AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾಟ್​ ಕಮ್ಮಿನ್ಸ್ ನಂತರ ಸೋಂಕಿತರ ನೆರವಿಗೆ ಧಾವಿಸಿರುವ ರಾಜಸ್ತಾನ್ ರಾಯಲ್ಸ್ ಫ್ರಾಂಚೈಸಿಯಿಂದ ರೂ 7.5 ಕೋಟಿ ನೆರವು

ಕೊಲ್ಕತಾ ನೈಟ್​ ರೈಡರ್ಸ್​ ಪರ ಆಡುವ ಪ್ಯಾಟ್​ ಕಮ್ಮಿನ್ಸ್ ಅವರು ಪಿ ಎಮ್​ ಕೇರ್ಸ್ ನಿಧಿಗೆ 50,000 ಡಾಲರ್​ಗಳ ದೇಣಿಗೆ ನೀಡಿದ ಒಂದು ದಿನದ ನಂತರ ರಾಜಸ್ತಾನ ರಾಯಲ್ಸ್​ ತನ್ನ ದೇಣಿಗೆಯನ್ನು ಪ್ರಕಟಿಸಿದೆ.

ಪ್ಯಾಟ್​ ಕಮ್ಮಿನ್ಸ್ ನಂತರ ಸೋಂಕಿತರ ನೆರವಿಗೆ ಧಾವಿಸಿರುವ ರಾಜಸ್ತಾನ್ ರಾಯಲ್ಸ್ ಫ್ರಾಂಚೈಸಿಯಿಂದ ರೂ 7.5 ಕೋಟಿ ನೆರವು
ರಾಜಸ್ತಾನ ರಾಯಲ್ಸ್
ಅರುಣ್​ ಕುಮಾರ್​ ಬೆಳ್ಳಿ
| Edited By: |

Updated on: Apr 29, 2021 | 9:28 PM

Share

ಇಂಡಿಯನ್ ಪ್ರಿಮೀಯರ್ ಲೀಗ್​ನ ಫ್ರಾಂಚೈಸಿಯಾಗಿರುವ ರಾಜಸ್ತಾನ್ ರಾಯಲ್ಸ್ ಒಂದು ರಾಯಲ್ ಧೋರಣೆಯನ್ನು ಪ್ರದರ್ಶಿಸಿ ಭಾರತದಲ್ಲಿ ಕೊವಿಡ್​ ಸೋಂಕಿನಿಂದ ನರಳುತ್ತಿರುವ ಜನರ ಚಿಕಿತ್ಸೆಗೆ 7.5 ಕೋಟಿ ರೂಪಾಯಿಗಳ ದೇಣಿಗೆಯನ್ನು ನೀಡಿದೆ. ‘ಭಾರತದಲ್ಲಿ ಕೊವಿಡ್​-19 ಸೋಂಕು ಭಯಾನಕವಾಗಿ ಹೆಚ್ಚಿದ್ದು ಅದರಿಂದ ಪೀಡಿತರಾಗಿರುವ ಜನರ ಚಿಕಿತ್ಸೆಗೆ 7.5 ಕೋಟಿ ರೂಪಾಯಿಗಳನ್ನು ದೇಣಿಗೆಯಾಗಿ ನೀಡಲು ರಾಜಸ್ತಾನ್ ರಾಯಲ್ಸ್​ಗೆ ತುಂಬಾ ಸಂತೋಷವೆನಿಸುತ್ತಿದೆ,’ ಎಂದು ಫ್ರಾಂಚೈಸಿ ಬಿಡುಗಡೆ ಮಾಡಿರುವ ಅಧಿಕೃತ ಪ್ರಕಟಣೆ ತಿಳಿಸುತ್ತದೆ. ರಾಯಲ್ಸ್ ಫ್ರಾಂಚೈಸಿಯು ತನ್ನ ಚಾರಿಟಿ ಸಂಸ್ಥೆಯಾಗಿರುವ ರಾಜಸ್ತಾನ್ ರಾಯಲ್ಸ್ ಫೌಂಡೇಶನ್ ಮತ್ತು ದಿ ಬ್ರಿಟಿಷ್ ಏಷ್ಯನ್ ಟ್ರಸ್ಟ್​ ಮೂಲಕ ಸಹಾಯವನ್ನು ಒದಗಿಸುತ್ತಿದೆ.

‘ಮೊದಲ ಫೋಕಸ್ ರಾಜಸ್ತಾನ್​ನಲ್ಲಿ ಸೋಂಕಿತರಿಗೆ ಅನೇಕ ಕಾರ್ಯಕ್ರಮಗಳ ಮೂಲಕ ನೆರವಾಗುತ್ತಿರುವ ರಂಜಿತ್ ಬರ್​ಠಾಕುರ್ ಅವರು ನಡೆಸುತ್ತಿರುವ ಆರ್​ಆರ್​ಎಫ್ ಸಂಸ್ಥೆಯ ಮೇಲಿರುವುದಾದರೂ ರಾಜಸ್ತಾನ್ ರಾಯಲ್ಸ್ ನೀಡುವ ದೇಣಿಗೆಯು ಭಾರತದೆಲ್ಲೆಡೆ ಉಪಯೋಗವಾಗಲಿದೆ’ ಎಂದು ಫ್ರಾಂಚೈಸಿಯ ಹೇಳಿಕೆಯಲ್ಲಿ ತಿಳಿಸಲಾಗಿದೆ.

‘ರಾಯಲ್ಸ್ ಟೀಮಿನ ಮಾಲೀಕರು ಮತ್ತು ಅದರ ಆಟಗಾರರು ಈ ಕೆಲಸಕ್ಕಾಗಿ ಕೈಜೋಡಿಸಿದ್ದಾರೆ. ಭಾರತದಲ್ಲಿ ಈ ತಲೆದೋರಿರುವ ಕೊವಿಡ್​ ಬಿಕ್ಕಟ್ಟಿನಲ್ಲಿ ಅತ್ಯಂತ ಅವಶ್ಯಕವಾಗಿರುವ ಆಕ್ಸಿಜನ್ ಅನ್ನು ಜನ ಪಡೆದುಕೊಳ್ಳುವಂತಾಗಲು ಈ ಹಣ ನೆರವಾಗುತ್ತದೆ,’ ಎಂದು ಹೇಳಿಕೆ ತಿಳಿಸುತ್ತದೆ. ಕೊಲ್ಕತಾ ನೈಟ್​ ರೈಡರ್ಸ್​ ಪರ ಆಡುವ ಪ್ಯಾಟ್​ ಕಮ್ಮಿನ್ಸ್ ಅವರು ಪಿ ಎಮ್​ ಕೇರ್ಸ್ ನಿಧಿಗೆ 50,000 ಡಾಲರ್​ಗಳ ದೇಣಿಗೆ ನೀಡಿದ ಒಂದು ದಿನದ ನಂತರ ರಾಜಸ್ತಾನ ರಾಯಲ್ಸ್​ ತನ್ನ ದೇಣಿಗೆಯನ್ನು ಪ್ರಕಟಿಸಿದೆ. ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಸಹ ಈ ನಿಧಿಗೆ ಒಂದು ಬಿಟ್​ಕಾಯಿನ್ (ಸುಮಾರು 50,000 ಅಮೇರಿಕನ್ ಡಾಲರ್) ದೇಣಿಗೆಯಾಗಿ ನೀಡಿದ್ದಾರೆ.

ಇದನ್ನೂ ಓದಿ: ಭಾರತ ಕಷ್ಟದಲ್ಲಿದೆ ಕ್ರಿಕೆಟಿಗರು ನೆರವಿಗೆ ಬನ್ನಿ! ಪಿಎಂ ಕೇರ್ಸ್ ಫಂಡ್‌ಗೆ 50,000 ಡಾಲರ್ ಹಣ​ ದೇಣಿಗೆ ನೀಡಿದ ಆಸಿಸ್ ಕ್ರಿಕೆಟಿಗ​ ಪ್ಯಾಟ್ ಕಮ್ಮಿನ್ಸ್

ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ