AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಂಪತ್ಯ ಜೀವನಕ್ಕೆ ಕಾಲಿಟ್ಟ 19 ವರ್ಷದ ಕ್ರಿಕೆಟಿಗ​ ಮುಜೀಬ್​.. ಮದ್ವೆ ವಿಡಿಯೋ ಆಯ್ತು ಫುಲ್​ ವೈರಲ್​!

ದೂರದ ಅಫ್ಘಾನಿಸ್ತಾನದಿಂದ ಬಂದು IPLನಲ್ಲಿ ತನ್ನದೇ ಛಾಪು ಮೂಡಿಸಿದ ಕ್ರಿಕೆಟಿಗ ಮುಜೀಬ್ ಉರ್ ರಹಮಾನ್​ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹೌದು, ಕೇವಲ 19ರ ಪ್ರಾಯದ ಮುಜೀಬ್​ IPL ಮುಗಿಸಿ ತಮ್ಮ ಮನೆ ಸೇರುತ್ತಿದ್ದಂತೆಯೇ ಅವರ ವಿವಾಹದ ಸುದ್ದಿ ಹೊರಬಿದ್ದಿದೆ. ಇದೀಗ, ಮುಜೀಬ್​ ವಿವಾಹ ಸಂಭ್ರಮದಲ್ಲಿ ಅಫ್ಘಾನಿಸ್ತಾನದ ಸ್ಟಾರ್ ಕ್ರಿಕೆಟ್​ ಆಟಗಾರರು ಕುಣಿದು ಕುಪ್ಪಳಿಸಿರುವ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅತಿ ಕಿರಿಯ ವಯಸ್ಸಿನಲ್ಲೇ 20-20ಕ್ರಿಕೆಟ್ ಫಾರ್ಮ್ಯಾಟ್​ನ ಎರಡನೇ ಶ್ರೇಷ್ಠ ಸ್ಪಿನ್ ಬೌಲರ್ ಆಗಿ ಮುಜೀಬ್​ ಹೊರಹೊಮ್ಮಿದ್ದಾರೆ. […]

ದಾಂಪತ್ಯ ಜೀವನಕ್ಕೆ ಕಾಲಿಟ್ಟ 19 ವರ್ಷದ ಕ್ರಿಕೆಟಿಗ​ ಮುಜೀಬ್​.. ಮದ್ವೆ ವಿಡಿಯೋ ಆಯ್ತು ಫುಲ್​ ವೈರಲ್​!
KUSHAL V
|

Updated on: Nov 15, 2020 | 3:43 PM

Share

ದೂರದ ಅಫ್ಘಾನಿಸ್ತಾನದಿಂದ ಬಂದು IPLನಲ್ಲಿ ತನ್ನದೇ ಛಾಪು ಮೂಡಿಸಿದ ಕ್ರಿಕೆಟಿಗ ಮುಜೀಬ್ ಉರ್ ರಹಮಾನ್​ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹೌದು, ಕೇವಲ 19ರ ಪ್ರಾಯದ ಮುಜೀಬ್​ IPL ಮುಗಿಸಿ ತಮ್ಮ ಮನೆ ಸೇರುತ್ತಿದ್ದಂತೆಯೇ ಅವರ ವಿವಾಹದ ಸುದ್ದಿ ಹೊರಬಿದ್ದಿದೆ. ಇದೀಗ, ಮುಜೀಬ್​ ವಿವಾಹ ಸಂಭ್ರಮದಲ್ಲಿ ಅಫ್ಘಾನಿಸ್ತಾನದ ಸ್ಟಾರ್ ಕ್ರಿಕೆಟ್​ ಆಟಗಾರರು ಕುಣಿದು ಕುಪ್ಪಳಿಸಿರುವ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅತಿ ಕಿರಿಯ ವಯಸ್ಸಿನಲ್ಲೇ 20-20ಕ್ರಿಕೆಟ್ ಫಾರ್ಮ್ಯಾಟ್​ನ ಎರಡನೇ ಶ್ರೇಷ್ಠ ಸ್ಪಿನ್ ಬೌಲರ್ ಆಗಿ ಮುಜೀಬ್​ ಹೊರಹೊಮ್ಮಿದ್ದಾರೆ. IPL​ನಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡದಲ್ಲಿದ್ದರೂ ಮುಜೀಬ್​ಗೆ ಈ ಬಾರಿ ಹೆಚ್ಚಿನ ಅವಕಾಶ ಸಿಗಲಿಲ್ಲ. ಇದೀಗ, ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಿಗ್ ಬ್ಯಾಶ್ ಲೀಗ್​ನಲ್ಲಿ ಮುಜೀಬ್ ತಮ್ಮ ಟ್ಯಾಲೆಂಟ್​ ಪ್ರದರ್ಶಿಸುವ ವಿಶ್ವಾಸದಲ್ಲಿದ್ದಾರೆ.

21ನೇ ಶತಮಾನದಲ್ಲಿ ಜನಿಸಿ ಅಂತಾರಾಷ್ಟ್ರೀಯ ಕ್ರಿಕೆಟ್ ಲೋಕಕ್ಕೆ ಪಾದಾರ್ಪಣೆ ಮಾಡಿರುವ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಮುಜೀಬ್ ಪಾತ್ರರಾಗಿದ್ದಾರೆ. ತಮ್ಮ 16ನೇ ವಯಸ್ಸಿನಲ್ಲೇ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ 5 ವಿಕೆಟ್ ಪಡೆದಿರುವ ಸಾಧನೆ ಅವರದ್ದಾಗಿದೆ. ಮುಜೀಬ್ ಸಾಧನೆಯನ್ನು ಗುರುತಿಸಿದ ICC, ಅವರನ್ನು ಅಫ್ಘಾನಿಸ್ತಾನ ತಂಡದ ‘ರೈಸಿಂಗ್ ಸ್ಟಾರ್’ ಎಂದು ಸಹ ಘೋಷಿಸಿದೆ.

ಹಾಗಾಗಿ, ಇಷ್ಟು ಕಿರಿಯ ವಯಸ್ಸಿನಲ್ಲೇ ಸಾಧನೆಗೈದಿರುವ ಮುಜೀಬ್​ ಮದುವೆಯಾಗುವುದರಲ್ಲಿ ತಪ್ಪೇನು ಇಲ್ಲ ಎಂದು ಹಲವು ಕ್ರಿಕೆಟಿಗರು ಸಮರ್ಥಿಸಿಕೊಂಡಿದ್ದಾರೆ. ಅಂದ ಹಾಗೆ, ಅಫ್ಘಾನಿಸ್ತಾನದ ಸಂವಿಧಾನದ ಕಲಂ 70ರ ಪ್ರಕಾರ ಪುರುಷರು 18ನೇ ವಯಸ್ಸಿಗೆ ಮದುವೆಯಾಗಬಹುದು ಎಂದು ಉಲ್ಲೇಖಿಸಲಾಗಿದೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್