AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈನಾರಂತೆ ಹರಭಜನ್ ಸಿಂಗ್ ಸಹ ಈ ಬಾರಿ ಐಪಿಎಲ್​ನಲ್ಲಿ ಆಡುತ್ತಿಲ್ಲ

ಚೆನೈ ಸೂಪರ್ ಕಿಂಗ್ಸ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್​ ಸುರೇಶ್ ರೈನಾ ಅವರು ವೈಯಕ್ತಿಕ ಕಾರಣಗಳಿಗಾಗಿ ಇಂಡಿಯನ್ ಪ್ರೀಮಿಯರ್ ಲೀಗ್​ನ 13ನೇ ಆವೃತಿಯಿಂದ ಹಿಂದೆ ಸರಿದ ನಂತರ ಅದರ ಮತ್ತೊಬ್ಬ ಸ್ಟಾರ್ ಆಟಗಾರ ಹಾಗೂ ಬೌಲಿಂಗ್ ವಿಭಾಗದಲ್ಲಿ ಪ್ರಮುಖ ಅಸ್ತ್ರವಾಗಿದ್ದ ಹರಭಜನ್ ಸಿಂಗ್ ಸಹ ವೈಯಕ್ತಿಕ ಕಾರಣಗಳಿಂದಾಗಿ ಈ ಬಾರಿ ಆಡುತ್ತಿಲ್ಲವೆಂದು ಹೇಳಿದ್ದಾರೆ. ಶುಕ್ರವಾರದಂದು ಟ್ವೀಟ್ ಮೂಲಕ ತಮ್ಮ ನಿರ್ಧಾರ ಪ್ರಕಟಿಸಿರುವ ಭಜ್ಜಿ, ಸಿಎಸ್​ಕೆ ಮ್ಯಾನೇಜ್ಮೆಂಟ್ ಸ್ಥಿತಿಯನ್ನು ಅರ್ಥಮಾಡಿಕೊಂಡು ತನಗೆ ಬೆಂಬಲ ಸೂಚಿಸಿದೆ […]

ರೈನಾರಂತೆ ಹರಭಜನ್ ಸಿಂಗ್ ಸಹ ಈ ಬಾರಿ ಐಪಿಎಲ್​ನಲ್ಲಿ ಆಡುತ್ತಿಲ್ಲ
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 05, 2020 | 6:09 PM

Share

ಚೆನೈ ಸೂಪರ್ ಕಿಂಗ್ಸ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್​ ಸುರೇಶ್ ರೈನಾ ಅವರು ವೈಯಕ್ತಿಕ ಕಾರಣಗಳಿಗಾಗಿ ಇಂಡಿಯನ್ ಪ್ರೀಮಿಯರ್ ಲೀಗ್​ನ 13ನೇ ಆವೃತಿಯಿಂದ ಹಿಂದೆ ಸರಿದ ನಂತರ ಅದರ ಮತ್ತೊಬ್ಬ ಸ್ಟಾರ್ ಆಟಗಾರ ಹಾಗೂ ಬೌಲಿಂಗ್ ವಿಭಾಗದಲ್ಲಿ ಪ್ರಮುಖ ಅಸ್ತ್ರವಾಗಿದ್ದ ಹರಭಜನ್ ಸಿಂಗ್ ಸಹ ವೈಯಕ್ತಿಕ ಕಾರಣಗಳಿಂದಾಗಿ ಈ ಬಾರಿ ಆಡುತ್ತಿಲ್ಲವೆಂದು ಹೇಳಿದ್ದಾರೆ.

ಶುಕ್ರವಾರದಂದು ಟ್ವೀಟ್ ಮೂಲಕ ತಮ್ಮ ನಿರ್ಧಾರ ಪ್ರಕಟಿಸಿರುವ ಭಜ್ಜಿ, ಸಿಎಸ್​ಕೆ ಮ್ಯಾನೇಜ್ಮೆಂಟ್ ಸ್ಥಿತಿಯನ್ನು ಅರ್ಥಮಾಡಿಕೊಂಡು ತನಗೆ ಬೆಂಬಲ ಸೂಚಿಸಿದೆ ಎಂದಿದ್ದಾರೆ. 

‘‘ವೈಯಕ್ತಿಕ ಕಾರಣಗಳಿಗಾಗಿ ನಾನು ಈ ಬಾರಿಯ ಐಪಿಎಲ್​ನಲ್ಲಿ ಆಡುತ್ತಿಲ್ಲ. ಕೆಲವು ಬಾರಿ ಸಂಕಷ್ಟಗಳು ಎದುರಾಗುತ್ತವೆ, ನಾನೀಗ ಕುಟುಂಬದೊಂದಿಗೆ ಸಮಯ ಕಳೆಯುತ್ತಿರುವುದರಿಂದ ಏಕಾಂತವನ್ನು ಬಯಸುತ್ತೇನೆ. ನನ್ನ ನಿರ್ಧಾರಕ್ಕೆ ಸಿಎಸ್​ಕೆ ತಂಡದ ಆಡಳಿತ ವರ್ಗ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ, ಐಪಿಎಲ್​ನಲ್ಲಿ ಯಶ ಹಾರೈಸುತ್ತಾ ಅವರಿಗೆ ಶುಭ ಕೋರುತ್ತೇನೆ, ಸುರಕ್ಷಿತವಾಗಿರಿ, ಜೈ ಹಿಂದ್,’’ ಎಂದು ಟರ್ಬನೇಟರ್ ಟ್ವೀಟ್ ಮಾಡಿದ್ದಾರೆ.

ಹರಭಜನ್ ಟ್ವೀಟ್​ಗೆ ಕೂಡಲೇ ಪ್ರತಿಕ್ರಿಯಿಸಿರುವ ಸಿಎಸ್​ಕೆ ತಂಡದ ಸಿಈಒ ಕಾಶಿ ವಿಶ್ವನಾಥನ್, ಅವರು ತಮ್ಮ ಅಲಭ್ಯತೆಯ ಬಗ್ಗೆ ನಮಗೆ ತಿಳಿಸಿದ್ದಾರೆ. ಟೀಮ್ ಚೆನೈ ಅವರ ಅವರ ನಿರ್ಧಾರವನ್ನು ಬೆಂಬಲಿಸುತ್ತದೆ ಮತ್ತು ಸಂಕಷ್ಟದ ಸಮಯದಲ್ಲಿ ಅವರೊಂದಿಗೆ ನಿಲ್ಲುತ್ತದೆ ಎಂದಿದ್ದಾರೆ.

ಮೊದಲು ಮುಂಬೈ ಇಂಡಿಯನ್ಸ್ ಪರ ಆಡುತ್ತಿದ್ದ 40ರ ಹರೆಯದ ಭಜ್ಜಿ ಕಳೆದೆರಡು ಸೀಸನ್​ಗಳಿಂದ ಚೆನೈ ಕ್ಲಬ್​ಗೆ ಆಡುತ್ತಿದ್ದಾರೆ. ಸದ್ಯಕ್ಕೆ ಜಲಂಧರ್​ನಲ್ಲಿರುವ ಅವರು, ಏಕಾಂತ ಬಯಸಿದ್ದಾರೆ.

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ