AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀನೆಂದರೆ ನನಗೆ ಪಂಚಪ್ರಾಣ ಅಂತಾರಲ್ಲ! ಹಾಗೆಂದರೇನು ? ವಾಯುಪುತ್ರನನ್ನು ಮುಖ್ಯಪ್ರಾಣ ದೇವ ಅನ್ನುವುದೇಕೆ?

Mukhya Prana Hanumanth: ವಾಯು ಎಂದರೆ ಪ್ರಾಣಿ ಮಾತ್ರದ ಜೀವನಾಧಾರ ಶಕ್ತಿ. ಅನ್ನವಿಲ್ಲದೆ ಇರಬಹುದು, ನೀರಿಲ್ಲದೆ ದಿನ ದೂಡಬಹುದು; ಅದೇ ಗಾಳಿಯೇ ಇಲ್ಲದೆ ಕೆಲ ಗಳಿಗೆಯೂ ಬದುಕಿರುವುದು ಸಾಧ್ಯವಿಲ್ಲ. ವಾಯುವೆಂದರೆ ಪ್ರಾಣಶಕ್ತಿ. ಆದ್ದರಿಂದ ವಾಯುವಿನ ಮಗನಾದ ಹನುಮಂತನಿಗೆ ‘ಪ್ರಾಣದೇವರು’ ಎನ್ನುತ್ತಾರೆ.

ನೀನೆಂದರೆ ನನಗೆ ಪಂಚಪ್ರಾಣ ಅಂತಾರಲ್ಲ! ಹಾಗೆಂದರೇನು ? ವಾಯುಪುತ್ರನನ್ನು ಮುಖ್ಯಪ್ರಾಣ ದೇವ ಅನ್ನುವುದೇಕೆ?
ನೀನೆಂದರೆ ನನಗೆ ಪಂಚಪ್ರಾಣ ಅಂತಾರಲ್ಲ! ಹಾಗೆಂದರೇನು ? ವಾಯುಪುತ್ರ ಆಂಜನೇಯನನ್ನು ಮುಖ್ಯಪ್ರಾಣ ದೇವ ಅಂತಾ ಸಂಬೋಧಿಸುವುದು ಏಕೆ?
TV9 Web
| Edited By: |

Updated on: Mar 03, 2022 | 6:06 AM

Share

ನೀವೆಂದರೆ ನನಗೆ ಪಂಚ ಪ್ರಾಣ ಅಂತಾರಲ್ಲ! ಹಾಗೆಂದರೇನು ? ಯಾರನ್ನು ಬಿಟ್ಟು ಜೀವಿಸಲು ಸಾಧ್ಯವಿಲ್ಲ ಎಂದು ಅಂದುಕೊಳ್ಳೊತ್ತೇವೋ ಅವರೇ ಪಂಚಪ್ರಾಣ! ಅಂದರೆ ಜೀವನದಲ್ಲಿ ಅವರು ಇಲ್ಲವೆಂದರೆ ಜೀವನ ಸಾಗದು ಎಂಬರ್ಥ. ಹಾಗೆಯೇ, ನಮ್ಮ ದೇಹದ ಅಸ್ತಿತ್ವವೂ ಪ್ರಾಣವಾಯು ಇರುವುದರಿಂದಲೇ ಸಾಧ್ಯವಾಗಿದೆ. ಆ ಪ್ರಾಣವಾಯುವೇ ಮುಖ್ಯಪ್ರಾಣ ದೇವ. ವಾಯುವಿನ ಅಂಶದಿಂದ ವಾಯುನಂದನ ಮತ್ತು ಕಪಿವೀರ ಕೇಸರಿಯ ಮಗನಾದ ಕಾರಣ ಕೇಸರಿನಂದನ, ವಾಯುಪುತ್ರ ಆಂಜನೇಯ ಎನ್ನಿಸಿಕೊಂಡ – ಅಂದರೆ ವಾನರನಾಗಿ ಅಂಜನೇಯ ಗರ್ಭದಲ್ಲಿ ಹುಟ್ಟಿ ಆಂಜನೇಯನೆನಿಸಿದ.

ಪ್ರತಿಯೊಂದು ಜೀವಿಯ ಅಸ್ತಿತ್ವವೂ ಪ್ರಾಣವಾಯು ಇರುವುದರಿಂದಲೇ ಸಾಧ್ಯ ಆದ್ದರಿಂದ ಆಂಜನೇಯ ಮುಖ್ಯಪ್ರಾಣನೆನಿಸಿದ. ಚಲನವು ಮಾರುತನ ಧರ್ಮ. ಪ್ರಾಣ, ಅಪಾನ, ಸಮಾನ, ಉದಾನ ಮತ್ತು ವ್ಯಾನಗಳು ಕೂಡ ಮಾರುತನ ರೂಪಗಳು. ಸ್ಪರ್ಶ ಇಂದ್ರಿಯ (ತ್ವಕ್) ಮತ್ತು ಸ್ಪರ್ಶ ಎಂಬ ಗುಣವೂ ಸಹ ಮಾರುತನಿಂದಲೇ ನಿಯಮಿಸಲ್ಪಡುವುದು.

ವಾಯು ಎಂದರೆ ಪ್ರಾಣಿ ಮಾತ್ರದ ಜೀವನಾಧಾರ ಶಕ್ತಿ. ಅನ್ನವಿಲ್ಲದೆ ಇರಬಹುದು, ನೀರಿಲ್ಲದೆ ದಿನ ದೂಡಬಹುದು; ಅದೇ ಗಾಳಿಯೇ ಇಲ್ಲದೆ ಕೆಲ ಗಳಿಗೆಯೂ ಬದುಕಿರುವುದು ಸಾಧ್ಯವಿಲ್ಲ. ವಾಯುವೆಂದರೆ ಪ್ರಾಣಶಕ್ತಿ. ಆದ್ದರಿಂದ ವಾಯುವಿನ ಮಗನಾದ ಹನುಮಂತನಿಗೆ ‘ಪ್ರಾಣದೇವರು’ ಎನ್ನುತ್ತಾರೆ. ಹನೂಮಂತ, ವಾಯಪುತ್ರ, ಪವನಸಂಭವ, ಮಾರುತಿ ಹೀಗೆ ಅನೇಕ ಹೆಸರುಗಳಿಂದ ಪ್ರಸಿದ್ಧನಾದವನು ಆಂಜನೇಯ.

ಮುಖ್ಯಪ್ರಾಣ ದೇವರು ಭಗವಂತನೊಂದಿಗೆ ನಮ್ಮ ಹೃದಯದಲ್ಲೇ ನೆಲೆಸಿದ್ದಾರೆ. ಎಲ್ಲಕ್ಕಿಂತ ವಿಶೇಷನಾಗಿ ನಮ್ಮ ಹೃತ್ಕಮಲ ಮಧ್ಯದಲ್ಲಿ ಸೂಕ್ಷಕ್ಕಿಂತ ಸೂಕ್ಷ್ಮನಾಗಿ ನೆಲೆಸಿದ್ದಾನೆ. ಆತನ ಇರುವಿಕೆಯ ಅರಿವನ್ನು ನಾವು ಭಕ್ತಿಪೂರ್ವಕ ಜ್ಞಾನದಿಂದ ಮಾತ್ರ ಅರಿಯಲು ಸಾಧ್ಯ. ಅರಿತವರಿಗೆ ಸಮೀಪವೂ, ಅರಿಯದವರಿಗೆ ಅತೀ ದೂರವು ಆಗಿದ್ದಾರೆ.

ನಮ್ಮ ಆತ್ಮವೇ ರಾಮ. ನಮ್ಮ ಮನಸ್ಸೇ ಸೀತೆ. ನಮ್ಮ ಉಸಿರೇ ಜೀವನದಾಯಿ ಪ್ರಾಣ ಎಂದರೆ ಹನುಮಂತ. ವೈಕುಂಠದಿಂದ ಬಂದು ನೀ ಪಂಪಾಕ್ಷೇತ್ರದಿ ನಿಂದು .. ಯಂತ್ರೋದ್ಧಾರಕನೆಂದೂ ಪುರಂದರ ವಿಠ್ಠಲ ಸಲಹೆಂದು… ಸ್ವಾಮಿ ಮುಖ್ಯಪ್ರಾಣ ನಿನ್ನ ಮರೆವರ ಗಂಟಲಗಾಣ.. ಪಿಡಿದ್ಯೋ ರಾಮರ ಚಾರಣ ನೀ ಹೌದೌದೋ ಜಗತ್ರಾಣ” ಇದು ನಾರದಾಂಶ ಸಂಭೂತರ ಭವ್ಯ ವರ್ಣನೆ.

ಒಂದು ಕೋಟಿ ಬೀಜ ಮಂತ್ರದಿಂದ ಸುತ್ಯಂತ್ರವ ಬರಿಸಿ ಅಂದು ಪ್ರಾಣ ಪ್ರತಿಷ್ಠೆಯ ಮಾಡಿ ನಿಂದಿಸಿದರು ನಿನ್ನ ಮಂದಹಾಸದಿ ವ್ಯಾಸ ಮುನಿಗಳು ಒಂದು ಕರದಲಿ ಜಪಮಾಲೆ ಒಂದು ಕರ ನಾಭಿ ಕೆಳಗೆ ಚಂದದಿಂದ ಪದುಮಾಸನದಿಂದ ಕುಳಿತು ನಿತ್ಯ ನಿತ್ಯಾನಂದ ವಿಜಯ ವಿಠಲನ್ನ ವಂದಿಸಿ ವರಗಳ ಕೊಡುತ, ಬಂದ ನರರ ಪಾಲಿಸುತ್ತ. ಈ ಮೇಲಿನ ಸಾಲುಗಳಲ್ಲಿ ಶ್ರೀ ವಿಜಯ ದಾಸರು ಆ ಪ್ರಾಣದೇವರ ಹಿರಿಮೆಯನ್ನು, ವ್ಯಾಸರಾಜರ ತಪೋಶಕ್ತಿಯನ್ನು ಹಾಡಿ ಕೊಂಡಾಡಿದ್ದಾರೆ.

ಶ್ರೀ ವ್ಯಾಸರಾಜರೇ ರಚಿಸಿರುವ ಶ್ರೀ ಯಂತ್ರೋದ್ಧಾರಕ ಪ್ರಾಣದೇವರ ಅಷ್ಟಕದಲ್ಲಿ ಕಂಡುಬರುವಂತೆ, ತಂತ್ರಸಾರೋಕ್ತ ವಿಧಿಗಳಿಂದ ಶ್ರೀ ವ್ಯಾಸರಾಜರಿಂದ ಪೂಜಿಸಲ್ಪಟ್ಟ ಪ್ರಾಣದೇವರು, ದೇಶದೇಶಗಳಿಂದ ಬರುವ ಭಕ್ತರಿಗೆ ಇಷ್ಟಾರ್ಥಗಳನ್ನು ಅನುಗ್ರಹಿಸುವುದಕ್ಕೆ ಶ್ರೀ ಹರಿಯೇ ಸಾಕ್ಷಿಯಾಗಿದ್ದಾನೆ.

ಹನುಮಂತ ಶಿವನ ಅಂಶಾವತಾರನಾಗಿದ್ದು ಅವನು 11 ನೇ ರುದ್ರನಾಗಿದ್ದಾನೆ. ಆ ದೃಷ್ಟಿಯಿಂದಲೂ ಹನುಮಂತ ಮುಖ್ಯಪ್ರಾಣನೇ ಯಾಕೆಂದರೆ… ಶರೀರದಲ್ಲಿರುವ ಪ್ರಾಣಾಪಾನಾದಿಗಳು ರುದ್ರನ ಸ್ವರೂಪ. ಮಹಾಭಾರತದಲ್ಲಿ ಶಿವನ ನಾಮಗಳನ್ನು ತಿಳಿಸುವಾಗ ಶಿವನೇ ಪ್ರಾಣಿಗಳ ಶರೀರದಲ್ಲಿ ಪ್ರಾಣಾಪಾನಾದಿ ಸಂಜ್ಞೆಗಳಿಂದ ಇರುವ ವಾಯು ಎಂದು ಹೇಳಲ್ಪಟ್ಟಿದೆ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ