AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Vs Australia Test Cricket 2020 | ಮೆಲ್ಬರ್ನ್ ಟೆಸ್ಟ್​ಗೆ ಹನುಮ ವಿಹಾರಿ ಸ್ಥಾನದಲ್ಲಿ ರವೀಂದ್ರ ಜಡೇಜಾ?

ಮೊದಲ ಟೆಸ್ಟ್​ನ ಶೋಚನೀಯ ಸೋಲಿನಿಂದ ಕಂಗೆಟ್ಟಿರುವ ಟೀಮ್ ಇಂಡಿಯ ಮೆಲ್ಬರ್ನ್ ಟೆಸ್ಟ್​ಗೆ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಲು ನಿರ್ಧರಿಸಿದೆ. ಅವುಗಳಲ್ಲಿ ಮುಖ್ಯವಾದದ್ದು ಹನುಮ ವಿಹಾರಿ ಸ್ಥಾನದಲ್ಲಿ ರವೀಂದ್ರ ಜಡೇಜಾ ಅವರನ್ನು ಆಡಿಸುವುದು.

India Vs Australia Test Cricket 2020 | ಮೆಲ್ಬರ್ನ್ ಟೆಸ್ಟ್​ಗೆ ಹನುಮ ವಿಹಾರಿ ಸ್ಥಾನದಲ್ಲಿ ರವೀಂದ್ರ ಜಡೇಜಾ?
ರವೀಂದ್ರ ಜಡೇಜಾ
ಅರುಣ್​ ಕುಮಾರ್​ ಬೆಳ್ಳಿ
|

Updated on:Dec 21, 2020 | 9:30 PM

Share

ಅಸ್ಟ್ರೇಲಿಯಾ ವಿರುದ್ಧ ನಡೆದ ಟಿ20 ಸರಣಿಯಲ್ಲಿ ತಲೆಗೆ ಪೆಟ್ಟು ತಿಂದು ಕನ್ಕಶನ್​ಗೊಳಗಾಗಿದ್ದ ಭಾರತದ ಆಲ್​ರೌಂಡರ್ ರವೀಂದ್ರ ಜಡೇಜಾ ಅವರನ್ನು ಮೆಲ್ಬರ್ನ್​ನಲ್ಲಿ ನಡೆಯುವ ಎರಡನೆ ಟೆಸ್ಟ್​ನಲ್ಲಿ ಆಡಿಸುವ ಬಗ್ಗೆ ಟೀಮ್ ಇಂಡಿಯಾದ ಥಿಂಕ್ ಟ್ಯಾಂಕ್ ಗಂಭೀರ ಚಿಂತನೆ ನಡೆಸಿದೆ. ತೊಡೆನೋವಿನ ಸಮಸ್ಯೆಯನ್ನೂ ಅನುಭವಿಸುತ್ತಿದ್ದ ಜಡೇಜಾ ನೆಟ್ಸ್​​ನಲ್ಲಿ ಭಾಗಿಯಾಗುತ್ತಿರುವರಾದರೂ ಶೇಕಡಾ ನೂರರಷ್ಟು ಫಿಟ್ ಆದಲ್ಲಿ ಮಾತ್ರ ಆಯ್ಕೆಗೆ ಪರಿಗಣಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಕ್ರಿಸ್​ಮಸ್​ಗೆ ಮೊದಲು ಜಡೇಜಾ ಸಂಪೂರ್ಣವಾಗಿ ಚೇತರಿಸಿಕೊಂಡರೆ ಅವರನ್ನು ಹನುಮ ವಿಹಾರಿ ಸ್ಥಾನದಲ್ಲಿ ಆಡಿಸಲಾಗುವುದು. ಒಬ್ಬ ಸ್ಪೆಷಲಿಸ್ಟ್​ ಬ್ಯಾಟ್ಸ್​ಮನ್​ನನ್ನು ಆಲ್​ರೌಂಡರ್ ರಿಪ್ಲೇಸ್ ಮಾಡುವುದು ಸರಿಯೇ ಎಂಬ ಪ್ರಶ್ನೆ ಉದ್ಭವಿಸುವುದು ಸಹಜ. ಆದರೆ ಟೀಮಿನ ಪ್ರಮುಖ ಬೌಲರ್ ಮೊಹಮ್ಮದ್ ಶಮಿ ಕೈ ಮೂಳೆ ಮುರಿದುಕೊಂಡು ಸರಣಿಯಿಂದ ಹೊರಬಿದ್ದಿರುವುದರಿಂದ ಭಾರತ ತನ್ನ ನಾಲ್ಕು ಬೌಲರ್​ಗಳ ಪಾಲಿಸಿಯನ್ನು ಬದಲಾಯಿಸಿ ಐದು ಬೌಲರ್​ಗಳನ್ನು ಆಡಿಸುವ ನಿರ್ಧಾರಕ್ಕೆ ಬಂದಿದೆ.

ಹಾಗೆ ನೋಡಿದರೆ, ಟೆಸ್ಟ್​ಗಳಲ್ಲಿ ಜಡೇಜಾ ಅವರ ಬ್ಯಾಟಿಂಗ್ ಪ್ರದರ್ಶನ ವಿಹಾರಿಗಿಂತ ಸ್ವಲ್ಪ ಚೆನ್ನಾಗಿದೆ. ಇದುವರೆಗೆ 49 ಟೆಸ್ಟ್​ಗಳನ್ನಾಡಿರುವ ಜದ್ದು, 35ರ ಸರಾಸರಿಯಲ್ಲಿ 1,869 ರನ್ ಕಲೆಹಾಕಿದ್ದಾರೆ. ಇದರಲ್ಲಿ ಒಂದು ಶತಕ ಮತ್ತು 14 ಅರ್ಧ ಶತಕಗಳು ಸೇರಿವೆ. ಗಮನಿಸಬೇಕಿರುವ ಅಂಶವೇನೆಂದರೆ, ಆಸ್ಟ್ರೇಲಿಯ ಮತ್ತು ಇಂಗ್ಲೆಂಡ್​ ನೆಲೆಗಳ ಮೇಲೆ ಅವರು ಅರ್ಧ ಶತಕಗಳನ್ನು ಬಾರಿಸಿದ್ದಾರೆ.

ಹನುಮ ವಿಹಾರಿ

10 ಟೆಸ್ಟ್​ಗಳನ್ನಾಡಿರುವ ವಿಹಾರಿ ಒಂದು ಶತಕ ಮತ್ತು 4 ಅರ್ಧ ಶತಕಗಳೊಂದಿಗೆ 33ರ ಸರಾಸರಿಯಲ್ಲಿ 576 ರನ್ ಶೇಖರಿಸಿದ್ದಾರೆ.

‘ಜಡೇಜಾ ಸುದೀರ್ಘ ಸ್ಪೆಲ್​ಗಳನ್ನು ಬೌಲ್ ಮಾಡುವಷ್ಟು ಫಿಟ್ ಆದರೆ, ಚರ್ಚೆಯೇ ಉದ್ಭವಿಸುವುದಿಲ್ಲ. ನಿಶ್ಚಿತವಾಗಿಯೂ ವಿಹಾರಿ ಸ್ಥಾನದಲ್ಲಿ ಜಡೇಜಾ ಆಡುತ್ತಾರೆ. ಮೆಲ್ಬರ್ನ್ ಮೈದಾನದಲ್ಲಿ ಐವರು ಬೌಲರ್​ಗಳನ್ನು ಆಡಿಸುವ ಅವಕಾಶ ನಮಗೆ ಲಭ್ಯವಾಗುತ್ತದೆ’ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಡಿಲೇಡ್ ಮೈದಾನದಲ್ಲಿ ಟೀಮ್ ಇಂಡಿಯಾ

ಏತನ್ಮಧ್ಯೆ, ಮಂಗಳವಾರದಂದು ಭಾರತಕ್ಕೆ ವಾಪಸ್ಸಾಗಲಿರುವ ವಿರಾಟ್ ಕೊಹ್ಲಿ ಇಂದು ಭಾರತೀಯ ಆಟಗಾರರೊಂದಿಗೆ ಸುದೀರ್ಘವಾದ ಚರ್ಚೆ ನಡೆಸಿದರೆಂದು ಗೊತ್ತಾಗಿದೆ. ಮಳೆಯ ಕಾರಣ ಭಾರತದ ಆಟಗಾರರು ಅಭ್ಯಾಸಕ್ಕಾಗಿ ತೆರಳದೆ ತಮ್ಮ ರೂಮುಗಳಲ್ಲಿ ಉಳಿದುಬಿಟ್ಟಿದ್ದರು.

Published On - 9:06 pm, Mon, 21 December 20

ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ