ಸಂಜೆಯ ಹೊತ್ತು ಹೊಸ್ತಿಲಲ್ಲಿ ಕುಳಿತುಕೊಳ್ಳಬಾರದು ಎಂದು ಹೇಳುವುದೇಕೆ?

ಹಿಂದೂ ಧರ್ಮಗ್ರಂಥಗಳ ಪ್ರಕಾರ, ಮನೆಯ ಮುಖ್ಯ ಬಾಗಿಲು ತಾಯಿ ಲಕ್ಷ್ಮಿಗೆ ಸಂಬಂಧಿಸಿದ್ದು, ಲಕ್ಷ್ಮಿ ದೇವಿಯು ಸಂಜೆ ಮನೆಗೆ ಆಗಮಿಸುತ್ತಾಳೆ. ಅಂತಹ ಪರಿಸ್ಥಿತಿಯಲ್ಲಿ, ಯಾವುದೇ ವ್ಯಕ್ತಿಯು ಹೊಸ್ತಿಲಲ್ಲಿ ನಿಂತಿದ್ದರೆ ಅಥವಾ ಕುಳಿತಿದ್ದರೆ, ಆಗ ಲಕ್ಷ್ಮಿ ದೇವಿಯು ಹೊಸ್ತಿಲಿಂದ ಹಿಂತಿರುಗುತ್ತಾಳೆ ಎಂದು ನಂಬಲಾಗಿದೆ.

ಸಂಜೆಯ ಹೊತ್ತು ಹೊಸ್ತಿಲಲ್ಲಿ ಕುಳಿತುಕೊಳ್ಳಬಾರದು ಎಂದು ಹೇಳುವುದೇಕೆ?

Updated on: Dec 04, 2024 | 6:36 PM

ಬಿಡುವಿನ ವೇಳೆಯಲ್ಲಿ ಮನೆಯ ಹಿರಿಯರೊಂದಿಗೆ ಸಮಯ ಕಳೆಯಿರಿ. ಏಕೆಂದರೆ ಹಿರಿಯರು ತಮ್ಮ ಜೀವನದಲ್ಲಿ ಅನೇಕ ಏಳುಬೀಳುಗಳನ್ನು ಕಂಡಿರುತ್ತಾರೆ ಮತ್ತು ಅನುಭವದಿಂದ ಜ್ಞಾನವನ್ನು ಪಡೆದಿರುತ್ತಾರೆ. ಆದ್ದರಿಂದಲೇ ಹಿರಿಯರ ಬಳಿ ಅಪಾರ ಜ್ಞಾನ ಭಂಡಾರವಿರುತ್ತದೆ. ಸಂಜೆಯ ನಂತರ ಮನೆಬಾಗಿಲಲ್ಲಿ ನಿಂತಾಗ ಅಥವಾ ಕುಳಿತರೆ ಹಿರಿಯರು ಹೊಸ್ತಿಲಲ್ಲಿ ಕುಳಿತುಕೊಳ್ಳಬಾರದು ಎಂದು ಹೇಳುವುದನ್ನು ನೀವು ಗಮನಿಸಿರಬಹುದು. ಈ ರೀತಿ ಹೇಳಲು ಕಾರಣವೇನು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಸೂರ್ಯಾಸ್ತದ ನಂತರ ಹೊಸ್ತಿಲಲ್ಲಿ ಏಕೆ ಕುಳಿತುಕೊಳ್ಳಬಾರದು?

ಹಿಂದೂ ಧರ್ಮಗ್ರಂಥಗಳ ಪ್ರಕಾರ, ಮನೆಯ ಮುಖ್ಯ ಬಾಗಿಲು ತಾಯಿ ಲಕ್ಷ್ಮಿಗೆ ಸಂಬಂಧಿಸಿದ್ದು, ಲಕ್ಷ್ಮಿ ದೇವಿಯು ಸಂಜೆ ಮನೆಗೆ ಆಗಮಿಸುತ್ತಾಳೆ ಎಂದು ನಂಬಲಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಯಾವುದೇ ವ್ಯಕ್ತಿಯು ಹೊಸ್ತಿಲಲ್ಲಿ ನಿಂತಿದ್ದರೆ ಅಥವಾ ಕುಳಿತಿದ್ದರೆ, ಆಗ ಲಕ್ಷ್ಮಿ ದೇವಿಯು ಹೊಸ್ತಿಲಿಂದ ಹಿಂತಿರುಗುತ್ತಾಳೆ ಎಂದು ನಂಬಲಾಗಿದೆ.

ಇದನ್ನೂ ಓದಿ: Vastu Tips: ಈ ಮೂರು ವಸ್ತುಗಳನ್ನು ಯಾರ ಮನೆಯಿಂದಲೂ ತರಬೇಡಿ

ಆದ್ದರಿಂದ, ಸಂಜೆ ಹೊಸ್ತಿಲಲ್ಲಿ ಕುಳಿತುಕೊಳ್ಳುವ ಅಭ್ಯಾಸ ಬಿಟ್ಟುಬಿಡಿ. ಇದಲ್ಲದೇ ಬೂಟುಗಳು ಮತ್ತು ಚಪ್ಪಲಿಗಳನ್ನು ಮನೆಯ ಬಾಗಿಲಿನ ಮುಂದೆಯೇ ಇಡಬೇಡಿ. ಹೀಗೆ ಮಾಡುವುದರಿಂದ ಮನೆಯಲ್ಲಿ ಆರ್ಥಿಕ ಸಂಕಷ್ಟ ಎದುರಾಗುತ್ತದೆ ಎಂದು ನಂಬಲಾಗಿದೆ. ಸಂಜೆ ಮನೆಯ ಮುಖ್ಯ ದ್ವಾರದಲ್ಲಿ ದೀಪವನ್ನು ಹಚ್ಚಿ ಮತ್ತು ಸಾಧ್ಯವಾದರೆ ಸಂಜೆ ಮುಖ್ಯ ದ್ವಾರವನ್ನು ತೆರೆದಿಡಿ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us