Rafael Nadal: 22 ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳೊಂದಿಗೆ ವೃತ್ತಿಪರ ಟೆನಿಸ್​ಗೆ ವಿದಾಯ ಹೇಳಿದ ರಾಫೆಲ್ ನಡಾಲ್

Rafael Nadal: ಟೆನಿಸ್ ಲೋಕದ ಅನಭಿಷಕ್ತ ದೊರೆ ರಾಫೆಲ್ ನಡಾಲ್ ವೃತ್ತಿ ಬದುಕಿಗೆ ವಿದಾಯ ಘೋಷಿಸಿದ್ದಾರೆ. 38 ನೇ ವಯಸ್ಸಿನಲ್ಲಿ ತಮ್ಮ ನೆಚ್ಚಿನ ಕ್ರೀಡೆಗೆ ವಿದಾಯ ಹೇಳಲು ನಿರ್ಧರಿಸಿರುವ ಸ್ಪೇನ್‌ನ ದಿಗ್ಗಜ ಟೆನಿಸ್ ಆಟಗಾರ ನಡಾಲ್, ತಮ್ಮ ಈ ನಿವೃತ್ತಿಯ ನಿರ್ಧಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Rafael Nadal: 22 ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳೊಂದಿಗೆ ವೃತ್ತಿಪರ ಟೆನಿಸ್​ಗೆ ವಿದಾಯ ಹೇಳಿದ ರಾಫೆಲ್ ನಡಾಲ್
ರಾಫೆಲ್ ನಡಾಲ್
Follow us
|

Updated on:Oct 10, 2024 | 4:56 PM

ಟೆನಿಸ್ ಲೋಕದ ಅನಭಿಷಕ್ತ ದೊರೆ ರಾಫೆಲ್ ನಡಾಲ್ ವೃತ್ತಿ ಬದುಕಿಗೆ ವಿದಾಯ ಘೋಷಿಸಿದ್ದಾರೆ. 38 ನೇ ವಯಸ್ಸಿನಲ್ಲಿ ತಮ್ಮ ನೆಚ್ಚಿನ ಕ್ರೀಡೆಗೆ ವಿದಾಯ ಹೇಳಲು ನಿರ್ಧರಿಸಿರುವ ಸ್ಪೇನ್‌ನ ದಿಗ್ಗಜ ಟೆನಿಸ್ ಆಟಗಾರ ನಡಾಲ್, ತಮ್ಮ ಈ ನಿವೃತ್ತಿಯ ನಿರ್ಧಾರವನ್ನು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹರಿಬಿಡುವ ಮೂಲಕ ಹಂಚಿಕೊಂಡಿದ್ದಾರೆ. ತಮ್ಮ ವೃತ್ತಿಜೀವನದಲ್ಲಿ 22 ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದಿರುವ ನಡಾಲ್, ನವೆಂಬರ್​ನಲ್ಲಿ ನಡೆಯಲಿರುವ ಡೇವಿಸ್ ಕಪ್ ಫೈನಲ್ ಪಂದ್ಯದ ನಂತರ ನಿವೃತ್ತಿಯಾಗುವುದಾಗಿ ಹೇಳಿಕೊಂಡಿದ್ದಾರೆ. ಡೇವಿಸ್ ಕಪ್ ಫೈನಲ್‌ನಲ್ಲಿ ಸ್ಪೇನ್, ನೆದರ್ಲೆಂಡ್ಸ್ ತಂಡವನ್ನು ಎದುರಿಸಲಿದ್ದು, ಈ ಪಂದ್ಯ ನವೆಂಬರ್ 19 ಮತ್ತು 21 ರ ನಡುವೆ ನಡೆಯಲಿದೆ.

ಈ ಬಗ್ಗೆ ವಿಡಿಯೋ ರಿಲೀಸ್ ಮಾಡಿರುವ ನಡಾಲ್, ‘ನಾನು ವೃತ್ತಿಪರ ಟೆನಿಸ್‌ನಿಂದ ನಿವೃತ್ತಿಯಾಗುತ್ತಿದ್ದೇನೆ. ಕಳೆದ ಕೆಲವು ವರ್ಷಗಳಿಂದ ತುಂಬಾ ಕಷ್ಟವಾಗಿತ್ತು. ಅದರಲ್ಲೂ ಕಳೆದ ಎರಡು ವರ್ಷಗಳು ಸವಾಲಿನಿಂದ ಕೂಡಿದ್ದವು. ಇದು ತುಂಬಾ ಕಠಿಣ ನಿರ್ಧಾರ. ಆದರೆ ಜೀವನದ ಪ್ರತಿಯೊಂದು ಆರಂಭಕ್ಕೂ ಅಂತ್ಯವಿದೆ. ನನ್ನ ವೃತ್ತಿಜೀವನವನ್ನು ಕೊನೆಗೊಳಿಸಲು ಇದು ಸರಿಯಾದ ಸಮಯ ಎಂದು ನಾನು ಭಾವಿಸುತ್ತೇನೆ. ಇಷ್ಟು ಸುದೀರ್ಘ ವೃತ್ತಿಜೀವನವನ್ನು ನಾನು ಊಹಿಸಿರಲಿಲ್ಲ. ಈಗ ನನ್ನ ಕೊನೆಯ ಪಂದ್ಯದ ಬಗ್ಗೆ ತುಂಬಾ ಉತ್ಸುಕನಾಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಒಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದಿದ್ದ ನಡಾಲ್

ವಿಶ್ವದ ಶ್ರೇಷ್ಠ ಟೆನಿಸ್ ಆಟಗಾರರಲ್ಲಿ ಒಬ್ಬರಾಗಿರುವ ರಾಫೆಲ್ ನಡಾಲ್, ನೊವಾಕ್ ಜೊಕೊವಿಚ್ ನಂತರ ಅತಿ ಹೆಚ್ಚು ಗ್ರ್ಯಾಂಡ್ ಸ್ಲಾಮ್ ಗೆದ್ದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ. ನಡಾಲ್ ತಮ್ಮ ವೃತ್ತಿಜೀವನದಲ್ಲಿ 22 ಗ್ರ್ಯಾಂಡ್‌ಸ್ಲಾಮ್‌ಗಳನ್ನು ಗೆದ್ದಿದ್ದರೆ, ಜೊಕೊವಿಚ್ 24 ಗ್ರ್ಯಾಂಡ್‌ಸ್ಲಾಮ್‌ಗಳನ್ನು ಗೆದ್ದಿದ್ದಾರೆ. ಕ್ಲೇ ಕೋರ್ಟ್​ನ ಕಿಂಗ್ ಎಂತಲೇ ಖ್ಯಾತರಾಗಿದ್ದ ನಡಾಲ್, ತಮ್ಮ ವೃತ್ತಿಜೀವನದಲ್ಲಿ 14 ಫ್ರೆಂಚ್ ಓಪನ್‌ಗಳನ್ನು ಗೆದ್ದಿದ್ದಾರೆ. ಇದಲ್ಲದೆ, ಅವರು 4 ಬಾರಿ ಯುಎಸ್ ಓಪನ್ ಮತ್ತು ತಲಾ 2 ಬಾರಿ ವಿಂಬಲ್ಡನ್ ಮತ್ತು ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಇದರ ಜೊತೆಗೆ 2008 ರಲ್ಲಿ ನಡೆದ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿಯೂ ಸಿಂಗಲ್ಸ್ ವಿಭಾಗದಲ್ಲಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:32 pm, Thu, 10 October 24

ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಅದೃಷ್ಟ ಅಂದ್ರೆ ಇದಪ್ಪಾ..! 25 ಕೋಟಿ ರೂ. ಲಾಟರಿ ಗೆದ್ದ ಕನ್ನಡಿಗನ ಮನದ ಮಾತು
ಅದೃಷ್ಟ ಅಂದ್ರೆ ಇದಪ್ಪಾ..! 25 ಕೋಟಿ ರೂ. ಲಾಟರಿ ಗೆದ್ದ ಕನ್ನಡಿಗನ ಮನದ ಮಾತು
ಪುತ್ತಿಗೆ ಮಠದ ಹಳೆಯ ಅನುಯಾಯಿಯೇನೋ ಎಂಬಂತಿತ್ತು ರತನ್ ಟಾಟಾರ ವರ್ತನೆ!
ಪುತ್ತಿಗೆ ಮಠದ ಹಳೆಯ ಅನುಯಾಯಿಯೇನೋ ಎಂಬಂತಿತ್ತು ರತನ್ ಟಾಟಾರ ವರ್ತನೆ!
ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದ ದರ್ಶನ್; ಜೈಲಿಂದ ದಾಸ ಕೊಟ್ಟ ಸಿಗ್ನಲ್ ಏನು?
ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದ ದರ್ಶನ್; ಜೈಲಿಂದ ದಾಸ ಕೊಟ್ಟ ಸಿಗ್ನಲ್ ಏನು?
ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?
ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಸೋಮಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಸೋಮಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ
ಕೋರ್ಟ್ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಪ್ರದೋಶ್ ವಾಪಸ್
ಕೋರ್ಟ್ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಪ್ರದೋಶ್ ವಾಪಸ್
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!
ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ
ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ