XUV700 ಬೇಗ ಕಳಿಸಿ ಎಂದ ಥಾಮಸ್ ಕಪ್ ವಿನ್ನರ್​ಗೆ ಆನಂದ್ ಮಹೀಂದ್ರ ಉತ್ತರ ಹೀಗಿತ್ತು

ಭಾರತೀಯ ಆಟೋಮೊಬೈಲ್ ಕ್ಷೇತ್ರದಲ್ಲಿ ವಾಹನ ಉತ್ಪಾದನೆಯು ನಿಧಾಗತಿಯಲ್ಲಿ ನಡೆಯುತ್ತಿದೆ. ಅದರಲ್ಲೂ ಬಹುತೇಕ ಕಂಪೆನಿಗಳಲ್ಲಿ ಬುಕ್ ಮಾಡಿರುವ ವಾಹನಗಳ ಪೂರೈಕೆಯು ವಿಳಂಬವಾಗುತ್ತಿದೆ.

XUV700 ಬೇಗ ಕಳಿಸಿ ಎಂದ ಥಾಮಸ್ ಕಪ್ ವಿನ್ನರ್​ಗೆ ಆನಂದ್ ಮಹೀಂದ್ರ ಉತ್ತರ ಹೀಗಿತ್ತು
anand mahindra-chirag shetty
Follow us
| Updated By: ಝಾಹಿರ್ ಯೂಸುಫ್

Updated on: May 22, 2022 | 6:26 PM

ಭಾರತ ಬ್ಯಾಡ್ಮಿಂಟನ್ ತಂಡ ಇತ್ತೀಚೆಗಷ್ಟೇ ಇಂಡೋನೇಷ್ಯಾವನ್ನು ಮಣಿಸಿ ಚೊಚ್ಚಲ ಬಾರಿಗೆ ಥಾಮಸ್ ಕಪ್ ಅನ್ನು ಮುಡಿಗೇರಿಸಿಕೊಂಡಿತ್ತು. ಈ ಐತಿಹಾಸಿಕ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬಂದಿತ್ತು. ಈ ತಂಡದಲ್ಲಿ ಯುವ ಬ್ಯಾಡ್ಮಿಂಟನ್ ತಾರೆ ಚಿರಾಗ್ ಶೆಟ್ಟಿ ಕೂಡ ಕಾಣಿಸಿಕೊಂಡಿದ್ದರು. ಅದರಲ್ಲೂ ಚಿರಾಗ್ ಶೆಟ್ಟಿ ಹಾಗೂ ಸಾತ್ವಿಕ್ ಸಾಯಿರಾಜ್ ಡಬಲ್ಸ್​ನಲ್ಲಿ ಸಂಚಲನ ಸೃಷ್ಟಿಸಿದ್ದರು. ಈ ಅದ್ಭುತ ಪ್ರದರ್ಶನದ ಮೂಲಕ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ತಂಡವನ್ನು ಉದ್ಯಮಿ ಮಹೀಂದ್ರ ಗ್ರೂಪ್‌ನ ಅಧ್ಯಕ್ಷ ಆನಂದ್‌ ಮಹೀಂದ್ರ ಟ್ವೀಟ್‌ ಮೂಲಕ ಪ್ರಶಂಶಿಸಿದ್ದರು.

ಸೋಷಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಆನಂದ್ ಮಹೀಂದ್ರ, ಕ್ರೀಡಾಲೋಕದಲ್ಲಿ ಭಾರತೀಯರ ಹೊಸ ಯುಗ ಆರಂಭವಾಗಿದೆ. ನಮ್ಮ ದೇಶಾದ್ಯಂತ ಎಲ್ಲರೂ ಪ್ರೀತಿಸುವ ಮತ್ತು ಆಡುವ ಕ್ರೀಡೆಗಳಲ್ಲಿ ಇದು ಒಂದು. ನಾನು ಥಾಮಸ್ ಕಪ್ ಮತ್ತು ಅದರಲ್ಲಿ ಪ್ರಾಬಲ್ಯ ಸಾಧಿಸಿದ ಇಂಡೋನೇಷ್ಯಾದ ರೂಡಿ ಹಾರ್ಟೊನೊ ಅವರಂತಹ ದಿಗ್ಗಜರ ಬಗ್ಗೆ ಓದುತ್ತಾ ಬೆಳೆದವನು. ಇಂದು ನಾವು ಬಲಿಷ್ಠ ಇಂಡೋನೇಷ್ಯಾ ವಿರುದ್ದ ಸ್ವೀಪ್ ಮಾಡಿ ಗೆದ್ದಿದ್ದೇವೆ. ನಮ್ಮ ಸಮಯ ಕೂಡ ಬಂದಿದೆ ಎಂದು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು
Image
Virat Kohli: ಕೊಹ್ಲಿ ಕಡೆಯಿಂದ ರಶೀದ್ ಖಾನ್​​ಗೆ ಸ್ಪೆಷಲ್ ಗಿಫ್ಟ್​: ಸೇಫ್ ಆಗಿ ಇಟ್ಟಿರಿ ಎಂದ ಸೌತ್ ಆಫ್ರಿಕಾ ಕ್ರಿಕೆಟಿಗ
Image
KL Rahul: ಐಪಿಎಲ್​ನಲ್ಲಿ ರಾಹುಲ್ ಅಬ್ಬರ: ಸತತ 5ನೇ ಬಾರಿ ಕೆಎಲ್ ಕಿಂಗ್
Image
IPL 2022: ಬುಮ್ರಾ ದಾಖಲೆ ಮುರಿದ ಉಮ್ರಾನ್ ಮಲಿಕ್

ಈ ಟ್ವೀಟ್​ಗೆ ಪ್ರಕ್ರಿಯಿಸಿರುವ 23 ವರ್ಷದ ಯುವ ಆಟಗಾರ ಚಿರಾಗ್ ಶೆಟ್ಟಿ, ಆನಂದ್ ಮಹೀಂದ್ರ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಜೊತೆಗೆ ಮಹೀಂದ್ರ ಕಂಪೆನಿಯಲ್ಲಿ ತಾನು ಬುಕ್ ಮಾಡಿರುವ ಕಾರನ್ನು ಬೇಗನೆ ಕಳುಹಿಸಿಕೊಡುವಂತೆ ಮನವಿ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: IPL 2022: ಹೇಗಿರಲಿದೆ ಪ್ಲೇಆಫ್: ಇಲ್ಲಿ 2 ತಂಡಗಳಿಗೆ ಡಬಲ್ ಚಾನ್ಸ್​..!

ಸರ್, ನಾನು ಇತ್ತೀಚೆಗೆ ಎಕ್ಸ್​ಯುವಿ 700 ಅನ್ನು ಬುಕ್ ಮಾಡಿದ್ದೇನೆ. ಅದು ಶೀಘ್ರದಲ್ಲೇ ನನಗೆ ಸಿಗಲಿದೆ ಎಂದು ಭಾವಿಸುತ್ತೇನೆ ಎಂದು ಚಿರಾಗ್ ಶೆಟ್ಟಿ ಪ್ರತಿಕ್ರಿಯಿಸಿದ್ದರು. ಇದನ್ನು ಗಮನಿಸಿದ ಆನಂದ್ ಮಹೀಂದ್ರ ಉತ್ತರ ಸ್ವಾರಸ್ಯಕರ ಉತ್ತರ ನೀಡಿದ್ದು ವಿಶೇಷ. ಎಕ್ಸ್​ಯುವಿ700 ಚಾಂಪಿಯನ್‌ಗಳ ಆಯ್ಕೆಯಾಗಿರುವುದರಿಂದ ಅದನ್ನು ತಲುಪಿಸಲು ನಾವು ಹೆಚ್ಚು ಶ್ರಮವಹಿಸುತ್ತೇವೆ ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ನಾನು ಸಹ ನನ್ನ ಹೆಂಡತಿಗೆ ಒಂದನ್ನು ಬುಕ್ ಮಾಡಿದ್ದೇನೆ. ಇದೀಗ ಅದನ್ನು ಪಡೆಯಲು ಕ್ಯೂ ನಲ್ಲಿ ಕಾಯುತ್ತಿದ್ದೇನೆ ಎಂದು ಆನಂದ್ ಮಹೀಂದ್ರ ತಿಳಿಸಿದ್ದಾರೆ.

ಇದರ ಜೊತೆಗೆ ವಾಹನ ಪೂರೈಕೆ ವಿಳಂಬವಾಗುತ್ತಿರುವುದಕ್ಕೂ ಕಾರಣ ಸ್ಪಷ್ಟನೆ ನೀಡಿದ್ದಾರೆ. ವಾಹನಕ್ಕೆ ಬೇಕಾದ ಕೆಲ ಉತ್ಪನ್ನಗಳ ಜಾಗತಿಕ ಪೂರೈಕೆಯ ಅಡೆತಡೆಗಳು ಎಲ್ಲಾ ಕಾರು ಕಂಪನಿಗಳನ್ನು ಬಾಧಿಸುತ್ತಿವೆ ಎಂದು ಆನಂದ್ ಮಹೀಂದ್ರ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಸದ್ಯ ಭಾರತೀಯ ಆಟೋಮೊಬೈಲ್ ಕ್ಷೇತ್ರದಲ್ಲಿ ವಾಹನ ಉತ್ಪಾದನೆಯು ನಿಧಾಗತಿಯಲ್ಲಿ ನಡೆಯುತ್ತಿದೆ. ಅದರಲ್ಲೂ ಬಹುತೇಕ ಕಂಪೆನಿಗಳಲ್ಲಿ ಬುಕ್ ಮಾಡಿರುವ ವಾಹನಗಳ ಪೂರೈಕೆಯು ವಿಳಂಬವಾಗುತ್ತಿದೆ. ಇದಕ್ಕೆ ಮುಖ್ಯ ಕಾರಣ ಸೆಮಿಕಂಡಕ್ಟರ್​ಗಳ ಕೊರತೆ. ಕೊರೋನಾ ಸಾಂಕ್ರಮಿಕ ರೋಗದ ಬಳಿಕ ವಿಶ್ವದಾದ್ಯಂತ ಸೆಮಿಕಂಡಕ್ಟರ್​ಗಳ ಉತ್ಪಾದನೆಯಲ್ಲಿ ವಿಳಂಬವಾಗುತ್ತಿದೆ. ಹೀಗಾಗಿ ಭಾರತ ಸೇರಿದಂತೆ ವಿಶ್ವದ ಪ್ರಮುಖ ವಾಹನ ಕ್ಷೇತ್ರಗಳ ಮೇಲೆ ಇದರ ಕೊರೆತೆ ನೇರ ಪರಿಣಾಮ ಬೀರಿದೆ. ಹಾಗಾಗಿ ಭಾರತದಲ್ಲಿ ಬುಕ್ ಮಾಡಿದ ವಾಹನಗಳು ನಿಗದಿತ ಸಮಯದಲ್ಲಿ ಡೆಲಿವರಿ ನೀಡಲಾಗುತ್ತಿಲ್ಲ. ಇದನ್ನೇ ಜಾಗತಿಕ ಪೂರೈಕೆಯ ಅಡೆತಡೆಗಳು ಎಲ್ಲಾ ಕಾರು ಕಂಪನಿಗಳನ್ನು ಬಾಧಿಸುತ್ತಿವೆ ಎಂದು ಆನಂದ್ ಮಹೀಂದ್ರ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು