AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ವಾಲಾ ಗುಟ್ಟಾ ಜತೆ ಮದುವೆ ಯಾವಾಗ ಎನ್ನುವ ಗುಟ್ಟು ಬಿಟ್ಟುಕೊಟ್ಟ ವಿಷ್ಣು ವಿಶಾಲ್

ಜ್ವಾಲಾ ಆರನೇ ವಯಸ್ಸಿನಿಂದಲೇ ಬ್ಯಾಡ್ಮಿಂಟನ್ ಆಡಲು ಶುರು ಮಾಡಿದ್ದರು. ವಿಷ್ಣಯ ಸುಮಾರು 15 ಚಿತ್ರಗಳಲ್ಲಿ ಇವರು ನಟಿಸಿದ್ದಾರೆ. ವಿಷ್ಣು ಅವರು ಜ್ವಾಲಾಗಿಂತ ಎರಡು ವರ್ಷ ಚಿಕ್ಕವರು.

ಜ್ವಾಲಾ ಗುಟ್ಟಾ ಜತೆ ಮದುವೆ ಯಾವಾಗ ಎನ್ನುವ ಗುಟ್ಟು ಬಿಟ್ಟುಕೊಟ್ಟ ವಿಷ್ಣು ವಿಶಾಲ್
ಜ್ವಾಲಾ ಗುಟ್ಟಾ-ವಿಷ್ಣು ವಿಶಾಲ್​
ರಾಜೇಶ್ ದುಗ್ಗುಮನೆ
|

Updated on: Mar 22, 2021 | 7:45 PM

Share

ಭಾರತದ ಮಾಜಿ ಬ್ಯಾಡ್ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ ಅವರೊಂದಿಗೆ ನಿಶ್ವಿತಾರ್ಥ ಮಾಡಿಕೊಂಡಿರುವುದಾಗಿ ತಮಿಳು ನಟ ಮತ್ತು ನಿರ್ಮಾಪಕ ವಿಷ್ಣು ವಿಶಾಲ್ ಕಳೆದ ವರ್ಷ ಹೇಳಿದ್ದರು. ಆದರೆ, ಮದುವೆ ಯಾವಾಗ ಎನ್ನುವ ಗುಟ್ಟನ್ನು ಈ ಜೋಡಿ ಬಿಟ್ಟುಕೊಟ್ಟಿರಲಿಲ್ಲ. ಈಗ ಇವರು ಶೀಘ್ರವೇ ಮದುವೆ ಆಗಲಿದ್ದಾರಂತೆ. ಮದುವೆ ಬಗ್ಗೆ ಮಾತನಾಡಿರುವ ವಿಶಾಲ್, ನಾವು ಶೀಘ್ರದಲ್ಲೇ ಮದುವೆ ಆಗುತ್ತಿದ್ದೇವೆ. ನಾನು ಈಗ ತೆಲುಗು ಅಳಿಯನಾಗಲಿದ್ದೇನೆ. ಇದರ ಬಗ್ಗೆ ನನಗೆ ತುಂಬಾ ಸಂತೋಷ ಇದೆ. ಮದುವೆಯ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುತ್ತೇನೆ ಎಂದು ವಿಶಾಲ್ ಹೇಳಿದ್ದಾರೆ.  ಜ್ವಾಲಾ ಮತ್ತು ವಿಷ್ಣು ಇಬ್ಬರಿಗೂ ಇದು ಎರಡನೇ ವೈವಾಹಿಕ ಸಂಬಂಧವಾಗಿದೆ.

ಜ್ವಾಲಾ, ಮಾಜಿ ರಾಷ್ಟ್ರೀಯ ಚಾಂಪಿಯನ್ ಚೇತನ್ ಆನಂದ್ ಅವರನ್ನು 2005ರಲ್ಲಿ ಮದುವೆಯಾಗಿದ್ದರು. ಆದರೆ ಆರು ವರ್ಷಗಳ ನಂತರ ಕಾನೂನುಬದ್ಧವಾಗಿ ವಿಚ್ಛೇದನ ಪಡೆದು ಬೇರೆಯಾದರು. ನಾಲ್ಕು ಬಾರಿ ಪುರುಷರ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದ ಚೇತನ್ ಡಿವೋರ್ಸ್ ಪಡೆದ ಕೆಲ ತಿಂಗಳುಗಳ ನಂತರ ಸಾರದಾ ಗೋವರ್ಧಿನಿ ಜಸ್ಟಿ ಹೆಸರಿನ ಮಹಿಳಾ ಉದ್ಯಮಿಯನ್ನು ಮದುವೆಯಾಗಿ ಹೆಣ್ಣುಮಗುವೊಂದರ ತಂದೆ ಕೂಡ ಆಗಿದ್ದಾರೆ.

ಜ್ವಾಲಾ ಆರನೇ ವಯಸ್ಸಿನಿಂದಲೇ ಬ್ಯಾಡ್ಮಿಂಟನ್ ಆಡುವುದನ್ನು ಶುರು ಮಾಡಿದ್ದರು. ಆಕೆಯ ತಾಯಿ ಯೆಲೆನ್ ಗುಟ್ಟಾ ಭಾರತೀಯರಲ್ಲ, ಚೀನಾ ಮೂಲದವರು. ಯೆಲೆನ್​ರ ತಾತಾ, ತ್ಸೆಂಗ್ ನಮ್ಮ ರಾಷ್ಟ್ರಪಿತ ಮಹಾತ್ಮಾ ಅವರಿಂದ ಅದೆಷ್ಟು ಪ್ರಭಾವಿತರಾಗಿದ್ದರೆಂದರೆ, 1971 ರಲ್ಲಿ ಭಾರತಕ್ಕೆ ಬಂದಿದ್ದವರು, ಗಾಂಧಿಯವರ ಆತ್ಮಚರಿತ್ರೆಯನ್ನು ತಮ್ಮೊಂದಿಗೆ ಕೊಂಡೊಯ್ದು ಚೀನಾ ಭಾಷೆಗೆ ಅನುವಾದಿಸಿದರು.

ವಿಷ್ಣು ಅವರ ಮೊದಲನೇ ಹೆಂಡತಿಯಿಂದ ಒಬ್ಬ ಮಗನಿದ್ದಾನೆ. ಅಚ್ಚರಿ ಎಂದರೆ, ವಯಸ್ಸಿನಲ್ಲಿ ವಿಷ್ಣು ಅವರು ಜ್ವಾಲಾಗಿಂತ ಎರಡು ವರ್ಷ ಚಿಕ್ಕವರು. ಸುಮಾರು 15 ಚಿತ್ರಗಳಲ್ಲಿ ಇವರು ನಟಿಸಿದ್ದಾರೆ.

ಇದನ್ನೂ ಓದಿ: Jwala Gutta: ಟ್ರೋಲಿಗರಿಗೆ ಝಾಡಿಸಿದ ಜ್ವಾಲಾ ಗುಟ್ಟಾ, ಎರಡು ವರ್ಷಗಳ ನಂತರ ಮತ್ತೆ ವೈರಲ್​ ಆದ ವಿಡಿಯೋ

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!