AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia Test Series | ಮೆಲ್ಬರ್ನ್ ಪಂದ್ಯ ವೀಕ್ಷಿಸಿದ ಪ್ರೇಕ್ಷಕನೊಬ್ಬನಿಗೆ ಕೊರೊನಾ ಪಾಸಿಟಿವ್

ಮೆಲ್ಬರ್ನ್ ಟೆಸ್ಟ್ ಪಂದ್ಯವನ್ನು ಮೈದಾನದಲ್ಲಿ ವೀಕ್ಷಿಸಿದ ವ್ಯಕ್ತಿಯೊಬ್ಬನಿಗೆ ಕೊರೊನಾ ಸೋಂಕು ತಗುಲಿರುವುದು ಧೃಡಪಟ್ಟಿದೆ. ಆತ ಕುಳಿತಿದ್ದ ಭಾಗದಲ್ಲಿದ್ದ ಇತರ ಪ್ರೇಕ್ಷಕರು ಟೆಸ್ಟ್ ಮಾಡಿಸಿಕೊಳ್ಳುವಂತೆ ಮೆಲ್ಬರ್ನ್ ಕ್ರಿಕೆಟ್ ಕ್ಲಬ್ ಹೇಳಿಕೆಯೊಂದರಲ್ಲಿ ತಿಳಿಸಿದೆ.

India vs Australia Test Series | ಮೆಲ್ಬರ್ನ್ ಪಂದ್ಯ ವೀಕ್ಷಿಸಿದ ಪ್ರೇಕ್ಷಕನೊಬ್ಬನಿಗೆ ಕೊರೊನಾ ಪಾಸಿಟಿವ್
ಮೆಲ್ಬರ್ನ್​ ಕ್ರಿಕೆಟ್ ಗ್ರೌಂಡ್
ಅರುಣ್​ ಕುಮಾರ್​ ಬೆಳ್ಳಿ
|

Updated on:Jan 06, 2021 | 7:40 PM

Share

ಅಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಮ್ ಇಂಡಿಯಾದ ಸದಸ್ಯರು ಕೊಂಚ ವಿಚಲಿತರಾಗಬಹುದಾದ ಸಂಗತಿಯೊಂದು ಮೆಲ್ಬರ್ನ್​ನಲ್ಲಿ ವರದಿಯಾಗಿದೆ. ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ವೀಕ್ಷಿಸಿದ ವ್ಯಕ್ತಿಯೊಬ್ಬನಿಗೆ ಸೋಂಕು ತಗುಲಿರುವುದು ಧೃಡಪಟ್ಟಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮೆಲ್ಬರ್ನ್ ಕ್ರಿಕೆಟ್ ಕ್ಲಬ್ (ಎಮ್​ಸಿಸಿ) ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಡಿಸೆಂಬರ್ 27ರಂದು ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ (ಎಮ್​ಸಿಜಿ) ಭಾರತ ಮತ್ತು ಆಸ್ಟ್ರೇಲಿಯಾಗಳ ನಡುವೆ ನಡೆದ ಎರಡನೇ ಟೆಸ್ಟ್​ನ ಎರಡನೇ ದಿನದಾಟವನ್ನು ನೋಡಿದವರೆಲ್ಲ ಕೊವಿಡ್-19 ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ತಿಳಿಸಿದೆ.

‘ಡಿಸೆಂಬರ್ 27ರ ರವಿವಾರದಂದು ಎಮ್​ಸಿಜಿ ಜೋನ್ 5ರ ದಿ ಗ್ರೇಟರ್ ಸದರ್ನ್ ಸ್ಟ್ಯಾಂಡ್​ನಲ್ಲಿ ಮಧ್ಯಾಹ್ನ 12.30ರಿಂದ 3.30ರ ನಡುವಿನ ಸಮಯದಲ್ಲಿ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಟೆಸ್ಟ್​ ಪಂದ್ಯದ ಎರಡನೇ ದಿನದಾಟವನ್ನು ವೀಕ್ಷಿಸಿದವರು ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳುವುದು ಅತ್ಯವಶ್ಯಕವಾಗಿದೆ. ಆ ಸಮಯದಲ್ಲಿ ಪಂದ್ಯ ವೀಕ್ಷಿಸಿದ ವ್ಯಕ್ತಿಯೊಬ್ಬನಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಆ ಭಾಗದಲ್ಲಿ ಕುಳಿತು ಪಂದ್ಯ ನೋಡಿದವರು ಕೂಡಲೆ ಟೆಸ್ಟ್​ ಮಾಡಿಸಿಕೊಳ್ಳಬೇಕು ಮತ್ತು ರಿಸಲ್ಟ್ ನೆಗೆಟಿವ್ ಎಂದು ಖಾತ್ರಿಯಾಗುವವರೆಗೆ ತಮ್ಮನ್ನು ಐಸೊಲೇಟ್ ಮಾಡಿಕೊಳ್ಳಬೇಕು’ ಎಂದು ಎಮ್​ಸಿಸಿಯ ಅಧಿಕೃತ ಹೇಳಿಕೆ ತಿಳಿಸುತ್ತದೆ.

ಟೀಮ್ ಇಂಡಿಯಾದ ಸದಸ್ಯರು ಸಮಾಧಾನಪಟ್ಟುಕೊಳ್ಳಬಹುದಾದ ಅಂಶವೇನೆಂದರೆ ಅವರು ಮೆಲ್ಬರ್ನ್​ನಿಂದ ಸಿಡ್ನಿ ತಲುಪಿದ ಮೇಲೆ ಟೆಸ್ಟ್ ಮಾಡಲಾಗಿದ್ದು ಅವರೆಲ್ಲರ ರಿಸಲ್ಟ್ ನೆಗೆಟಿವ್ ಬಂದಿದೆ.

ಎಮ್​ಸಿಜಿಯಲ್ಲಿ ಸ್ಟೀವ್ ಸ್ಮಿತ್ ವಿಕೆಟ್​ ಪಡೆದು ಸಂಭ್ರಮಿಸುತ್ತಿರುವ ರವಿಚಂದ್ರನ್ ಅಶ್ವಿನ್

ಕೊವಿಡ್-19 ಪಿಡುಗಿನ ಕರಾಳ ಛಾಯೆ ಆಸ್ಟ್ರೇಲಿಯಾವನ್ನು ಬೆಂಬಿಡದೆ ಕಾಡುತ್ತಿರುವಂತಿದೆ. ಅಲ್ಲಿನ ಸರ್ಕಾರಗಳು ಸಾಕಷ್ಟು ಮುಂಜಾಗ್ರತೆಯ ಕ್ರಮಗಳನ್ನು ತೆಗೆದುಕೊಂಡರೂ ಅಲ್ಲಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ತಲೆದೋರುತ್ತಿವೆ. ಎಮ್​ಸಿಜಿಯನ್ನು ಪ್ರತಿದಿನದ ಆಟ ಕೊನೆಗೊಂಡ ನಂತರ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗುತ್ತಿತ್ತು ಎಂದು ಎಮ್​ಸಿಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

‘ಸೋಂಕಿತ ವ್ಯಕ್ತಿ ಪಂದ್ಯ ನೋಡುವಾಗ ಆತನಿಗೆ ಅದರ ಅರಿವಿರಲಿಲ್ಲ. ವಿಷಯ ನಮ್ಮ ಗಮನಕ್ಕೆ ಬಂದ ನಂತರ ನಾವು ಇಡೀ ಸ್ಟೇಡಿಯಂನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿದ್ದೇವೆ ಮತ್ತ ಪ್ರತಿನಿತ್ಯ ಅ ಕೆಲಸ ಜಾರಿಯಲ್ಲಿದೆ. ಪಂದ್ಯ ನಡೆಯುವಾಗಲೂ ಸ್ಟೇಡಿಯಂನ್ನು ದಿನದಾಟ ಕೊನೆಗೊಂಡ ನಂತರ ಸ್ಯಾನಿಟೈಸ್ ಮಾಡಲಾಗುತಿತ್ತು. ಮೈದಾನದ ಸುತ್ತ 275 ಸ್ಯಾನಿಟೈಸ್ ಕೇಂದ್ರಗಳನ್ನು ನಿರ್ಮಿಸಲಾಗಿತ್ತು,’ ಅಂತ ಎಮ್​ಸಿಸಿ ಹೇಳಿಕೆಯಲ್ಲಿ ತಿಳಿಸಿದೆ.

ಏತನ್ಮಧ್ಯೆ, ನ್ಯೂ ಸೌತ್ ವೇಲ್ಸ್ ಸರ್ಕಾರವು ಆಸ್ಟ್ರೇಲಿಯಾ ಮತ್ತು ಇಂಡಿಯಾ ನಡುವೆ ಸಿಡ್ನಿಯಲ್ಲಿ ಆರಂಭವಾಗಲಿರುವ ಮೂರನೆ ಟೆಸ್ಟ್​ ವೀಕ್ಷಿಸಲು ಎಸ್​ಸಿಜಿಗೆ ಬರುವ ಪ್ರತಿಯೊಬ್ಬ ವ್ಯಕ್ತಿ ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕೆಂದು ಹೇಳಿದೆ.

India vs Australia Test Series | 3ನೇ ಟೆ​ಸ್ಟ್​ಗೆ ಭಾರತ ತಂಡ ಪ್ರಕಟ; ಟೆಸ್ಟ್ ಕ್ರಿಕೆಟ್​ಗೆ ಸೈನಿ​ ಪಾದಾರ್ಪಣೆ

Published On - 5:26 pm, Wed, 6 January 21

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ