AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World U20 Athletics Championships: ಭಾರತಕ್ಕೆ ಮತ್ತೊಂದು ಪದಕ.. 10,000 ಮೀಟರ್ ಕಾಲ್ನಡಿಗೆಯಲ್ಲಿ ಬೆಳ್ಳಿ ಗೆದ್ದ ಅಮಿತ್

World U20 Athletics Championships: ಸ್ತುತ ಕೀನ್ಯಾದ ನೈರೋಬಿಯಲ್ಲಿ ನಡೆಯುತ್ತಿರುವ ಅಂಡರ್ -20 ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಓಟಗಾರ ಅಮಿತ್ ಖಾತ್ರಿ ಪದಕ ಗೆದ್ದಿದ್ದಾರೆ.

World U20 Athletics Championships: ಭಾರತಕ್ಕೆ ಮತ್ತೊಂದು ಪದಕ.. 10,000 ಮೀಟರ್ ಕಾಲ್ನಡಿಗೆಯಲ್ಲಿ ಬೆಳ್ಳಿ ಗೆದ್ದ ಅಮಿತ್
ಅಮಿತ್ ಖಾತ್ರಿ
TV9 Web
| Edited By: |

Updated on: Aug 21, 2021 | 4:15 PM

Share

ಪ್ರಸ್ತುತ ಕೀನ್ಯಾದ ನೈರೋಬಿಯಲ್ಲಿ ನಡೆಯುತ್ತಿರುವ ಅಂಡರ್ -20 ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಓಟಗಾರ ಅಮಿತ್ ಖಾತ್ರಿ ಪದಕ ಗೆದ್ದಿದ್ದಾರೆ. ಪುರುಷರ 10,000 ಮೀಟರ್ ನಡಿಗೆಯಲ್ಲಿ ಅಮಿತ್ ಬೆಳ್ಳಿ ಪದಕ ಗೆದ್ದಿದ್ದಾರೆ. ಅಮಿತ್ 42 ನಿಮಿಷ 17.94 ಸೆಕೆಂಡುಗಳಲ್ಲಿ ಓಟವನ್ನು ಪೂರ್ಣಗೊಳಿಸಿದರು. ಈ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಇದು ಎರಡನೇ ಪದಕವಾಗಿದೆ. ಈ ಮೊದಲು ಭಾರತವು ಮಿಶ್ರ ರಿಲೇ ತಂಡ 4×400 ಮೀಟರ್ ಓಟದಲ್ಲಿ ಕಂಚಿನ ಪದಕ ಗೆದ್ದಿತ್ತು. ಅಮಿತ್ 20 ವರ್ಷದೊಳಗಿನವರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಐದನೇ ಭಾರತೀಯ ಆಟಗಾರ.

ಓಟದ ನಡಿಗೆಯಲ್ಲಿ ಅಮಿತ್ ಮುಂಚೂಣಿಯಲ್ಲಿದ್ದರು. ಆದರೆ ಅವರು ನೀರು ಕುಡಿಯುವ ವೇಳೆ ಸ್ವಲ್ಪ ಹೊತ್ತು ವಿಶ್ರಮಿಸಿದರು. ಈ ಮಧ್ಯೆ ಕೀನ್ಯಾದ ಹೆರಿಸ್ಟೋನ್ ವನ್ಯೋನಿ ಅಮಿತ್ ಅವರನ್ನು ಹಿಂದಿಕ್ಕಿ ಮುಂದೆ ಸಾಗಿದರು. ನಂತರ ಹೆರಿಸ್ಟೋನ್, ಅಮಿತ್​ಗೆ ಮುಂದೆ ಸಾಗುವ ಯಾವುದೇ ಅವಕಾಶವನ್ನು ನೀಡಲಿಲ್ಲ. ಹೀಗಾಗಿ ಹೆರಿಸ್ಟೋನ್ ಚಿನ್ನದ ಪದಕವನ್ನು ಪಡೆದರು. ಸ್ಪೇನ್‌ನ ಪಾಲ್ ಮೆಕ್‌ಗ್ರಾತ್ 42: 26.11 ಸೆಕೆಂಡುಗಳಲ್ಲಿ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾದರು.

ಮಿಶ್ರ ತಂಡ ಇತಿಹಾಸ ಸೃಷ್ಟಿಸಿದೆ ಈ ಹಿಂದೆ, ಆಗಸ್ಟ್ 18 ರಂದು, ಭಾರತ 4*400 ಮೀಟರ್ ಮಿಶ್ರ ರಿಲೇ ಓಟದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿತು. ಭಾರತದ ಭರತ್, ಕಪಿಲ್, ಸುಮಿ ಮತ್ತು ಪ್ರಿಯಾ ಮೋಹನ್ 3.20.60 ನಿಮಿಷಗಳ ಸಮಯದೊಂದಿಗೆ ಮೂರನೇ ಸ್ಥಾನ ಪಡೆದರು. ಭಾರತೀಯ ಕ್ರೀಡಾಪಟುಗಳು ಋತುವಿನ ಅತ್ಯುತ್ತಮ ಪ್ರದರ್ಶನ ನೀಡಿದರು. ನೈಜೀರಿಯಾ ಈ ಸ್ಪರ್ಧೆಯಲ್ಲಿ ಚಿನ್ನ ಪದಕವನ್ನು ಪಡೆದುಕೊಂಡಿತು ಮತ್ತು ಪೋಲೆಂಡ್ ಬೆಳ್ಳಿ ಪದಕವನ್ನು ಪಡೆಯಿತು. ನೈಜೀರಿಯಾ 3: 19.70 ನಿಮಿಷಗಳು ಮತ್ತು ಪೋಲೆಂಡ್ 3: 19.80 ನಿಮಿಷಗಳಲ್ಲಿ ಮೊದಲ ಮತ್ತು ಎರಡನೇ ಸ್ಥಾನ ಪಡೆದುಕೊಂಡಿದೆ. ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಮೊದಲ ಬಾರಿಗೆ 4*400 ಮೀಟರ್ ಮಿಶ್ರ ರಿಲೇ ರೇಸ್ ಅನ್ನು ಸೇರಿಸಲಾಯಿತು. ಇದರಲ್ಲಿ ಭಾರತ ಮೊದಲ ಬಾರಿಗೆ ಪದಕ ಗೆದ್ದಿತು. ಅಲ್ಲದೆ, ಭಾರತ ಮೊದಲ ದಿನವೇ ಪದಕದೊಂದಿಗೆ ತನ್ನ ಖಾತೆಯನ್ನು ತೆರೆದಿದೆ.

ಇದು ಅಂಡರ್ -20 ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಇತಿಹಾಸದಲ್ಲಿ ಭಾರತದ ಐದನೇ ಪದಕವಾಗಿದೆ. ಎರಡನೇ ಅತ್ಯುತ್ತಮ ಸಮಯದೊಂದಿಗೆ ಭಾರತ ಫೈನಲ್‌ಗೆ ಪ್ರವೇಶಿಸಿತ್ತು. ಭಾರತೀಯ ಕ್ರೀಡಾಪಟುಗಳು ಮೊದಲ ಸುತ್ತಿನಲ್ಲಿ 3: 23.36 ನಿಮಿಷಗಳನ್ನು ತೆಗೆದುಕೊಳ್ಳುವ ಮೂಲಕ ಗುರಿ ಮುಟ್ಟಿದರು. ಇದರೊಂದಿಗೆ ಭಾರತ ಚಾಂಪಿಯನ್‌ಶಿಪ್ ದಾಖಲೆಯನ್ನು ಮುರಿಯಿತು. ಆದಾಗ್ಯೂ, ನೈಜೀರಿಯಾ ನಂತರ ಎರಡನೇ ಸುತ್ತಿನಲ್ಲಿ 3: 21.66 ನಿಮಿಷಗಳಲ್ಲಿ ಕ್ರಮಿಸುವ ಮೂಲಕ ಭಾರತದ ದಾಖಲೆಯನ್ನು ಮುರಿಯಿತು. ಮಿಶ್ರ ರಿಲೇ ತಂಡದಲ್ಲಿ ಸೇರಿಸಲಾದ ಇಬ್ಬರೂ ಮಹಿಳಾ ಕ್ರೀಡಾಪಟುಗಳು ಅಂತಿಮ ಓಟದ ಮೊದಲು ದಿನಕ್ಕೆ ಎರಡು ಬಾರಿ 400 ಮೀಟರ್ ಓಟದಲ್ಲಿ ಭಾಗವಹಿಸಿದ್ದರು ಎಂಬ ಅರ್ಥದಲ್ಲಿ ಭಾರತೀಯ ತಂಡದ ಪ್ರದರ್ಶನವೂ ಮುಖ್ಯವಾಗಿದೆ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ