AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಆಂದ್ರೆ ರಸ್ಸೆಲ್ ಬೌಲಿಂಗ್ ಅಬ್ಬರದೆದುರು ನಲುಗಿದ ಮುಂಬೈ ಬ್ಯಾಟ್ಸ್​ಮನ್​ಗಳು ಗಳಿಸಿದ್ದು 153 ರನ್ ಮಾತ್ರ!

ಕೈರನ್ ಪೊಲ್ಲಾರ್ಡ್, ಕೃಣಾಲ್ ಪಾಂಡೆ, ಮಾರ್ಕೊ ಜಾನ್ಸೆನ್, ರಾಹುಲ್ ಚಹರ್ ಮತ್ತು ಜಸ್ಪ್ರೀತ್ ಬುಮ್ರಾ ಅವರ ವಿಕೆಟ್​ಗಳನ್ನು ರಸ್ಸೆಲ್ ಪಡೆದರು. ಐಪಿಎಲ್​ನಲ್ಲಿ ಇದು ಅವರ ಅತ್ಯುತ್ತಮ ಬೌಲಿಂಗ್ ಪ್ರದರ್ಶನವಾಗಿದೆ.

IPL 2021: ಆಂದ್ರೆ ರಸ್ಸೆಲ್ ಬೌಲಿಂಗ್ ಅಬ್ಬರದೆದುರು ನಲುಗಿದ ಮುಂಬೈ ಬ್ಯಾಟ್ಸ್​ಮನ್​ಗಳು ಗಳಿಸಿದ್ದು 153 ರನ್ ಮಾತ್ರ!
ಆಂಡ್ರೆ ರಸ್ಸೆಲ್
ಅರುಣ್​ ಕುಮಾರ್​ ಬೆಳ್ಳಿ
|

Updated on:Apr 13, 2021 | 10:03 PM

Share

ಚೆನೈ: ಇಲ್ಲಿ ಇಂದು ರಸ್ಸೆಲ್ ಮೇನಿಯಾ, ಆದರೆ ಬ್ಯಾಟ್​ನಿಂದಲ್ಲ, ಕರಾರುವಕ್ಕಾದ ಬೌಲಿಂಗ್​ನಿಂದ! ಇಂಡಿಯನ್​ ಪ್ರಿಮೀಯರ್ ಲೀಗ್​ನಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್​ಗೆ ಹೆಸರಾಗಿರುವ ವೆಸ್ಟ್ ಇಂಡೀಸ್​ ದೈತ್ಯ ಇವತ್ತು ಬದಲಾವಣೆಗೆ ಎಂಬಂತೆ ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಬೌಲಿಂಗ್​ನಲ್ಲಿ ಮಿಂಚಿ 5 ವಿಕೆಟ್ ಪಡೆಯುವ ಸಾಧನೆ ಮಾಡಿದರು. ಇನ್ನೂ ಆಶ್ಚರ್ಯಕರ ಸಂಗತಿಯೆಂದರೆ ಅವರು ಕೇವಲ 2 ಓವರ್​ನ್ಲಲಿ 15 ರನ್ ನೀಡಿ 5 ವಿಕೆಟ್ ಕಬಳಿಸಿದರು. ಪ್ರಚಂಡ ದಾಳಿಯಿಂದ ಮುಂಬೈ ಆಟಗಾರರನ್ನು ಅಕ್ಷರಶ: ತತ್ತರಿಸುವಂತೆ ಮಾಡಿದ ರಸ್ಸೆಲ್​ಗೆ ಎರಡು ಬಾರಿ ಹ್ಯಾಟ್ರಿಕ್ ಪಡೆಯುವ ಅವಕಾಶವಿತ್ತು.

ಕೈರನ್ ಪೊಲ್ಲಾರ್ಡ್, ಕೃಣಾಲ್ ಪಾಂಡೆ, ಮಾರ್ಕೊ ಜಾನ್ಸೆನ್, ರಾಹುಲ್ ಚಹರ್ ಮತ್ತು ಜಸ್ಪ್ರೀತ್ ಬುಮ್ರಾ ಅವರ ವಿಕೆಟ್​ಗಳನ್ನು ರಸ್ಸೆಲ್ ಪಡೆದರು. ಐಪಿಎಲ್​ನಲ್ಲಿ ಇದು ಅವರ ಅತ್ಯುತ್ತಮ ಬೌಲಿಂಗ್ ಪ್ರದರ್ಶನವಾಗಿದೆ. ಇದಕ್ಕೆ ಮೊದಲು ಅವರು 20 ರನ್ ನೀಡಿ 4 ವಿಕೆಟ್ ಪಡೆದಿದ್ದು ಅತ್ಯುತ್ತಮ ಸಾಧನೆಯಾಗಿತ್ತು.

ನಾಯಕ ರೋಹಿತ್ ಶರ್ಮ (43, 32 ಎಸೆತ, 3ಬೌಂಡರಿ 1 ಸಿಕ್ಸ್) ಮತ್ತು ಸೂರ್ಯಕುಮಾರ ಯಾದವ್ (56 36 ಎಸೆತ 7 ಬೌಂಡರಿ 2 ಸಿಕ್ಸರ್) ಅವರ ಕಾಂಟ್ರಿಬ್ಯೂಷನ್ ಮತ್ತು ಎರಡನೇ ವಿಕೆಟ್​ಗೆ ಅವರು ಸೇರಿಸಿದ 76 ರನ್ ಬಿಟ್ಟರೆ, ಮುಂಬೈ ಟೀಮಿನ ಆಟದ ಬಗ್ಗೆ ಹೇಳುವಂಥದ್ದು ಏನೂ ಇಲ್ಲ. ತಂಡವು 20 ಓವರ್ ಅಂತ್ಯಕ್ಕೆ ಎಲ್ಲಾ ವಿಕೆಟ್ ಕಳೆದುಕೊಂಡು 152 ರನ್ ಗಳಿಸಿದೆ. ಪಂದ್ಯ ಗೆಲ್ಲಲು ಕೋಲ್ಕತ್ತಾ ನೈಟ್ ರೈಡರ್ಸ್​ಗೆ 153 ರನ್ ಬೇಕಿದೆ. ಕೋಲ್ಕತ್ತಾದ ಇತರ ಬೌಲರ್​ಗಳಲ್ಲಿ ಕಮಿನ್ಸ್ 2 ವಿಕೆಟ್ ಪಡೆದರೆ, ವರುಣ್ ಚಕ್ರವರ್ತಿ, ಶಕೀಬ್ ಅಲ್ ಹಸನ್, ಪ್ರಸಿದ್ಧ್ ಕೃಷ್ಣ ತಲಾ 1 ವಿಕೆಟ್ ಪಡೆದರು.

ಇದನ್ನೂ ಓದಿ: IPL 2021: ವೈಯಕ್ತಿಕ ದುಃಖ ಮೆಟ್ಟಿನಿಂತು ಪದಾರ್ಪಣೆಯ ಪಂದ್ಯದಲ್ಲೇ ಕ್ರಿಕೆಟ್​ ಪ್ರೇಮಿಗಳ ಮನ ಗೆದ್ದ ರಾಜಸ್ತಾನ್ ರಾಯಲ್ಸ್​ ತಂಡದ ಚೇತನ್

Published On - 10:03 pm, Tue, 13 April 21

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ