AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಫುಟ್ಬಾಲ್ ಮಾಂತ್ರಿಕ ಸುನಿಲ್ ಛೆತ್ರಿಗೆ ಕೊರೊನಾ ವೈರಸ್ ಪಾಸಿಟಿವ್

ಪ್ರಖ್ಯಾತ ಫುಟ್ಬಾಲ್ ಆಟಗಾರ ಮತ್ತು ಭಾರತೀಯ ಸಾಕರ್ ಟೀಮಿನ ನಾಯಕ ಸುನಿಲ್ ಛೆತ್ರಿ ಅವರು ಕೊವಿಡ್​-19 ಸೋಂಕಿಗೊಳಗಾಗಿದ್ದಾರೆ. ಸೋಂಕು ತಗುಲಿರುವುದನ್ನು ಖುದ್ದು ಅವರೇ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ಆದರೆ ತಮ್ಮ ಆರೋಗ್ಯ ಚೆನ್ನಾಗಿದೆ ಮತ್ತು ಸೋಕಿನಿಂದ ಚೇತರಿಸಿಕೊಳ್ಳುತ್ತಿರುವುದಾಗಿ ಹೇಳಿರುವ ಅವರು ಆದಷ್ಟು ಬೇಗ ಫುಟ್ಬಾಲ್ ಮೈದಾನಕ್ಕೆ ಮರಳುವುದಾಗಿ ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ. ‘ಖುಷಿಯಿಂದ ಹೇಳಿಕೊಳ್ಳುವ ಸುದ್ದಿ ಇದಲ್ಲ. ನನಗೆ ಕೊವಿಡ್​-19 ಪಾಸಿಟಿವ್ ಎಂದು ಗೊತ್ತಾಗಿದೆ. ಆದರೆ ಒಳ್ಳೆಯ ಸುದ್ದಿ ಏನೆಂದರೆ ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದೇನೆ ಮತ್ತು ಅದಷ್ಟು ಬೇಗ ಫುಟ್ಬಾಲ್ […]

ಭಾರತದ ಫುಟ್ಬಾಲ್ ಮಾಂತ್ರಿಕ ಸುನಿಲ್ ಛೆತ್ರಿಗೆ ಕೊರೊನಾ ವೈರಸ್ ಪಾಸಿಟಿವ್
ಸುನಿಲ್ ಛೆತ್ರಿ
ಅರುಣ್​ ಕುಮಾರ್​ ಬೆಳ್ಳಿ
|

Updated on: Mar 11, 2021 | 9:36 PM

Share

ಪ್ರಖ್ಯಾತ ಫುಟ್ಬಾಲ್ ಆಟಗಾರ ಮತ್ತು ಭಾರತೀಯ ಸಾಕರ್ ಟೀಮಿನ ನಾಯಕ ಸುನಿಲ್ ಛೆತ್ರಿ ಅವರು ಕೊವಿಡ್​-19 ಸೋಂಕಿಗೊಳಗಾಗಿದ್ದಾರೆ. ಸೋಂಕು ತಗುಲಿರುವುದನ್ನು ಖುದ್ದು ಅವರೇ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ಆದರೆ ತಮ್ಮ ಆರೋಗ್ಯ ಚೆನ್ನಾಗಿದೆ ಮತ್ತು ಸೋಕಿನಿಂದ ಚೇತರಿಸಿಕೊಳ್ಳುತ್ತಿರುವುದಾಗಿ ಹೇಳಿರುವ ಅವರು ಆದಷ್ಟು ಬೇಗ ಫುಟ್ಬಾಲ್ ಮೈದಾನಕ್ಕೆ ಮರಳುವುದಾಗಿ ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ.

‘ಖುಷಿಯಿಂದ ಹೇಳಿಕೊಳ್ಳುವ ಸುದ್ದಿ ಇದಲ್ಲ. ನನಗೆ ಕೊವಿಡ್​-19 ಪಾಸಿಟಿವ್ ಎಂದು ಗೊತ್ತಾಗಿದೆ. ಆದರೆ ಒಳ್ಳೆಯ ಸುದ್ದಿ ಏನೆಂದರೆ ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದೇನೆ ಮತ್ತು ಅದಷ್ಟು ಬೇಗ ಫುಟ್ಬಾಲ್ ಮೈದಾನಕ್ಕೆ ವಾಪಸ್ಸಾಗುತ್ತೇನೆ, ಎಂದು ಛೆತ್ರಿ ಟ್ವೀಟ್​ ಮಾಡಿದ್ದಾರೆ.

‘ಯಾವಾಗಲೂ ಜಾಗರೂಕರಾಗಿರಿ ಮತ್ತು ಸುರಕ್ಷತೆ ಬಗ್ಗೆ ಮುನ್ನಚ್ಚೆರಿಕೆ ಕ್ರಮಗಳನ್ನು ನಿರ್ಲಕ್ಷ್ಯ ಮಾಡಬೇಡಿ ಅಂತ ಹೇಳಲು ಇದಕ್ಕಿಂತ ಒಳ್ಳೆ ಸಮಯ ಮತ್ತೊಂದಿಲ್ಲ,’ ಅಂತಲೂ ಅವರು ಹೇಳಿದ್ದಾರೆ.

ಪುಟ್ಬಾಲ್ ಪ್ರಿಯರಿಗೆ ಗೊತ್ತಿರುವ ಹಾಗೆ ಛೆತ್ರಿ ಇಂಡಿಯನ್ ಸೂಪರ್​ ಲೀಗ್ (ಐಎಸ್ಎಲ್) 7ನೇ ಸೀಸನ್​ನಲ್ಲಿ ಬೆಂಗಳುರು ಎಫ್​ಸಿ ಪರ ಆಡಿದ್ದರು. ಆದರೆ ಈ ಬಾರಿಯ ಸೀಸನ್ ಬೆಂಗಳೂರು ತಂಡಕ್ಕೆ ಒಳ್ಳೆಯದಾಗಿರಲಿಲ್ಲ. ಲೀಗ್ ಹಂತದಲ್ಲಿ ಅದು 7ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ಮಾರ್ಚ್​ 25 ಮತ್ತು 29ರಂದು ಕ್ರಮವಾಗಿ ಓಮನ್ ಮತ್ತು ಯುಎಈ ಜೊತೆ ಸ್ನೇಹಪರ ಪಂಧ್ಯಗಳನ್ನು ಆಡಲಿರುವ ಭಾರತ ತಂಡಕ್ಕೆ ಕಳೆದ ವಾರ ಪ್ರಕಟಿಸಿರುವ 35 ಸಂಭಾವ್ಯ ಆಟಗಾರರ ಪಟ್ಟಿಯಲ್ಲಿ ಛೆತ್ರಿ ಅವರ ಹೆಸರು ಕೂಡ ಇದೆ.

ಸಾಕರ್​ಗೆ ಸಂಬಂಧಿಸಿದಂತೆ ಹೇಳುವುದಾದರೆ ಛೆತ್ರಿ ನಿಸ್ಸಂದೇಹವಾಗಿ ಭಾರತದ ಸೂಪರ್ ಸ್ಟಾರ್. 2017-18 ಸಾಲಿನ ಐಎಸ್​ಎಲ್​ ಸೀಸನ್​ನಲ್ಲಿ ಅವರು ಅಪ್ರತಿಮ ಪ್ರದರ್ಶನಗಳನ್ನು ನೀಡಿ ‘ಹಿರೋ ಆಫ್ ದಿ ಲೀಗ್’ ಪ್ರಶಸ್ತಿಗೆ ಪಾತ್ರರಾಗಿದ್ದರು. ಹಾಗೇಯೇ, 2017 ಸಾಲಿಗೆ, ‘ಎಐಎಫ್ಎಫ್ ಪ್ಲೇಯರ್ ಅಫ್ ದಿ ಈಯರ್,’ ಪ್ರಶಸ್ತಿಯನ್ನೂ ಅವರಿಗೆ ನೀಡಲಾಗಿತ್ತು.

ಇದನ್ನೂ ಓದಿ: ಫುಟ್ಬಾಲ್​ ದಂತಕಥೆ ಪೀಲೆ ಸಾರ್ವಕಾಲಿಕ ದಾಖಲೆ ಮುರಿದ ಕಾಲ್ಚೆಂಡಿನ ಚತುರ ಲಿಯೋನೆಲ್ ಮೆಸ್ಸಿ

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!