AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ್ಯ ಸ್ನೇಹಿತರಾಗಿದ್ದ ಅನುಷ್ಕಾ ಶರ್ಮಾ ಮತ್ತು ಸಾಕ್ಷಿ ಧೋನಿ; ಪುರಾವೆ ಒದಗಿಸುತ್ತಿದೆ ವೈರಲ್​ ಫೋಟೋ

Anushka Sharma | Sakshi Dhoni: ಸೋಶಿಯಲ್​ ಮೀಡಿಯಾದಲ್ಲಿ ಅನುಷ್ಕಾ ಶರ್ಮಾ ಮತ್ತು ಸಾಕ್ಷಿ ಅಭಿಮಾನಿಗಳು ಈ ಫೋಟೋವನ್ನು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಅನುಷ್ಕಾ ಹಾಗೂ ಸಾಕ್ಷಿ ಒಂದೇ ಫ್ರೇಮ್​ನಲ್ಲಿ ಕಾಣಿಸಿಕೊಂಡಿರುವುದು ನೋಡಿ ಫ್ಯಾನ್ಸ್​ಗೆ ಅಚ್ಚರಿ ಆಗಿದೆ. ಅದರ ಹಿಂದಿನ ಫ್ಲ್ಯಾಶ್​ಬ್ಯಾಕ್​ ಏನು ಎಂಬ ಕೌತುಕಕ್ಕೂ ಈಗ ತೆರೆಬಿದ್ದಿದೆ.

ಬಾಲ್ಯ ಸ್ನೇಹಿತರಾಗಿದ್ದ ಅನುಷ್ಕಾ ಶರ್ಮಾ ಮತ್ತು ಸಾಕ್ಷಿ ಧೋನಿ; ಪುರಾವೆ ಒದಗಿಸುತ್ತಿದೆ ವೈರಲ್​ ಫೋಟೋ
ಅನುಷ್ಕಾ ಶರ್ಮಾ ಮತ್ತು ಸಾಕ್ಷಿ ಧೋನಿ
ಮದನ್​ ಕುಮಾರ್​
| Edited By: |

Updated on: May 15, 2021 | 3:33 PM

Share

ಬಾಲಿವುಡ್​ನ ಖ್ಯಾತ ನಟಿ ಅನುಷ್ಕಾ ಶರ್ಮಾ ಮತ್ತು ಧೋನಿ ಪತ್ನಿ ಸಾಕ್ಷಿ ನಡುವೆ ಇರುವ ಕಾಮನ್​ ಕನೆಕ್ಷನ್​ ಏನು? ಇಬ್ಬರೂ ಸ್ಟಾರ್​ ಕ್ರಿಕೆಟ್​ ಆಟಗಾರರ ಪತ್ನಿಯರು. ಇದು ಎಲ್ಲರಿಗೂ ಗೊತ್ತಿರುವ ಉತ್ತರ. ಆದರೆ ಅವರು ಕ್ರಿಕೆಟಿಗರ ಪತ್ನಿಯರಾಗುವುದಕ್ಕೂ ಮುನ್ನವೇ ಪರಸ್ಪರ ಸ್ನೇಹಿತೆಯರಾಗಿದ್ದರು ಎಂಬುದು ಅಚ್ಚರಿಯ ವಿಚಾರ. ಅದು ಕೂಡ ತುಂಬ ಚಿಕ್ಕ ವಯಸ್ಸಿನಲ್ಲಿ ಅವರು ಕ್ಲಾಸ್​ಮೇಟ್ಸ್​ ಆಗಿದ್ದರು. ಹಾಗಂತ ಇದು ಯಾವುದೋ ಕಟ್ಟುಕತೆ ಅಲ್ಲ. ಅನುಷ್ಕಾ ಮತ್ತು ಸಾಕ್ಷಿ ಬಾಲ್ಯದ ಸ್ನೇಹಿತೆಯರು ಎಂಬುದಕ್ಕೆ ಈಗ ಒಂದು ಫೋಟೋ ಪುರಾವೆ ಒದಗಿಸುತ್ತಿದೆ.

ಸೋಶಿಯಲ್​ ಮೀಡಿಯಾದಲ್ಲಿ ಅನುಷ್ಕಾ ಶರ್ಮಾ ಮತ್ತು ಸಾಕ್ಷಿ ಅಭಿಮಾನಿಗಳು ಈ ಫೋಟೋವನ್ನು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಶಾಲೆಗೆ ಹೋಗುತ್ತಿದ್ದಾಗ ಅನುಷ್ಕಾ ಹಾಗೂ ಸಾಕ್ಷಿ ಒಂದೇ ಫ್ರೇಮ್​ನಲ್ಲಿ ಕಾಣಿಸಿಕೊಂಡಿರುವ ಫೋಟೋ ನೋಡಿ ಫ್ಯಾನ್ಸ್​ಗೆ ಅಚ್ಚರಿ ಆಗಿದೆ. ಅದರ ಹಿಂದಿನ ಫ್ಲ್ಯಾಶ್​ಬ್ಯಾಕ್​ ಏನು ಎಂಬ ಕೌತುಕಕ್ಕೂ ಈಗ ತೆರೆಬಿದ್ದಿದೆ. ಅಸ್ಸಾಂನ ಒಂದು ಶಾಲೆಯಲ್ಲಿ ಅನುಷ್ಕಾ ಹಾಗೂ ಸಾಕ್ಷಿ ಸಹಪಾಠಿಗಳಾಗಿದ್ದರು.

ಅನುಷ್ಕಾ ಶರ್ಮಾ ತಂದೆ ಅಜಯ್​ ಕುಮಾರ್​ ಶರ್ಮಾ ಅವರು ಭಾರತೀಯ ಸೇನೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಅಸ್ಸಾಂನಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಅಲ್ಲಿನ ಒಂದು ಶಾಲೆಗೆ ಅನುಷ್ಕಾ ಸೇರಿಕೊಂಡಿದ್ದರು. ಅದೇ ಶಾಲೆಯಲ್ಲಿ ಸಾಕ್ಷಿ ಕೂಡ ಓದುತ್ತಿದ್ದರು. 1994ರ ಆ ಸಮಯದಲ್ಲಿ ಇಬ್ಬರೂ ಸ್ನೇಹಿತೆಯರಾಗಿದ್ದರು. ನಂತರವೂ ಅವರ ಸ್ನೇಹ ಮುಂದುವರಿಯಿತು. ವಿದ್ಯಾಭ್ಯಾಸ ಮುಗಿಸಿ ಅನುಷ್ಕಾ ನಟನೆ ಕಡೆಗೆ ಒಲವು ತೋರಿಸಿದರು. ಹೋಟೆಲ್​ ಮ್ಯಾನೇಜ್​ಮೆಂಟ್​ ಕ್ಷೇತ್ರಕ್ಕೆ ಸಾಕ್ಷಿ ಎಂಟ್ರಿ ನೀಡಿದರು. ನಂತರ ಅವರು ಧೋನಿಗೆ ಪರಿಚಯವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಸಿನಿಮಾ ಕೆಲಸಗಳ ಜೊತೆಯಲ್ಲಿ ಮಗುವಿನ ಪಾಲನೆಯಲ್ಲೂ ಅನುಷ್ಕಾ ಶರ್ಮಾ ತೊಡಗಿಕೊಂಡಿದ್ದಾರೆ. ಸದ್ಯ ದೇಶದಲ್ಲಿ ಕೊರೊನಾ ವೈರಸ್​ ಹಾವಳಿ ಮಿತಿ ಮೀರಿದೆ. ಈ ಸಂದರ್ಭದಲ್ಲಿ ಪತಿ ವಿರಾಟ್​ ಕೊಯ್ಲಿ ಜೊತೆಗೆ ಸೇರಿಕೊಂಡು ಅವರು ದೇಣಿಗೆ ಸಂಗ್ರಹ ಮಾಡಿದ್ದಾರೆ. 10 ಕೋಟಿಗೂ ಅಧಿಕ ಹಣ ಸಂಗ್ರಹವಾಗಿದ್ದು ಕೊವಿಡ್​ ವಿರುದ್ಧದ ಹೋರಾಟಕ್ಕೆ ಅದನ್ನು ಬಳಸಲಾಗುವುದು ಎಂದು ಹೇಳಿದ್ದಾರೆ. ವಿರಾಟ್​-ಅನುಷ್ಕಾ 2 ಕೋಟಿ ರೂ. ದೇಣಿಗೆ ನೀಡುವ ಮೂಲಕ ಇತರೆ ಸೆಲೆಬ್ರಿಟಿಗಳಿಗೆ ಮಾದರಿ ಆಗಿದ್ದಾರೆ.

ಇದನ್ನೂ ಓದಿ:

ಪಾಕಿಸ್ತಾನ, ಅಮೆರಿಕದಲ್ಲೂ ಅನುಷ್ಕಾ ಶರ್ಮಾ ಹೋಲುವ ನಟಿಯರು; ಒಬ್ಬರಿಗೆ ಇಷ್ಟ, ಮತ್ತೊಬ್ಬರಿಗೆ ಕಷ್ಟ

ಕೊರೊನಾ ವಿರುದ್ಧದ ಹೋರಾಟಕ್ಕೆ 11 ಕೋಟಿ ರೂ. ದೇಣಿಗೆ ಸಂಗ್ರಹಿಸಿದ ವಿರಾಟ್ ಕೊಹ್ಲಿ- ಅನುಷ್ಕಾ ಶರ್ಮಾ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ