AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ರಸ್ತೆ ಅಪಘಾತ.. ಪ್ರಾಣ ಬಿಟ್ಟ ಅಫ್ಘಾನಿಸ್ತಾನ್ ಆಟಗಾರ!

29 ವರ್ಷ ವಯಸ್ಸಸಷ್ಟೇ.. ಈಗ ತಾನೇ ಅಫ್ಘಾನಿಸ್ತಾನ ತಂಡದಲ್ಲಿ ಖಾಯಂ ಸ್ಥಾನ ಗಳಿಸಿಕೊಂಡಿದ್ದ ಕ್ರಿಕೆಟಿಗ. ಅದ್ರಲ್ಲೂ ಅಫ್ಘಾನ್ ಟಿಟ್ವೆಂಟಿ ತಂಡದಲ್ಲಿ ಈತನ ಸದ್ದು ಜೋರಾಗಿತ್ತು. ಆದ್ರೀಗ ಈತ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ್ದಾನೆ. ನಜೀಬ್ ತರಕೈ.. ಅಫ್ಘಾನಿಸ್ತಾನ ತಂಡದ ಆರಂಭಿಕ ಬ್ಯಾಟ್ಸ್​ಮನ್. ಅಫ್ಘಾನ್ ಪರ 12 ಟಿಟ್ವೆಂಟಿ ಮತ್ತು 1 ಏಕದಿನ ಪಂದ್ಯವನ್ನಾಡಿರೋ ನಜೀಬ್ ಅಪಘಾತದಲ್ಲಿ ತನ್ನ ಪ್ರಾಣ ಕಳೆದುಕೊಂಡಿದ್ದಾನೆ. ತನ್ನದಲ್ಲದ ತಪ್ಪಿಗೆ ಪ್ರಾಣ ಚೆಲ್ಲಿದ ನಜೀಬ್! ನಿಜ.. ನಜೀಬ್ ತನ್ನದಲ್ಲದ ತಪ್ಪಿಗೆ ಪಾಪ ಪ್ರಾಣ ಕಳೆದುಕೊಂಡಿದ್ದಾನೆ. […]

ಭೀಕರ ರಸ್ತೆ ಅಪಘಾತ.. ಪ್ರಾಣ ಬಿಟ್ಟ ಅಫ್ಘಾನಿಸ್ತಾನ್ ಆಟಗಾರ!
ಆಯೇಷಾ ಬಾನು
|

Updated on: Oct 07, 2020 | 9:41 AM

Share

29 ವರ್ಷ ವಯಸ್ಸಸಷ್ಟೇ.. ಈಗ ತಾನೇ ಅಫ್ಘಾನಿಸ್ತಾನ ತಂಡದಲ್ಲಿ ಖಾಯಂ ಸ್ಥಾನ ಗಳಿಸಿಕೊಂಡಿದ್ದ ಕ್ರಿಕೆಟಿಗ. ಅದ್ರಲ್ಲೂ ಅಫ್ಘಾನ್ ಟಿಟ್ವೆಂಟಿ ತಂಡದಲ್ಲಿ ಈತನ ಸದ್ದು ಜೋರಾಗಿತ್ತು. ಆದ್ರೀಗ ಈತ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ್ದಾನೆ.

ನಜೀಬ್ ತರಕೈ.. ಅಫ್ಘಾನಿಸ್ತಾನ ತಂಡದ ಆರಂಭಿಕ ಬ್ಯಾಟ್ಸ್​ಮನ್. ಅಫ್ಘಾನ್ ಪರ 12 ಟಿಟ್ವೆಂಟಿ ಮತ್ತು 1 ಏಕದಿನ ಪಂದ್ಯವನ್ನಾಡಿರೋ ನಜೀಬ್ ಅಪಘಾತದಲ್ಲಿ ತನ್ನ ಪ್ರಾಣ ಕಳೆದುಕೊಂಡಿದ್ದಾನೆ.

ತನ್ನದಲ್ಲದ ತಪ್ಪಿಗೆ ಪ್ರಾಣ ಚೆಲ್ಲಿದ ನಜೀಬ್! ನಿಜ.. ನಜೀಬ್ ತನ್ನದಲ್ಲದ ತಪ್ಪಿಗೆ ಪಾಪ ಪ್ರಾಣ ಕಳೆದುಕೊಂಡಿದ್ದಾನೆ. ಶುಕ್ರವಾರ ನಜೀಬ್ ಜಲಾಲಾಬಾದ್ ಮಾರ್ಕೆಟ್​ನಿಂದ ಮನೆಗೆ ತೆರಳುತ್ತಿದ್ದ. ಈ ವೇಳೆ ರಸ್ತೆ ದಾಟುವಾಗ ವೇಗವಾಗಿ ಬಂದ ಕಾರೊಂದು ನಜೀಬ್​ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಜೀಬ್​ಗೆ ಗಂಭೀರ ಗಾಯವಾಗಿದೆ. ತಕ್ಷಣ ಸ್ಥಳೀಯರು ನಜೀಬ್​ನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ನಜೀಬ್, ಕೋಮಾಕ್ಕೆ ಜಾರಿದ್ದ. ಆದ್ರೀಗ ಕೋಮಾದಲ್ಲಿದ್ದ ನಜೀಬ್ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಸಾವನ್ನಪ್ಪಿದ್ದಾನೆ. ನಜೀಬ್ ಅಕಾಲಿಕ ಮರಣಕ್ಕೆ ಅಫ್ಘಾನ್ ಕ್ರಿಕೆಟ್ ಮಂಡಳಿ ಸಂತಾಪ ಸೂಚಿಸಿದೆ. ಇತ್ತ ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ ಈಗ ತಾನೇ ಸ್ಥಾನ ಮಾನ ಕಲ್ಪಿಸಿಕೊಂಡಿರೋ ಅಫ್ಘಾನ್ ಕ್ರಿಕೆಟ್​ಗೆ, ನಜೀಬ್ ಅಕಾಲಿಕ ಮರಣ ದೊಡ್ಡ ನಷ್ಟ ಅನ್ನೋದ್ರಲ್ಲಿ ಅನುಮಾನವೇ ಇಲ್ಲ.

ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ