AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್ ಅಚ್ಚರಿ: ಡಿವಿಲಿಯರ್ಸ್​ ಅಭಿಮಾನಿಗಳಿಗೆ ಸಿಹಿ ಸುದ್ದಿ.. ಇಷ್ಟರಲ್ಲೇ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಮರಳಲಿದ್ದಾರೆ ಮಿ. 360!

AB de Villiers: ಐಪಿಎಲ್ ಸೀಸನ್ 14 ರ ಮೂಲಕ ತಾನು ಮೊದಲು ತನ್ನನ್ನು ತಾನು ಸಾಬೀತುಪಡಿಸಲು ಬಯಸುತ್ತೇನೆ ಎಂದು ಯಾವ ಡಿವಿಲಿಯರ್ಸ್ ಹೇಳಿದ್ದಾರೆ.

ಕ್ರಿಕೆಟ್ ಅಚ್ಚರಿ: ಡಿವಿಲಿಯರ್ಸ್​ ಅಭಿಮಾನಿಗಳಿಗೆ ಸಿಹಿ ಸುದ್ದಿ.. ಇಷ್ಟರಲ್ಲೇ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಮರಳಲಿದ್ದಾರೆ ಮಿ. 360!
ಎಬಿ ಡಿವಿಲಿಯರ್ಸ್​
Follow us
ಪೃಥ್ವಿಶಂಕರ
|

Updated on: Apr 16, 2021 | 9:12 PM

ದಕ್ಷಿಣ ಆಫ್ರಿಕಾ ತಂಡದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ ಬಳಿಕ ವಿಶ್ವದಾದ್ಯಂತ ಟಿ 20 ಲೀಗ್‌ಗಳಲ್ಲಿ ಅಬ್ಬರಿಸುತ್ತಿದ್ದಾರೆ. ಏಪ್ರಿಲ್ 9 ರಂದು ಪ್ರಾರಂಭವಾದ ಐಪಿಎಲ್‌ನಲ್ಲಿ ಎಬಿ ಡಿವಿಲಿಯರ್ಸ್ ಆರ್ಸಿಬಿ ಪರ ಮಿಂಚಿನ ಆಟ ಪ್ರದರ್ಶಿಸುತ್ತಿದ್ದಾರೆ. ಬೆಂಗಳೂರು ತಂಡವನ್ನು ಎಂತಹದೆ ಕಷ್ಟದ ಸ್ಥಿತಿಯಿಂದ ಮೇಲೆತ್ತುವ ತಾಕತ್ತು ಎಬಿಡಿಗಿದೆ. ಡಿವಿಲಿಯರ್ಸ್ ಕ್ರಿಕೆಟ್‌ನಿಂದ ನಿವೃತ್ತರಾದಾಗಿನಿಂದಲೂ, ಅವರು ಮತ್ತೆ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಹಿಂದುರುಗುವ ಬಗ್ಗೆ ನಿರಂತರವಾಗಿ ಮಾತನಾಡಲಾಗುತ್ತಿದೆ. ಈಗ ಟಿ 20 ವಿಶ್ವಕಪ್ ಹತ್ತಿರದಲ್ಲಿದೆ, ದಕ್ಷಿಣ ಆಫ್ರಿಕಾದ ತರಬೇತುದಾರ ಮಾರ್ಕ್ ಬೌಚರ್ ಅವರು ಡಿವಿಲಿಯರ್ಸ್ ಅವರೊಂದಿಗೆ ಪುನರಾಗಮನದ ಬಗ್ಗೆ ಮಾತನಾಡಿದ್ದೇನೆ ಎಂದು ಹೇಳುವ ಮೂಲಕ ಅಭಿಮಾನಿಗಳ ಭರವಸೆಯನ್ನು ಹೆಚ್ಚಿಸಿದ್ದಾರೆ.

ಕಳೆದ ಆವೃತ್ತಿಯಂತೆ, ಈ ಬಾರಿಯೂ ಡಿವಿಲಿಯರ್ಸ್ ಐಪಿಎಲ್‌ನಲ್ಲಿ ಉತ್ತಮ ಆರಂಭ ಮಾಡಿದ್ದಾರೆ. ಲೀಗ್‌ನ ಮೊದಲ ಪಂದ್ಯದಲ್ಲಿ ಅವರು ಮುಂಬೈ ಇಂಡಿಯನ್ಸ್ (ಎಂಐ) ವಿರುದ್ಧ 27 ಎಸೆತಗಳಲ್ಲಿ 48 ರನ್‌ಗಳ ನಿರ್ಣಾಯಕ ಇನ್ನಿಂಗ್ಸ್ ಆಡಿದರು, ಈ ಪಂದ್ಯವನ್ನು ಆರ್‌ಸಿಬಿ 2 ವಿಕೆಟ್‌ಗಳಿಂದ ಗೆದ್ದುಕೊಂಡಿತು. ಆದರೆ, ಎರಡನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ದೊಡ್ಡ ಇನ್ನಿಂಗ್ಸ್ ಆಡಲಿಲ್ಲ ಮತ್ತು 1 ರನ್ ಗಳಿಸುವ ಮೂಲಕ ಔಟಾದರು.

ಐಪಿಎಲ್​ನಲ್ಲಿನ ಪ್ರದರ್ಶನದ ಮೇಲೆ ನಿರ್ಧಾರ ದಕ್ಷಿಣ ಆಫ್ರಿಕಾದ ಮಾಜಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಮಾರ್ಕ್ ಬೌಚರ್ ಮಾತನಾಡುತ್ತಾ, ‘ಐಪಿಎಲ್ ನಂತಹ ದೊಡ್ಡ ಪಂದ್ಯಾವಳಿಯಲ್ಲಿ ಆಡಲು ಹೋಗುವ ಮೊದಲು, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನಿವೃತ್ತಿಯಿಂದ ಹಿಂದಿರುಗುವ ಬಗ್ಗೆ ನಾನು ಅವರೊಂದಿಗೆ ಮಾತನಾಡಿದೆ. ಐಪಿಎಲ್ ಸೀಸನ್ 14 ರ ಮೂಲಕ ತಾನು ಮೊದಲು ತನ್ನನ್ನು ತಾನು ಸಾಬೀತುಪಡಿಸಲು ಬಯಸುತ್ತೇನೆ ಎಂದು ಯಾವ ಡಿವಿಲಿಯರ್ಸ್ ಹೇಳಿದ್ದಾರೆ. ಆ ಮೂಲಕ ವಿಶ್ವ ಕ್ರಿಕೆಟ್‌ನಲ್ಲಿ ಈಗಲೂ ತಾನೊಬ್ಬ ಕೀ ಆಟಗಾರ ಎಂಬುದು ಎಲ್ಲರಿಗೂ ಅರಿವಾಗಬೇಕು. ಈ ರೀತಿಯ ಪ್ರದರ್ಶನ ತೋರಬೇಕು ಎಂಬುದು ಎಬಿ ಡಿವಿಲಿಯರ್ಸ್ ಮನಸ್ಸಿನಲ್ಲಿದೆ. ಎಬಿಡಿ ಈ ರೀತಿಯ ಮನಸ್ಸು ಇರುವ ವ್ಯಕ್ತಿ ಎಂದು ಬೌಚರ್‌ ತಿಳಿಸಿದರು.

ಟಿ 20 ವಿಶ್ವಕಪ್ ಈ ವರ್ಷ ಭಾರತದಲ್ಲಿ ನಡೆಯಲಿದೆ ಕಳೆದ ವರ್ಷ ಆಸ್ಟ್ರೇಲಿಯಾದಲ್ಲಿ ನಡೆದ ಟಿ 20 ವಿಶ್ವಕಪ್ ಈ ವರ್ಷ ಭಾರತದಲ್ಲಿ ನಡೆಯಲಿದೆ. ಈ ಪ್ರಮುಖ ಪಂದ್ಯಾವಳಿಗಾಗಿ ತಮ್ಮ ತಯಾರಿಕೆಯ ಆಧಾರವಾಗಿ ಬಹುತೇಕ ಎಲ್ಲಾ ತಂಡಗಳು ಐಪಿಎಲ್ ಅನ್ನು ಪರಿಗಣಿಸುತ್ತಿವೆ. ಎಲ್ಲಾ ತಂಡಗಳ ಆಟಗಾರರು ತಮ್ಮನ್ನು ತಾವು ಸಾಬೀತುಪಡಿಸುವಲ್ಲಿ ನಿರತರಾಗಲು ಇದು ಕಾರಣವಾಗಿದೆ. ಏತನ್ಮಧ್ಯೆ, ಡಿವಿಲಿಯರ್ಸ್ ಐಪಿಎಲ್ನಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ಸ್ವತಃ ಸಾಬೀತುಪಡಿಸಿದರೆ, ಅವರ ಪುನರಾಗಮನವು ದಕ್ಷಿಣ ಆಫ್ರಿಕಾಕ್ಕೆ ಮುಖ್ಯವೆಂದು ಸಾಬೀತುಪಡಿಸಬಹುದು

ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ