AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ್ಯ ಸ್ನೇಹಿತರಾಗಿದ್ದ ಅನುಷ್ಕಾ ಶರ್ಮಾ ಮತ್ತು ಸಾಕ್ಷಿ ಧೋನಿ; ಪುರಾವೆ ಒದಗಿಸುತ್ತಿದೆ ವೈರಲ್​ ಫೋಟೋ

Anushka Sharma | Sakshi Dhoni: ಸೋಶಿಯಲ್​ ಮೀಡಿಯಾದಲ್ಲಿ ಅನುಷ್ಕಾ ಶರ್ಮಾ ಮತ್ತು ಸಾಕ್ಷಿ ಅಭಿಮಾನಿಗಳು ಈ ಫೋಟೋವನ್ನು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಅನುಷ್ಕಾ ಹಾಗೂ ಸಾಕ್ಷಿ ಒಂದೇ ಫ್ರೇಮ್​ನಲ್ಲಿ ಕಾಣಿಸಿಕೊಂಡಿರುವುದು ನೋಡಿ ಫ್ಯಾನ್ಸ್​ಗೆ ಅಚ್ಚರಿ ಆಗಿದೆ. ಅದರ ಹಿಂದಿನ ಫ್ಲ್ಯಾಶ್​ಬ್ಯಾಕ್​ ಏನು ಎಂಬ ಕೌತುಕಕ್ಕೂ ಈಗ ತೆರೆಬಿದ್ದಿದೆ.

ಬಾಲ್ಯ ಸ್ನೇಹಿತರಾಗಿದ್ದ ಅನುಷ್ಕಾ ಶರ್ಮಾ ಮತ್ತು ಸಾಕ್ಷಿ ಧೋನಿ; ಪುರಾವೆ ಒದಗಿಸುತ್ತಿದೆ ವೈರಲ್​ ಫೋಟೋ
ಅನುಷ್ಕಾ ಶರ್ಮಾ ಮತ್ತು ಸಾಕ್ಷಿ ಧೋನಿ
ಮದನ್​ ಕುಮಾರ್​
| Edited By: |

Updated on: May 15, 2021 | 3:33 PM

Share

ಬಾಲಿವುಡ್​ನ ಖ್ಯಾತ ನಟಿ ಅನುಷ್ಕಾ ಶರ್ಮಾ ಮತ್ತು ಧೋನಿ ಪತ್ನಿ ಸಾಕ್ಷಿ ನಡುವೆ ಇರುವ ಕಾಮನ್​ ಕನೆಕ್ಷನ್​ ಏನು? ಇಬ್ಬರೂ ಸ್ಟಾರ್​ ಕ್ರಿಕೆಟ್​ ಆಟಗಾರರ ಪತ್ನಿಯರು. ಇದು ಎಲ್ಲರಿಗೂ ಗೊತ್ತಿರುವ ಉತ್ತರ. ಆದರೆ ಅವರು ಕ್ರಿಕೆಟಿಗರ ಪತ್ನಿಯರಾಗುವುದಕ್ಕೂ ಮುನ್ನವೇ ಪರಸ್ಪರ ಸ್ನೇಹಿತೆಯರಾಗಿದ್ದರು ಎಂಬುದು ಅಚ್ಚರಿಯ ವಿಚಾರ. ಅದು ಕೂಡ ತುಂಬ ಚಿಕ್ಕ ವಯಸ್ಸಿನಲ್ಲಿ ಅವರು ಕ್ಲಾಸ್​ಮೇಟ್ಸ್​ ಆಗಿದ್ದರು. ಹಾಗಂತ ಇದು ಯಾವುದೋ ಕಟ್ಟುಕತೆ ಅಲ್ಲ. ಅನುಷ್ಕಾ ಮತ್ತು ಸಾಕ್ಷಿ ಬಾಲ್ಯದ ಸ್ನೇಹಿತೆಯರು ಎಂಬುದಕ್ಕೆ ಈಗ ಒಂದು ಫೋಟೋ ಪುರಾವೆ ಒದಗಿಸುತ್ತಿದೆ.

ಸೋಶಿಯಲ್​ ಮೀಡಿಯಾದಲ್ಲಿ ಅನುಷ್ಕಾ ಶರ್ಮಾ ಮತ್ತು ಸಾಕ್ಷಿ ಅಭಿಮಾನಿಗಳು ಈ ಫೋಟೋವನ್ನು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಶಾಲೆಗೆ ಹೋಗುತ್ತಿದ್ದಾಗ ಅನುಷ್ಕಾ ಹಾಗೂ ಸಾಕ್ಷಿ ಒಂದೇ ಫ್ರೇಮ್​ನಲ್ಲಿ ಕಾಣಿಸಿಕೊಂಡಿರುವ ಫೋಟೋ ನೋಡಿ ಫ್ಯಾನ್ಸ್​ಗೆ ಅಚ್ಚರಿ ಆಗಿದೆ. ಅದರ ಹಿಂದಿನ ಫ್ಲ್ಯಾಶ್​ಬ್ಯಾಕ್​ ಏನು ಎಂಬ ಕೌತುಕಕ್ಕೂ ಈಗ ತೆರೆಬಿದ್ದಿದೆ. ಅಸ್ಸಾಂನ ಒಂದು ಶಾಲೆಯಲ್ಲಿ ಅನುಷ್ಕಾ ಹಾಗೂ ಸಾಕ್ಷಿ ಸಹಪಾಠಿಗಳಾಗಿದ್ದರು.

ಅನುಷ್ಕಾ ಶರ್ಮಾ ತಂದೆ ಅಜಯ್​ ಕುಮಾರ್​ ಶರ್ಮಾ ಅವರು ಭಾರತೀಯ ಸೇನೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಅಸ್ಸಾಂನಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಅಲ್ಲಿನ ಒಂದು ಶಾಲೆಗೆ ಅನುಷ್ಕಾ ಸೇರಿಕೊಂಡಿದ್ದರು. ಅದೇ ಶಾಲೆಯಲ್ಲಿ ಸಾಕ್ಷಿ ಕೂಡ ಓದುತ್ತಿದ್ದರು. 1994ರ ಆ ಸಮಯದಲ್ಲಿ ಇಬ್ಬರೂ ಸ್ನೇಹಿತೆಯರಾಗಿದ್ದರು. ನಂತರವೂ ಅವರ ಸ್ನೇಹ ಮುಂದುವರಿಯಿತು. ವಿದ್ಯಾಭ್ಯಾಸ ಮುಗಿಸಿ ಅನುಷ್ಕಾ ನಟನೆ ಕಡೆಗೆ ಒಲವು ತೋರಿಸಿದರು. ಹೋಟೆಲ್​ ಮ್ಯಾನೇಜ್​ಮೆಂಟ್​ ಕ್ಷೇತ್ರಕ್ಕೆ ಸಾಕ್ಷಿ ಎಂಟ್ರಿ ನೀಡಿದರು. ನಂತರ ಅವರು ಧೋನಿಗೆ ಪರಿಚಯವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಸಿನಿಮಾ ಕೆಲಸಗಳ ಜೊತೆಯಲ್ಲಿ ಮಗುವಿನ ಪಾಲನೆಯಲ್ಲೂ ಅನುಷ್ಕಾ ಶರ್ಮಾ ತೊಡಗಿಕೊಂಡಿದ್ದಾರೆ. ಸದ್ಯ ದೇಶದಲ್ಲಿ ಕೊರೊನಾ ವೈರಸ್​ ಹಾವಳಿ ಮಿತಿ ಮೀರಿದೆ. ಈ ಸಂದರ್ಭದಲ್ಲಿ ಪತಿ ವಿರಾಟ್​ ಕೊಯ್ಲಿ ಜೊತೆಗೆ ಸೇರಿಕೊಂಡು ಅವರು ದೇಣಿಗೆ ಸಂಗ್ರಹ ಮಾಡಿದ್ದಾರೆ. 10 ಕೋಟಿಗೂ ಅಧಿಕ ಹಣ ಸಂಗ್ರಹವಾಗಿದ್ದು ಕೊವಿಡ್​ ವಿರುದ್ಧದ ಹೋರಾಟಕ್ಕೆ ಅದನ್ನು ಬಳಸಲಾಗುವುದು ಎಂದು ಹೇಳಿದ್ದಾರೆ. ವಿರಾಟ್​-ಅನುಷ್ಕಾ 2 ಕೋಟಿ ರೂ. ದೇಣಿಗೆ ನೀಡುವ ಮೂಲಕ ಇತರೆ ಸೆಲೆಬ್ರಿಟಿಗಳಿಗೆ ಮಾದರಿ ಆಗಿದ್ದಾರೆ.

ಇದನ್ನೂ ಓದಿ:

ಪಾಕಿಸ್ತಾನ, ಅಮೆರಿಕದಲ್ಲೂ ಅನುಷ್ಕಾ ಶರ್ಮಾ ಹೋಲುವ ನಟಿಯರು; ಒಬ್ಬರಿಗೆ ಇಷ್ಟ, ಮತ್ತೊಬ್ಬರಿಗೆ ಕಷ್ಟ

ಕೊರೊನಾ ವಿರುದ್ಧದ ಹೋರಾಟಕ್ಕೆ 11 ಕೋಟಿ ರೂ. ದೇಣಿಗೆ ಸಂಗ್ರಹಿಸಿದ ವಿರಾಟ್ ಕೊಹ್ಲಿ- ಅನುಷ್ಕಾ ಶರ್ಮಾ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಕೆಶಿ ಬಗ್ಗೆ ನೊಣವಿನಕೆರೆ ಸ್ವಾಮೀಜಿ ಮತ್ತೊಂದು ಸ್ಫೋಟಕ ಭವಿಷ್ಯ
ಡಿಕೆಶಿ ಬಗ್ಗೆ ನೊಣವಿನಕೆರೆ ಸ್ವಾಮೀಜಿ ಮತ್ತೊಂದು ಸ್ಫೋಟಕ ಭವಿಷ್ಯ
ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್
ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್
ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ
ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ
ಡಿಕೆ ಶಿವಕುಮಾರ್​​ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ!
ಡಿಕೆ ಶಿವಕುಮಾರ್​​ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ!
ಮುಂದಿನ ಸಿಎಂ ಯಾರು ಅಂತಿದ್ದಂತೆ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಮುಂದಿನ ಸಿಎಂ ಯಾರು ಅಂತಿದ್ದಂತೆ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಸಿದ್ದರಾಮಯ್ಯ ಪದತ್ಯಾಗಕ್ಕೆ ಹುಟ್ಟೂರಲ್ಲಿ ಆಕ್ರೋಶ
ಸಿದ್ದರಾಮಯ್ಯ ಪದತ್ಯಾಗಕ್ಕೆ ಹುಟ್ಟೂರಲ್ಲಿ ಆಕ್ರೋಶ
ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ
ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ
ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!
ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!
ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್
ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್
ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ
ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ