AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Khelo India University Games: ಇಂದು ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ಗೆ ಚಾಲನೆ

ಜೈನ್ ಕ್ಯಾಂಪಸ್ ಜೊತೆಗೆ ಕಂಠೀರವ ಸ್ಟೇಡಿಯಂ, ಹಾಕಿ ಸ್ಟೇಡಿಯಂ ಮತ್ತು ಸಾಯಿ ಸೌತ್ ಸೆಂಟರ್ ಅನ್ನು ಕ್ರೀಡಾಕೂಟದ ಸ್ಥಳವಾಗಿ ಆಯ್ಕೆ ಮಾಡಲಾಗಿದೆ.

Khelo India University Games: ಇಂದು ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ಗೆ ಚಾಲನೆ
Khelo India University Games
TV9 Web
| Edited By: |

Updated on:Apr 24, 2022 | 9:57 AM

Share

ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ನ (Khelo India University Games) ಎರಡನೇ ಆವೃತ್ತಿಗೆ ಭಾನುವಾರ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರು ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ತಿಳಿಸಿದ್ದಾರೆ. ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಮತ್ತು ರಾಜ್ಯ ಸಚಿವ ನಿಸಿತ್ ಪ್ರಮಾಣಿಕ್ ಗೌರವ ಅತಿಥಿಗಳಾಗಿ ಆಗಮಿಸಲಿದ್ದಾರೆ. ಜಾಗತಿಕ ವೇದಿಕೆಯಲ್ಲಿ ಪ್ರಶಸ್ತಿಗಳನ್ನು ಗೆದ್ದ ಕರ್ನಾಟಕದ ಅಗ್ರಮಾನ್ಯ ಕ್ರೀಡಾಪಟುಗಳಾದ ಪ್ರಕಾಶ್ ಪಡುಕೋಣೆ, ಪಂಕಜ್ ಅಡ್ವಾಣಿ, ಅಂಜು ಬಾಬಿ ಜಾರ್ಜ್, ರೀತ್ ಅಬ್ರಹಾಂ, ಅಶ್ವಿನಿ ನಾಚಪ್ಪ ಸೇರಿದಂತೆ ಪ್ರಮುಖರು ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ಭಾರತದ ಮುಂದಿನ ಪೀಳಿಗೆಯ ಕ್ರೀಡಾ ತಾರೆಗಳನ್ನು ಪರಿಚಯಿಸಲಿರುವ ಈ 10 ದಿನಗಳ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಸುನೀಲ್ ಜೋಶಿ , ಎಚ್‌ಎನ್ ಗಿರೀಶ ಮತ್ತು ವಿಆರ್ ರಘುನಾಥ್ ಭಾಗವಹಿಸುವ ನಿರೀಕ್ಷೆಯಿದೆ ಎಂದು ರಾಜ್ಯ ಕ್ರೀಡಾ ಸಚಿವ ಕೆಸಿ ನಾರಾಯಣ ಗೌಡ ಶುಕ್ರವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಜೈನ್ ಕ್ಯಾಂಪಸ್ ಜೊತೆಗೆ ಶ್ರೀ ಕಂಠೀರವ ಸ್ಟೇಡಿಯಂ, ಹಾಕಿ ಸ್ಟೇಡಿಯಂ ಮತ್ತು ಸಾಯಿ ಸೌತ್ ಸೆಂಟರ್ ಅನ್ನು ಕ್ರೀಡಾಕೂಟದ ಸ್ಥಳವಾಗಿ ಆಯ್ಕೆ ಮಾಡಲಾಗಿದೆ. ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಸಂಪ್ರದಾಯದ ಸಾರವನ್ನು ಪ್ರತಿಬಿಂಬಿಸುವ ವಿಶೇಷವಾಗಿ ನೃತ್ಯ ಸಂಯೋಜನೆಯ ಸಾಂಸ್ಕೃತಿಕ ಕಾರ್ಯಕ್ರಮ, ರಾಜ್ಯದ ಟೆಕ್ ಹಬ್ ಅನ್ನು ಪ್ರದರ್ಶಿಸುವ ಲೇಸರ್ ಶೋ ಉದ್ಘಾಟನಾ ಸಮಾರಂಭದ ಮುಖ್ಯಾಂಶಗಳಾಗಿವೆ ಎಂದು ಸಚಿವರು ಹೇಳಿದರು.

ಕ್ರೀಡಾಪಟುಗಳ ಪರವಾಗಿ ಒಲಿಂಪಿಯನ್ ಈಜುಪಟು ಶ್ರೀಹರಿ ನಟರಾಜ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಉದ್ಘಾಟನಾ ಸಮಾರಂಭವು ಆಹ್ವಾನಿತರಿಗೆ ಸೀಮಿತವಾಗಿರುವುದರಿಂದ, ಸಾರ್ವಜನಿಕರು ಇದನ್ನು ಕ್ರೀಡಾಂಗಣದ ಹೊರಗಿನ ದೈತ್ಯ ಪರದೆಯಲ್ಲಿ ವೀಕ್ಷಿಸಬಹುದು. ಉದ್ಘಾಟನಾ ಸಮಾರಂಭವನ್ನು ಡಿಡಿ ಸ್ಪೋರ್ಟ್ಸ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.

ಬ್ಯಾಡ್ಮಿಂಟನ್, ಬ್ಯಾಸ್ಕೆಟ್‌ಬಾಲ್, ಶೂಟಿಂಗ್ ಮತ್ತು ವಾಲಿಬಾಲ್‌ನಲ್ಲಿ ಪ್ರಾಥಮಿಕ ಸುತ್ತುಗಳೊಂದಿಗೆ ಸುಮಾರು 800 ಮಂದಿ ವಿಶ್ವ ವಿದ್ಯಾಯಲಯದ ಕ್ರೀಡಾಪಟುಗಳು ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ನಲ್ಲಿ ಭಾಗವಹಿಸಲಿದ್ದಾರೆ.

ವಿಶೇಷ ಸೈಕಲ್ ಜಾಥ: ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ ಪ್ರಯುಕ್ತ ಭಾನುವಾರ 25 ಕಿ.ಮೀ ಸೈಕಲ್ ಜಾಥ ಕೂಡ ಇರಲಿದೆ. ಈ ಜಾಥ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮುಂಭಾಗದಿಂದ ಬೆಳಿಗ್ಗೆ 8.30 ಕ್ಕೆ ಶುರುವಾಗಲಿದೆ.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

Published On - 10:39 pm, Sat, 23 April 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ