IPL 2021: ಆಂದ್ರೆ ರಸ್ಸೆಲ್ ಬೌಲಿಂಗ್ ಅಬ್ಬರದೆದುರು ನಲುಗಿದ ಮುಂಬೈ ಬ್ಯಾಟ್ಸ್​ಮನ್​ಗಳು ಗಳಿಸಿದ್ದು 153 ರನ್ ಮಾತ್ರ!

ಕೈರನ್ ಪೊಲ್ಲಾರ್ಡ್, ಕೃಣಾಲ್ ಪಾಂಡೆ, ಮಾರ್ಕೊ ಜಾನ್ಸೆನ್, ರಾಹುಲ್ ಚಹರ್ ಮತ್ತು ಜಸ್ಪ್ರೀತ್ ಬುಮ್ರಾ ಅವರ ವಿಕೆಟ್​ಗಳನ್ನು ರಸ್ಸೆಲ್ ಪಡೆದರು. ಐಪಿಎಲ್​ನಲ್ಲಿ ಇದು ಅವರ ಅತ್ಯುತ್ತಮ ಬೌಲಿಂಗ್ ಪ್ರದರ್ಶನವಾಗಿದೆ.

IPL 2021: ಆಂದ್ರೆ ರಸ್ಸೆಲ್ ಬೌಲಿಂಗ್ ಅಬ್ಬರದೆದುರು ನಲುಗಿದ ಮುಂಬೈ ಬ್ಯಾಟ್ಸ್​ಮನ್​ಗಳು ಗಳಿಸಿದ್ದು 153 ರನ್ ಮಾತ್ರ!
ಆಂಡ್ರೆ ರಸ್ಸೆಲ್
ಅರುಣ್​ ಕುಮಾರ್​ ಬೆಳ್ಳಿ

Updated on: Apr 13, 2021 | 10:03 PM

ಚೆನೈ: ಇಲ್ಲಿ ಇಂದು ರಸ್ಸೆಲ್ ಮೇನಿಯಾ, ಆದರೆ ಬ್ಯಾಟ್​ನಿಂದಲ್ಲ, ಕರಾರುವಕ್ಕಾದ ಬೌಲಿಂಗ್​ನಿಂದ! ಇಂಡಿಯನ್​ ಪ್ರಿಮೀಯರ್ ಲೀಗ್​ನಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್​ಗೆ ಹೆಸರಾಗಿರುವ ವೆಸ್ಟ್ ಇಂಡೀಸ್​ ದೈತ್ಯ ಇವತ್ತು ಬದಲಾವಣೆಗೆ ಎಂಬಂತೆ ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಬೌಲಿಂಗ್​ನಲ್ಲಿ ಮಿಂಚಿ 5 ವಿಕೆಟ್ ಪಡೆಯುವ ಸಾಧನೆ ಮಾಡಿದರು. ಇನ್ನೂ ಆಶ್ಚರ್ಯಕರ ಸಂಗತಿಯೆಂದರೆ ಅವರು ಕೇವಲ 2 ಓವರ್​ನ್ಲಲಿ 15 ರನ್ ನೀಡಿ 5 ವಿಕೆಟ್ ಕಬಳಿಸಿದರು. ಪ್ರಚಂಡ ದಾಳಿಯಿಂದ ಮುಂಬೈ ಆಟಗಾರರನ್ನು ಅಕ್ಷರಶ: ತತ್ತರಿಸುವಂತೆ ಮಾಡಿದ ರಸ್ಸೆಲ್​ಗೆ ಎರಡು ಬಾರಿ ಹ್ಯಾಟ್ರಿಕ್ ಪಡೆಯುವ ಅವಕಾಶವಿತ್ತು.

ಕೈರನ್ ಪೊಲ್ಲಾರ್ಡ್, ಕೃಣಾಲ್ ಪಾಂಡೆ, ಮಾರ್ಕೊ ಜಾನ್ಸೆನ್, ರಾಹುಲ್ ಚಹರ್ ಮತ್ತು ಜಸ್ಪ್ರೀತ್ ಬುಮ್ರಾ ಅವರ ವಿಕೆಟ್​ಗಳನ್ನು ರಸ್ಸೆಲ್ ಪಡೆದರು. ಐಪಿಎಲ್​ನಲ್ಲಿ ಇದು ಅವರ ಅತ್ಯುತ್ತಮ ಬೌಲಿಂಗ್ ಪ್ರದರ್ಶನವಾಗಿದೆ. ಇದಕ್ಕೆ ಮೊದಲು ಅವರು 20 ರನ್ ನೀಡಿ 4 ವಿಕೆಟ್ ಪಡೆದಿದ್ದು ಅತ್ಯುತ್ತಮ ಸಾಧನೆಯಾಗಿತ್ತು.

ನಾಯಕ ರೋಹಿತ್ ಶರ್ಮ (43, 32 ಎಸೆತ, 3ಬೌಂಡರಿ 1 ಸಿಕ್ಸ್) ಮತ್ತು ಸೂರ್ಯಕುಮಾರ ಯಾದವ್ (56 36 ಎಸೆತ 7 ಬೌಂಡರಿ 2 ಸಿಕ್ಸರ್) ಅವರ ಕಾಂಟ್ರಿಬ್ಯೂಷನ್ ಮತ್ತು ಎರಡನೇ ವಿಕೆಟ್​ಗೆ ಅವರು ಸೇರಿಸಿದ 76 ರನ್ ಬಿಟ್ಟರೆ, ಮುಂಬೈ ಟೀಮಿನ ಆಟದ ಬಗ್ಗೆ ಹೇಳುವಂಥದ್ದು ಏನೂ ಇಲ್ಲ. ತಂಡವು 20 ಓವರ್ ಅಂತ್ಯಕ್ಕೆ ಎಲ್ಲಾ ವಿಕೆಟ್ ಕಳೆದುಕೊಂಡು 152 ರನ್ ಗಳಿಸಿದೆ. ಪಂದ್ಯ ಗೆಲ್ಲಲು ಕೋಲ್ಕತ್ತಾ ನೈಟ್ ರೈಡರ್ಸ್​ಗೆ 153 ರನ್ ಬೇಕಿದೆ. ಕೋಲ್ಕತ್ತಾದ ಇತರ ಬೌಲರ್​ಗಳಲ್ಲಿ ಕಮಿನ್ಸ್ 2 ವಿಕೆಟ್ ಪಡೆದರೆ, ವರುಣ್ ಚಕ್ರವರ್ತಿ, ಶಕೀಬ್ ಅಲ್ ಹಸನ್, ಪ್ರಸಿದ್ಧ್ ಕೃಷ್ಣ ತಲಾ 1 ವಿಕೆಟ್ ಪಡೆದರು.

ಇದನ್ನೂ ಓದಿ: IPL 2021: ವೈಯಕ್ತಿಕ ದುಃಖ ಮೆಟ್ಟಿನಿಂತು ಪದಾರ್ಪಣೆಯ ಪಂದ್ಯದಲ್ಲೇ ಕ್ರಿಕೆಟ್​ ಪ್ರೇಮಿಗಳ ಮನ ಗೆದ್ದ ರಾಜಸ್ತಾನ್ ರಾಯಲ್ಸ್​ ತಂಡದ ಚೇತನ್

Published On - 10:03 pm, Tue, 13 April 21

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us