AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾಟ್​ ಕಮ್ಮಿನ್ಸ್ ನಂತರ ಸೋಂಕಿತರ ನೆರವಿಗೆ ಧಾವಿಸಿರುವ ರಾಜಸ್ತಾನ್ ರಾಯಲ್ಸ್ ಫ್ರಾಂಚೈಸಿಯಿಂದ ರೂ 7.5 ಕೋಟಿ ನೆರವು

ಕೊಲ್ಕತಾ ನೈಟ್​ ರೈಡರ್ಸ್​ ಪರ ಆಡುವ ಪ್ಯಾಟ್​ ಕಮ್ಮಿನ್ಸ್ ಅವರು ಪಿ ಎಮ್​ ಕೇರ್ಸ್ ನಿಧಿಗೆ 50,000 ಡಾಲರ್​ಗಳ ದೇಣಿಗೆ ನೀಡಿದ ಒಂದು ದಿನದ ನಂತರ ರಾಜಸ್ತಾನ ರಾಯಲ್ಸ್​ ತನ್ನ ದೇಣಿಗೆಯನ್ನು ಪ್ರಕಟಿಸಿದೆ.

ಪ್ಯಾಟ್​ ಕಮ್ಮಿನ್ಸ್ ನಂತರ ಸೋಂಕಿತರ ನೆರವಿಗೆ ಧಾವಿಸಿರುವ ರಾಜಸ್ತಾನ್ ರಾಯಲ್ಸ್ ಫ್ರಾಂಚೈಸಿಯಿಂದ ರೂ 7.5 ಕೋಟಿ ನೆರವು
ರಾಜಸ್ತಾನ ರಾಯಲ್ಸ್
ಅರುಣ್​ ಕುಮಾರ್​ ಬೆಳ್ಳಿ
| Edited By: |

Updated on: Apr 29, 2021 | 9:28 PM

Share

ಇಂಡಿಯನ್ ಪ್ರಿಮೀಯರ್ ಲೀಗ್​ನ ಫ್ರಾಂಚೈಸಿಯಾಗಿರುವ ರಾಜಸ್ತಾನ್ ರಾಯಲ್ಸ್ ಒಂದು ರಾಯಲ್ ಧೋರಣೆಯನ್ನು ಪ್ರದರ್ಶಿಸಿ ಭಾರತದಲ್ಲಿ ಕೊವಿಡ್​ ಸೋಂಕಿನಿಂದ ನರಳುತ್ತಿರುವ ಜನರ ಚಿಕಿತ್ಸೆಗೆ 7.5 ಕೋಟಿ ರೂಪಾಯಿಗಳ ದೇಣಿಗೆಯನ್ನು ನೀಡಿದೆ. ‘ಭಾರತದಲ್ಲಿ ಕೊವಿಡ್​-19 ಸೋಂಕು ಭಯಾನಕವಾಗಿ ಹೆಚ್ಚಿದ್ದು ಅದರಿಂದ ಪೀಡಿತರಾಗಿರುವ ಜನರ ಚಿಕಿತ್ಸೆಗೆ 7.5 ಕೋಟಿ ರೂಪಾಯಿಗಳನ್ನು ದೇಣಿಗೆಯಾಗಿ ನೀಡಲು ರಾಜಸ್ತಾನ್ ರಾಯಲ್ಸ್​ಗೆ ತುಂಬಾ ಸಂತೋಷವೆನಿಸುತ್ತಿದೆ,’ ಎಂದು ಫ್ರಾಂಚೈಸಿ ಬಿಡುಗಡೆ ಮಾಡಿರುವ ಅಧಿಕೃತ ಪ್ರಕಟಣೆ ತಿಳಿಸುತ್ತದೆ. ರಾಯಲ್ಸ್ ಫ್ರಾಂಚೈಸಿಯು ತನ್ನ ಚಾರಿಟಿ ಸಂಸ್ಥೆಯಾಗಿರುವ ರಾಜಸ್ತಾನ್ ರಾಯಲ್ಸ್ ಫೌಂಡೇಶನ್ ಮತ್ತು ದಿ ಬ್ರಿಟಿಷ್ ಏಷ್ಯನ್ ಟ್ರಸ್ಟ್​ ಮೂಲಕ ಸಹಾಯವನ್ನು ಒದಗಿಸುತ್ತಿದೆ.

‘ಮೊದಲ ಫೋಕಸ್ ರಾಜಸ್ತಾನ್​ನಲ್ಲಿ ಸೋಂಕಿತರಿಗೆ ಅನೇಕ ಕಾರ್ಯಕ್ರಮಗಳ ಮೂಲಕ ನೆರವಾಗುತ್ತಿರುವ ರಂಜಿತ್ ಬರ್​ಠಾಕುರ್ ಅವರು ನಡೆಸುತ್ತಿರುವ ಆರ್​ಆರ್​ಎಫ್ ಸಂಸ್ಥೆಯ ಮೇಲಿರುವುದಾದರೂ ರಾಜಸ್ತಾನ್ ರಾಯಲ್ಸ್ ನೀಡುವ ದೇಣಿಗೆಯು ಭಾರತದೆಲ್ಲೆಡೆ ಉಪಯೋಗವಾಗಲಿದೆ’ ಎಂದು ಫ್ರಾಂಚೈಸಿಯ ಹೇಳಿಕೆಯಲ್ಲಿ ತಿಳಿಸಲಾಗಿದೆ.

‘ರಾಯಲ್ಸ್ ಟೀಮಿನ ಮಾಲೀಕರು ಮತ್ತು ಅದರ ಆಟಗಾರರು ಈ ಕೆಲಸಕ್ಕಾಗಿ ಕೈಜೋಡಿಸಿದ್ದಾರೆ. ಭಾರತದಲ್ಲಿ ಈ ತಲೆದೋರಿರುವ ಕೊವಿಡ್​ ಬಿಕ್ಕಟ್ಟಿನಲ್ಲಿ ಅತ್ಯಂತ ಅವಶ್ಯಕವಾಗಿರುವ ಆಕ್ಸಿಜನ್ ಅನ್ನು ಜನ ಪಡೆದುಕೊಳ್ಳುವಂತಾಗಲು ಈ ಹಣ ನೆರವಾಗುತ್ತದೆ,’ ಎಂದು ಹೇಳಿಕೆ ತಿಳಿಸುತ್ತದೆ. ಕೊಲ್ಕತಾ ನೈಟ್​ ರೈಡರ್ಸ್​ ಪರ ಆಡುವ ಪ್ಯಾಟ್​ ಕಮ್ಮಿನ್ಸ್ ಅವರು ಪಿ ಎಮ್​ ಕೇರ್ಸ್ ನಿಧಿಗೆ 50,000 ಡಾಲರ್​ಗಳ ದೇಣಿಗೆ ನೀಡಿದ ಒಂದು ದಿನದ ನಂತರ ರಾಜಸ್ತಾನ ರಾಯಲ್ಸ್​ ತನ್ನ ದೇಣಿಗೆಯನ್ನು ಪ್ರಕಟಿಸಿದೆ. ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಸಹ ಈ ನಿಧಿಗೆ ಒಂದು ಬಿಟ್​ಕಾಯಿನ್ (ಸುಮಾರು 50,000 ಅಮೇರಿಕನ್ ಡಾಲರ್) ದೇಣಿಗೆಯಾಗಿ ನೀಡಿದ್ದಾರೆ.

ಇದನ್ನೂ ಓದಿ: ಭಾರತ ಕಷ್ಟದಲ್ಲಿದೆ ಕ್ರಿಕೆಟಿಗರು ನೆರವಿಗೆ ಬನ್ನಿ! ಪಿಎಂ ಕೇರ್ಸ್ ಫಂಡ್‌ಗೆ 50,000 ಡಾಲರ್ ಹಣ​ ದೇಣಿಗೆ ನೀಡಿದ ಆಸಿಸ್ ಕ್ರಿಕೆಟಿಗ​ ಪ್ಯಾಟ್ ಕಮ್ಮಿನ್ಸ್

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು