AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈನಾರಂತೆ ಹರಭಜನ್ ಸಿಂಗ್ ಸಹ ಈ ಬಾರಿ ಐಪಿಎಲ್​ನಲ್ಲಿ ಆಡುತ್ತಿಲ್ಲ

ಚೆನೈ ಸೂಪರ್ ಕಿಂಗ್ಸ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್​ ಸುರೇಶ್ ರೈನಾ ಅವರು ವೈಯಕ್ತಿಕ ಕಾರಣಗಳಿಗಾಗಿ ಇಂಡಿಯನ್ ಪ್ರೀಮಿಯರ್ ಲೀಗ್​ನ 13ನೇ ಆವೃತಿಯಿಂದ ಹಿಂದೆ ಸರಿದ ನಂತರ ಅದರ ಮತ್ತೊಬ್ಬ ಸ್ಟಾರ್ ಆಟಗಾರ ಹಾಗೂ ಬೌಲಿಂಗ್ ವಿಭಾಗದಲ್ಲಿ ಪ್ರಮುಖ ಅಸ್ತ್ರವಾಗಿದ್ದ ಹರಭಜನ್ ಸಿಂಗ್ ಸಹ ವೈಯಕ್ತಿಕ ಕಾರಣಗಳಿಂದಾಗಿ ಈ ಬಾರಿ ಆಡುತ್ತಿಲ್ಲವೆಂದು ಹೇಳಿದ್ದಾರೆ. ಶುಕ್ರವಾರದಂದು ಟ್ವೀಟ್ ಮೂಲಕ ತಮ್ಮ ನಿರ್ಧಾರ ಪ್ರಕಟಿಸಿರುವ ಭಜ್ಜಿ, ಸಿಎಸ್​ಕೆ ಮ್ಯಾನೇಜ್ಮೆಂಟ್ ಸ್ಥಿತಿಯನ್ನು ಅರ್ಥಮಾಡಿಕೊಂಡು ತನಗೆ ಬೆಂಬಲ ಸೂಚಿಸಿದೆ […]

ರೈನಾರಂತೆ ಹರಭಜನ್ ಸಿಂಗ್ ಸಹ ಈ ಬಾರಿ ಐಪಿಎಲ್​ನಲ್ಲಿ ಆಡುತ್ತಿಲ್ಲ
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 05, 2020 | 6:09 PM

Share

ಚೆನೈ ಸೂಪರ್ ಕಿಂಗ್ಸ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್​ ಸುರೇಶ್ ರೈನಾ ಅವರು ವೈಯಕ್ತಿಕ ಕಾರಣಗಳಿಗಾಗಿ ಇಂಡಿಯನ್ ಪ್ರೀಮಿಯರ್ ಲೀಗ್​ನ 13ನೇ ಆವೃತಿಯಿಂದ ಹಿಂದೆ ಸರಿದ ನಂತರ ಅದರ ಮತ್ತೊಬ್ಬ ಸ್ಟಾರ್ ಆಟಗಾರ ಹಾಗೂ ಬೌಲಿಂಗ್ ವಿಭಾಗದಲ್ಲಿ ಪ್ರಮುಖ ಅಸ್ತ್ರವಾಗಿದ್ದ ಹರಭಜನ್ ಸಿಂಗ್ ಸಹ ವೈಯಕ್ತಿಕ ಕಾರಣಗಳಿಂದಾಗಿ ಈ ಬಾರಿ ಆಡುತ್ತಿಲ್ಲವೆಂದು ಹೇಳಿದ್ದಾರೆ.

ಶುಕ್ರವಾರದಂದು ಟ್ವೀಟ್ ಮೂಲಕ ತಮ್ಮ ನಿರ್ಧಾರ ಪ್ರಕಟಿಸಿರುವ ಭಜ್ಜಿ, ಸಿಎಸ್​ಕೆ ಮ್ಯಾನೇಜ್ಮೆಂಟ್ ಸ್ಥಿತಿಯನ್ನು ಅರ್ಥಮಾಡಿಕೊಂಡು ತನಗೆ ಬೆಂಬಲ ಸೂಚಿಸಿದೆ ಎಂದಿದ್ದಾರೆ. 

‘‘ವೈಯಕ್ತಿಕ ಕಾರಣಗಳಿಗಾಗಿ ನಾನು ಈ ಬಾರಿಯ ಐಪಿಎಲ್​ನಲ್ಲಿ ಆಡುತ್ತಿಲ್ಲ. ಕೆಲವು ಬಾರಿ ಸಂಕಷ್ಟಗಳು ಎದುರಾಗುತ್ತವೆ, ನಾನೀಗ ಕುಟುಂಬದೊಂದಿಗೆ ಸಮಯ ಕಳೆಯುತ್ತಿರುವುದರಿಂದ ಏಕಾಂತವನ್ನು ಬಯಸುತ್ತೇನೆ. ನನ್ನ ನಿರ್ಧಾರಕ್ಕೆ ಸಿಎಸ್​ಕೆ ತಂಡದ ಆಡಳಿತ ವರ್ಗ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ, ಐಪಿಎಲ್​ನಲ್ಲಿ ಯಶ ಹಾರೈಸುತ್ತಾ ಅವರಿಗೆ ಶುಭ ಕೋರುತ್ತೇನೆ, ಸುರಕ್ಷಿತವಾಗಿರಿ, ಜೈ ಹಿಂದ್,’’ ಎಂದು ಟರ್ಬನೇಟರ್ ಟ್ವೀಟ್ ಮಾಡಿದ್ದಾರೆ.

ಹರಭಜನ್ ಟ್ವೀಟ್​ಗೆ ಕೂಡಲೇ ಪ್ರತಿಕ್ರಿಯಿಸಿರುವ ಸಿಎಸ್​ಕೆ ತಂಡದ ಸಿಈಒ ಕಾಶಿ ವಿಶ್ವನಾಥನ್, ಅವರು ತಮ್ಮ ಅಲಭ್ಯತೆಯ ಬಗ್ಗೆ ನಮಗೆ ತಿಳಿಸಿದ್ದಾರೆ. ಟೀಮ್ ಚೆನೈ ಅವರ ಅವರ ನಿರ್ಧಾರವನ್ನು ಬೆಂಬಲಿಸುತ್ತದೆ ಮತ್ತು ಸಂಕಷ್ಟದ ಸಮಯದಲ್ಲಿ ಅವರೊಂದಿಗೆ ನಿಲ್ಲುತ್ತದೆ ಎಂದಿದ್ದಾರೆ.

ಮೊದಲು ಮುಂಬೈ ಇಂಡಿಯನ್ಸ್ ಪರ ಆಡುತ್ತಿದ್ದ 40ರ ಹರೆಯದ ಭಜ್ಜಿ ಕಳೆದೆರಡು ಸೀಸನ್​ಗಳಿಂದ ಚೆನೈ ಕ್ಲಬ್​ಗೆ ಆಡುತ್ತಿದ್ದಾರೆ. ಸದ್ಯಕ್ಕೆ ಜಲಂಧರ್​ನಲ್ಲಿರುವ ಅವರು, ಏಕಾಂತ ಬಯಸಿದ್ದಾರೆ.

ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ