AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈನಾರಂತೆ ಹರಭಜನ್ ಸಿಂಗ್ ಸಹ ಈ ಬಾರಿ ಐಪಿಎಲ್​ನಲ್ಲಿ ಆಡುತ್ತಿಲ್ಲ

ಚೆನೈ ಸೂಪರ್ ಕಿಂಗ್ಸ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್​ ಸುರೇಶ್ ರೈನಾ ಅವರು ವೈಯಕ್ತಿಕ ಕಾರಣಗಳಿಗಾಗಿ ಇಂಡಿಯನ್ ಪ್ರೀಮಿಯರ್ ಲೀಗ್​ನ 13ನೇ ಆವೃತಿಯಿಂದ ಹಿಂದೆ ಸರಿದ ನಂತರ ಅದರ ಮತ್ತೊಬ್ಬ ಸ್ಟಾರ್ ಆಟಗಾರ ಹಾಗೂ ಬೌಲಿಂಗ್ ವಿಭಾಗದಲ್ಲಿ ಪ್ರಮುಖ ಅಸ್ತ್ರವಾಗಿದ್ದ ಹರಭಜನ್ ಸಿಂಗ್ ಸಹ ವೈಯಕ್ತಿಕ ಕಾರಣಗಳಿಂದಾಗಿ ಈ ಬಾರಿ ಆಡುತ್ತಿಲ್ಲವೆಂದು ಹೇಳಿದ್ದಾರೆ. ಶುಕ್ರವಾರದಂದು ಟ್ವೀಟ್ ಮೂಲಕ ತಮ್ಮ ನಿರ್ಧಾರ ಪ್ರಕಟಿಸಿರುವ ಭಜ್ಜಿ, ಸಿಎಸ್​ಕೆ ಮ್ಯಾನೇಜ್ಮೆಂಟ್ ಸ್ಥಿತಿಯನ್ನು ಅರ್ಥಮಾಡಿಕೊಂಡು ತನಗೆ ಬೆಂಬಲ ಸೂಚಿಸಿದೆ […]

ರೈನಾರಂತೆ ಹರಭಜನ್ ಸಿಂಗ್ ಸಹ ಈ ಬಾರಿ ಐಪಿಎಲ್​ನಲ್ಲಿ ಆಡುತ್ತಿಲ್ಲ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Sep 05, 2020 | 6:09 PM

Share

ಚೆನೈ ಸೂಪರ್ ಕಿಂಗ್ಸ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್​ ಸುರೇಶ್ ರೈನಾ ಅವರು ವೈಯಕ್ತಿಕ ಕಾರಣಗಳಿಗಾಗಿ ಇಂಡಿಯನ್ ಪ್ರೀಮಿಯರ್ ಲೀಗ್​ನ 13ನೇ ಆವೃತಿಯಿಂದ ಹಿಂದೆ ಸರಿದ ನಂತರ ಅದರ ಮತ್ತೊಬ್ಬ ಸ್ಟಾರ್ ಆಟಗಾರ ಹಾಗೂ ಬೌಲಿಂಗ್ ವಿಭಾಗದಲ್ಲಿ ಪ್ರಮುಖ ಅಸ್ತ್ರವಾಗಿದ್ದ ಹರಭಜನ್ ಸಿಂಗ್ ಸಹ ವೈಯಕ್ತಿಕ ಕಾರಣಗಳಿಂದಾಗಿ ಈ ಬಾರಿ ಆಡುತ್ತಿಲ್ಲವೆಂದು ಹೇಳಿದ್ದಾರೆ.

ಶುಕ್ರವಾರದಂದು ಟ್ವೀಟ್ ಮೂಲಕ ತಮ್ಮ ನಿರ್ಧಾರ ಪ್ರಕಟಿಸಿರುವ ಭಜ್ಜಿ, ಸಿಎಸ್​ಕೆ ಮ್ಯಾನೇಜ್ಮೆಂಟ್ ಸ್ಥಿತಿಯನ್ನು ಅರ್ಥಮಾಡಿಕೊಂಡು ತನಗೆ ಬೆಂಬಲ ಸೂಚಿಸಿದೆ ಎಂದಿದ್ದಾರೆ. 

‘‘ವೈಯಕ್ತಿಕ ಕಾರಣಗಳಿಗಾಗಿ ನಾನು ಈ ಬಾರಿಯ ಐಪಿಎಲ್​ನಲ್ಲಿ ಆಡುತ್ತಿಲ್ಲ. ಕೆಲವು ಬಾರಿ ಸಂಕಷ್ಟಗಳು ಎದುರಾಗುತ್ತವೆ, ನಾನೀಗ ಕುಟುಂಬದೊಂದಿಗೆ ಸಮಯ ಕಳೆಯುತ್ತಿರುವುದರಿಂದ ಏಕಾಂತವನ್ನು ಬಯಸುತ್ತೇನೆ. ನನ್ನ ನಿರ್ಧಾರಕ್ಕೆ ಸಿಎಸ್​ಕೆ ತಂಡದ ಆಡಳಿತ ವರ್ಗ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ, ಐಪಿಎಲ್​ನಲ್ಲಿ ಯಶ ಹಾರೈಸುತ್ತಾ ಅವರಿಗೆ ಶುಭ ಕೋರುತ್ತೇನೆ, ಸುರಕ್ಷಿತವಾಗಿರಿ, ಜೈ ಹಿಂದ್,’’ ಎಂದು ಟರ್ಬನೇಟರ್ ಟ್ವೀಟ್ ಮಾಡಿದ್ದಾರೆ.

ಹರಭಜನ್ ಟ್ವೀಟ್​ಗೆ ಕೂಡಲೇ ಪ್ರತಿಕ್ರಿಯಿಸಿರುವ ಸಿಎಸ್​ಕೆ ತಂಡದ ಸಿಈಒ ಕಾಶಿ ವಿಶ್ವನಾಥನ್, ಅವರು ತಮ್ಮ ಅಲಭ್ಯತೆಯ ಬಗ್ಗೆ ನಮಗೆ ತಿಳಿಸಿದ್ದಾರೆ. ಟೀಮ್ ಚೆನೈ ಅವರ ಅವರ ನಿರ್ಧಾರವನ್ನು ಬೆಂಬಲಿಸುತ್ತದೆ ಮತ್ತು ಸಂಕಷ್ಟದ ಸಮಯದಲ್ಲಿ ಅವರೊಂದಿಗೆ ನಿಲ್ಲುತ್ತದೆ ಎಂದಿದ್ದಾರೆ.

ಮೊದಲು ಮುಂಬೈ ಇಂಡಿಯನ್ಸ್ ಪರ ಆಡುತ್ತಿದ್ದ 40ರ ಹರೆಯದ ಭಜ್ಜಿ ಕಳೆದೆರಡು ಸೀಸನ್​ಗಳಿಂದ ಚೆನೈ ಕ್ಲಬ್​ಗೆ ಆಡುತ್ತಿದ್ದಾರೆ. ಸದ್ಯಕ್ಕೆ ಜಲಂಧರ್​ನಲ್ಲಿರುವ ಅವರು, ಏಕಾಂತ ಬಯಸಿದ್ದಾರೆ.

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ