AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಮಗುವಿಗೆ ಉಸಿರು ಕಟ್ಟುತ್ತಿದೆ’; ಅನುಷ್ಕಾ-ವಿರಾಟ್​ ಪುತ್ರಿ ವಮಿಕಾ ವಿಚಾರದಲ್ಲಿ ನೆಟ್ಟಿಗರ ಆಕ್ರೋಶ

Anushka Sharma | Virat Kohli: ಕ್ಯಾಮರಾ ಕಣ್ಣಿಗೆ ಕಾಣಬಾರದು ಎಂಬ ಉದ್ದೇಶದಿಂದ ಮಗಳ ಮುಖವನ್ನು ಸಂಪೂರ್ಣ ಮುಚ್ಚಿಕೊಂಡು ಅನುಷ್ಕಾ ಸಾಗಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ.

‘ಆ ಮಗುವಿಗೆ ಉಸಿರು ಕಟ್ಟುತ್ತಿದೆ’; ಅನುಷ್ಕಾ-ವಿರಾಟ್​ ಪುತ್ರಿ ವಮಿಕಾ ವಿಚಾರದಲ್ಲಿ ನೆಟ್ಟಿಗರ ಆಕ್ರೋಶ
ಅನುಷ್ಕಾ ಶರ್ಮಾ, ವಿರಾಟ್​ ಕೊಯ್ಲಿ, ವಮಿಕಾ
ಮದನ್​ ಕುಮಾರ್​
|

Updated on: Jun 03, 2021 | 11:57 AM

Share

ನಟಿ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟರ್​ ವಿರಾಟ್​ ಕೊಯ್ಲಿ ತಮ್ಮ ಮುದ್ದು ಮಗಳು ವಮಿಕಾ ಬಗ್ಗೆ ಸಿಕ್ಕಾಪಟ್ಟೆ ಕಾಳಜಿ ವಹಿಸುತ್ತಿದ್ದಾರೆ. ಮಗುವನ್ನು ಸೋಶಿಯಲ್​ ಮೀಡಿಯಾದಿಂದ ದೂರ ಇರಿಸಿ ಬೆಳೆಸಬೇಕು ಎಂದು ಈ ದಂಪತಿ ನಿರ್ಧಾರ ಮಾಡಿದ್ದಾರೆ. ಅದೇ ಕಾರಣಕ್ಕಾಗಿ ವಮಿಳಾ ಮುಖ ಕಾಣುವಂತಹ ಒಂದೇ ಒಂದು ಫೋಟೋ ಕೂಡ ಆನ್​ಲೈನ್​ನಲ್ಲಿ ಲಭ್ಯವಿಲ್ಲ. ಹೇಗಾದರೂ ಮಾಡಿ ಆ ಪುಟಾಣಿಯ ಫೋಟೋ ಕ್ಲಿಕ್ಕಿಸಬೇಕು ಎಂದು ಕೆಲವು ಪಾಪರಾಜಿಗಳು ಹಠ ಹಿಡಿದಿದ್ದಾರೆ. ಅಂಥವರ ಕ್ಯಾಮರಾದಿಂದ ತಮ್ಮ ಮಗಳನ್ನು ಕಾಪಾಡಬೇಕು ಎಂದು ಅನುಷ್ಕಾ-ವಿರಾಟ್​ ಕೂಡ ಪಣ ತೊಟ್ಟಿದ್ದಾರೆ. ಈ ಜಟಾಪಟಿಯಲ್ಲಿ ಮಗುವಿಗೆ ತೊಂದರೆ ಆಗುತ್ತಿರುವ ಬಗ್ಗೆ ಈಗ ಆಕ್ಷೇಪ ವ್ಯಕ್ತವಾಗಿದೆ.

ಇಂಗ್ಲೆಂಡ್​ನಲ್ಲಿ ನಡೆಯಲಿರುವ ವರ್ಲ್ಡ್​ ಟೆಸ್ಟ್​ ಚಾಂಪಿಯನ್​ಶಿಪ್​ಗಾಗಿ ಭಾರತ ಕ್ರಿಕೆಟ್​ ತಂಡ ವಿಮಾನ ಹತ್ತಿದೆ. ಆಟಗಾರರ ಜೊತೆ ಅವರ ಕುಟುಂಬದವರು ಕೂಡ ಪ್ರಯಾಣ ಬೆಳೆಸಿದ್ದಾರೆ. ಅದಕ್ಕಾಗಿ ಜೂ.2ರ ರಾತ್ರಿ ಮುಂಬೈ ವಿಮಾನ ನಿಲ್ದಾಣದಲ್ಲಿ ಎಲ್ಲರೂ ಕಾಣಿಸಿಕೊಂಡರು. ವಿರಾಟ್​ ಕೊಯ್ಲಿ ಜೊತೆ ಪತ್ನಿ ಅನುಷ್ಕಾ ಶರ್ಮಾ ಮತ್ತು ಮಗಳು ವಮಿಕಾ ಕೂಡ ತೆರಳಿದ್ದಾರೆ. ಮುಂಬೈ ಏರ್​ಪೋರ್ಟ್​​ಗೆ ಬಂದ ಅವರ ಫೋಟೋ ತೆಗೆಯಲು ಪಾಪರಾಜಿಗಳು ಮುಗಿಬಿದ್ದಿದ್ದಾರೆ.

ಕ್ಯಾಮರಾ ಕಣ್ಣಿಗೆ ಕಾಣಬಾರದು ಎಂಬ ಉದ್ದೇಶದಿಂದ ಮಗಳ ಮುಖವನ್ನು ಸಂಪೂರ್ಣ ಮುಚ್ಚಿಕೊಂಡು ಅನುಷ್ಕಾ ಸಾಗಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ. ಅದನ್ನು ಕಂಡ ನೆಟ್ಟಿಗರು ಕೋಪಗೊಂಡಿದ್ದಾರೆ. ‘ಆ ಮಗುವಿಗೆ ಸರಿಯಾಗಿ ಉಸಿರಾಡಲು ಕೂಡ ಆಗುತ್ತಿಲ್ಲ ಎನಿಸುತ್ತದೆ. ದಯವಿಟ್ಟು ಅವರ ಖಾಸಗಿತನಕ್ಕೆ ಧಕ್ಕೆ ತರಬೇಡಿ’ ಎಂದು ಕಮೆಂಟ್​ ಮಾಡುವ ಮೂಲಕ ಪಾಪರಾಜಿಗಳಿಗೆ ಜನರು ಬೈಯ್ದಿದ್ದಾರೆ.

ಈ ವರ್ಷ ಜನವರಿಯಲ್ಲಿ ಮಗು ಜನಿಸಿದ ವಿಷಯವನ್ನು ತಿಳಿಸುವಾಗಲೇ ವಿರಾಟ್​ ಕೊಯ್ಲಿ ಮತ್ತು ಅನುಷ್ಕಾ ಶರ್ಮಾ ಈ ವಿಚಾರದ ಬಗ್ಗೆ ಸ್ಪಷ್ಟವಾಗಿ ಹೇಳಿದ್ದರು. ದಯವಿಟ್ಟು ನಮ್ಮ ಮಗುವಿನ ಖಾಸಗಿತನವನ್ನು ಗೌರವಿಸಿ ಎಂದು ಪಾಪರಾಜಿಗಳಲ್ಲಿ ಅವರು ಮನವಿ ಮಾಡಿಕೊಂಡಿದ್ದರು. ಆದರೆ ಅವರ ಮಾತಿಗೆ ಬೆಲೆ ಸಿಗುತ್ತಿರುವಂತೆ ಕಾಣುತ್ತಿಲ್ಲ. ಈ ವಿಚಾರ ಈಗ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಮಗಳ ಮುಖ ತೋರಿಸಿ ಎಂದು ಕೆಲವೇ ದಿನಗಳ ಹಿಂದೆ ಅಭಿಮಾನಿಯೊಬ್ಬರು ವಿರಾಟ್​ ಕೊಯ್ಲಿಗೆ ಕೋರಿಕೆ ಸಲ್ಲಿಸಿದ್ದರು. ಅದಕ್ಕೆ ಉತ್ತರಿಸಿದ್ದ ಕೊಯ್ಲಿ, ‘ನಮ್ಮ ಮಗಳನ್ನು ನಿಮಗೆ ತೋರಿಸಲು ಸಾಧ್ಯವಿಲ್ಲ. ಸೋಶಿಯಲ್​ ಮೀಡಿಯಾ ಎಂದರೆ ಏನು ಅಂತ ಆಕೆಗೆ ಅರ್ಥ ಆಗುವವರೆಗೂ ನಾವು ಅವಳನ್ನು ಅದರಲ್ಲಿ ಪರಿಚಯಿಸದಿರಲು ತೀರ್ಮಾನಿಸಿದ್ದೇನೆ. ಆ ಬಗ್ಗೆ ಅವಳೇ ನಿರ್ಧಾರ ತೆಗೆದುಕೊಳ್ಳಬೇಕು’ ಎಂದು ಹೇಳಿದ್ದರು.

ಇದನ್ನೂ ಓದಿ:

ಪುತ್ರಿ ವಮಿಕಾ ಬಗ್ಗೆ ದೊಡ್ಡ ನಿರ್ಧಾರ ತೆಗೆದುಕೊಂಡ ಅನುಷ್ಕಾ ಶರ್ಮಾ-ವಿರಾಟ್​ ಕೊಯ್ಲಿ; ಏನದು?

‘ಬುಲ್​ಬುಲ್’​ ಸಿನಿಮಾ ನಟಿ ಜತೆ ಅನುಷ್ಕಾ ಶರ್ಮಾ ಸಹೋದರನ ಡೇಟಿಂಗ್

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ