AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ರಸ್ತೆ ಅಪಘಾತ.. ಪ್ರಾಣ ಬಿಟ್ಟ ಅಫ್ಘಾನಿಸ್ತಾನ್ ಆಟಗಾರ!

29 ವರ್ಷ ವಯಸ್ಸಸಷ್ಟೇ.. ಈಗ ತಾನೇ ಅಫ್ಘಾನಿಸ್ತಾನ ತಂಡದಲ್ಲಿ ಖಾಯಂ ಸ್ಥಾನ ಗಳಿಸಿಕೊಂಡಿದ್ದ ಕ್ರಿಕೆಟಿಗ. ಅದ್ರಲ್ಲೂ ಅಫ್ಘಾನ್ ಟಿಟ್ವೆಂಟಿ ತಂಡದಲ್ಲಿ ಈತನ ಸದ್ದು ಜೋರಾಗಿತ್ತು. ಆದ್ರೀಗ ಈತ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ್ದಾನೆ. ನಜೀಬ್ ತರಕೈ.. ಅಫ್ಘಾನಿಸ್ತಾನ ತಂಡದ ಆರಂಭಿಕ ಬ್ಯಾಟ್ಸ್​ಮನ್. ಅಫ್ಘಾನ್ ಪರ 12 ಟಿಟ್ವೆಂಟಿ ಮತ್ತು 1 ಏಕದಿನ ಪಂದ್ಯವನ್ನಾಡಿರೋ ನಜೀಬ್ ಅಪಘಾತದಲ್ಲಿ ತನ್ನ ಪ್ರಾಣ ಕಳೆದುಕೊಂಡಿದ್ದಾನೆ. ತನ್ನದಲ್ಲದ ತಪ್ಪಿಗೆ ಪ್ರಾಣ ಚೆಲ್ಲಿದ ನಜೀಬ್! ನಿಜ.. ನಜೀಬ್ ತನ್ನದಲ್ಲದ ತಪ್ಪಿಗೆ ಪಾಪ ಪ್ರಾಣ ಕಳೆದುಕೊಂಡಿದ್ದಾನೆ. […]

ಭೀಕರ ರಸ್ತೆ ಅಪಘಾತ.. ಪ್ರಾಣ ಬಿಟ್ಟ ಅಫ್ಘಾನಿಸ್ತಾನ್ ಆಟಗಾರ!
ಆಯೇಷಾ ಬಾನು
|

Updated on: Oct 07, 2020 | 9:41 AM

Share

29 ವರ್ಷ ವಯಸ್ಸಸಷ್ಟೇ.. ಈಗ ತಾನೇ ಅಫ್ಘಾನಿಸ್ತಾನ ತಂಡದಲ್ಲಿ ಖಾಯಂ ಸ್ಥಾನ ಗಳಿಸಿಕೊಂಡಿದ್ದ ಕ್ರಿಕೆಟಿಗ. ಅದ್ರಲ್ಲೂ ಅಫ್ಘಾನ್ ಟಿಟ್ವೆಂಟಿ ತಂಡದಲ್ಲಿ ಈತನ ಸದ್ದು ಜೋರಾಗಿತ್ತು. ಆದ್ರೀಗ ಈತ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ್ದಾನೆ.

ನಜೀಬ್ ತರಕೈ.. ಅಫ್ಘಾನಿಸ್ತಾನ ತಂಡದ ಆರಂಭಿಕ ಬ್ಯಾಟ್ಸ್​ಮನ್. ಅಫ್ಘಾನ್ ಪರ 12 ಟಿಟ್ವೆಂಟಿ ಮತ್ತು 1 ಏಕದಿನ ಪಂದ್ಯವನ್ನಾಡಿರೋ ನಜೀಬ್ ಅಪಘಾತದಲ್ಲಿ ತನ್ನ ಪ್ರಾಣ ಕಳೆದುಕೊಂಡಿದ್ದಾನೆ.

ತನ್ನದಲ್ಲದ ತಪ್ಪಿಗೆ ಪ್ರಾಣ ಚೆಲ್ಲಿದ ನಜೀಬ್! ನಿಜ.. ನಜೀಬ್ ತನ್ನದಲ್ಲದ ತಪ್ಪಿಗೆ ಪಾಪ ಪ್ರಾಣ ಕಳೆದುಕೊಂಡಿದ್ದಾನೆ. ಶುಕ್ರವಾರ ನಜೀಬ್ ಜಲಾಲಾಬಾದ್ ಮಾರ್ಕೆಟ್​ನಿಂದ ಮನೆಗೆ ತೆರಳುತ್ತಿದ್ದ. ಈ ವೇಳೆ ರಸ್ತೆ ದಾಟುವಾಗ ವೇಗವಾಗಿ ಬಂದ ಕಾರೊಂದು ನಜೀಬ್​ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಜೀಬ್​ಗೆ ಗಂಭೀರ ಗಾಯವಾಗಿದೆ. ತಕ್ಷಣ ಸ್ಥಳೀಯರು ನಜೀಬ್​ನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ನಜೀಬ್, ಕೋಮಾಕ್ಕೆ ಜಾರಿದ್ದ. ಆದ್ರೀಗ ಕೋಮಾದಲ್ಲಿದ್ದ ನಜೀಬ್ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಸಾವನ್ನಪ್ಪಿದ್ದಾನೆ. ನಜೀಬ್ ಅಕಾಲಿಕ ಮರಣಕ್ಕೆ ಅಫ್ಘಾನ್ ಕ್ರಿಕೆಟ್ ಮಂಡಳಿ ಸಂತಾಪ ಸೂಚಿಸಿದೆ. ಇತ್ತ ಅಂತರಾಷ್ಟ್ರೀಯ ಕ್ರಿಕೆಟ್​ನಲ್ಲಿ ಈಗ ತಾನೇ ಸ್ಥಾನ ಮಾನ ಕಲ್ಪಿಸಿಕೊಂಡಿರೋ ಅಫ್ಘಾನ್ ಕ್ರಿಕೆಟ್​ಗೆ, ನಜೀಬ್ ಅಕಾಲಿಕ ಮರಣ ದೊಡ್ಡ ನಷ್ಟ ಅನ್ನೋದ್ರಲ್ಲಿ ಅನುಮಾನವೇ ಇಲ್ಲ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ