Krishna janmashtami-Saligrama Pooja: ಜನ್ಮಾಷ್ಟಮಿ ದಿನ ಸಾಲಿಗ್ರಾಮ ಪೂಜೆ ಮಾಡುವುದರಿಂದ ಆಗುವ ಲಾಭಗಳೇನು, ಪೂಜೆಯ ವಿಧಾನ ಹೇಗೆ?
Saligrama Pooja: ಭಗವಾನ್ ವಿಷ್ಣುವಿನ ಅವತಾರಗಳು ಪುರಾಣದಲ್ಲಿ ಮಹತ್ವದ ಸ್ಥಾನವನ್ನು ಪಡೆದುಕೊಂಡಿವೆ. ಅಂತಹ ಅವತಾರಗಳಲ್ಲಿ ರಾಮ ಮತ್ತು ಕೃಷ್ಣನ ಅವತಾರವೂ ಇದೆ. ರಾಮನಿಗೆ ಮೀಸಲಾದ ರಾಮನವಮಿ ಹಾಗೂ ಕೃಷ್ಣನಿಗೆ ಮೀಸಲಾದ ಕೃಷ್ಣ ಜನ್ಮಾಷ್ಟಮಿಯಂದು ಸಾಲಿಗ್ರಾಮವನ್ನು ಪೂಜಿಸಲಾಗುವುದು. ಅದು ವಿಷ್ಣುವಿನ ಪುಟ್ಟ ರೂಪ ಎಂದು ಪರಿಗಣಿಸಲಾಗುವುದು. ಅಂದು ಸಾಲಿಗ್ರಾಮದ ಪೂಜೆ, ಶ್ಲೋಕ, ಹವನ, ಯಜ್ಞ ಮತ್ತು ಮಂತ್ರಗಳನ್ನು ಹೇಳುವುದರ ಮೂಲಕ ಪೂಜೆಯನ್ನು ಸಲ್ಲಿಸಿದರೆ ಅತ್ಯಂತ ಪವಿತ್ರ ಎನ್ನಲಾಗುತ್ತದೆ.

ಗಾಢವಾದ ಕಪ್ಪು ಬಣ್ಣ ಹಾಗೂ ನುಣುಪಾದ ಕಲ್ಲಿನ ರೂಪದಲ್ಲಿ ಇರುವುದೇ ಸಾಲಿಗ್ರಾಮ. ಈ ಕಲ್ಲನ್ನು ವಿಷ್ಣುವಿನ ರೂಪ ಎಂದು ಪರಿಗಣಿಸಲಾಗುವುದು. ದೈವ ಶಕ್ತಿಯನ್ನು ಹೊಂದಿರುವ ಸಾಲಿಗ್ರಾಮವನ್ನು ಮನೆಯಲ್ಲಿ ಇಟ್ಟು ಪೂಜಿಸಿದರೆ ಸಕಾರಾತ್ಮಕ ಶಕ್ತಿಯು ಮನೆಯೊಳಗೆ ಆಗಮಿಸುವುದು. ಇದನ್ನು ಮನೆಯಲ್ಲಿ ಪ್ರತಿಷ್ಠೆ ಮಾಡುವಾಗ ಅಥವಾ ಮನೆಯಲ್ಲಿ ಇಟ್ಟುಕೊಳ್ಳುವಾಗ ಸೂಕ್ತ ಕ್ರಮದಡಿ ಸಮರ್ಥವಾಗಿ ಸ್ವಾಮಿನಿಷ್ಠೆಯಿಂದ ಆರಾಧನೆ ಮಾಡಬೇಕು. ಇಲ್ಲವಾದರೆ ಅದರಿಂದಾಗುವ ದುಷ್ಪರಿಣಾಮಗಳನ್ನು ಎದುರಿಸಬೇಕಾಗುವುದು. ವೈಷ್ಣವರು ಹಾಗೂ ವಿಷ್ಣು ಭಕ್ತರು ಸಾಲಿಗ್ರಾಮವನ್ನು ಮನೆಯಲ್ಲಿಟ್ಟು ಪೂಜಿಸುತ್ತಾರೆ. ಇದನ್ನು ಮನೆಯಲ್ಲಿ ಇಟ್ಟು ಪೂಜಿಸಿದರೆ ಭಗವಾನ್ ವಿಷ್ಣುವಿಗೆ ಗೌರವ ನೀಡಿದಂತೆ ಎಂದು ಹೇಳಲಾಗುವುದು. ಸಾಲಿಗ್ರಾಮಕ್ಕೆ ತುಳಸಿ ಎಲೆಯನ್ನು ಅರ್ಪಿಸಿದರೆ ಭಗವಾನ್ ವಿಷ್ಣು ಸಂತೃಪ್ತನಾಗುತ್ತಾನೆ. ಯಾರು ಸಾಲಿಗ್ರಾಮಕ್ಕೆ ತುಳಸಿ ಎಲೆಯನ್ನು ಇಟ್ಟು ಪೂಜಿಸುತ್ತಾರೋ ಅವರು ಮನೆಯಲ್ಲಿ ನೆಮ್ಮದಿ, ಸಂತೋಷವನ್ನು ಪಡೆದುಕೊಳ್ಳುವರು. ಅವರಿಗೆ ಎಂದಿಗೂ ಬಡತನ, ಹಣದ ಸಮಸ್ಯೆ, ಅಸಮಾಧಾನ, ಆತಂಕ, ಭಯ, ಭ್ರಮೆ ಯಾವುದೂ ಉಂಟಾಗದು. ಜೊತೆಗೆ ಮನೆಯೊಳಗೆ ಯಾವುದೇ ಋಣಾತ್ಮಕ ಶಕ್ತಿ ಮತ್ತು ರೋಗವನ್ನು ತರುವ ಕೀಟಗಳು ಪ್ರವೇಶಿಸುವುದಿಲ್ಲ ಎಂಬ ನಂಬಿಕೆಯಿದೆ. ಸಾಲಿಗ್ರಾಮ ಎನ್ನುವುದು ನೇಪಾಳದ ಗಂಡಕಿ ನದಿಯ ಭಾಗದಲ್ಲಿ ಕಂಡುಬರುತ್ತದೆ. ಸಾಲಿಗ್ರಾಮ ಎನ್ನುವುದು ದೈವ ಶಕ್ತಿಯನ್ನು ಹೊಂದಿರುವ ಒಂದು ಕಲ್ಲಿನ ರೂಪ. ಹಿಂದೂ ಧರ್ಮದಲ್ಲಿ ಪ್ರಕೃತಿಯ ಪ್ರತಿಯೊಂದು ಸಂಗತಿಯಲ್ಲೂ ದೇವರ ರೂಪವನ್ನು ಕಾಣಲಾಗುವುದು. ಅಂತೆಯೇ ಅದಕ್ಕೆ ವಿಶೇಷ ಪೂಜೆ ಪುನಸ್ಕಾರವನ್ನು ಸಲ್ಲಿಸಲಾಗುವುದು. ದೈವ ಶಕ್ತಿಯೊಂದಿಗೆ ಸಂಯೋಜನೆಯನ್ನು ಪಡೆದುಕೊಂಡ ಸಾಲಿಗ್ರಾಮವನ್ನು ಮನೆಯಲ್ಲಿ ಇಟ್ಟು ಪೂಜಿಸುವುದು ಒಂದು ಶ್ರೇಷ್ಠ ಪದ್ಧತಿ. ಈ ಪದ್ಧತಿಯ ಹಿಂದೆ ಇರುವ ಹಿನ್ನೆಲೆ, ಉಪಯೋಗ ಹಾಗೂ ಭವಿಷ್ಯಕ್ಕೆ ತರುವ ಅದೃಷ್ಟ ಹೀಗೆ...
Published On - 6:06 am, Sun, 25 August 24