AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಸಂಕಷ್ಟಕ್ಕೆ ಅನುಷ್ಕಾ-ವಿರಾಟ್​ 2 ಕೋಟಿ ರೂ. ದೇಣಿಗೆ; ನಿಧಿ ಸಂಗ್ರಹಕ್ಕೆ ಮುಂದಾದ ದಂಪತಿ

Anushka Sharma | Virat Kohli: ಈ ಕಷ್ಟದ ಸಂದರ್ಭದಲ್ಲಿ ನಾವೆಲ್ಲರೂ ಒಂದಾಗಿರಬೇಕು. ಎಷ್ಟು ಸಾಧ್ಯವೋ ಅಷ್ಟು ಜೀವಗಳನ್ನು ನಾವು ಕಾಪಾಡಬೇಕು ಎಂದು ಅನುಷ್ಕಾ ಶರ್ಮಾ ಮತ್ತು ವಿರಾಟ್​ ಕೊಯ್ಲಿ ದಂಪತಿ ಹೇಳಿದ್ದಾರೆ.

ಕೊವಿಡ್​ ಸಂಕಷ್ಟಕ್ಕೆ ಅನುಷ್ಕಾ-ವಿರಾಟ್​ 2 ಕೋಟಿ ರೂ. ದೇಣಿಗೆ; ನಿಧಿ ಸಂಗ್ರಹಕ್ಕೆ ಮುಂದಾದ ದಂಪತಿ
ಅನುಷ್ಕಾ ಶರ್ಮಾ - ವಿರಾಟ್ ಕೊಯ್ಲಿ
ಮದನ್​ ಕುಮಾರ್​
|

Updated on: May 07, 2021 | 12:26 PM

Share

ದೇಶದಲ್ಲಿ ಕೊರೊನಾ ವೈರಸ್​ ಹಾವಳಿ ಮಿತಿಮೀರಿದೆ. ಈ ಸಂದರ್ಭದಲ್ಲಿ ಅನೇಕ ಸೆಲೆಬ್ರಿಟಿಗಳು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈಗ ನಟಿ ಅನುಷ್ಕಾ ಶರ್ಮಾ ಮತ್ತು ಅವರ ಪತಿ ವಿರಾಟ್​ ಕೊಯ್ಲಿ ಕೂಡ ನಿಧಿ ಸಂಗ್ರಹಕ್ಕೆ ಅಭಿಯಾನ ಶುರು ಮಾಡಿದ್ದಾರೆ. ಇದರ ಮೊದಲ ಹೆಜ್ಜೆ ಎಂಬಂತೆ 2 ಕೋಟಿ ರೂ.ಗಳನ್ನು ಈ ಸ್ಟಾರ್​ ದಂಪತಿ ದೇಣಿಗೆಯಾಗಿ ನೀಡಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳುವ ಮೂಲಕ ಅನುಷ್ಕಾ ಶರ್ಮಾ ಮತ್ತು ವಿರಾಟ್​ ಕೊಯ್ಲಿ ಮಾಹಿತಿ ನೀಡಿದ್ದಾರೆ.

‘ಕೊವಿಡ್​ನಿಂದಾಗಿ ಭಾರತದ ಪರಿಸ್ಥಿತಿ ಕಷ್ಟದಲ್ಲಿದೆ. ದೇಶವನ್ನು ಈ ರೀತಿ ನೋಡಲು ನೋವಾಗುತ್ತದೆ. ಈ ಸಂದರ್ಭದಲ್ಲಿ ಹಗಲು-ರಾತ್ರಿ ಹೋರಾಡುತ್ತಿರುವ ಎಲ್ಲರಿಗೂ ನಾವು ಆಭಾರಿ ಆಗಿದ್ದೇವೆ. ಅವರ ಬದ್ಧತೆಯನ್ನು ಮೆಚ್ಚಲೇಬೇಕು. ಈ ಸಂದರ್ಭದಲ್ಲಿ ಅವರಿಗೆ ನಮ್ಮ ಬೆಂಬಲ ಬೇಕು. ಈ ಕಷ್ಟದ ಸಂದರ್ಭದಲ್ಲಿ ನಾವೆಲ್ಲರೂ ಒಂದಾಗಿರಬೇಕು. ಎಷ್ಟು ಸಾಧ್ಯವೋ ಅಷ್ಟು ಜೀವಗಳನ್ನು ನಾವು ಕಾಪಾಡಬೇಕು’ ಎಂದು ಈ ದಂಪತಿ ಹೇಳಿದ್ದಾರೆ.

‘ಕಳೆದ ವರ್ಷದಿಂದಲೂ ಜನರು ಪಡುತ್ತಿರುವ ಕಷ್ಟ ನೋಡಿ ನಮಗೆ ಶಾಕ್​ ಆಗಿದೆ. ನಮ್ಮ ಕೈಲಾದ ಸಹಾಯವನ್ನು ಮಾಡಲು ಮೊದಲಿನಿಂದಲೂ ಪ್ರಯತ್ನಿಸುತ್ತಿದ್ದೇವೆ. ಈ ಸಂದರ್ಭದಲ್ಲಿ ದೇಶಕ್ಕೆ ಎಲ್ಲಕ್ಕಿಂತ ಹೆಚ್ಚು ಬೆಂಬಲ ಬೇಕಾಗಿದೆ. ಅವಶ್ಯಕತೆ ಇರುವವರಿಗೆ ಸೂಕ್ತ ಸಹಾಯ ಒದಗಿಸಲು ಈ ನಿಧಿ ಸಂಗ್ರಹ ಅಭಿಯಾನ ಯಶಸ್ವಿ ಆಗುತ್ತದೆ ಎಂಬ ನಂಬಿಕೆ ನಮಗಿದೆ. ಪರಸ್ಪರರ ಸಹಾಯಕ್ಕೆ ದೇಶದ ಜನರು ಮುಂದೆ ಬರುತ್ತಾರೆ ಎಂಬ ನಂಬಿಕೆ ಇದೆ’ ಎಂದು ವಿರಾಟ್​ ಕೊಯ್ಲಿ ಹೇಳಿದ್ದಾರೆ.

ಮೇ 1ರಂದು ಅನುಷ್ಕಾ ಶರ್ಮಾ ಅವರ ಜನ್ಮದಿನ. ಆದರೆ ಈ ಬಾರಿ ಕೊರೊನಾ ವೈರಸ್​ನಿಂದ ದೇಶವೇ ಕಷ್ಟದಲ್ಲಿರುವ ಕಾರಣ ಅವರು ಯಾವುದೇ ಸಂಭ್ರಮಾಚರಣೆ ಮಾಡಿಕೊಳ್ಳಲಿಲ್ಲ. ‘ನಿಮ್ಮೆಲ್ಲರಿಂದಾಗಿ ಈ ದಿನ ನನಗೆ ನಿಜಕ್ಕೂ ಸ್ಪೆಷಲ್​ ಎನಿಸಿದೆ. ಆದರೆ ಈ ಕಷ್ಟದ ಪರಿಸ್ಥಿತಿಯಲ್ಲಿ ಸಂಭ್ರಮಾಚರಣೆ ಮಾಡುವುದು ಸರಿಯಲ್ಲ ಎಂದು ನನಗೆ ಅನಿಸಿತು. ನೀವು ಮಾಡಿದ ಎಲ್ಲ ಮೆಸೇಜ್​ ನೋಡಿದ್ದೇನೆ. ಅದೇ ರೀತಿ ನಿಮಗಾಗಿ ನನ್ನ ಕಡೆಯಿಂದ ಒಂದು ಮುಖ್ಯವಾದ ಮೆಸೇಜ್​ ಇದೆ. ಈ ಪರಿಸ್ಥಿತಿಯಲ್ಲಿ ನಾವೆಲ್ಲರೂ ಜೊತೆಯಾಗಿದ್ದು ದೇಶಕ್ಕೆ ಬೆಂಬಲ ನೀಡಬೇಕು’ ಎಂದು ಅನುಷ್ಕಾ ಹೇಳಿದ್ದರು.

‘ನಾನು ಮತ್ತು ವಿರಾಟ್​ ಕೂಡ ತಮ್ಮ ಪಾಲಿನ ಕೆಲಸ ಮಾಡುತ್ತಿದ್ದೇವೆ. ಆ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡುತ್ತೇನೆ. ನೀವು ಕೂಡ ಈ ಅಭಿಯಾನದಲ್ಲಿ ಭಾಗಿ ಆಗಬಹುದು. ಈ ಸಂದರ್ಭದಲ್ಲಿ ನಾವೆಲ್ಲ ಒಂದಾಗಿದ್ದೇವೆ ಎಂಬುದು ನೆನಪಿರಲಿ. ಎಲ್ಲರೂ ಸುರಕ್ಷಿತವಾಗಿರಿ. ನಿಮ್ಮ ಕಾಳಜಿ ವಹಿಸಿ’ಎಂದು ಅನುಷ್ಕಾ ಹೇಳಿದ್ದರು. ಕೊಟ್ಟ ಮಾತಿಗೆ ತಕ್ಕಂತೆಯೇ ಇಂದು ನಿಧಿ ಸಂಗ್ರಹ ಕಾರ್ಯಕ್ಕೆ ಚಾಲನೆ ನೀಡಿ, 2 ಕೋಟಿ ರೂ.ಗಳನ್ನು ದೇಣಿಗೆಯಾಗಿ ನೀಡಿದ್ದಾರೆ.

ಇದನ್ನೂ ಓದಿ:

Anushka Sharma: ಕೊವಿಡ್​ ಸಂಕಷ್ಟದಲ್ಲಿ ಕೊಯ್ಲಿ-ಅನುಷ್ಕಾ ಕೈಕಟ್ಟಿ ಕೂತಿದ್ದಾರಾ? ಕಡೆಗೂ ಬಾಯ್ಬಿಟ್ಟ ನಟಿ

ಸೋನು ಸೂದ್​ಗೆ ಫ್ರಾಡ್​ ಎಂದ ಕಂಗನಾ; ಈ ಸಮಯದಲ್ಲಿ ದುಡ್ಡು ಮಾಡ್ತಿದ್ದಾರಾ ರಿಯಲ್​ ಹೀರೋ?

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ