ಪೂಜಿಸಬೇಕು ಎಂದು. ಈಗ ನಾವು ನಾಲ್ಕು ಮತ್ತು ಐದನೇಯ ದಿನದ ಮಹತ್ವವನ್ನು ತಿಳಿಯೋಣ.

ನಾಲ್ಕನೇ ದಿನ – ದುರ್ಗೆಯ “ಶೈಲಜಾ” ಎನ್ನುವ ರೂಪ ಅಥವಾ “ಕೂಷ್ಮಾಂಡಾ” ಎನ್ನುವ ರೂಪದಲ್ಲಿ ಪೂಜಿಸಬೇಕು. ಈ ಸ್ವರೂಪದ ತಾತ್ಪರ್ಯ ಮಹತ್ತರವಾದ ಶಕ್ತಿಯುಳ್ಳ ಭಗವತೀ ಎಂದು. ಈ ರೂಪವನ್ನು

ರಕ್ತವರ್ಣಾಂ ಚತುರ್ಬಾಹುಂ ರಕ್ತವಸ್ತ್ರಾದ್ಯಲಂಕೃತಾಂ |

ಪಾಶಾಮಂಕುಶಾಂ ಮಾತುಲಿಂಗಧರಾಂ ಮೂಷಿಕವಾಹಿನೀಂ ||

ಎಂಬ ಮಂತ್ರದಿಂದ ಧ್ಯಾನಿಸಿ. ಕೆಂಪು ಬಣ್ಣದ ವಸ್ತ್ರವನ್ನು ಇಟ್ಟು ಮತ್ತು ಉಟ್ಟು; ತಾಯಿಗೆ ಇಂದಿನ ದಿನ “ಮಧು ಪ್ರೀತಾ” ಎನ್ನುವರು. ಅಂದರೆ ನವರಾತ್ರಿಯ ನಾಲ್ಕನೇಯ ದಿನದಂದು ಶ್ರೀದೇವಿಗೆ ಮಧು ( ಜೇನುತುಪ್ಪ) ವನ್ನು ನೈವೇದ್ಯ ಮಾಡಬೇಕು. ಈ ದಿನ ಅವಳಿಗೆ ಅದು ಅತ್ಯಂತ ಪ್ರಿಯವಾಗಿರುತ್ತದೆ. ಕೂಷ್ಮಾಂಡದಂತೆ ಇರುವ ನಮ್ಮ ಪಾಪದ ಸಂಗ್ರಹವನ್ನು ನಾಶ ಮಾಡುವ ಶಕ್ತಿಯುಳ್ಳ ಆ ತಾಯಿಯನ್ನು ಇಂದು ಪೂಜಿಸಿವುದರಿಂದ ನಮ್ಮ ಪಾಪವೆಲ್ಲಾ ಕರಗುವುದು.

ಐದನೇಯ ದಿನ – – ನವರಾತ್ರಿಯ ಈ ದಿನ ಅತ್ಯಂತ ಪುಣ್ಯಕಾಲವಾಗಿದೆ. ಈ ದಿನವನ್ನು ಲಲಿತಾಪಂಚಮೀ ಎಂದು ಕರೆಯುವರು. ಈ ಸಲ 30/9/22 ರಂದು ಲಲಿತಾ ಪಂಚಮೀ ಇದೆ. ಇಂದು “ಧೂಮ್ರಹಾ” ಅಥವಾ “ಸ್ಕಂದಮಾತಾ” ಎಂಬ ಹೆಸರಿನಿಂದ ಪೂಜಿಸುವರು. ಧೂಮ್ರಹಾ ಎಂದರೆ ಧೂಮ್ರಾಕ್ಷ ಎಂಬ ರಾಕ್ಷಸನ್ನು ಹನನ ಮಾಡಿದವಳು ಎಂದು ಅರ್ಥ. ಸ್ಕಂದ ಮಾತಾ ಎಂದರೆ ಸುಬ್ರಹ್ಮಣ್ಯನ ತಾಯಿ ಎಂದು. ಈ ಎರಡೂ ರೂಪವೂ ಒಂದೇ ಆಗಿದೆ.

ಈ ದಿನದಂದು ತಾಯಿಗೆ “ದಧ್ಯನ್ನಾಸಕ್ತ ಹೃದಯಾ” ಎಂದು ಕರೆಯುವರು. ಯಾಕೆಂದರೆ ಲಲಿತಾ ಪಂಚಮಿಯಂದು ದಧ್ಯನ್ನ (ಮೊಸರನ್ನವನ್ನು) ವನ್ನು ಮಾಡಿ ಅದನ್ನು ತಾಯಿ ಲಲಿತೆಗೆ ನೈವೇದ್ಯ ಮಾಡಿ ಯಾರು ಪೂಜಿಸುತ್ತಾರೋ ಅವರಿಗೆ ಅವರ ಅಭೀಷ್ಟಸಿದ್ಧಿಸುವುದು ಮತ್ತು ಆ ದಧ್ಯವನ್ನು ಪ್ರಸಾದವಾಗಿ ಮಕ್ಕಳಿಗೆ ನೀಡಿದರೆ ಒಳ್ಳೆಯ ಬುದ್ಧಿಶಕ್ತಿಯೊಂದಿಗೆ ಸದ್ವಿದ್ಯೆಯು ಪ್ರಾಪ್ತವಾಗುವುದು. ಈ ದಿನ ಸಾಯಂಕಾಲ ಸುಮಾರು ಮುಸ್ಸಂಜೆ ವೇಳೆಯಲ್ಲಿ ತುಪ್ಪ ದೀಪವನ್ನು ಬೆಳಗಿಸಿ ಲಲಿತಾ ಸಹಸ್ರನಾಮ ಪಠಿಸಿ ಸಮಸ್ತ ಅಮಂಗಲ ದೂರವಾಗುವುದು. ಹಾಗೆಯೇ –

ಚತುರ್ಭುಜಾಂ ಸುವರ್ಣಾಭಾಂ ಶಂಖಚಕ್ರಗದಾಂಬುಜಾಂ |

ಪಂಚಮ್ಯಾಂ ಪೂಜಯೇತ್ ದೇವೀಂ ಸದಾ ಮಕರವಾಹಿನೀಂ ||

ಎಂಬ ಶ್ಲೋಕವನ್ನು ಹೇಳುತ್ತಾ ಧ್ಯಾನಿಸಿ ಪುಷ್ಪಾರ್ಚನೆ ಮಾಡಿರಿ. ಮತ್ತು ದಧ್ಯನ್ನವನ್ನು ನೈವೇದ್ಯ ಮಾಡಿ ಪೂಜಿಸಿ. ಸತ್ಫಲವು ಪ್ರಾಪ್ತವಾಗುವುದು.

ಡಾ.ಕೇಶವಕಿರಣ ಬಿ

ಧಾರ್ಮಿಕಚಿಂತಕರು ಮತ್ತು ಸಲಹೆಗಾರರು, kkmanasvi@gamail.com

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!