AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tendulkar Hospitalised: ಕೊರೊನಾ ಸೋಂಕಿನಿಂದ ಬಳಲುತ್ತಿರುವ ತೆಂಡೂಲ್ಕರ್​ಗೆ ಬೇಗ ಗುಣಮುಖರಾಗಿ ಅಂತ ಹಾರೈಸಿದ ಆಕ್ರಮ್

ಕೋವಿಡ್-19 ಸೋಂಕಿನಿಂದ ಬಳಲುತ್ತಿರುವ ತೆಂಡೂಲ್ಕರ್ ಅವರನ್ನು ಮುನ್ನಚ್ಚೆರಿಕೆಯ ಕ್ರಮವಾಗಿ ಆರು ದಿನಗಳ ಅವಧಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. 47-ವರ್ಷ ವಯಸ್ಸಿನ ಲಿಟ್ಲ್ ಮಾಸ್ಟರ್ ತಮ್ಮ ಟ್ಟಿಟ್ಟರ್ ಹ್ಯಾಂಡಲ್ ಮೂಲಕ ಬೇಳವಣಿಗೆಗಳ ಬಗ್ಗೆ ಮಾಹಿತಿ ನೀಡುತ್ತಾ ತಮ್ಮನ್ನು ಹಾರೈಸಿದವರಿಗೆ ಧನ್ಯವಾದಗಳನ್ನು ಹೇಳಿದ್ದಾರೆ.

Tendulkar Hospitalised: ಕೊರೊನಾ ಸೋಂಕಿನಿಂದ ಬಳಲುತ್ತಿರುವ ತೆಂಡೂಲ್ಕರ್​ಗೆ ಬೇಗ ಗುಣಮುಖರಾಗಿ ಅಂತ ಹಾರೈಸಿದ ಆಕ್ರಮ್
ಸಚಿನ್ ತೆಂಡೂಲ್ಕರ್ ಮತ್ತು ಶಾಹಿದ್ ಅಫ್ರಿದಿ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Apr 02, 2021 | 11:53 PM

Share

ಭಾರತದ ಲೆಜಂಡರಿ ಆಟಗಾರ ಸಚಿನ್ ತೆಂಡೂಲ್ಕರ್ ಅವರು ಕೊವಿಡ್​-19 ಸೋಂಕಿನಿಂದ ಬೇಗ ಗುಣಮುಖ ಗೊಂಡು ಮನೆಗೆ ಹಿಂತಿರುಗಲಿ ಅಂತ ಶುಕ್ರವಾರದಂದು ಪಾಕಿಸ್ತಾನದ ಲೆಜೆಂಡರಿ ವೇಗದ ಬೌಲರ್ ವಾಸಿಮ್ ಅಕ್ರಮ್ ಟ್ವೀಟ್​ ಮಾಡಿದ್ದಾರೆ. ಟ್ವೀಟ್​ನಲ್ಲಿ ಅವರು ಭಾರತದ ಬ್ಯಾಟಿಂಗ್ ಗ್ರೇಟ್ ವೈರಸ್ ಅನ್ನು ಸಿಕ್ಸರ್​ಗೆ ಬಾರಿಸಲಿದ್ದಾರೆ ಎಂದು ಹೇಳಿದ್ದಾರೆ. ಕೇವಲ 16ನೇ ವಯಸ್ಸಿನಲ್ಲಿ ಅವರು ಹೇಗೆ ವಿಶ್ವದ ಖ್ಯಾತ ಬೌಲರ್​ಗಳನ್ನು ಸದೆಬಡಿದರು ಅನ್ನುವುದನ್ನು ಸಹ ಅಕ್ರಮ್ ನೆನಪಿಸಿಕೊಂಡಿದ್ದಾರೆ.

‘ನೀವು ಕೇವಲ 16 ವರ್ಷದವರಾಗಿದ್ದಾಗ, ವಿಶ್ವದ ಶ್ರೇಷ್ಠ ಬೌಲರ್​ಗಳನ್ನು ದಿಟ್ಟತನದಿಂದ ಮತ್ತು ಅಷ್ಟೇ ಲೀಲಾಜಾಲವಾಗಿ ಎದುರಿಸಿದರಿ….ಹಾಗಾಗಿ, ನೀವು ಕೊವಿಡ್-19 ಅನ್ನು ಸಿಕ್ಸರ್​ಗೆ ಬಾರಿಸುತ್ತೀರೆಂಬ ಭರವಸೆ ನನಗಿದೆ. ಬೇಗ ಚೇತರಿಸಿಕೊಳ್ಳಿ ಮಾಸ್ಟರ್. ಭಾರತ 2011 ರಲ್ಲಿ ವಿಶ್ವಕಪ್ ಗೆದ್ದ ವಾರ್ಷಿಕೋತ್ಸವನ್ನು ನೀವು ಆಸ್ಪತ್ರೆಯಲ್ಲಿ ವೈದ್ಯರೊಂದಿಗೆ ಆಚರಿಸಿರಬಹುದೆಂದು ಭಾವಿಸಿತ್ತೇನೆ…..ಅಲ್ಲಿನ ಒಂದು ಚಿತ್ರವನ್ನು ನನಗೆ ಕಳಿಸಿ,’ ಎಂದು ಅಕ್ರಮ್ ಟ್ವೀಟ್​ ಮಾಡಿದ್ದಾರೆ.

ಪಾಕಿಸ್ತಾನದ ಇನ್ನೊಬ್ಬ ಮಾಜಿ ಕ್ಯಾಪ್ಟನ್ ಶಾಹಿದ್ ಅಫ್ರಿದಿ ಸಹ ಟ್ವೀಟ್ ಮಾಡಿ, ಬೇಗ ಚೇತರಿಸಿಕೊಳ್ಳವಂತೆ ಹಾರೈಸಿದ್ದಾರೆ. ‘ಬೇಗ ಗುಣಮುಖರಾಗಿರಿ ಎಂದು ಹಾರೈಸುತ್ತಿದ್ದೇನೆ, ಲೆಜೆಂಡ್. ನೀವು ಬೇಗ ಚೇತರಿಸಿಕೊಳ್ಳುವ ಬಗ್ಗೆ ನನಗೆ ಸಂಶಯವೇ ಇಲ್ಲ. ನಿಮ್ಮ ಆಸ್ಪತ್ರೆ ವಾಸ ಚಿಕ್ಕದಾಗಿರಲಿ ಮತ್ತು ಚೇತರಿಕೆಯ ಅವಧಿ ಅದಕ್ಕಿಂತಲೂ ಚಿಕ್ಕದಾಗಿರಲಿ ಎಂದು ಹಾರೈಸುತ್ತೇನೆ,’ ಎಂದು ಆಫ್ರಿದಿ ಟ್ವೀಟ್​ ಮಾಡಿದ್ದಾರೆ.

ಕೋವಿಡ್-19 ಸೋಂಕಿನಿಂದ ಬಳಲುತ್ತಿರುವ ತೆಂಡೂಲ್ಕರ್ ಅವರನ್ನು ಮುನ್ನಚ್ಚೆರಿಕೆಯ ಕ್ರಮವಾಗಿ ಆರು ದಿನಗಳ ಅವಧಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. 47-ವರ್ಷ ವಯಸ್ಸಿನ ಲಿಟ್ಲ್ ಮಾಸ್ಟರ್ ತಮ್ಮ ಟ್ಟಿಟ್ಟರ್ ಹ್ಯಾಂಡಲ್ ಮೂಲಕ ಬೇಳವಣಿಗೆಗಳ ಬಗ್ಗೆ ಮಾಹಿತಿ ನೀಡುತ್ತಾ ತಮ್ಮನ್ನು ಹಾರೈಸಿದವರಿಗೆ ಧನ್ಯವಾದಗಳನ್ನು ಹೇಳಿದ್ದಾರೆ.

‘ನಿಮ್ಮ ಹಾರೈಕೆ ಮತ್ತು ಪ್ರಾರ್ಥನೆಗಳಿಗಾಗಿ ವಂದನೆಗಳು. ಮುನ್ನೆಚ್ಚರಿಕೆಯ ಕ್ರಮವಾಗಿ ಮತ್ತು ವೈದ್ಯಕೀಯ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೆಲ ದಿನಗಳಲ್ಲಿ ನಾನು ವಾಪಸ್ಸಾಗಲಿದ್ದೇನೆ. ನೀವೆಲ್ಲ ಜಾಗರೂಕರಾಗಿರಿ ಮತ್ತು ಸುರಕ್ಷಿತವಾಗಿರಿ,’ ಎಂದು ತೆಂಡೂಲ್ಕರ್ ಟ್ವೀಟ್​ನಲ್ಲಿ ಹೇಳಿದ್ದಾರೆ.

ರೈಪುರ್​ನಲ್ಲಿ ನಡೆದ ರೋಡ್ ಸೇಫ್ಟಿ ವರ್ಲ್ಡ್ ಸಿರೀಸ್​ನಲ್ಲಿ ಇಂಡಿಯ ಲೆಜೆಂಡ್ಸ್ ತಂಡದ ನಾಯಕರಾಗಿ ಕ್ರಿಕೆಟ್​ ಮೈದಾನಕ್ಕೆ ತೆಂಡೂಲ್ಕರ್ ವಾಪಸ್ಸಾಗಿದ್ದರು. ಅವರು ಮಾತ್ರವಲ್ಲದೆ ಭಾರತ ಮತ್ತು ವಿಶ್ವದ ಹಲವಾರು ಆಟಗಾರು ಈ ಟೂರ್ನಿಯಲ್ಲಿ ಪಾಲ್ಗೊಂಡಿದ್ದರು. ಇಂಡಿಯ ಲೆಜೆಂಡ್ಸ್ ತಂಡದಲ್ಲಿ ವಿರೇಂದ್ರ ಸೆಹ್ವಾಗ್ ಯುವರಾಜ್ ಸಿಂಗ್, ಯೂಸುಫ್ ಪಠಾಣ್, ಮೊಹ್ಮದ್ ಕೈಫ್ ಮೊದಲಾದವರು ಇದ್ದರು. ಮಾರ್ಚ್​ 21 ರಂದು ನಡೆದ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ಲೆಜೆಂಡ್ಸ್ ತಂಡವನ್ನು ಸೋಲಿಸಿದ ಭಾರತ ಪ್ರಶಸ್ತಿಯನ್ನು ಗೆದ್ದಿತ್ತು.

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್