AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wedding Rituals: ಮದುವೆಯಲ್ಲಿ ಹೆಚ್ಚಾಗಿ ವಧು ಕೆಂಪು ಬಣ್ಣದ ಸೀರೆ ಉಡೋದು ಯಾಕೆ ಗೊತ್ತಾ?

ಹಿಂದೂ ಮದುವೆಗಳಲ್ಲಿ ವಧು ಹೆಚ್ಚಾಗಿ ಕೆಂಪು ಬಣ್ಣದ ಸೀರೆ ಉಟ್ಟಿರುವುದನ್ನು ನೀವು ನೋಡಿರುತ್ತೀರಿ. ಯಾವುದೇ ಟ್ರೆಂಡ್​ ಬಂದರೂ ವಧುವಿನ ಸೀರೆಯ ವಿನ್ಯಾಸದಲ್ಲಿ ಬದಲಾವಣೆಯಾದರೂ, ಅದರ ಬಣ್ಣದಲ್ಲಿ ಇಂದಿಗೂ ಕೆಂಪು ಮೊದಲ ಆದ್ಯತೆಯಲ್ಲಿದೆ. ಆದ್ದರಿಂದ ಕೆಂಪು ಬಣ್ಣವನ್ನು ಆಯ್ಕೆ ಮಾಡಲು ಕಾರಣವೇನು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

Wedding Rituals: ಮದುವೆಯಲ್ಲಿ ಹೆಚ್ಚಾಗಿ ವಧು ಕೆಂಪು ಬಣ್ಣದ ಸೀರೆ ಉಡೋದು ಯಾಕೆ ಗೊತ್ತಾ?
ಕೆಂಪು ಸೀರೆ
ಅಕ್ಷತಾ ವರ್ಕಾಡಿ
|

Updated on: Dec 13, 2025 | 11:56 AM

Share

ಹಿಂದೂ ಧರ್ಮದ 16 ಸಂಸ್ಕಾರಗಳಲ್ಲಿ(ಷೋಡಶ) ಮದುವೆಯೂ ಒಂದು. ಪ್ರತಿ ಯುವತಿಯ ಜೀವನದಲ್ಲಿ ಇದು ಒಂದು ವಿಶೇಷ ಕ್ಷಣ. ಮದುವೆಯ ಸಮಯದಲ್ಲಿ, ವಧು ಉಡುಪಿನಿಂದ ಹಿಡಿದು ಮೇಕಪ್‌ವರೆಗೆ ಎಲ್ಲದಕ್ಕೂ ವಿಶೇಷವಾಗಿ ಗಮನಹರಿಸಲಾಗುತ್ತದೆ. ಅದರಂತೆ ವಿವಿಧ ರೀತಿಯಾದ ಶಾಸ್ತ್ರಗಳನ್ನು, ಸಂಪ್ರದಾಯಗಳನ್ನು ಅನುಸರಿಸಲಾಗುತ್ತದೆ. ಈ ಸಂಪ್ರದಾಯಗಳಲ್ಲೊಂದು ಕೆಂಪು ಬಣ್ಣದ ಸೀರೆ.

ಯಾವುದೇ ಫ್ಯಾಶನ್, ಟ್ರೆಂಡ್​ ಬಂದರೂನು ವಧುವಿನ ಸೀರೆಯ ವಿನ್ಯಾಸದಲ್ಲಿ ಬದಲಾವಣೆಯಾದರೂ, ಅದರ ಬಣ್ಣದಲ್ಲಿ ಇಂದಿಗೂ ಕೆಂಪು ಮೊದಲ ಆದ್ಯತೆಯಲ್ಲಿದೆ. ಹೌದು ಸಾಕಷ್ಟು ಮದುವೆಗಳಲ್ಲಿ ವಧು ಕೆಂಪು ಸೀರೆ ಉಟ್ಟಿರುವುದನ್ನು ನೀವು ನೋಡಿರುತ್ತೀರಿ. ಆದರೆ ಮದುವೆಯಂತಹ ಶುಭ ಮೂಹೂರ್ತಗಳಲ್ಲಿ ಕೆಂಪು ಬಣ್ಣವನ್ನು ಆಯ್ಕೆ ಮಾಡಲು ಕಾರಣವೇನು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಕೆಂಪು ಬಣ್ಣದ ಮಹತ್ವ:

ಹಿಂದೂ ಧರ್ಮದಲ್ಲಿ, ಕೆಂಪು ಬಣ್ಣವನ್ನು ಸಕಾರಾತ್ಮಕತೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಈ ಬಣ್ಣವನ್ನು ಶಕ್ತಿ, ಪ್ರೀತಿ ಮತ್ತು ಶೌರ್ಯದ ಸಂಕೇತವೆಂದು ಸಹ ಪರಿಗಣಿಸಲಾಗುತ್ತದೆ. ಅದಕ್ಕಾಗಿಯೇ ವಧುಗೆ ಕೆಂಪು ಬಣ್ಣದ ಸೀರೆಯನ್ನು ಉಡಿಸಲಾಗುತ್ತದೆ. ಇದಲ್ಲದೇ ಕೆಂಪು ಬಣ್ಣವು ಲಕ್ಷ್ಮಿ ದೇವಿಗೆ ಸಂಬಂಧಿಸಿದೆ. ಸಂಪತ್ತಿನ ದೇವತೆ ಮತ್ತು ಲಕ್ಷ್ಮಿ ಕೂಡ ಯಾವಾಗಲೂ ಕೆಂಪು ಬಟ್ಟೆಗಳನ್ನು ಧರಿಸಿರುತ್ತಾಳೆ. ಮದುವೆಯ ನಂತರವೂ ವಧುವನ್ನು ಲಕ್ಷ್ಮಿ ದೇವಿಯ ಸಾಕಾರವೆಂದು ಪರಿಗಣಿಸಲಾಗುತ್ತದೆ. ಕೆಂಪು ಬಣ್ಣ ವಧುವಿಗೆ ಅದೃಷ್ಟ ಮತ್ತು ಸಮೃದ್ಧಿ ಬರುತ್ತದೆ ಎಂದು ನಂಬಲಾಗಿದೆ.

ಇದನ್ನೂ ಓದಿ: ಲಿಂಗ ಭೈರವಿ ದೇವಾಲಯದಲ್ಲಿ ಸಮಂತಾ ಸರಳ ವಿವಾಹ; ಇಲ್ಲಿನ ಇಂಟರೆಸ್ಟಿಂಗ್​ ಸಂಗತಿ ಮತ್ತು ವಿವಾಹ ಪ್ರಕ್ರಿಯೆಯ ವಿವರ ಇಲ್ಲಿದೆ

ಕೆಂಪು ಬಣ್ಣವನ್ನು ಧಾರ್ಮಿಕ ಮತ್ತು ಆಧ್ಯಾತ್ಮಿಕ ದೃಷ್ಟಿಕೋನದಿಂದ ಶುಭವೆಂದು ಪರಿಗಣಿಸುವುದಲ್ಲದೆ, ಅದರ ಹಿಂದೆ ಮನೋವಿಜ್ಞಾನವೂ ಇದೆ. ಅನೇಕ ಜನರು ಕೆಂಪು ಬಣ್ಣವನ್ನು ಪ್ರೀತಿ, ಶಕ್ತಿ ಮತ್ತು ಶುಭದ ಸಂಕೇತವೆಂದು ಪರಿಗಣಿಸುತ್ತಾರೆ. ಅದಕ್ಕಾಗಿಯೇ ಮದುವೆಯಂತಹ ಶುಭ ಸಂದರ್ಭಗಳಲ್ಲಿ ಕೆಂಪು ಬಟ್ಟೆಗಳನ್ನು ಧರಿಸುವುದು ಒಳ್ಳೆಯ ಆರಂಭದ ಸಂಕೇತವೆಂದು ಹೇಳಲಾಗುತ್ತದೆ. ಇದಲ್ಲದೇ ಕೆಂಪು ಹೊಸ ಆರಂಭ, ಉತ್ಸಾಹ ಮತ್ತು ಅಭಿವೃದ್ಧಿಯನ್ನು ಪ್ರತಿನಿಧಿಸುತ್ತದೆ, ಸಂಪತ್ತನ್ನು ಹೆಚ್ಚಿಸುತ್ತದೆ. ಕೆಂಪು ಬಣ್ಣವು ಸಂತೋಷ ಮತ್ತು ಶಕ್ತಿಯನ್ನು ಹೆಚ್ಚಿಸುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು