AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಈ ದಿನ ತಪ್ಪಿಯೂ ಹುಳಿ ಪದಾರ್ಥ ಸೇವಿಸಬೇಡಿ; ಜ್ಯೋತಿಷ್ಯ ಸಲಹೆ ಇಲ್ಲಿದೆ

ಶುಕ್ರವಾರ ಮಹಾಲಕ್ಷ್ಮಿಗೆ ಮೀಸಲಾದ ದಿನ. ಈ ದಿನ ಹುಳಿ ಪದಾರ್ಥಗಳನ್ನು ಸೇವಿಸುವುದರಿಂದ ಧಾರ್ಮಿಕವಾಗಿ ಅಶುಭವೆಂದು ನಂಬಲಾಗಿದೆ. ಹುಳಿ ತ್ಯಜಿಸಿ ಪೂಜೆ ಸಲ್ಲಿಸುವುದರಿಂದ ಲಕ್ಷ್ಮಿಯ ಕೃಪೆಗೆ ಪಾತ್ರರಾಗಿ ಸಂಪತ್ತು, ಆರೋಗ್ಯ ಹಾಗೂ ಸೌಭಾಗ್ಯ ಪ್ರಾಪ್ತವಾಗುತ್ತದೆ. ಇದು ದೇಹ ಮತ್ತು ಮನಸ್ಸನ್ನು ಶುದ್ಧೀಕರಿಸುವ ಒಂದು ಧಾರ್ಮಿಕ ಆಚರಣೆಯಾಗಿದೆ ಎಂದು ಡಾ. ಬಸವರಾಜ್ ಗುರೂಜಿ ಸಲಹೆ ನೀಡಿದ್ದಾರೆ.

Daily Devotional: ಈ ದಿನ ತಪ್ಪಿಯೂ ಹುಳಿ ಪದಾರ್ಥ ಸೇವಿಸಬೇಡಿ; ಜ್ಯೋತಿಷ್ಯ ಸಲಹೆ ಇಲ್ಲಿದೆ
ಹುಳಿ ಪದಾರ್ಥ
ಅಕ್ಷತಾ ವರ್ಕಾಡಿ
|

Updated on: Jan 13, 2026 | 10:26 AM

Share

ಶುಕ್ರವಾರವು ಮಹಾಲಕ್ಷ್ಮಿಗೆ ಮೀಸಲಾದ ದಿನವಾಗಿದ್ದು, ಈ ದಿನದಂದು ಕೆಲವು ಆಚರಣೆಗಳನ್ನು ಪಾಲಿಸುವುದು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಶುಕ್ರವಾರದಂದು ಹುಳಿ ಪದಾರ್ಥಗಳನ್ನು ಸೇವಿಸುವುದರಿಂದ ದೂರವಿರುವುದು ಈ ಆಚರಣೆಗಳಲ್ಲಿ ಒಂದಾಗಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.

ಗುರೂಜಿಯವರು ಹೇಳುವಂತೆ, ಶುಕ್ರವಾರವನ್ನು ಮಹಾಲಕ್ಷ್ಮಿ, ಸಂಪತ್ತು ಮತ್ತು ಐಶ್ವರ್ಯದ ಅಧಿದೇವತೆಯ ದಿನವೆಂದು ಗುರುತಿಸಲಾಗುತ್ತದೆ. ಲಕ್ಷ್ಮಿಯು ಸಿಹಿ ಪದಾರ್ಥಗಳನ್ನು ಹೆಚ್ಚು ಇಷ್ಟಪಡುತ್ತಾಳೆ ಎಂಬ ನಂಬಿಕೆ ಇದೆ. ಆದ್ದರಿಂದ, ಈ ದಿನದಂದು ಆ ತಾಯಿಯ ಕೃಪೆ ಪಡೆಯಲು ಲಕ್ಷ್ಮಿ ಪೂಜೆ, ಕುಂಕುಮಾರ್ಚನೆ ನಡೆಸಲಾಗುತ್ತದೆ. ಈ ಪೂಜೆಗಳ ಸಂದರ್ಭದಲ್ಲಿ ಹುಳಿ ಆಹಾರವನ್ನು ಸೇವಿಸದೇ ಇರುವುದು ಶುಭವೆಂದು ಹೇಳಲಾಗುತ್ತದೆ. ಹುಣಸೆಹಣ್ಣು, ನಿಂಬೆಹಣ್ಣು, ಉಪ್ಪಿನಕಾಯಿ, ವಿನೆಗರ್, ಕಿತ್ತಳೆ ಹಣ್ಣುಗಳಂತಹ ಹುಳಿ ಪದಾರ್ಥಗಳನ್ನು ತ್ಯಜಿಸಿ ಪೂಜೆ ಮಾಡಿದರೆ ಮಹಾಲಕ್ಷ್ಮಿ ಶೀಘ್ರವಾಗಿ ಪ್ರಸನ್ನಳಾಗುತ್ತಾಳೆ.

ಧಾರ್ಮಿಕ ದೃಷ್ಟಿಕೋನದಿಂದ ಹುಳಿ ಪದಾರ್ಥಗಳನ್ನು ಸೇವಿಸುವುದು ದೇವರಿಗೆ ಅಗೌರವ ಸೂಚಿಸಿದಂತಾಗುತ್ತದೆ ಮತ್ತು ಧನಾತ್ಮಕ ಶಕ್ತಿಗಳು ನಮ್ಮಲ್ಲಿ ಪ್ರವೇಶಿಸುವುದಿಲ್ಲ ಎಂದು ನಂಬಲಾಗಿದೆ. ಉಪವಾಸದ ಪರಿಕಲ್ಪನೆಯೂ ಇದೇ ಆಚರಣೆಗೆ ಸಂಬಂಧಿಸಿದೆ. ವೈಜ್ಞಾನಿಕವಾಗಿ ಉಪವಾಸವು ದೇಹವನ್ನು ಶುದ್ಧೀಕರಿಸುತ್ತದೆ. ಧಾರ್ಮಿಕವಾಗಿ, ಇದು ಭಗವಂತನ ಕಡೆಗೆ ಒಲವು ಮೂಡಿಸುತ್ತದೆ. ಆಧ್ಯಾತ್ಮಿಕವಾಗಿ, ಇದು ಕೆಟ್ಟ ಗ್ರಹಗಳ ಪ್ರಭಾವವನ್ನು ದೂರ ಮಾಡಿ ಒಳ್ಳೆಯ ಗ್ರಹಗಳ ಅನುಗ್ರಹವನ್ನು ತರುತ್ತದೆ. ಸಂತೋಷಿ ಮಾತಾ ಪೂಜೆ ಮಾಡುವವರು ಸಹ ಹುಳಿ ಪದಾರ್ಥಗಳನ್ನು ತ್ಯಜಿಸುತ್ತಾರೆ.

ಇದನ್ನೂ ಓದಿ: ಮೃತ ವ್ಯಕ್ತಿ ನಿಮ್ಮ ಶತ್ರುವೇ ಆಗಿದ್ದರೂ ಅವರ ಬಗ್ಗೆ ಯಾಕೆ ಕೆಟ್ಟದಾಗಿ ಮಾತನಾಡಬಾರದು?

ಶುಕ್ರವಾರದಂದು ತುಪ್ಪದ ದೀಪ ಹಚ್ಚುವುದು, ಸಿಹಿ ನೈವೇದ್ಯ ಇಡುವುದು ಮತ್ತು ಹುಳಿ ಪದಾರ್ಥಗಳನ್ನು ಸೇವಿಸದೇ ಇರುವುದು ಪೂಜೆಯ ಫಲವನ್ನು ಹೆಚ್ಚಿಸುತ್ತದೆ. ಇದರಿಂದ ದೈವ ಕೃಪೆಗೆ ಪಾತ್ರರಾಗಿ ಆಸೆ ಆಕಾಂಕ್ಷೆಗಳು ಈಡೇರುತ್ತವೆ. ವಿಶೇಷವಾಗಿ ಮಹಿಳೆಯರಿಗೆ ದೀರ್ಘ ಸೌಮಾಂಗಲ್ಯ, ಶೀಘ್ರ ವಿವಾಹ, ಆರೋಗ್ಯದಲ್ಲಿ ಚೇತರಿಕೆ ಮತ್ತು ದೈವಿಕ ಪ್ರಭಾವಳಿ ಉಂಟಾಗುತ್ತದೆ ಎಂದು ನಂಬಲಾಗಿದೆ. ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಹುಳಿ ಪದಾರ್ಥಗಳನ್ನು ಮುಟ್ಟದೆ ಇರುವುದು ಬಹಳಷ್ಟು ಶುಭವನ್ನು ತರುತ್ತದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ;ಮೋದಿ ವಾಗ್ದಾಳಿ
ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ;ಮೋದಿ ವಾಗ್ದಾಳಿ
ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿಯ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ
ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿಯ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ
ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ
ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ
ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು
ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ