ಭಾರತದ ಫುಟ್ಬಾಲ್ ಮಾಂತ್ರಿಕ ಸುನಿಲ್ ಛೆತ್ರಿಗೆ ಕೊರೊನಾ ವೈರಸ್ ಪಾಸಿಟಿವ್

ಪ್ರಖ್ಯಾತ ಫುಟ್ಬಾಲ್ ಆಟಗಾರ ಮತ್ತು ಭಾರತೀಯ ಸಾಕರ್ ಟೀಮಿನ ನಾಯಕ ಸುನಿಲ್ ಛೆತ್ರಿ ಅವರು ಕೊವಿಡ್​-19 ಸೋಂಕಿಗೊಳಗಾಗಿದ್ದಾರೆ. ಸೋಂಕು ತಗುಲಿರುವುದನ್ನು ಖುದ್ದು ಅವರೇ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ಆದರೆ ತಮ್ಮ ಆರೋಗ್ಯ ಚೆನ್ನಾಗಿದೆ ಮತ್ತು ಸೋಕಿನಿಂದ ಚೇತರಿಸಿಕೊಳ್ಳುತ್ತಿರುವುದಾಗಿ ಹೇಳಿರುವ ಅವರು ಆದಷ್ಟು ಬೇಗ ಫುಟ್ಬಾಲ್ ಮೈದಾನಕ್ಕೆ ಮರಳುವುದಾಗಿ ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ. ‘ಖುಷಿಯಿಂದ ಹೇಳಿಕೊಳ್ಳುವ ಸುದ್ದಿ ಇದಲ್ಲ. ನನಗೆ ಕೊವಿಡ್​-19 ಪಾಸಿಟಿವ್ ಎಂದು ಗೊತ್ತಾಗಿದೆ. ಆದರೆ ಒಳ್ಳೆಯ ಸುದ್ದಿ ಏನೆಂದರೆ ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದೇನೆ ಮತ್ತು ಅದಷ್ಟು ಬೇಗ ಫುಟ್ಬಾಲ್ […]

ಭಾರತದ ಫುಟ್ಬಾಲ್ ಮಾಂತ್ರಿಕ ಸುನಿಲ್ ಛೆತ್ರಿಗೆ ಕೊರೊನಾ ವೈರಸ್ ಪಾಸಿಟಿವ್
ಸುನಿಲ್ ಛೆತ್ರಿ
Follow us
|

Updated on: Mar 11, 2021 | 9:36 PM

ಪ್ರಖ್ಯಾತ ಫುಟ್ಬಾಲ್ ಆಟಗಾರ ಮತ್ತು ಭಾರತೀಯ ಸಾಕರ್ ಟೀಮಿನ ನಾಯಕ ಸುನಿಲ್ ಛೆತ್ರಿ ಅವರು ಕೊವಿಡ್​-19 ಸೋಂಕಿಗೊಳಗಾಗಿದ್ದಾರೆ. ಸೋಂಕು ತಗುಲಿರುವುದನ್ನು ಖುದ್ದು ಅವರೇ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ಆದರೆ ತಮ್ಮ ಆರೋಗ್ಯ ಚೆನ್ನಾಗಿದೆ ಮತ್ತು ಸೋಕಿನಿಂದ ಚೇತರಿಸಿಕೊಳ್ಳುತ್ತಿರುವುದಾಗಿ ಹೇಳಿರುವ ಅವರು ಆದಷ್ಟು ಬೇಗ ಫುಟ್ಬಾಲ್ ಮೈದಾನಕ್ಕೆ ಮರಳುವುದಾಗಿ ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ.

‘ಖುಷಿಯಿಂದ ಹೇಳಿಕೊಳ್ಳುವ ಸುದ್ದಿ ಇದಲ್ಲ. ನನಗೆ ಕೊವಿಡ್​-19 ಪಾಸಿಟಿವ್ ಎಂದು ಗೊತ್ತಾಗಿದೆ. ಆದರೆ ಒಳ್ಳೆಯ ಸುದ್ದಿ ಏನೆಂದರೆ ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದೇನೆ ಮತ್ತು ಅದಷ್ಟು ಬೇಗ ಫುಟ್ಬಾಲ್ ಮೈದಾನಕ್ಕೆ ವಾಪಸ್ಸಾಗುತ್ತೇನೆ, ಎಂದು ಛೆತ್ರಿ ಟ್ವೀಟ್​ ಮಾಡಿದ್ದಾರೆ.

‘ಯಾವಾಗಲೂ ಜಾಗರೂಕರಾಗಿರಿ ಮತ್ತು ಸುರಕ್ಷತೆ ಬಗ್ಗೆ ಮುನ್ನಚ್ಚೆರಿಕೆ ಕ್ರಮಗಳನ್ನು ನಿರ್ಲಕ್ಷ್ಯ ಮಾಡಬೇಡಿ ಅಂತ ಹೇಳಲು ಇದಕ್ಕಿಂತ ಒಳ್ಳೆ ಸಮಯ ಮತ್ತೊಂದಿಲ್ಲ,’ ಅಂತಲೂ ಅವರು ಹೇಳಿದ್ದಾರೆ.

ಪುಟ್ಬಾಲ್ ಪ್ರಿಯರಿಗೆ ಗೊತ್ತಿರುವ ಹಾಗೆ ಛೆತ್ರಿ ಇಂಡಿಯನ್ ಸೂಪರ್​ ಲೀಗ್ (ಐಎಸ್ಎಲ್) 7ನೇ ಸೀಸನ್​ನಲ್ಲಿ ಬೆಂಗಳುರು ಎಫ್​ಸಿ ಪರ ಆಡಿದ್ದರು. ಆದರೆ ಈ ಬಾರಿಯ ಸೀಸನ್ ಬೆಂಗಳೂರು ತಂಡಕ್ಕೆ ಒಳ್ಳೆಯದಾಗಿರಲಿಲ್ಲ. ಲೀಗ್ ಹಂತದಲ್ಲಿ ಅದು 7ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ಮಾರ್ಚ್​ 25 ಮತ್ತು 29ರಂದು ಕ್ರಮವಾಗಿ ಓಮನ್ ಮತ್ತು ಯುಎಈ ಜೊತೆ ಸ್ನೇಹಪರ ಪಂಧ್ಯಗಳನ್ನು ಆಡಲಿರುವ ಭಾರತ ತಂಡಕ್ಕೆ ಕಳೆದ ವಾರ ಪ್ರಕಟಿಸಿರುವ 35 ಸಂಭಾವ್ಯ ಆಟಗಾರರ ಪಟ್ಟಿಯಲ್ಲಿ ಛೆತ್ರಿ ಅವರ ಹೆಸರು ಕೂಡ ಇದೆ.

ಸಾಕರ್​ಗೆ ಸಂಬಂಧಿಸಿದಂತೆ ಹೇಳುವುದಾದರೆ ಛೆತ್ರಿ ನಿಸ್ಸಂದೇಹವಾಗಿ ಭಾರತದ ಸೂಪರ್ ಸ್ಟಾರ್. 2017-18 ಸಾಲಿನ ಐಎಸ್​ಎಲ್​ ಸೀಸನ್​ನಲ್ಲಿ ಅವರು ಅಪ್ರತಿಮ ಪ್ರದರ್ಶನಗಳನ್ನು ನೀಡಿ ‘ಹಿರೋ ಆಫ್ ದಿ ಲೀಗ್’ ಪ್ರಶಸ್ತಿಗೆ ಪಾತ್ರರಾಗಿದ್ದರು. ಹಾಗೇಯೇ, 2017 ಸಾಲಿಗೆ, ‘ಎಐಎಫ್ಎಫ್ ಪ್ಲೇಯರ್ ಅಫ್ ದಿ ಈಯರ್,’ ಪ್ರಶಸ್ತಿಯನ್ನೂ ಅವರಿಗೆ ನೀಡಲಾಗಿತ್ತು.

ಇದನ್ನೂ ಓದಿ: ಫುಟ್ಬಾಲ್​ ದಂತಕಥೆ ಪೀಲೆ ಸಾರ್ವಕಾಲಿಕ ದಾಖಲೆ ಮುರಿದ ಕಾಲ್ಚೆಂಡಿನ ಚತುರ ಲಿಯೋನೆಲ್ ಮೆಸ್ಸಿ

‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!