AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ವರ ನಿವಾರಣೆಗೆ ಅನಾದಿ ಕಾಲದಿಂದಲೂ ಶೀತಲಾದೇವಿಯ ಪೂಜಿಸುತ್ತಾ ಬಂದಿದ್ದಾರೆ ಇಲ್ಲಿಯ ಜನ

Fever| ಶೀತ, ಜ್ವರಕ್ಕೆ ಉತ್ತರದ ಬಂಗಾಳ, ಒಡಿಸ್ಸಾ ರಾಜ್ಯಗಳಲ್ಲಿ ರೋಗಗಳನ್ನು ವಾಸಿ ಮಾಡುವ ದೇವತೆಯಾಗಿ ಶೀತಲಾದೇವಿಯನ್ನು ಆರಾಧಿಸ್ತಾರೆ.

ಜ್ವರ ನಿವಾರಣೆಗೆ ಅನಾದಿ ಕಾಲದಿಂದಲೂ ಶೀತಲಾದೇವಿಯ ಪೂಜಿಸುತ್ತಾ ಬಂದಿದ್ದಾರೆ ಇಲ್ಲಿಯ ಜನ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Apr 27, 2021 | 6:50 AM

Share

ಮಹಾಮಾರಿ ಕೊರೊನಾ ದೇಶಕ್ಕೆ ಒಕ್ಕರಿಸಿದೆ. ಸಾಮಾನ್ಯ ಶೀತವು ಕೂಡ ಹೆಮ್ಮಾರಿ ಕಾಯಿಲೆಯಾಗಿ ಕಾಡುವ ಕಾಲ ಬಂದಿದೆ. ಅದರಲ್ಲೂ ಮಕ್ಕಳನ್ನು ಎಷ್ಟು ಕಣ್ಣಲ್ಲಿ ಕಣ್ಣಿಟ್ಟು ಜೋಪಾನವಾಗಿ ನೋಡಿಕೊಂಡರೂ ಹಲವು ರೀತಿಯ ರೋಗಗಳು ಕಾಡೋದುಂಟು. ಆದ್ರೆ ಈಗಿನ ಕಾಲದಲ್ಲಿ ಸುಧಾರಿತ ವೈದ್ಯಕೀಯ ಸೌಲಭ್ಯಗಳಿಂದಾಗಿ ಕೆಮ್ಮು, ಜ್ವರ ಕಾಣಿಸಿಕೊಂಡರೂ ಪೋಷಕರು ತರಹೇವಾರಿ ವೈದ್ಯಕೀಯ ಚಿಕಿತ್ಸೆ ಕೊಡಿಸ್ತಾರೆ.

ಪರಿಣಾಮ ಮಕ್ಕಳಿಗೆ ರೋಗಗಳ ವಿರುದ್ಧ ಹೋರಾಡುವ ರೋಗ ನಿರೋಧಕ ಶಕ್ತಿ ಕುಗ್ಗಿ ಹೋಗಿದೆ. ಆದ್ರೆ ಹಿಂದಿನ ಕಾಲದಲ್ಲಿ ಈಗಿನಂತೆ ಅಗತ್ಯವಾದ ವೈದ್ಯಕೀಯ ಸೌಲಭ್ಯಗಳಾಗಲೀ, ರೋಗಗಳಿಗೆ ತಕ್ಕ ಮೆಡಿಸಿನ್ಗಳಾಗಲೀ ಸಿಗುತ್ತಿರಲಿಲ್ಲ. ಹಾಗಂತಾ ಕಾಯಿಲೆ ಬಂದವರೆಲ್ಲಾ ಗುಣಮುಖರಾಗದೇ ಸಾವನ್ನಪ್ಪುತ್ತಿರಲಿಲ್ಲ. ಚಿಕ್ಕ ಪುಟ್ಟ ಕಾಯಿಲೆಗಳಿಗೆ ಆಯುರ್ವೇದ ಶಾಸ್ತ್ರದ ಸಹಾಯದಿಂದ ನಾನಾ ಬಗೆಯ ಸಿದ್ಧೌಷಧಗಳನ್ನು ನಮ್ಮ ಪೂರ್ವಜರು ಕಂಡುಕೊಂಡಿದ್ದರು. ಮನೆಯಲ್ಲೇ ಔಷಧಗಳನ್ನು ತಯಾರಿಸಿಕೊಂಡು ಸೇವಿಸಿ ಗುಣಮುಖರಾಗ್ತಾ ಇದ್ರು. ಒಂದು ವೇಳೆ ಕಾಯಿಲೆಗಳು ಉಲ್ಬಣಿಸಿದಾಗ ದೈವದ ಮೊರೆ ಹೋಗ್ತಿದ್ರು.

ದೈವಕ್ಕೆ ಹರಕೆ ಕಾಯಿಲೆಗಳು ವಾಸಿಯಾದ ನಂತರ ಆ ದೈವಗಳಿಗೆ ವಿವಿಧ ಬಗೆಯ ಹರಕೆಗಳನ್ನು ಸಲ್ಲಿಸುತ್ತಿದ್ರು. ಆದ್ರೆ ನಾವಿಂದು ಅವನ್ನೆಲ್ಲಾ ಮೂಢನಂಬಿಕೆ ಎಂದು ಮೂದಲಿಸುತ್ತೇವೆ. ಆದ್ರೆ ಇಂದಿಗೂ ಭಾರತದ ಕೆಲವೆಡೆ ಜ್ವರ, ಶೀತದಂತಹ ಸಮಸ್ಯೆಗಳು ಉಲ್ಬಣಿಸಿದಾಗ ದೇವರ ಆರಾಧನೆ ಮಾಡ್ತಾರೆ. ಹೀಗೆ ಶೀತ, ಜ್ವರಕ್ಕೆ ಉತ್ತರದ ಬಂಗಾಳ, ಒಡಿಸ್ಸಾ ರಾಜ್ಯಗಳಲ್ಲಿ ರೋಗಗಳನ್ನು ವಾಸಿ ಮಾಡುವ ದೇವತೆಯಾಗಿ ಶೀತಲಾದೇವಿಯನ್ನು ಆರಾಧಿಸ್ತಾರೆ.

ಶಕ್ತಿ ಸ್ವರೂಪಿಣಿಯಾದ ಜಗದಾಂಬೆಯು ತನ್ನ ಅನಂತ ಅನುಗ್ರಹವನ್ನು ವಿವಿಧ ರೀತಿಯಲ್ಲಿ ನೀಡಲು ಧರಿಸಿದ ರೂಪಗಳಲ್ಲಿ ಶೀತಲಾದೇವಿಯ ರೂಪವೂ ಒಂದು. ಕತ್ತೆಯ ವಾಹನದ ಮೇಲೆ ಕುಳಿತು ಮೊರ, ಪೊರಕೆ, ಕಲಶದೊಂದಿಗೆ ಇರುವ ಈ ದೇವಿಯು ರೋಗನಾಶಕ ಶಕ್ತಿಗಳ ಸಂಕೇತವಾಗಿದ್ದಾಳೆ. ಈ ದೇವಿಯ ಬಳಿ ಬಂದು ಹರಕೆ ಹೊತ್ತರೆ ರೋಗಗಳು ವಾಸಿಯಾಗುತ್ತವೆ ಎಂಬ ನಂಬಿಕೆ ಇಲ್ಲಿಯ ಜನರದ್ದು. ಇದಕ್ಕೆ ಪೂರಕವೆಂಬಂತೆ ದಕ್ಷಿಣ ಭಾರತದಲ್ಲಿಯೂ ಸಹ ವಿವಿಧ ರೋಗಗಳಿಗೆ ಅಮ್ಮನವರನ್ನು, ಗ್ರಾಮ ದೇವತೆಯನ್ನು ಪೂಜಿಸುವ ಪದ್ಧತಿ ಅನಾದಿಕಾಲದಿಂದಲೂ ಇದೆ.

ಇದನ್ನೂ ಓದಿ: ಕೊರೊನಾ ಮುಕ್ತಿಗೆ ದೇವರ ಮೊರೆ ಹೋದ ಕೊಡಗು ಜನರು

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ