AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿನ್ ತೆಂಡೂಲ್ಕರ್​ಗೆ ಕೊರೊನಾ ಪಾಸಿಟಿವ್! ರಸ್ತೆ ಸುರಕ್ಷತೆ ವಿಶ್ವ ಟಿ20 ಸರಣಿ ಆಡಿದ ಕ್ರಿಕೆಟಿಗರಲ್ಲಿ ಹೆಚ್ಚಾದ ಆತಂಕ

ಸಚಿನ್​ ಅವರಿಗೆ ಕೊರೊನಾ ಧೃಡಪಟ್ಟಿರುವುದರಿಂದ ಈಗ ಟೀಂ ಇಂಡಿಯಾದ ಮಾಜಿ ಆಟಗಾರರಿಗೆ ಆತಂಕ ಶುರುವಾಗಿದೆ.

ಸಚಿನ್ ತೆಂಡೂಲ್ಕರ್​ಗೆ ಕೊರೊನಾ ಪಾಸಿಟಿವ್! ರಸ್ತೆ ಸುರಕ್ಷತೆ ವಿಶ್ವ ಟಿ20 ಸರಣಿ ಆಡಿದ ಕ್ರಿಕೆಟಿಗರಲ್ಲಿ ಹೆಚ್ಚಾದ ಆತಂಕ
ರಸ್ತೆ ಸುರಕ್ಷತೆ ವಿಶ್ವ ಸರಣಿ
ಪೃಥ್ವಿಶಂಕರ
|

Updated on: Mar 27, 2021 | 1:01 PM

Share

ಕ್ರಿಕೆಟ್​ ದೇವರು ಸಚಿನ್ ತೆಂಡೂಲ್ಕರ್ ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ವಿಚಾರವನ್ನು ಸ್ವತಃ ಸಚಿನ್ ತಮ್ಮ ಟ್ವಿಟರ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ನನಗೆ ಕೊರೊನಾ ಸೋಂಕಿನ ಅಲ್ಪಸ್ವಲ್ಪ ಲಕ್ಷಣಗಳಿದ್ದು, ಮನೆಯ ಮಿಕ್ಕೆಲ್ಲರಿಗೂ ಕೊರೊನಾ ನೆಗೆಟಿವ್ ಬಂದಿದೆ. ಮುಂಜಾಗೃತಾ ಕ್ರಮವಾಗಿ ಹೋಂ ಕ್ವಾರಂಟೈನ್ ಆಗಿ ವೈದ್ಯರು ಸೂಚಿಸಿದ ಎಲ್ಲ ಸೂಚನೆಗಳನ್ನು ಅನುಸರಿಸುತ್ತಿದ್ದೇನೆ. ಕೊರೊನೊ ಪಿಡುಗಿನ ವಿರುದ್ಧ ಹೋರಾಡುತ್ತಿರುವ ಎಲ್ಲ ವೈದ್ಯ ಸಮುದಾಯಕ್ಕೂ, ದೇಶದ ನನ್ನೆಲ್ಲ ಅಭಿಮಾನಿಗಳಿಗೂ ನಾವು ಕೃತಜ್ಞನಾಗಿದ್ದೇನೆ’ ಎಂದು ಟ್ವೀಟ್ ಮಾಡಿ ವಿಷಯ ಬಹಿರಂಗಪಡಿಸಿದ್ದಾರೆ.

ರಸ್ತೆ ಸುರಕ್ಷತೆ ವಿಶ್ವ ಟಿ20 ಸರಣಿ ಸಚಿನ್​ ಅವರಿಗೆ ಕೊರೊನಾ ಧೃಡಪಟ್ಟಿರುವುದರಿಂದ ಈಗ ಟೀಂ ಇಂಡಿಯಾದ ಮಾಜಿ ಆಟಗಾರರಿಗೆ ಆತಂಕ ಶುರುವಾಗಿದೆ. ಏಕೆಂದರೆ ಕೆಲವು ದಿನಗಳ ಹಿಂದಷ್ಟೇ ಸಚಿನ್​ ನೇತೃತ್ವದಲ್ಲಿ ಇಂಡಿಯಾ ಲೆಜೆಂಡ್ಸ್​ ತಂಡವು ರಸ್ತೆ ಸುರಕ್ಷತೆ ವಿಶ್ವ ಟಿ 20 ಸರಣಿಯನ್ನು ಗೆದ್ದುಕೊಂಡಿತ್ತು. ಈ ಸರಣಿಯಲ್ಲಿ ಹೆಸರಾಂತ ಆಟಗಾರರಾದ ವೀರೇಂದ್ರ ಸೆಹ್ವಾಗ್, ಯುವರಾಜ್ ಸಿಂಗ್, ಪಠಾಣ್ ಬ್ರದರ್ಸ್ ಮುಂತಾದ ಆಟಗಾರರು ಸಹ ಇದ್ದರು. ಇವರಲ್ಲದೆ ವಿದೇಶಿ ಆಟಗಾರರು ಸಹ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಹೀಗಾಗಿ ಸಚಿನ್ ಅವರಿಗೆ ಈಗ ಕೊರೊನಾ ಸೋಂಕು ತಗುಲಿರುವುದರಿಂದ ಆ ಎಲ್ಲಾ ಆಟಗಾರರಿಗೆ ಆತಂಕ ಶುರುವಾಗಿದೆ.

ರಸ್ತೆ ಸುರಕ್ಷತೆ ವಿಶ್ವ ಟಿ 20 ಸರಣಿ ಮುಗಿದ ನಂತರವೇ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ತಮ್ಮ ಕೊರೊನಾ ಪರೀಕ್ಷೆಯನ್ನು ಮಾಡಿಸಿದ್ದರು. ಇದರಲ್ಲಿ ಅವರ ಫಲಿತಾಂಶವು ಸಕಾರಾತ್ಮಕವಾಗಿದೆ. ಹೀಗಾಗಿ ಆಟದ ವೇಳೆ ಎದುರಾಳಿ ತಂಡದ ಆಟಗಾರ ಔಟ್​ ಆದ ವೇಳೆ ತಂಡದ ಆಟಗಾರರೆಲ್ಲ ಸಚಿನ್​ ಒಟ್ಟಗೂಡಿ ಸಂಭ್ರಮಿಸಿದ್ದರು. ಜೊತೆಗೆ ತಂಡ ಗೆದ್ದಾಗಲೂ ಸಹ ತಂಡದ ಆಟಗಾರರೆಲ್ಲ ತಬ್ಬಿ ಸಂಭ್ರಮಿಸಿದ್ದರು. ಆದರಿಂದ ಸಚಿನ್ ಸಂಪರ್ಕದಲ್ಲಿದ್ದ ಎಲ್ಲಾ ಆಟಗಾರರಿಗೂ ಈಗ ಕೊರೊನಾ ತಗುಲುವ ಆತಂಕ ಶುರುವಾಗಿದೆ.

ಅಂತರರಾಷ್ಟ್ರೀಯ ಆಟಗಾರರಿಗೂ ಆತಂಕ ಛತ್ತೀಸ್‌ಗಡದ ರಾಯ್‌ಪುರದಲ್ಲಿ ಆಡಿದ ರಸ್ತೆ ಸುರಕ್ಷತೆ ವಿಶ್ವ ಟಿ 20 ಸರಣಿಯಲ್ಲಿ ಭಾರತದ ಒಟ್ಟು 16 ಅನುಭವಿ ಆಟಗಾರರು ಭಾಗವಹಿಸಿದ್ದರು. ಸಚಿನ್ ತೆಂಡೂಲ್ಕರ್ ಅವರೆಲ್ಲರ ಜೊತೆ ಸಂಪರ್ಕದಲ್ಲಿದ್ದರು. ಅವರು ಒಟ್ಟಿಗೆ ವಿಕೆಟ್ ಆಚರಿಸುತ್ತಿದ್ದರು ಮತ್ತು ವಿಜಯವನ್ನು ಆಚರಿಸುತ್ತಿದ್ದರು. ಸೆಹ್ವಾಗ್, ಯುವರಾಜ್ ಮತ್ತು ಪಠಾಣ್ ಬ್ರದರ್ಸ್‌ನಂತಹ ದೊಡ್ಡ ಹೆಸರುಗಳು ಸಹ ಈ ಲಿಸ್ಟ್​ನಲ್ಲಿದೆ. ಜೊತೆಗೆ ಸಚಿನ್ ತೆಂಡೂಲ್ಕರ್ ಅವರು ಅಂತರರಾಷ್ಟ್ರೀಯ ತಾರೆಗಳಾದ ಲಾರಾ, ಕೆವಿನ್ ಪೀಟರ್ಸನ್, ತಿಲಕರತ್ನ ದಿಲ್ಶನ್ ಅವರೊಂದಿಗೆ ಸಂಪರ್ಕದಲ್ಲಿದ್ದರು. ಇಂತಹ ಪರಿಸ್ಥಿತಿಯಲ್ಲಿ, ಕೊರೊನಾದ ಕರಿನೆರಳು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಆಟಗಾರರ ಮೇಲೂ ಬೀಳಬಹುದಾಗಿದೆ.

ಇದನ್ನೂ ಓದಿ:India vs England: ಒಂದೇ ಓವರ್​ನಲ್ಲಿ 3 ಸಿಕ್ಸರ್​ ಸಿಡಿಸಿದ್ದಕ್ಕೆ ಹಾರ್ದಿಕ್ ಮೇಲೆ ಸ್ಯಾಮ್ ಕರನ್ ಗರಂ.. ಪಾಂಡ್ಯ ಖಡಕ್ ರಿಯಾಕ್ಷನ್! ವಿಡಿಯೋ ನೋಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?