AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚಲಿತ ಯುಗಧರ್ಮಕ್ಕೆ ಹೆಚ್ಚು ಸಮಂಜಸ – ಪ್ರಾಣಿ ಪಶು ಪಕ್ಷಿಗಳಲ್ಲಿ ಇರುವ ಬುದ್ಧಿ ಮನುಷ್ಯರಲ್ಲಿ ಏಕೆ ಇಲ್ಲ!?

ತಾಯಿ ಪಾರಿವಾಳ ನಕ್ಕು ಹೇಳಿತು: ಮಗು ನಾವು ಅವರಿಗಿಂತ ಎತ್ತರದಲ್ಲಿದ್ದೇವೆ. ವಿಶಾಲವಾದ ಪ್ರಪಂಚದಲ್ಲಿ ಜೀವಿಸುತ್ತಿದೇವೆ ನಮ್ಮದು ನಿಷ್ಕಲ್ಮಶ ಸ್ವೇಚ್ಛಾ ಜಗತ್ತು. ಎಲ್ಲ ಜೀವಿಗಳಲ್ಲಿ ಮೇಧಾವಿಯಾದ ಮಾನವ ಮಾತ್ರ - ಕಣ್ಣಿಗೆ ಕಾಣದ ಅಮಾನವೀಯ ಕುಲ ಮತ ಜಾತಿ ಲಿಂಗ ವರ್ಗ ಎಂಬ ಗೋಡೆಯನ್ನು ನಿರ್ಮಿಸಿಕೊಂಡಿದ್ದಾನೆ.

ಪ್ರಚಲಿತ ಯುಗಧರ್ಮಕ್ಕೆ ಹೆಚ್ಚು ಸಮಂಜಸ - ಪ್ರಾಣಿ ಪಶು ಪಕ್ಷಿಗಳಲ್ಲಿ ಇರುವ ಬುದ್ಧಿ ಮನುಷ್ಯರಲ್ಲಿ ಏಕೆ ಇಲ್ಲ!?
ಇಂದಿನ ವರ್ತಮಾನಕ್ಕೊಂದು ಮಾರ್ಮಿಕ ಬರಹ ಇಲ್ಲಿದೆ - ಪ್ರಾಣಿ ಪಶು ಪಕ್ಷಿಗಳಲ್ಲಿರುವ ಬುದ್ಧಿ ಮನುಷ್ಯರಲ್ಲೇಕೆ ಇಲ್ಲ!?
TV9 Web
| Edited By: |

Updated on:Apr 16, 2022 | 3:25 PM

Share

ಒಂದು ಪಾರಿವಾಳದ ಗುಂಪು ಮಸೀದಿ ಮೇಲೆ ಗೂಡು ಕಟ್ಟಿಕೊಂಡು ವಾಸವಾಗಿದ್ದವು. ರಂಜಾನ್ ಬಂತು ಮಸೀದಿಗೆ ಸುಣ್ಣಬಣ್ಣ ಬಳಿಯಲು ಎಲ್ಲಾ ಸ್ವಚ್ಛಗೊಳಿಸತೊಡಗಿದರು. ಆಗ ಆ ಪಾರಿವಾಳಗಳು ಅಲ್ಲಿಂದ ಹಿಂದೂ ದೇವಾಲಯಕ್ಕೆ ಹೋಗಿ ವಾಸವಾದವು. ಕೆಲದಿನಗಳಲ್ಲಿ ದಸರಾ ಹಬ್ಬ ಬಂತು. ಅಲ್ಲಿಂದ ಪಾರಿವಾಳಗಳು ಹಾರಿಹೋಗಿ, ಚರ್ಚ್ ಮೇಲೆ ನೆಲೆಸಿದವು. ಕ್ರಿಸ್ ಮಸ್ ವೇಳೆಗೆ ಮತ್ತೆ ಮಸೀದಿಗೆ ನೆಲೆ ಬದಲಾಯಿಸಿದವು. ಒಂದು ದಿನ ಮಸೀದಿ ಮುಂದೆ ಕೋಮುಗಲಭೆ ನಡೆಯಿತು. ಆಗ ಅದನ್ನು ನೋಡಿದ ಮರಿ ಪಾರಿವಾಳವು ತಾಯಿ ಪಾರಿವಾಳವನ್ನು ಕೇಳಿತು… ಯಾರು ಅವರು ಬಡಿದಾಡಿಕೊಳ್ಳುತ್ತಿರುವುದು? (Why is the human race unable to live in harmony)

ತಾಯಿ ಪಾರಿವಾಳ ಹೇಳಿತು -ಅವರು ಮನುಷ್ಯರು ಮಗು. ಮರಿ ಪಾರಿವಾಳಕೇಳಿತು -ಯಾಕೆ ಅವರು ಜಗಳವಾಡುತ್ತಿದ್ದಾರೆ? ತಾಯಿ ಪಾರಿವಾಳ ವಿವರಿಸಿತು -ಮಸೀದಿಗೆ ಹೋಗುವವರು ಮುಸ್ಲಿಮರಂತೆ; ಗುಡಿಗೆ ಹೋಗುವವರು ಹಿಂದೂಗಳಂತೆ; ಚರ್ಚ್ ಗೆ ಹೋಗುವವರು ಕ್ರೈಸ್ತರಂತೆ. ಇದು ಅವರೊಳಗಿನ ಮತ-ಮತಗಳ ಸಂಘರ್ಷಣೆ.

ಮರಿ ಪಾರಿವಾಳಕ್ಕೆ ಆಶ್ಚರ್ಯವಾಯಿತು! ಮತ್ತು ಸ್ವಗತದಲ್ಲಿ ಹೇಳಿತು: ನಾವು ಕೂಡ ಮಸೀದಿ ಮೇಲೆ ವಾಸಿಸುತ್ತೇವೆ. ಗುಡಿ ಗುಂಡಾರಗಳ ಮೇಲೆ ವಾಸಿಸುತ್ತೇವೆ. ಚರ್ಚ್ ಮೇಲೆಯೂ ವಾಸಿಸುತ್ತೇವೆ! ನಾವು ಎಲ್ಲಿಗೇ ಹೋದರೂ ಕೂಡ ಪಾರಿವಾಳವೇ ಆಗಿದ್ದೇವೆ! ಆದರೆ ಈ ಮನುಷ್ಯರು ಯಾಕೆ ಹೀಗೆ? ಅವರು ಮನುಷ್ಯರು… ಎಲ್ಲಿಗೆ ಹೋದರೂ ಮನುಷ್ಯರೇ ಅಲ್ಲವೇ?

ಅದಕ್ಕೆ ತಾಯಿ ಪಾರಿವಾಳ ನಕ್ಕು ಹೇಳಿತು: ಮಗು ನಾವು ಅವರಿಗಿಂತ ಎತ್ತರದಲ್ಲಿದ್ದೇವೆ. ವಿಶಾಲವಾದ ಪ್ರಪಂಚದಲ್ಲಿ ಜೀವಿಸುತ್ತಿದೇವೆ ನಮ್ಮದು ನಿಷ್ಕಲ್ಮಶ ಸ್ವೇಚ್ಛಾ ಜಗತ್ತು. ಎಲ್ಲ ಜೀವಿಗಳಲ್ಲಿ ಮೇಧಾವಿಯಾದ ಮಾನವ ಮಾತ್ರ – ಕಣ್ಣಿಗೆ ಕಾಣದ ಅಮಾನವೀಯ ಕುಲ ಮತ ಜಾತಿ ಲಿಂಗ ವರ್ಗ ಎಂಬ ಗೋಡೆಯನ್ನು ನಿರ್ಮಿಸಿಕೊಂಡಿದ್ದಾನೆ.

ಎಲ್ಲವನ್ನೂ ಬಿಟ್ಟರೆ ಮಾತ್ರ ಅವನು ನಮ್ಮ ‘ಎತ್ತರ’ಕ್ಕೆ ಬರುತ್ತಾನೆ. ಇಂತಹ ಕೋಮು ಘರ್ಷಣೆಗಳು ಯಾವಾಗ ಅಂತ್ಯವಾಗುತ್ತವೆಯೊ ಅಂದು ಮನುಕುಲ ಸುಖವಾಗಿ ನೆಮ್ಮದಿಯಾಗಿ ಬದುಕುತ್ತದೆ. (ಮಾರ್ಮಿಕ ಬರಹ: ಆಶಾ ನಾಗಭೂಷಣ)

ಇದೂ ಓದಿ: Anjaneya Wedding: ವಾಯುಪುತ್ರ ಆಂಜನೇಯ ಸ್ವಾಮಿಯ ವೈವಾಹಿಕ ಜೀವನ ಮತ್ತು ಆತನ ಸುಪುತ್ರನ ಬಗ್ಗೆ ಇಲ್ಲಿದೆ ಮಾಹಿತಿ

ಇದೂ ಓದಿ: ಶಿವಮೊಗ್ಗ ಹರ್ಷ ಕೊಲೆಗೆ ಪ್ರತೀಕಾರವಾಗಿ ಕೊಲೆಗೆ ಸಂಚು; ಮತ್ತೊಂದು ಕೋಮುಗಲಭೆ ಸೃಷ್ಟಿಗೆ ಹೊಂಚು

Published On - 3:17 pm, Sat, 16 April 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ