AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ತಿಮ್ಮಪ್ಪನಿಗೆ ಕಲಿಯುಗದ ಭಕ್ತರು ಮುಡಿ ಕೊಡುತ್ತಾರೆ, ಏಕೆ? ಪುರಾಣ ಐತಿಹ್ಯ ಏನು?

Devotees of Kaliyuga tonsure heads to Tirupati: ಬಲಗಡೆ ಶ್ರೀ ವೆಂಕಟೇಶ್ವರ ಸ್ವಾಮಿಯ ತಲೆಯ ಮೇಲೆ ಹೊಡೆದ ಗಾಯ ಈಗಲೂ ಇದೆ! ಆ ಕಾರಣದಿಂದನೇ ಸ್ವಾಮಿ ತಲೆಗೆ ಗಂಧವನ್ನು ಹಚ್ಚುವ ಸಂಪ್ರದಾಯ ಕೂಡಾ ನಡೆದು ಬಂದಿದೆ! ಇಂತಹ ಅನೇಕ ಅಚ್ಚರಿ ಸಂಗತಿಗಳು ಈ ದೇವಾಲಯದಲ್ಲಿ ಅಡಗಿದೆ... ಭಗವಂತ ನೆಲೆಸಿರುವ ವೈಕುಂಠ ನಿವಾಸವೇ ಒಂದು ದೊಡ್ಡ ಅಚ್ಚರಿ.

ತಿರುಪತಿ ತಿಮ್ಮಪ್ಪನಿಗೆ ಕಲಿಯುಗದ ಭಕ್ತರು ಮುಡಿ ಕೊಡುತ್ತಾರೆ, ಏಕೆ? ಪುರಾಣ ಐತಿಹ್ಯ ಏನು?
ತಿಮ್ಮಪ್ಪನಿಗೆ ಭಕ್ತರು ಮುಡಿ ಸಮರ್ಪಣೆ ಯಾಕೆ ಮಾಡುತ್ತಾರೆ?
ಸಾಧು ಶ್ರೀನಾಥ್​
|

Updated on: Oct 05, 2024 | 2:02 AM

Share

Miracle of Tirupati temple: ಅಪಾರ ಸ್ಥಳ ಮಹಾತ್ಮೆ ಹೊಂದಿರುವ ತಿರುಪತಿ ಬಳಿಯ ತಿರುಮಲ ಬೆಟ್ಟದಲ್ಲಿ ನೆಲೆಗೊಂಡಿರುವ ವೆಂಕಟರಮಣ ಸ್ವಾಮಿಯ ವಿಗ್ರಹ ಸಂಪೂರ್ಣವಾಗಿ ಸ್ವಯಂ ಉದ್ಭವಮೂರ್ತಿ. ಇದನ್ನು ಯಾರೂ ಸ್ಥಾಪನೆ ಮಾಡಿಲ್ಲ. ಈ ಹಿಂದೆ ತಿರುಪತಿ ತಿಮ್ಮಪ್ಪ ಹುತ್ತದಲ್ಲಿರುವಾಗ, ಸಾಕ್ಷಾತ್ ಈಶ್ವರನೇ ಹಸುವಿನ ರೂಪದಲ್ಲಿ ಬಂದು ಹಾಲುಣಿಸುತ್ತಿರುತ್ತಾನೆ.

ರಾಜಾ ಚೋಳನ ಅರಮನೆ ಹಸುಗಳನ್ನ ನೋಡಿಕೊಳ್ಳುತ್ತಿದ್ದ ದನಗಾಹಿಗೆ ಈ ಕಾಮಧೇನು ಹೆಸರಿನ ಹಸು ಹಾಲು ಕೊಡದೇ ಇದ್ದುದು ಅನುಮಾನಕ್ಕೆ ಕಾರಣವಾಗುತ್ತದೆ. ಒಂದು ದಿನ, ಆ ಹಸುವನ್ನು ಮರೆಯಿಂದ ಹಿಂಬಾಲಿಸಿಕೊಂಡು ಹೋಗುತ್ತಾನೆ. ಆಗ ಕಾಮಧೇನು, ಹುತ್ತದಲ್ಲಿದ್ದ ಶ್ರೀನಿವಾಸನಿಗೆ ಹಾಲು ಎರೆಯುತ್ತಿರುತ್ತಾಳೆ. ಕೋಪಗೊಂಡ ದನಗಾಹಿ, ತನ್ನ ಕೊಡಲಿಯಿಂದ ಹಸುವನ್ನ ಹೊಡೆಯೋಕೆ ಮುಂದಾಗ್ತಾನೆ. ಆಗ ಆ ಏಟು ಶ್ರೀನಿವಾಸನ ತಲೆಗೆ ಬೀಳುತ್ತದೆ!

Also Read: ದಸರಾ ಶಬ್ದದ ಉತ್ಪತ್ತಿ: ನವರಾತ್ರಿಯ ಬಗ್ಗೆ ಧರ್ಮಶಾಸ್ತ್ರ ಏನು ಹೇಳುತ್ತದೆ? ಈ ಹಿಂದೆ ಒಟ್ಟು ಎಷ್ಟು ನವರಾತ್ರಿಗಳನ್ನು ಆಚರಿಸುತ್ತಿದ್ದರು?

ಅನಂತರ, ಶ್ರೀನಿವಾಸನ ಪರಮ ಭಕ್ತೆ ನೀಲಾದೇವಿ, ತನ್ನ ಕೂದಲನ್ನೇ ಕತ್ತರಿಸಿ, ಶ್ರೀನಿವಾಸನಿಗೆ ಜೋಡಿಸುತ್ತಾಳೆ. ಆಗ ಶ್ರೀನಿವಾಸ, ನೀಲಾದೇವಿಗೆ ಒಂದು ವರ ನೀಡುತ್ತಾನೆ. ಕಲಿಯುಗದಲ್ಲಿ ಭಕ್ತರು, ನನ್ನ ಕ್ಷೇತ್ರಕ್ಕೆ ಬಂದು ಮುಡಿ ಸಮರ್ಪಣೆ ಮಾಡಲಿ. ಅವರು ಕೊಡುವ ತಲೆ ಕೂದಲಿನ ಮುಡಿ, ನಿನ್ನ ಮೂಲಕವೇ ನನಗೆ ಅರ್ಪಣೆಯಾಗಲಿ ಎಂದು.

ಈಗಲೂ, ಭಕ್ತರು ಕೊಡುವ ತಲೆ ಮುಡಿ, ನೀಲಾದೇವಿಯ ಮೂಲಕವೇ ಪರಮಾತ್ಮನಿಗೆ ಸಮರ್ಪಣೆ ಆಗುತ್ತದೆ ಎಂಬುದು ಪುರಾಣ ಐತಿಹ್ಯ. ಹೀಗೆ ನೀಲಾದೇವಿ, ಜೋಡಿಸಿದ ತಲೆಕೂದಲು ಈಗಲೂ, ಪರಮಾತ್ಮನ ಹಿಂಭಾಗದ ತಲೆಯಲ್ಲಿದೆ…

Also Read: Dasara 2024 – ದುರ್ಗಾ ದೇವಿಯನ್ನು ಶಮಿ ಎಲೆ-ಹೂವಿನಿಂದ ಪೂಜಿಸುತ್ತಾರೆ ಏಕೆ? ಬನ್ನಿ ಬನ್ನೀ ಮರದ ಮಹತ್ವ ತಿಳಿಯೋಣ

ಬಲಗಡೆ ಶ್ರೀ ವೆಂಕಟೇಶ್ವರ ಸ್ವಾಮಿಯ ತಲೆಯ ಮೇಲೆ ಹೊಡೆದ ಗಾಯ ಈಗಲೂ ಇದೆ! ಆ ಕಾರಣದಿಂದನೇ ಸ್ವಾಮಿ ತಲೆಗೆ ಗಂಧವನ್ನು ಹಚ್ಚುವ ಸಂಪ್ರದಾಯ ಕೂಡಾ ನಡೆದು ಬಂದಿದೆ! ಇಂತಹ ಅನೇಕ ಅಚ್ಚರಿ ಸಂಗತಿಗಳು ಈ ದೇವಾಲಯದಲ್ಲಿ ಅಡಗಿದೆ… ಭಗವಂತ ನೆಲೆಸಿರುವ ವೈಕುಂಠ ನಿವಾಸವೇ ಒಂದು ದೊಡ್ಡ ಅಚ್ಚರಿ. ಇನ್ನೂ ಎಷ್ಟೊಂದು ಅಚ್ಚರಿಗಳು ಆ ಬೆಟ್ಟಗಳಲ್ಲಿ ಅಡಗಿದೆಯೋ ಆ ತಿಮ್ಮಪ್ಪನೇ ಬಲ್ಲ!

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

(ಗಮನಿಸಿ: ಈ ಲೇಖನವು ರೂಢಿಗತ, ಜನಪ್ರಿಯ ನಂಬಿಕೆಗಳನ್ನು ಆಧರಿಸಿದೆ. ಈ ಸುದ್ದಿಯಲ್ಲಿ ಒಳಗೊಂಡಿರುವ ಮಾಹಿತಿ ಮತ್ತು ಸತ್ಯಗಳ ನಿಖರತೆಗೆ ಟಿವಿ9 ಜವಾಬ್ದಾರರಾಗಿರುವುದಿಲ್ಲ)

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ